Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಹಾಶಿವರಾತ್ರಿ ಹಿನ್ನೆಲೆ: ಯಶವಂತಪುರ – ಕಲಬುರಗಿ ನಡುವೆ ವಿಶೇಷ ಎಕ್ಸ್ ಪ್ರೆಸ್ ರೈಲು ಸಂಚಾರ

12/02/2026 7:58 PM

BREAKING: ‘ರಾಜ್ಯ ಸರ್ಕಾರಿ ನೌಕರ’ರಿಗೆ ಗುಡ್ ನ್ಯೂಸ್: ಡಿ.31, 2026ರವರೆಗೆ ‘ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ’ ಉತ್ತೀರ್ಣಕ್ಕೆ ಅವಕಾಶ

12/02/2026 7:53 PM

3 ವರ್ಷದಲ್ಲಿ ವಿದೇಶಗಳಿಗೆ ಉನ್ನತ ವ್ಯಾಸಂಗಕ್ಕಾಗಿ ಹೋಗುವ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆ ಶೇ.31ರಷ್ಟು ಇಳಿಕೆ : ಕೇಂದ್ರ ಸರ್ಕಾರ

12/02/2026 7:41 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ‘ರಾಜ್ಯ ಸರ್ಕಾರಿ ನೌಕರ’ರಿಗೆ ಗುಡ್ ನ್ಯೂಸ್: ಡಿ.31, 2026ರವರೆಗೆ ‘ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ’ ಉತ್ತೀರ್ಣಕ್ಕೆ ಅವಕಾಶ
KARNATAKA

BREAKING: ‘ರಾಜ್ಯ ಸರ್ಕಾರಿ ನೌಕರ’ರಿಗೆ ಗುಡ್ ನ್ಯೂಸ್: ಡಿ.31, 2026ರವರೆಗೆ ‘ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ’ ಉತ್ತೀರ್ಣಕ್ಕೆ ಅವಕಾಶ

By kannadanewsnow0912/02/2026 7:53 PM

ಬೆಂಗಳೂರು: ರಾಜ್ಯದ ಸರ್ಕಾರಿ ನೌಕರರು ಬಡ್ತಿ ಸೇರಿದಂತೆ ಇತರೆ ಸೌಲಭ್ಯಕ್ಕೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ( Computer Literacy Test-CLT) ತೇರ್ಗಡೆ ಕಡ್ಡಾಯವಾಗಿದೆ. ಈ ಪರೀಕ್ಷೆ ಉತ್ತೀರ್ಣಕ್ಕೆ ದಿನಾಂಕ 31-12-2025ರವರೆಗೆ ಅವಕಾಶ ನೀಡಲಾಗಿತ್ತು. ಇದೀಗ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಎನ್ನುವಂತೆ ದಿನಾಂಕ 31-12-2026ರವರೆಗೆ ಅವಧಿಯನ್ನು ವಿಸ್ತರಿಸಿದೆ.

ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, ಅದರಲ್ಲಿ ಕರ್ನಾಟಕ ರಾಜ್ಯ ನಾಗರಿಕ ಸೇವಾ ಅಧಿನಿಯಮ, 1978 (1990 ರ ಕರ್ನಾಟಕ ಅಧಿನಿಯಮ 14) 8ನೇ ಪುಕರಣದೊಂದಿಗೆ ಓದಲಾದಂತೆ, 3ನೇ ಪ್ರಕರಣದ (1)ನೇ ಉಪ-ಪಕರಣದ ಮೂಲಕ ಪುದತ್ತವಾದ ಅಧಿಕಾರಗಳನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ರಚಿಸಿರುವ ಕರ್ನಾಟಕ ನಾಗರಿಕ ಸೇವಾ (ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ) ನಿಯಮಗಳು 2012ಕ್ಕೆ ತಿದ್ದುಪಡಿ ಮಾಡುವ ಸಲುವಾಗಿ ಈ ಕೆಳಗಿನ ನಿಯಮಗಳ ಕರಡನ್ನು, ಸದರಿ ಅಧಿನಿಯಮದ 3ನೇ ಪುಕರಣದ (2)ನೇ ಉಪ ಪಕರಣದ (ಎ) ಖಂಡದ ಮೂಲಕ ಅಗತ್ಯಪಡಿಸಲಾದಂತೆ ಇದರಿಂದ ಬಾಧಿತರಾಗುವ ಸಂಭವವಿರುವ ಎಲ್ಲಾ ವ್ಯಕ್ತಿಗಳ ಮಾಹಿತಿಗಾಗಿ, ಈ ಮೂಲಕ ಪುಕಟಿಸಲಾಗಿದೆ ಮತ್ತು ಸದರಿ ಕರಡನ್ನು ಅಧಿಕೃತ ರಾಜ್ಯಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ ಹದಿನೈದು ದಿನಗಳ ನಂತರ ಪರಿಗಣನೆಗೆ ತೆಗೆದುಕೊಳ್ಳಲಾಗುವುದೆಂದು ಈ ಮೂಲಕ ಸೂಚಿಸಲಾಗಿದೆ ಎಂದಿದ್ದಾರೆ.

