Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬಜೆಟ್ ಮಂಡನೆಯ ದಿನಾಂಕ ಸದ್ಯದಲ್ಲೇ ನಿಗದಿ: ಸಿಎಂ ಸಿದ್ಧರಾಮಯ್ಯ

11/02/2026 3:48 PM

BREAKING : ‘ತೀವ್ರ ಆಘಾತ’: ಕೆನಡಾ ಶಾಲೆಯಲ್ಲಿ ಭೀಕರ ಗುಂಡಿನ ದಾಳಿಗೆ 10 ಮಂದಿ ಬಲಿ, ಪ್ರಧಾನಿ ಮೋದಿ ಸಂತಾಪ

11/02/2026 3:46 PM

ಬೆಂಗಳೂರಲ್ಲಿ ಘೋರ ಘಟನೆ : ಶಾಲಾ ಬಸ್ ಹರಿದು ಪೊಲೀಸ್ ಸಿಬ್ಬಂದಿಯ ಇಬ್ಬರು ಮಕ್ಕಳು ದುರ್ಮರಣ, ಚಾಲಕ ಅರೆಸ್ಟ್!

11/02/2026 3:46 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಲ್ಲಿ ಘೋರ ಘಟನೆ : ಶಾಲಾ ಬಸ್ ಹರಿದು ಪೊಲೀಸ್ ಸಿಬ್ಬಂದಿಯ ಇಬ್ಬರು ಮಕ್ಕಳು ದುರ್ಮರಣ, ಚಾಲಕ ಅರೆಸ್ಟ್!
KARNATAKA

ಬೆಂಗಳೂರಲ್ಲಿ ಘೋರ ಘಟನೆ : ಶಾಲಾ ಬಸ್ ಹರಿದು ಪೊಲೀಸ್ ಸಿಬ್ಬಂದಿಯ ಇಬ್ಬರು ಮಕ್ಕಳು ದುರ್ಮರಣ, ಚಾಲಕ ಅರೆಸ್ಟ್!

By kannadanewsnow0511/02/2026 3:46 PM

ಬೆಂಗಳೂರು : ಬೆಂಗಳೂರಿನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಶಾಲಾ ಬಸ್ ಹರಿದು ಪೊಲೀಸ್ ಸಿಬ್ಬಂದಿಯ ಇಬ್ಬರು ಮಕ್ಕಳು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಬೆಂಗಳೂರಿನ ಹೆಣ್ಣೂರು ಸಂಚಾರಿ ಠಾಣಾ ವ್ಯಾಪ್ತಿಯ ಥಣಿಸಂದ್ರ ಬಳಿ ಘಟನೆ ನಡೆದಿದೆ. ಮೃತ ಮಕ್ಕಳನ್ನ ವರ್ಷ (2) ಹಾಗು ಭಾನು (4) ಎಂದು ತಿಳಿದುಬಂದಿದೆ.

ನಗರದ ಸಿಎಆರ್ (CAR) ವಿಭಾಗದಲ್ಲಿ ಕಾನ್ಸ್‌ಟೇಬಲ್ ಆಗಿ ಕಾರ್ಯನಿರ್ವಹಿಸುತ್ತಿರುವ ನಾಗನಗೌಡ ಎಂಬುವವರು ಇಂದು ಬೆಳಿಗ್ಗೆ ತಮ್ಮ ಬೈಕ್‌ನಲ್ಲಿ ಇಬ್ಬರು ಮಕ್ಕಳನ್ನು ಕೂರಿಸಿಕೊಂಡು ಹಾಲು ತರಲು ಹೊರಟಿದ್ದರು. ಥಣಿಸಂದ್ರದ ಮುಖ್ಯರಸ್ತೆಯ ಬಳಿ ಚಲಿಸುತ್ತಿದ್ದಾಗ, ಎದುರುಗಡೆಯಿಂದ ಬಂದ ಅಜ್ ಮೋನಿ ಶಾಲೆಗೆ ಸೇರಿದ ಬಸ್ ಅಚಾನಕ್ಕಾಗಿ ಟರ್ನ್ ಪಡೆದುಕೊಂಡಿದೆ. ಈ ವೇಳೆ ಬೈಕ್‌ಗೆ ಬಸ್ ಬಲವಾಗಿ ಡಿಕ್ಕಿ ಹೊಡೆದಿದೆ.

ಅಪಘಾತದಲ್ಲಿ ಮೃತಪಟ್ಟವರನ್ನು ಕಾನ್ಸ್‌ಟೇಬಲ್ ನಾಗನಗೌಡ ಅವರ ಮಗಳು ವರ್ಷ (2 ) ಹಾಗೂ ಅವರ ಅಣ್ಣನ ಮಗಳು ಭಾನು (4) ಎಂದು ಗುರುತಿಸಲಾಗಿದೆ. ಮೃತಪಟ್ಟ ಇಬ್ಬರೂ ಮಕ್ಕಳು ಪೊಲೀಸ್ ಸಿಬ್ಬಂದಿಯವರ ಕುಟುಂಬಕ್ಕೆ ಸೇರಿದವರಾಗಿದ್ದು, ಥಣಿಸಂದ್ರದ ಪೊಲೀಸ್ ಕ್ವಾರ್ಟರ್ಸ್‌ನಲ್ಲಿ ವಾಸವಿದ್ದರು. ನೆಮ್ಮದಿಯಿಂದ ಹಾಲು ತರಲು ಹೋದ ಮಕ್ಕಳು ಶವವಾಗಿ ಮನೆಗೆ ಮರಳುತ್ತಿರುವುದನ್ನು ಕಂಡು ಸ್ಥಳೀಯರು ಕಣ್ಣೀರು ಹಾಕುತ್ತಿದ್ದಾರೆ.

