ಹಾಸನ: ಜಿಲ್ಲೆಯಲ್ಲಿ ಆಸ್ತಿ ವಿಚಾರವಾಗಿ ಸಾರಿಗೆ ಇಲಾಖೆಯ ನೌಕರನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಸಂಬಂಧ 10 ಮಂದಿ ಆರೋಪಿಗಳ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಹಾಸನದ ಆಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಾರಿಗೆ ಇಲಾಖೆಯ ನೌಕರ ವೀರಪ್ಪ ಎಂಬುವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಅವರ ಪುತ್ರ ವಿವೇಕ್ ಎಂಬಾತ ಪೊಲೀಸರಿಗೆ ದೂರು ನೀಡಿದ್ದರು.
ಈ ದೂರು ಆಧರಿಸಿ ಸಾರಿಗೆ ಇಲಾಖೆ ನೌಕರ ವೀರಪ್ಪ ಹತ್ಯೆ ಪ್ರಕರಣದಲ್ಲಿ ಮಲ್ಲಮ್ಮ, ಹರೀಶ, ಮಹದೇವಮ್ಮ, ಬಾಗಲಯ್ಯ, ಲೋಕೇಶ, ಸತೀಶ, ಧರ್ಮ, ಜಯರಾಮ, ಸ್ವಾಮಿ ಎಂಬುವರು ಸೇರಿದಂತೆ 10 ಮಂದಿ ವಿರುದ್ಧ ಆಲೂರು ಠಾಣೆಯ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಸಾರ್ವಜನಿಕರೇ ಗಮನಕ್ಕೆ: ನಾಳೆ ಸಂಜೆಯಿಂದ KSRTC, BMTC ಬಸ್ ಸಂಚಾರ ಸ್ಥಗಿತ?








