Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕಲ್ಪನಾ ಚಾವ್ಲಾದಂತೆ ‘ಸುನೀತಾ ವಿಲಿಯಮ್ಸ್’ಗೂ ಆಗ್ತಿತ್ತು.! ನಾಸಾ ಶಾಕಿಂಗ್ ವರದಿ

21/02/2026 4:32 PM

ಯುವಜನರು ಕಾನೂನು ಸುವ್ಯವಸ್ಥೆ ಪಾಲನೆಯ ಅರಿವು ಬಹುಮುಖ್ಯ: ಸಾಗರ ASP ಡಾ.ಬೆನಕ ಪ್ರಸಾದ್

21/02/2026 4:31 PM

ಮಾ.2ರಂದು ಶರಾವತಿ ಮುಳುಗಡೆ ಸಂತ್ರಸ್ತರ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ರಸ್ತೆ ತಡೆ ಪ್ರತಿಭಟನೆ: ತೀ.ನಾ ಶ್ರೀನಿವಾಸ್

21/02/2026 4:27 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಾ.2ರಂದು ಶರಾವತಿ ಮುಳುಗಡೆ ಸಂತ್ರಸ್ತರ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ರಸ್ತೆ ತಡೆ ಪ್ರತಿಭಟನೆ: ತೀ.ನಾ ಶ್ರೀನಿವಾಸ್
KARNATAKA

ಮಾ.2ರಂದು ಶರಾವತಿ ಮುಳುಗಡೆ ಸಂತ್ರಸ್ತರ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ರಸ್ತೆ ತಡೆ ಪ್ರತಿಭಟನೆ: ತೀ.ನಾ ಶ್ರೀನಿವಾಸ್

By kannadanewsnow0921/02/2026 4:27 PM

ಶಿವಮೊಗ್ಗ : ಮಾ. 2ರಂದು ಬೆಳಿಗ್ಗೆ 11ಕ್ಕೆ ಸಿಗಂದೂರು ಸೇತುವೆ ಪ್ರವೇಶದ ರಾಷ್ಟ್ರೀಯ ಹೆದ್ದಾರಿ ತಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮಲೆನಾಡು ರೈತ ಹೋರಾಟ ಸಮಿತಿ ಜಿಲ್ಲಾ ಸಂಚಾಲಕ ತೀ.ನ.ಶ್ರೀನಿವಾಸ್ ತಿಳಿಸಿದರು.

ಇಂದು ಶಿವಮೊಗ್ಗದ ಸಾಗರದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಶರಾವತಿ ಮುಳುಗಡೆ ಸಂತ್ರಸ್ತರು ಹಾಗೂ ಅರಣ್ಯಭೂಮಿ ಸಾಗುವಳಿದಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಹಮ್ಮಿಕೊಂಡಿರುವ ಹಕ್ಕೊತ್ತಾಯದ ಹೋರಾಟ ಇದಾಗಿದೆ ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಮಲೆನಾಡು ರೈತರ ಭೂಹಕ್ಕು ಸಮಸ್ಯೆ ನಿವಾರಣೆ ಮಾಡುವಲ್ಲಿ ಮಾಡಿದ ಸಾಧನೆ ಶೂನ್ಯ. ಮಲೆನಾಡಿನ 65 ವಿಧಾನಸಭಾ ಕ್ಷೇತ್ರದ ಶಾಸಕರು, ಸಚಿವರು ಕಣ್ಣಿದ್ದೂ ಕುರುಡರಾಗಿ, ಕಿವಿಯಿದ್ದೂ ಕಿವುಡರಾಗಿ, ಬಾಯಿದ್ದು ಮೂಖರಾಗಿ ಹೋಗಿದ್ದಾರೆ. ಮಲೆನಾಡಿನ ಜ್ವಲಂತ ಭೂಸಮಸ್ಯೆ ಬಗೆಹರಿಸುವಲ್ಲಿ ಚುನಾಯಿತ ಪ್ರತಿನಿಧಿಗಳಿಗೆ ಅಸಕ್ತಿ ಇಲ್ಲ. ಯಡಿಯೂರಪ್ಪ ಮುಖ್ಯಮಂತ್ರಿಗಳಾಗಿದ್ದಾಗ 3 ಲಕ್ಷ ಅರಣ್ಯಹಕ್ಕು ಅರ್ಜಿ ವಜಾ ಮಾಡಿದ್ದರೇ, ಸಿದ್ದರಾಮಯ್ಯ ಸಹ ಅದೇ ದಾರಿ ತುಳಿದಿದ್ದಾರೆ.. ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರಾಗಲೀ, ಶಿವಮೊಗ್ಗ ಗ್ರಾಮಾಂತರ, ಸಾಗರ ಕ್ಷೇತ್ರದ ಶಾಸಕರಾಗಲೀ ಹೆಚ್ಚು ತಲೆ ಕೆಡಿಸಿಕೊಳ್ಳುತ್ತಿಲ್ಲ ಎಂದು ದೂರಿದರು.

