ಬೆಂಗಳೂರು: ಮಾರ್ಚ್.6ರಂದು ಕರ್ನಾಟಕ ಬಜೆಟ್ ಅನ್ನು ದಾಖಲೆಯ ಬಾರಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಮಂಡಿಸಲು ಡೇಟ್ ನಿಗದಿಯಾಗಿದೆ. ಇದಲ್ಲದೇ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳನ್ನು ಆಡಿಸೋದಕ್ಕೆ ಒಪ್ಪಿಗೆ ಸೂಚಿಸಲಾಗಿದೆ. ಇನ್ನೂ ಬೆಂಗಳೂರಿನ ಹೃದಯ ಭಾಗದಲ್ಲಿರುವಂತ ರೇಸ್ ಕೋರ್ಸ್ ಸ್ಥಳಾಂತರಕ್ಕೂ ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಆ ಎಲ್ಲಾ ಇಂದಿನ ರಾಜ್ಯ ಸಚಿವ ಸಂಪುಟ ಸಭೆಯ ಪ್ರಮುಖ ಹೈಲೈಟ್ಸ್ ಮುಂದಿದೆ ಓದಿ.
ಇಂದಿನ ರಾಜ್ಯ ಸಂಪುಟ ಸಭೆ ಮುಕ್ತಾಯದ ಬಳಿಕ ಸುದ್ದಿಗೋಷ್ಠಿಯಲ್ಲಿ ಕಾನೂನು ಸಚಿವ ಹೆಚ್.ಕೆ ಪಾಟೀಲ್ ಅವರು ಸಂಪುಟ ಸಭೆಯ ನಿರ್ಧಾರಗಳನ್ನು ಮಾಹಿತಿ ನೀಡಿದರು. ಹೆಚ್ ಪಿವಿ ಲಸಿಕೆ ಖರೀದಿಗೆ ಒಪ್ಪಿಗೆ ನೀಡಲಾಗಿದೆ. 14 ವರ್ಷ ಹೆಣ್ಣುಮಕ್ಕಳಿಗೆ ನೀಡುವ ಲಸಿಕೆ ನೀಡಲಾಗುತ್ತದೆ. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಿಂದ ಅನುದಾನ ನೀಡಲಾಗುತ್ತದೆ. ಬಾಗಲಕೋಟೆ ತೋಟಗಾರಿಕೆ ವಿವಿಯಲ್ಲಿ ಜೀನ್ ಬ್ಯಾಂಕ್ ಅನ್ನು 11.12 ಕೋಟಿ ವೆಚ್ಚದಲ್ಲಿ ಸ್ಥಾಪನೆಗೆ ಒಪ್ಪಿಗೆ ನೀಡಲಾಗಿದೆ. ಪ್ರತಿ ಬೆಳೆಗೆ ಒಂದು ಜೀನ್ ಇರುತ್ತದೆ. ದೇಶಿ ತಳಿಗಳ ಅಭಿವೃದ್ಧಿಗೆ ಒತ್ತು ನೀಡಲಾಗುತ್ತದೆ ಎಂದರು.
ದ್ರಾಕ್ಷಾರಸ ಶಿತಲೀಕರಣ ಘಟಕದ ನಿರ್ಮಾಣ. ತಿಕೋಟಾದಲ್ಲಿ ಘಟಕ ನಿರ್ಮಾಣಕ್ಕೆ ಒಪ್ಪಿಗೆ ನೀಡಲಾಗಿದೆ. ಒಟ್ಟು 12.40 ಕೋಟಿ ಅಂದಾಜು ಮೊತ್ತದಲ್ಲಿ ನಿರ್ಮಾಣ ಮಾಡಲಾಗುತ್ತದೆ. ಬಳ್ಳಾರಿ ವಿಮ್ಸ್ ಆವರಣದಲ್ಲಿ 200 ಬೆಡ್ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ ಮಾಡಲು ನಿರ್ಧರಿಸಲಾಗಿದೆ. 330.50 ಕೋಟಿ ಮೊತ್ತದಲ್ಲಿ ಸ್ಥಾಪನೆ ಮಾಡಲಾಗುತ್ತಿದೆ ಎಂದರು.
