Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಮಂಡ್ಯದಲ್ಲಿ ನಾಡಬಾಂಬ್ ಸ್ಟೋಟಗೊಂಡು ಹಸುವಿನ ಬಾಯಿ ಛಿದ್ರಛಿದ್ರ

19/02/2026 7:59 PM

ಗ್ರಾಮೀಣ ಭಾಗದ ಜನರ ಸಾರಿಗೆ ಸಮಸ್ಯೆ ಬಗೆಹರಿಸಿ: ಸಾಗರದಲ್ಲಿ ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಹಕ್ರೆ ಒತ್ತಾಯ

19/02/2026 7:49 PM

ಮಂಡ್ಯ: ಮಾ.23ರಿಂದ ಏ.5ರವರೆಗೆ ‘ವೈರಮುಡಿ ಬ್ರಹ್ಮೋತ್ಸವ’ ಆಚರಣೆ- ಡಿಸಿ ಡಾ.ಕುಮಾರ

19/02/2026 7:40 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಗ್ರಾಮೀಣ ಭಾಗದ ಜನರ ಸಾರಿಗೆ ಸಮಸ್ಯೆ ಬಗೆಹರಿಸಿ: ಸಾಗರದಲ್ಲಿ ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಹಕ್ರೆ ಒತ್ತಾಯ
KARNATAKA

ಗ್ರಾಮೀಣ ಭಾಗದ ಜನರ ಸಾರಿಗೆ ಸಮಸ್ಯೆ ಬಗೆಹರಿಸಿ: ಸಾಗರದಲ್ಲಿ ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಹಕ್ರೆ ಒತ್ತಾಯ

By kannadanewsnow0919/02/2026 7:49 PM

ಶಿವಮೊಗ್ಗ : ಗ್ರಾಮೀಣ ಭಾಗದ ಜನರ ಸಾರಿಗೆ ಸಮಸ್ಯೆ ತಕ್ಷಣ ಬಗೆಹರಿಸಬೇಕು. ಒಂದು ಮಾರ್ಗದ ಬಸ್ ಸಂಚಾರ ನಿಲ್ಲಿಸಿದರೆ ಅದನ್ನು ಅವಲಂಬಿಸಿಕೊoಡವರಿಗೆ ಆಗುವ ಸಮಸ್ಯೆಯನ್ನು ಕೆ.ಎಸ್.ಆರ್.ಟಿ.ಸಿ. ಅಧಿಕಾರಿಗಳು ಅರ್ಥ ಮಾಡಿಕೊಳ್ಳಬೇಕು ಎಂದು ಬಿಜೆಪಿ ಮುಖಂಡ, ಮಾಜಿ ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ ಹೇಳಿದ್ದಾರೆ.

ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಕೆ.ಎಸ್.ಆರ್.ಟಿ.ಸಿ. ಡಿಪೋ ಎದುರು ಯಡಜಿಗಳೆಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಿಂದ ಬಸ್ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದಂತ ಅವರು, ಯಡಜಿಗಳೆಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ವಿದ್ಯಾರ್ಥಿಗಳು, ಗ್ರಾಮಸ್ಥರು, ರೋಗಿಗಳು ಸಾಗರಕ್ಕೆ ಬರುವ ಬಸ್‌ಗಳನ್ನು ಅವಲಂಭಿಸಿಕೊoಡಿದ್ದಾರೆ ಎಂದರು.