ಶರಾವತಿ ಮುಳುಗಡೆ ಸಂತ್ರಸ್ತರ ಕುರಿತು ಮದನ್ ಗೋಪಾಲ್ ಶಿಫಾರಸ್ಸು ಮಾಡಿದ ವರದಿ ಅನುಷ್ಟಾನಕ್ಕೆ ತರಬೇಕು. ಶರಾವತಿ ಸಂತ್ರಸ್ತರ ಮಾದರಿಯಲ್ಲಿ ತುಂಗಾ, ಭದ್ರಾ, ಅಂಬ್ಲಿಗೊಳ, ಚಕ್ರ, ವರಾಹಿ, ಸಾವೆಹಕ್ಲು ಮುಳುಗಡೆ ಸಂತ್ರಸ್ತರ ಸಮಸ್ಯೆ ಬಗೆಹರಿಸಬೇಕು. ಸಾಗರ ಹೊಸನಗರ ಕ್ಷೇತ್ರದಲ್ಲಿ ಉಯೋಗಿಸಿಕೊಳ್ಳದೆ ಹಾಗೆ ಉಳಿಸಿಕೊಂಡಿರುವ ಕೆಪಿಸಿ ಭೂಮಿಯನ್ನು ರೈತರಿಗೆ ವಾಪಾಸ್ ಕೊಡಬೇಕು ಎಂದರು.

ರಾಜ್ಯದಲ್ಲಿ ಅರಣ್ಯಹಕ್ಕು ಕಾಯ್ದೆಯನ್ನು ಜಾರಿಗೆ ತರಬೇಕು. ಡೀಮ್ಡ್ ಫಾರೆಸ್ಟ್ ವ್ಯಾಪ್ತಿಯಿಂದ ಅರಣ್ಯ ಸ್ವರೂಪ ಇಲ್ಲದ ಗ್ರಾಮ, ಹಕ್ಕುಪತ್ರ ಪಡೆದಿರುವ ಜಮೀನು, ಬಗರ್‌ಹುಕುಂ ಇನ್ನಿತರೆ ಕೈಬಿಡಬೇಕು. ಅರಣ್ಯಭೂಮಿ ಸಾಗುವಳಿ ಮಾಡಿಕೊಂಡು ಬಂದಿರುವ ರೈತರಿಗೆ ಹಕ್ಕುಪತ್ರ ನೀಡಬೇಕು ಸೇರಿದಂತೆ ಹಲವು ಬೇಡಿಕೆಗಳನ್ನು ಇರಿಸಿಕೊಂಡು ಪ್ರತಿಭಟನೆ ನಡೆಸಲಾಗುತ್ತಿದೆ. ಈ ಪ್ರತಿಭಟನೆ ಪಕ್ಷಾತೀತವಾಗಿದ್ದು ಇದನ್ನು ಮುಂದಿಟ್ಟು ಕೊಂಡು ಕಾಂಗ್ರೇಸ್ ಮತ್ತು ಬಿಜೆಪಿ ರಾಜಕೀಯ ಮಾಡುವುದು ಬೇಡ. ಮಲೆನಾಡು ರೈತರ ಸಮಸ್ಯೆ ಬಗೆಹರಿಸಲು ನಿರಂತರ ಹೋರಾಟ ಮುಂದುವರೆಯುತ್ತದೆ ಎಂದು ತಿಳಿಸಿದರು.

ಈ ವೇಳೆ ಅಶೋಕ ಬೇಸೂರು, ಹೆಬ್ಸೆ ನಾಗರಾಜ, ಅಶೋಕ್ ಕೋಡಸರ, ಮಂಜಪ್ಪ ಆರನಕೆರೆ, ದಯಾನಂದ ಹಾಜರಿದ್ದರು.

GOOD NEWS: KCET-2026ರ ಪರೀಕ್ಷೆಗೆ ಅರ್ಜಿ ಸಲ್ಲಿಕೆಗೆ ಮತ್ತೊಮ್ಮೆ ದಿನಾಂಕ ವಿಸ್ತರಿಸಿದ ಕೆಇಎ

ಶಿವಮೊಗ್ಗದಲ್ಲಿ ಕಿರುಕುಳಕ್ಕೆ ಬೇಸತ್ತು ಮಹಿಳೆ ಆತ್ಮಹತ್ಯೆ ಕೇಸ್: ಕಾನ್ಸ್ ಟೇಬಲ್ ಮೋಹನ್ ವಿರುದ್ಧ FIR ದಾಖಲು