ಶಿಷ್ಟಾಚಾರ ನಿಯಮಗಳಿಗೆ ಘಟನೋತ್ತರ ಅನುಮೋದನೆ ನೀಡಲಾಗಿದೆ. ಶಾಸಕರನ್ನ ಅಧ್ಯಕ್ಷರನ್ನಾಗಿ ಮಾಡುವ ನಿಯಮ ಇದಾಗಿದೆ. ನ್ಯಾಯಾಲಯಗಳ ಕಟ್ಟಡ ಉದ್ಘಾಟನಾ ಕಾರ್ಯಕ್ರಮಗಳಲ್ಲಿ ಶಿಷ್ಟಾಚಾರ ಇದಾಗಿದೆ. ಕಲ್ಲುಗಣಿ ಗುತ್ತಿಗೆ ಒತ್ತುವರಿಗೆ ದಂಡಕ್ಕೆ ನಿರ್ಧರಿಸಲಾಗಿದೆ. ಒನ್ ಟೈಮ್ ಸೆಟಲ್ ಮೆಂಟ್ ಗೆ ಅವಕಾಶ ನೀಡಲಾಗುತ್ತಿದೆ. ಗಣಿ ನಿಯಮಗಳಿಗೆ ತಿದ್ದುಪಡಿಗೆ ಒಪ್ಪಿಗೆ ಸೂಚಿಸಲಾಗಿದೆ. ರಾಯಲ್ಟಿ ಪೇ ಮಾಡದೆ ಅಕ್ರಮ ಸಾಗಾಟ. ಇಲ್ಲವೇ ಒತ್ತುವರಿ ಮಾಡಿಕೊಂಡವರಿಗೆ ಪೆನಾಲ್ಟಿ ವಿಧಿಸಲಾಗುತ್ತದೆ. ಒಟಿಎಸ್ ಮೂಲಕ ಸೆಟಲ್ ಮೆಂಟ್ ಮಾಡಬೇಕು. ಒಂದೇ ಬಾರಿಗೆ ದಂಡ ಕಟ್ಟಿದರೆ ತೆರಿಗೆ ವಿನಾಯ್ತಿ ನೀಡಲಾಗುತ್ತಿದೆ ಎಂದರು.
ಜಿಬಿಎ ವ್ಯಾಪ್ತಿಯ 4 ಖಾಸಗಿ ಮೆಡಿಕಲ್ ಕಾಲೇಜುಗಳಲ್ಲಿ ಎಬಿಎಆರ್ ಕೆ ಯೋಜನೆಯಡಿ 2ಎ ಚಿಕಿತ್ಸಾ ವಿಧಾನಕ್ಕೆ ವಿನಾಯ್ತು ನೀಡಲು ನಿರ್ಧರಿಸಲಾಗಿದೆ. ಸೇಂಟ್ ಜಾನ್ಸ್, ರಾಮಯ್ಯ, ಕಿಮ್ಸ್,ಅಂಬೇಡ್ಕರ್ ಕಾಲೇಜುಗಳಿಗೆ ಅನ್ವಯಿಸಲಿದೆ ಎಂದು ತಿಳಿಸಿದರು.
ಬಜೆಟ್ ಅಧಿವೇಶನಕ್ಕೆ ದಿನಾಂಕ ನಿಗದಿ ಮಾಡಲಾಗಿದೆ. ಮಾರ್ಚ್.6ರಿಂದ ಬಜೆಟ್ ಅಧಿವೇಶ ನಡೆಯಲಿದೆ. ಮಾರ್ಚ್.6ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಬಜೆಟ್ ಮಂಡಿಸಲಿದ್ದಾರೆ. ಮಾರ್ಚ್.27ರವರೆಗೆ ಬಜೆಟ್ ಅಧಿವೇಶ ನಡೆಯಲಿದೆ. 14 ದಿನಗಳ ಕಾಲ ಬಜೆಟ್ ಅಧಿವೇಶ ನಡೆಸಲು ಇಂದಿನ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದರು.