ಸದರಿ ಕರಡು ನಿಯಮಗಳಿಗೆ ಸಂಬಂಧಪಟ್ಟಂತೆ ಮೇಲೆ ಗೊತ್ತುಪಡಿಸಿದ ಅವಧಿ ಕೊನೆಗೊಳ್ಳುವ ಮುಂಚೆ ಯಾರೇ ವ್ಯಕ್ತಿಯಿಂದ ರಾಜ್ಯ ಸರ್ಕಾರವು ಸ್ವೀಕರಿಸಬಹುದಾದ ಯಾವುದೇ ಆಕ್ಷೇಪಣೆ ಅಥವಾ ಸಲಹೆಯನ್ನು ರಾಜ್ಯ ಸರ್ಕಾರವು ಪರಿಗಣಿಸುತ್ತದೆ. ಆಕ್ಷೇಪಣೆಗಳು ಅಥವಾ ಸಲಹೆಗಳನ್ನು ಸರ್ಕಾರದ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ, ವಿಧಾನ ಸೌಧ, ಡಾII ಬಿ.ಆರ್. ಅಂಬೇಡ್ಕರ್ ವೀದಿ, ಬೆಂಗಳೂರು-560001 ಇವರಿಗೆ ಸಲ್ಲಿಸತಕ್ಕದ್ದು.

ಕರಡು ನಿಯಮಗಳು

1. ಶೀರ್ಷಿಕೆ ಮತ್ತು ಪ್ರಾರಂಭ:- (1) ಈ ನಿಯಮಗಳನ್ನು ಕರ್ನಾಟಕ ನಾಗರಿಕ ಸೇವಾ (ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ) (ತಿದ್ದುಪಡಿ) ನಿಯಮಗಳು, 2026 ಎಂದು ಕರೆಯತಕ್ಕದ್ದು.

(2) ಈ ನಿಯಮಗಳಲ್ಲಿ ಒದಗಿಸಿರುವಂತೆ ಉಳಿಸಿಕೊಂಡು, ಈ ನಿಯಮಗಳು ಅಧಿಕೃತ ರಾಜ್ಯಪತ್ರದಲ್ಲಿ ಅಂತಿಮವಾಗಿ ಪುಕಟಗೊಂಡ ದಿನಾಂಕದಿಂದ ಜಾರಿಗೆ ಬರತಕ್ಕದ್ದು.