ಘಟನೆ ನಡೆದ ಕೂಡಲೇ ಸ್ಥಳಕ್ಕೆ ಉತ್ತರ ವಿಭಾಗದ ಸಂಚಾರ ಪೊಲೀಸ್ ಡಿಸಿಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಣ್ಣೂರು ಸಂಚಾರಿ ಪೊಲೀಸರು ಸ್ಥಳಕ್ಕೆ ಧಾವಿಸಿ ಮಹಜರು ನಡೆಸಿದ್ದು, ಶಾಲಾ ಬಸ್ ಹಾಗೂ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ. ಅಜಾಗರೂಕತೆಯಿಂದ ಬಸ್ ಚಲಾಯಿಸಿದ್ದೇ ಈ ಘಟನೆಗೆ ಕಾರಣ ಎನ್ನಲಾಗುತ್ತಿದ್ದು, ಈ ಕುರಿತು ಪ್ರಕರಣ ದಾಖಲಾಗಿದೆ.

Share. Facebook Twitter LinkedIn WhatsApp Email

Related Posts

ಬಜೆಟ್ ಮಂಡನೆಯ ದಿನಾಂಕ ಸದ್ಯದಲ್ಲೇ ನಿಗದಿ: ಸಿಎಂ ಸಿದ್ಧರಾಮಯ್ಯ

11/02/2026 3:48 PM1 Min Read

ರಾಜ್ಯದ ಅಭಿವೃದ್ಧಿ ಎಂಬುದು ಮರೀಚಿಕೆಯಾಗಿದೆ: ಬಿಜೆಪಿ ಎಂಎಲ್ಸಿ ಎನ್ ರವಿಕುಮಾರ್

11/02/2026 3:45 PM1 Min Read

ಯತೀಂದ್ರ ಅವರ ಮಾತೇ ನಮಗೆ ವೇದವಾಕ್ಯ: ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್

11/02/2026 3:42 PM6 Mins Read
Recent News

ಬಜೆಟ್ ಮಂಡನೆಯ ದಿನಾಂಕ ಸದ್ಯದಲ್ಲೇ ನಿಗದಿ: ಸಿಎಂ ಸಿದ್ಧರಾಮಯ್ಯ

11/02/2026 3:48 PM

BREAKING : ‘ತೀವ್ರ ಆಘಾತ’: ಕೆನಡಾ ಶಾಲೆಯಲ್ಲಿ ಭೀಕರ ಗುಂಡಿನ ದಾಳಿಗೆ 10 ಮಂದಿ ಬಲಿ, ಪ್ರಧಾನಿ ಮೋದಿ ಸಂತಾಪ

11/02/2026 3:46 PM

ಬೆಂಗಳೂರಲ್ಲಿ ಘೋರ ಘಟನೆ : ಶಾಲಾ ಬಸ್ ಹರಿದು ಪೊಲೀಸ್ ಸಿಬ್ಬಂದಿಯ ಇಬ್ಬರು ಮಕ್ಕಳು ದುರ್ಮರಣ, ಚಾಲಕ ಅರೆಸ್ಟ್!

11/02/2026 3:46 PM

ರಾಜ್ಯದ ಅಭಿವೃದ್ಧಿ ಎಂಬುದು ಮರೀಚಿಕೆಯಾಗಿದೆ: ಬಿಜೆಪಿ ಎಂಎಲ್ಸಿ ಎನ್ ರವಿಕುಮಾರ್

11/02/2026 3:45 PM
State News
KARNATAKA

ಬಜೆಟ್ ಮಂಡನೆಯ ದಿನಾಂಕ ಸದ್ಯದಲ್ಲೇ ನಿಗದಿ: ಸಿಎಂ ಸಿದ್ಧರಾಮಯ್ಯ

By kannadanewsnow0911/02/2026 3:48 PM KARNATAKA 1 Min Read

ಬೆಂಗಳೂರು : ವಿವಿಧ ಇಲಾಖೆಗಳೊಂದಿಗೆ ಸಭೆಗಳನ್ನು ನಡೆಸಲಾಗುತ್ತಿದ್ದು, ಆಯವ್ಯಯ ದ ದಿನಾಂಕವನ್ನು ಸಧ್ಯದಲ್ಲಿಯೇ ತಿಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.…

ಬೆಂಗಳೂರಲ್ಲಿ ಘೋರ ಘಟನೆ : ಶಾಲಾ ಬಸ್ ಹರಿದು ಪೊಲೀಸ್ ಸಿಬ್ಬಂದಿಯ ಇಬ್ಬರು ಮಕ್ಕಳು ದುರ್ಮರಣ, ಚಾಲಕ ಅರೆಸ್ಟ್!

11/02/2026 3:46 PM

ರಾಜ್ಯದ ಅಭಿವೃದ್ಧಿ ಎಂಬುದು ಮರೀಚಿಕೆಯಾಗಿದೆ: ಬಿಜೆಪಿ ಎಂಎಲ್ಸಿ ಎನ್ ರವಿಕುಮಾರ್

11/02/2026 3:45 PM

ಯತೀಂದ್ರ ಅವರ ಮಾತೇ ನಮಗೆ ವೇದವಾಕ್ಯ: ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್

11/02/2026 3:42 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.