ಚನ್ನರಾಯಪಟ್ಟಣ ಭೂಮಿ ಗೊಂದಲ ವಿಚಾರವಾಗಿ ಮಾತನಾಡಿದಂತ ಅವರು, ಚನ್ನರಾಯಪಟ್ಟಣದ ರೈತರ ಭೂಮಿ ಶಾಶ್ವತ ಎಂದು ಘೋಷಣೆ ಮಾಡಲು ನಿರ್ಧರಿಸಲಾಗಿದೆ. ಹಸಿರುವಲಯವಾಗಿಯೇ ಮುಂದುವರಿಯಲಿದೆ. ಈ ಹಿಂದೆ ಕೆಐಎಡಿಬಿ ಭೂಸ್ವಾಧೀನ ಮಾಡಿತ್ತು. ನಂತರ ರೈತರು ಪ್ರತಿಭಟನೆ ನಡೆಸಿದ್ದರು ಎಂದರು.
ಕೊನೆಗೂ ಬೆಂಗಳೂರಿನ ರೇಸ್ ಕೋರ್ಸ್ ಶಿಫ್ಟ್ ನಿರ್ಧಾರ ಕೈಗೊಳ್ಳಲಾಗಿದೆ. ಬೆಂಗಳೂರಿನಿಂದ ಕುಣಿಗಲ್ ಗೆ ರೇಸ್ ಕೋರ್ಸ್ ಶಿಫ್ಟ್ ಆಗಲಿದೆ. ಕುಣಿಗಲ್ ನ ಸ್ಟಡ್ ಫಾರ್ಮ್ ಗೆ ಶಿಫ್ಟ್ ಮಾಡಲಾಗುತ್ತಿದೆ. ಶಿಫ್ಟ್ ನಲ್ಲಿ ಉದ್ಯಾನ ನಿರ್ಮಾಣಕ್ಕೆ ನಿರ್ಧಾರ ಕೈಗೊಳ್ಳಲಾಗಿದೆ. ಲೀಸ್ ಅವಧಿ ಮುಕ್ತಾಯ,ಬಾಡಿಗೆಯೂ ಪರಿಷ್ಕರಣೆ ಆಗಿರಲಿಲ್ಲ. ಹೀಗಾಗಿ ಬೆಂಗಳೂರಿನಿಂದ ರೇಸ್ ಕೋರ್ಸ್ ಸ್ಥಳಾಂತರ ಮಾಡಲಾಗುತ್ತಿದೆ ಎಂದರು.
ಶಾಲಾ ವಿದ್ಯಾರ್ಥಿಗಳಿಗೆ ಶೂ-ಸಾಕ್ಸ್ ವಿತರಣೆ. 1 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ವಿತರಣೆ ಮಾಡಲು 104 ಕೋಟಿ ವೆಚ್ಚದಲ್ಲಿ ಖರೀದಿಗೆ ಸಂಪುಟ ಒಪ್ಪಿಗೆ ನೀಡಲಾಗಿದೆ. ವಿದ್ಯಾವಿಕಾಸ ಯೋಜನೆಯಡಿ ವಿತರಣೆ ಮಾಡಲಾಗುತ್ತಿದೆ. ಶಕ್ತಿ ಯೋಜನೆಯಡಿ ಸ್ಮಾರ್ಟ್ ಕಾರ್ಡ್ ವಿತರಣೆ ಮಾಡಲಾಗುತ್ತದೆ. ಮಹಿಳೆಯರ ಉಚಿತ ಪ್ರಯಾಣಕ್ಕೆ ವಿತರಣೆಗೆ ನಿರ್ಧರಿಸಲಾಗಿದೆ. 4 ಸಾರಿಗೆ ನಿಗಮಗಳಿಂದ ಮಹಿಳೆಯರಿಗೆ ವಿತರಣೆ ಮಾಡಲಿದೆ. ಸ್ಮಾರ್ಟ್ ಕಾರ್ಡ್ ತೋರಿಸಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದರು.