ನಾನು ತಾಲ್ಲೂಕು ಪಂಚಾಯ್ತಿ ಅಧ್ಯಕ್ಷನಾಗಿದ್ದಾಗ ತಾಲ್ಲೂಕಿನ ಬೇರೆಬೇರೆ ಮಾರ್ಗಗಳಿಗೆ ತುರ್ತು ಬಸ್ ಸೌಲಭ್ಯ ಕಲ್ಪಿಸಲು ಸಂಬoಧಪಟ್ಟ ಅಧಿಕಾರಿಗಳ ಮೇಲೆ ಒತ್ತಡ ತರಲಾಗಿತ್ತು. ಈ ಭಾಗದ 11 ರೂಟ್‌ಗಳಿಗೆ ಬಸ್ ಸೌಲಭ್ಯ ಕಲ್ಪಿಸಲಾಗಿತ್ತು. ಕಳೆದ ಎರಡು ವರ್ಷಗಳಿಂದ ಬಸ್ ಸೌಲಭ್ಯ ನಿಲ್ಲಿಸಲಾಗಿದ್ದು ಜನರು ತೀವೃ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಅಧಿಕಾರಿಗಳಿಗೆ ಮೌಖಿಕವಾಗಿ ಸಾಕಷ್ಟು ಬಾರಿ ಮನವಿ ಮಾಡಿದರೂ ಅವರು ಸ್ಪಂದಿಸುತ್ತಿಲ್ಲ. ತಕ್ಷಣ ಬಸ್ ಸೌಲಭ್ಯ ಕಲ್ಪಿಸದೆ ಹೋದಲ್ಲಿ ಮುಂದಿನ ದಿನಗಳಲ್ಲಿ ಉಗ್ರವಾದ ಪ್ರತಿಭಟನೆ ಹಮ್ಮಿಕೊಳ್ಳುವುದು ಅನಿವಾರ್ಯವಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಪ್ರತಿದಿನ ಬೆಳಿಗ್ಗೆ 7.45ಕ್ಕೆ ಸಾಗರದಿಂದ ಅಂಬಗಾರಿಗೆ ಬರುತ್ತಿದ್ದ ಬಸ್ ಸೌಲಭ್ಯವನ್ನು ಪುನರಾರಂಭಿಸಬೇಕು. ಈ ಮಾರ್ಗದಲ್ಲಿ ಸಂಚರಿಸುವ ಎಲ್ಲ ಬಸ್‌ಗಳು ಹಿಂದಿನಂತೆ ಪುನರಾರಂಭ ಮಾಡಬೇಕು. ಸರ್ಕಾರ ಗ್ರಾಮೀಣ ಭಾಗದ ಸಾರಿಗೆ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಗಂಭೀರ ಕ್ರಮ ಕೈಗೊಳ್ಳಬೇಕು. ಗ್ರಾಮಸ್ಥರು ಸರ್ಕಾರಿ ಬಸ್ ಸಂಚಾರ ಅವಲಂಭಿಸಿರುತ್ತಾರೆ ಎನ್ನುವುದನ್ನು ಸಂಬoಧಪಟ್ಟವರು ಗಮನಿಸಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಗಿರೀಶ್ ಹೆಗಡೆ ಹಕ್ರೆ, ರಜನೀಶ್ ಹೆಗಡೆ, ಪ್ರವೀಣ್ ಶೆಟ್ಟಿಸರ, ಅರುಣ ಪೂಜಾರಿ ಹಕ್ರೆ, ಅಕ್ಷಯ ಪೂಜಾರಿ, ಮಹೇಶ್ ರಾಮನಗದ್ದೆ, ಮಂಜುನಾಥ್ ಕೆ.ವಿ., ಗಣಪತಿ, ಸುರೇಶ್ ಇನ್ನಿತರರು ಹಾಜರಿದ್ದರು.