Share. Facebook Twitter LinkedIn WhatsApp Email

Related Posts

ಯುವಜನರು ಕಾನೂನು ಸುವ್ಯವಸ್ಥೆ ಪಾಲನೆಯ ಅರಿವು ಬಹುಮುಖ್ಯ: ಸಾಗರ ASP ಡಾ.ಬೆನಕ ಪ್ರಸಾದ್

21/02/2026 4:31 PM1 Min Read

ಶಿವಮೊಗ್ಗದಲ್ಲಿ ಕಿರುಕುಳಕ್ಕೆ ಬೇಸತ್ತು ಮಹಿಳೆ ಆತ್ಮಹತ್ಯೆ ಕೇಸ್: ಕಾನ್ಸ್ ಟೇಬಲ್ ಮೋಹನ್ ವಿರುದ್ಧ FIR ದಾಖಲು

21/02/2026 4:22 PM1 Min Read

BIG NEWS : ಸತತ 20 ಗಂಟೆಗಳ ವಿಚಾರಣೆ ಬಳಿಕ ಸ್ನೇಹಮಯಿ ಕೃಷ್ಣರನ್ನ ಬಿಟ್ಟು ಕಳಿಸಿದ ಸೈಬರ್ ಕ್ರೈಂ ಪೊಲೀಸರು

21/02/2026 4:17 PM1 Min Read
Recent News

ಕಲ್ಪನಾ ಚಾವ್ಲಾದಂತೆ ‘ಸುನೀತಾ ವಿಲಿಯಮ್ಸ್’ಗೂ ಆಗ್ತಿತ್ತು.! ನಾಸಾ ಶಾಕಿಂಗ್ ವರದಿ

21/02/2026 4:32 PM

ಯುವಜನರು ಕಾನೂನು ಸುವ್ಯವಸ್ಥೆ ಪಾಲನೆಯ ಅರಿವು ಬಹುಮುಖ್ಯ: ಸಾಗರ ASP ಡಾ.ಬೆನಕ ಪ್ರಸಾದ್

21/02/2026 4:31 PM

ಮಾ.2ರಂದು ಶರಾವತಿ ಮುಳುಗಡೆ ಸಂತ್ರಸ್ತರ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ರಸ್ತೆ ತಡೆ ಪ್ರತಿಭಟನೆ: ತೀ.ನಾ ಶ್ರೀನಿವಾಸ್

21/02/2026 4:27 PM

ಶಿವಮೊಗ್ಗದಲ್ಲಿ ಕಿರುಕುಳಕ್ಕೆ ಬೇಸತ್ತು ಮಹಿಳೆ ಆತ್ಮಹತ್ಯೆ ಕೇಸ್: ಕಾನ್ಸ್ ಟೇಬಲ್ ಮೋಹನ್ ವಿರುದ್ಧ FIR ದಾಖಲು

21/02/2026 4:22 PM
State News
KARNATAKA

ಯುವಜನರು ಕಾನೂನು ಸುವ್ಯವಸ್ಥೆ ಪಾಲನೆಯ ಅರಿವು ಬಹುಮುಖ್ಯ: ಸಾಗರ ASP ಡಾ.ಬೆನಕ ಪ್ರಸಾದ್

By kannadanewsnow0921/02/2026 4:31 PM KARNATAKA 1 Min Read

ಶಿವಮೊಗ್ಗ : ಯುವಜನರು ಕಾನೂನು ಸುವ್ಯವಸ್ಥೆ ಪಾಲನೆ ಬಗ್ಗೆ ಅರಿವು ಹೊಂದಿರಬೇಕು. ಕಾನೂನು ಮೀರಿ ನಡೆದರೆ ಶಿಕ್ಷೆಗೆ ಒಳಪಡಬೇಕಾಗುತ್ತದೆ ಎಂದು…

ಮಾ.2ರಂದು ಶರಾವತಿ ಮುಳುಗಡೆ ಸಂತ್ರಸ್ತರ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ರಸ್ತೆ ತಡೆ ಪ್ರತಿಭಟನೆ: ತೀ.ನಾ ಶ್ರೀನಿವಾಸ್

21/02/2026 4:27 PM

ಶಿವಮೊಗ್ಗದಲ್ಲಿ ಕಿರುಕುಳಕ್ಕೆ ಬೇಸತ್ತು ಮಹಿಳೆ ಆತ್ಮಹತ್ಯೆ ಕೇಸ್: ಕಾನ್ಸ್ ಟೇಬಲ್ ಮೋಹನ್ ವಿರುದ್ಧ FIR ದಾಖಲು

21/02/2026 4:22 PM

BIG NEWS : ಸತತ 20 ಗಂಟೆಗಳ ವಿಚಾರಣೆ ಬಳಿಕ ಸ್ನೇಹಮಯಿ ಕೃಷ್ಣರನ್ನ ಬಿಟ್ಟು ಕಳಿಸಿದ ಸೈಬರ್ ಕ್ರೈಂ ಪೊಲೀಸರು

21/02/2026 4:17 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.