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಮ್ಯಾಚ್ ಆಡಿಸಲು ಅನುಮತಿಸಲು ಒಪ್ಪಿಗೆ ನೀಡಿದೆ. ಆರ್ ಸಿಬಿ ಪಂದ್ಯಗಳನ್ನ ವೀಕ್ಷಿಸಲು ಅವಕಾಶ ನೀಡಲಾಗುತ್ತಿದೆ. ಸಚಿವ ಸಂಪುಟ ಸಭೆಯಲ್ಲಿ ಅನುಮತಿ ನೀಡಿದೆ. ಕೆಲವು ಷರತ್ತುಗಳು ವಿಧಿಸಿ ಅವಕಾಶ ನೀಡಲಾಗಿದೆ. ಷರತ್ತುಗಳ ವಿಧಿಸುವ ಅವಕಾಶ ಗೃಹ ಇಲಾಖೆಗೆ ನೀಡಲಾಗಿದೆ. ನಾಳೆ, ನಾಡಿದ್ದು ಗೃಹ ಇಲಾಖೆಯಿಂದ ಆದೇಶ ಹೊರಬೀಳಲಿದೆ. ನ್ಯಾ.ಕುನ್ಹಾ ಕಮಿಟಿ ಗಮನದಲ್ಲಿರಿಸಿಕೊಂಡು ಆದೇಶ ಮಾಡಲಿದೆ. ಗೇಟ್ ಗಳ ಅಗಲಕ್ಕೆ ಶಿಫಾರಸು ಮಾಡಿತ್ತು. ಉದ್ಘಾಟನಾ ಪಂದ್ಯಗಳಿಗೆ ಅವರು ಆಸಕ್ತರಿದ್ದಾರೆ ಎಂದರು.
ಎಸ್ ಐಆರ್ ಬಗ್ಗೆ ಗಂಭೀರ ಚರ್ಚಯಾಗಿದೆ. ಕಾನೂನಾತ್ಮಕ ವಿಚಾರಗಳ ಚರ್ಚೆಯಾಗಿದೆ. ಆಳವಾದ ಅಧ್ಯಯನದ ಅಗತ್ಯವಿದೆ. ವರದಿ ನೀಡುವಂತೆ ಕಾನೂನು ಇಲಾಖೆಗೆ ಸೂಚಿಸಿದೆ. ನಮ್ಮ ಇಲಾಖೆ ಅಧ್ಯಯನ ಮಾಡಿ ವರದಿ ಸಲ್ಲಿಸಲಿದೆ ಎಂದು ಕಾನೂನು ಸಚಿವ ಹೆಚ್.ಕೆ ಪಾಟೀಲ್ ತಿಳಿಸಿದರು.
ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು
RCB ಅಭಿಮಾನಿಗಳಿಗೆ ಗುಡ್ ನ್ಯೂಸ್: ಚಿನ್ನಸ್ವಾಮಿ ಮೈದಾನದಲ್ಲಿ IPL ಪಂದ್ಯ ಆಡಿಸಲು ರಾಜ್ಯ ಸರ್ಕಾರ ಒಪ್ಪಿಗೆ
ಗ್ರಾಮಾಭಿವೃದ್ಧಿಗೆ ವಿಬಿ-ಜಿ ರಾಮ್ ಜಿ ಕಾಯಿದೆ ಸಹಕಾರಿ: ಬಿಜೆಪಿ ರೈತ ಮೋರ್ಚಾ ರಾಜ್ಯ ಕಾರ್ಯದರ್ಶಿ ಅಶೋಕ್