ಮಂಡ್ಯ: ಮಾ.23ರಿಂದ ಏ.5ರವರೆಗೆ ‘ವೈರಮುಡಿ ಬ್ರಹ್ಮೋತ್ಸವ’ ಆಚರಣೆ- ಡಿಸಿ ಡಾ.ಕುಮಾರ

BREAKING: ‘ನಂದಿನಿ ಉತ್ಪನ್ನ’ಗಳ ಬಗ್ಗೆ ಅಪಪ್ರಚಾರ: ‘FIR’ ದಾಖಲು

Share. Facebook Twitter LinkedIn WhatsApp Email

Related Posts

BREAKING: ಮಂಡ್ಯದಲ್ಲಿ ನಾಡಬಾಂಬ್ ಸ್ಟೋಟಗೊಂಡು ಹಸುವಿನ ಬಾಯಿ ಛಿದ್ರಛಿದ್ರ

19/02/2026 7:59 PM1 Min Read

ಮಂಡ್ಯ: ಮಾ.23ರಿಂದ ಏ.5ರವರೆಗೆ ‘ವೈರಮುಡಿ ಬ್ರಹ್ಮೋತ್ಸವ’ ಆಚರಣೆ- ಡಿಸಿ ಡಾ.ಕುಮಾರ

19/02/2026 7:40 PM2 Mins Read

ಮಂಡ್ಯದ ಬದನೂರು ಉತ್ಸವ ಹಿನ್ನಲೆ: ನಾಳೆಯಿಂದ ಹೆಲಿ ಟೂರಿಸಂ ಆರಂಭ

19/02/2026 7:37 PM1 Min Read
Recent News

BREAKING: ಮಂಡ್ಯದಲ್ಲಿ ನಾಡಬಾಂಬ್ ಸ್ಟೋಟಗೊಂಡು ಹಸುವಿನ ಬಾಯಿ ಛಿದ್ರಛಿದ್ರ

19/02/2026 7:59 PM

ಗ್ರಾಮೀಣ ಭಾಗದ ಜನರ ಸಾರಿಗೆ ಸಮಸ್ಯೆ ಬಗೆಹರಿಸಿ: ಸಾಗರದಲ್ಲಿ ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಹಕ್ರೆ ಒತ್ತಾಯ

19/02/2026 7:49 PM

ಮಂಡ್ಯ: ಮಾ.23ರಿಂದ ಏ.5ರವರೆಗೆ ‘ವೈರಮುಡಿ ಬ್ರಹ್ಮೋತ್ಸವ’ ಆಚರಣೆ- ಡಿಸಿ ಡಾ.ಕುಮಾರ

19/02/2026 7:40 PM

ಮಂಡ್ಯದ ಬದನೂರು ಉತ್ಸವ ಹಿನ್ನಲೆ: ನಾಳೆಯಿಂದ ಹೆಲಿ ಟೂರಿಸಂ ಆರಂಭ

19/02/2026 7:37 PM
State News
KARNATAKA

BREAKING: ಮಂಡ್ಯದಲ್ಲಿ ನಾಡಬಾಂಬ್ ಸ್ಟೋಟಗೊಂಡು ಹಸುವಿನ ಬಾಯಿ ಛಿದ್ರಛಿದ್ರ

By kannadanewsnow0919/02/2026 7:59 PM KARNATAKA 1 Min Read

ಮಂಡ್ಯ: ಜಿಲ್ಲೆಯಲ್ಲಿ ನಾಡಬಾಂಬ್ ಸ್ಫೋಟ ಹಸು ಬಾಯಿ ಛಿದ್ರ ಛಿದ್ರ,ಹಸುವಿನ ಸ್ಥಿತಿ ಗಂಭೀರವಾಗಿದೆ. ಮಂಡ್ಯದ ಹರಳಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.…

ಗ್ರಾಮೀಣ ಭಾಗದ ಜನರ ಸಾರಿಗೆ ಸಮಸ್ಯೆ ಬಗೆಹರಿಸಿ: ಸಾಗರದಲ್ಲಿ ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಹಕ್ರೆ ಒತ್ತಾಯ

19/02/2026 7:49 PM

ಮಂಡ್ಯ: ಮಾ.23ರಿಂದ ಏ.5ರವರೆಗೆ ‘ವೈರಮುಡಿ ಬ್ರಹ್ಮೋತ್ಸವ’ ಆಚರಣೆ- ಡಿಸಿ ಡಾ.ಕುಮಾರ

19/02/2026 7:40 PM

ಮಂಡ್ಯದ ಬದನೂರು ಉತ್ಸವ ಹಿನ್ನಲೆ: ನಾಳೆಯಿಂದ ಹೆಲಿ ಟೂರಿಸಂ ಆರಂಭ

19/02/2026 7:37 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.