2. ನಿಯಮ 2ಕ್ಕೆ ತಿದ್ದುಪಡಿ:- ಕರ್ನಾಟಕ ನಾಗರಿಕ ಸೇವಾ (ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ) ನಿಯಮಗಳು 2012ರ (ಇದರಲ್ಲಿ ಇನ್ನು ಮುಂದೆ ಸದರಿ ನಿಯಮಗಳೆಂದು ಉಲ್ಲೇಖಿಸಲಾಗಿದೆ) ನಿಯಮ 2ರಲ್ಲಿ “ 31.12.2025 ರೊಳಗೆ” ಎಂಬ ಪದ ಮತ್ತು ಅಂಕಿಗಳ ಬದಲಿಗೆ “31.12.2026” ಎಂಬ ಪದ ಮತ್ತು ಅಂಕಿಗಳನ್ನು ದಿನಾಂಕ:01.01.2026 ರಿಂದ ಜಾರಿಗೆ ಬಂದಿವೆ ಎಂದು ಭಾವಿಸಿ ಪ್ರತಿಸ್ಥಾಪಿಸತಕ್ಕದ್ದು.

3. ನಿಯಮ 3ಕ್ಕೆ ತಿದ್ದುಪಡಿ :- ಸದರಿ ನಿಯಮಗಳ ನಿಯಮ 3ರಲ್ಲಿ..

(ಎ) ಉಪ ನಿಯಮ (1) ರಲ್ಲಿ “31.12.2025 ರೊಳಗೆ”, ಎಂಬ ಪದ ಮತ್ತು ಅಂಕಿಗಳ ಬದಲಿಗೆ “31.12.2026 ರೊಳಗೆ”, ಎಂಬ ಪದ ಮತ್ತು ಅಂಕಿಗಳನ್ನು ದಿನಾಂಕ:01.01.2026 ರಿಂದ ಜಾರಿಗೆ ಬಂದಿವೆ ಎಂದು ಭಾವಿಸಿ ಪ್ರತಿಸ್ಥಾಪಿಸತಕ್ಕದ್ದು, ಮತ್ತು

(ಬಿ) ಉಪ ನಿಯಮ (2) ರಲ್ಲಿ “31.12.2025ರೊಳಗೆ”, ಎಂಬ ಪದ ಮತ್ತು ಅಂಕಿಗಳ ಬದಲಿಗೆ “31.12.2026 ರೊಳಗೆ”, ಎಂಬ ಪದ ಮತ್ತು ಅಂಕಿಗಳನ್ನು ದಿನಾಂಕ:01.01.2026 ರಿಂದ ಜಾರಿಗೆ ಬಂದಿವೆ ಎಂದು ಭಾವಿಸಿ ಪ್ರತಿಸ್ಥಾಪಿಸತಕ್ಕದ್ದು ಎಂಬುದಾಗಿ ತಿಳಿಸಿದ್ದಾರೆ.

ವರದಿ; ವಸಂತ ಬಿ ಈಶ್ವರಗೆರೆ, ಸಂಪಾದಕರು..

ಗ್ರಾಮಾಭಿವೃದ್ಧಿಗೆ ವಿಬಿ-ಜಿ ರಾಮ್‌ ಜಿ ಕಾಯಿದೆ ಸಹಕಾರಿ: ಬಿಜೆಪಿ ರೈತ ಮೋರ್ಚಾ ರಾಜ್ಯ ಕಾರ್ಯದರ್ಶಿ ಅಶೋಕ್

BREAKING: ದೇಶದಲ್ಲಿ ‘ನಿಫಾ ವೈರಸ್’ಗೆ ಮತ್ತೊಂದು ಬಲಿ: ಪಶ್ಚಿಮ ಬಂಗಾಳದಲ್ಲಿ ನರ್ಸ್ ಸಾವು

Share. Facebook Twitter LinkedIn WhatsApp Email

Related Posts

ಮಹಾಶಿವರಾತ್ರಿ ಹಿನ್ನೆಲೆ: ಯಶವಂತಪುರ – ಕಲಬುರಗಿ ನಡುವೆ ವಿಶೇಷ ಎಕ್ಸ್ ಪ್ರೆಸ್ ರೈಲು ಸಂಚಾರ

12/02/2026 7:58 PM1 Min Read

BREAKING: ದೇಶದಲ್ಲಿ ‘ನಿಫಾ ವೈರಸ್’ಗೆ ಮತ್ತೊಂದು ಬಲಿ: ಪಶ್ಚಿಮ ಬಂಗಾಳದಲ್ಲಿ ನರ್ಸ್ ಸಾವು

12/02/2026 7:19 PM1 Min Read

ಬಿಕ್ಲು ಶಿವ ಕೊಲೆ ಕೇಸ್: 20ನೇ ಆರೋಪಿ ಅಜಿತ್ ಮಧ್ಯಂತರ ಜಾಮೀನು ತೆರವು, ಶರಣಾಗಲು ಕೋರ್ಟ್ ಆದೇಶ

12/02/2026 7:12 PM1 Min Read
Recent News

ಮಹಾಶಿವರಾತ್ರಿ ಹಿನ್ನೆಲೆ: ಯಶವಂತಪುರ – ಕಲಬುರಗಿ ನಡುವೆ ವಿಶೇಷ ಎಕ್ಸ್ ಪ್ರೆಸ್ ರೈಲು ಸಂಚಾರ

12/02/2026 7:58 PM

BREAKING: ‘ರಾಜ್ಯ ಸರ್ಕಾರಿ ನೌಕರ’ರಿಗೆ ಗುಡ್ ನ್ಯೂಸ್: ಡಿ.31, 2026ರವರೆಗೆ ‘ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ’ ಉತ್ತೀರ್ಣಕ್ಕೆ ಅವಕಾಶ

12/02/2026 7:53 PM

3 ವರ್ಷದಲ್ಲಿ ವಿದೇಶಗಳಿಗೆ ಉನ್ನತ ವ್ಯಾಸಂಗಕ್ಕಾಗಿ ಹೋಗುವ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆ ಶೇ.31ರಷ್ಟು ಇಳಿಕೆ : ಕೇಂದ್ರ ಸರ್ಕಾರ

12/02/2026 7:41 PM

BREAKING: ದೇಶದಲ್ಲಿ ‘ನಿಫಾ ವೈರಸ್’ಗೆ ಮತ್ತೊಂದು ಬಲಿ: ಪಶ್ಚಿಮ ಬಂಗಾಳದಲ್ಲಿ ನರ್ಸ್ ಸಾವು

12/02/2026 7:19 PM
State News
KARNATAKA

ಮಹಾಶಿವರಾತ್ರಿ ಹಿನ್ನೆಲೆ: ಯಶವಂತಪುರ – ಕಲಬುರಗಿ ನಡುವೆ ವಿಶೇಷ ಎಕ್ಸ್ ಪ್ರೆಸ್ ರೈಲು ಸಂಚಾರ

By kannadanewsnow0912/02/2026 7:58 PM KARNATAKA 1 Min Read

ಬೆಂಗಳೂರು: ಮಹಾಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸಲು ನೈಋತ್ಯ ರೈಲ್ವೆಯು ಬೆಂಗಳೂರಿನ ಯಶವಂತಪುರ ಮತ್ತು ಕಲಬುರಗಿ ನಿಲ್ದಾಣಗಳ…

BREAKING: ‘ರಾಜ್ಯ ಸರ್ಕಾರಿ ನೌಕರ’ರಿಗೆ ಗುಡ್ ನ್ಯೂಸ್: ಡಿ.31, 2026ರವರೆಗೆ ‘ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ’ ಉತ್ತೀರ್ಣಕ್ಕೆ ಅವಕಾಶ

12/02/2026 7:53 PM

BREAKING: ದೇಶದಲ್ಲಿ ‘ನಿಫಾ ವೈರಸ್’ಗೆ ಮತ್ತೊಂದು ಬಲಿ: ಪಶ್ಚಿಮ ಬಂಗಾಳದಲ್ಲಿ ನರ್ಸ್ ಸಾವು

12/02/2026 7:19 PM

ಬಿಕ್ಲು ಶಿವ ಕೊಲೆ ಕೇಸ್: 20ನೇ ಆರೋಪಿ ಅಜಿತ್ ಮಧ್ಯಂತರ ಜಾಮೀನು ತೆರವು, ಶರಣಾಗಲು ಕೋರ್ಟ್ ಆದೇಶ

12/02/2026 7:12 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.