ಬ್ಯಾಂಕುಗಳಲ್ಲಿ ಗ್ರಾಹಕರಿಗೆ ಅನುಕೂಲವಾಗುವಂತೆ ಕನ್ನಡ ಭಾಷೆಯನ್ನುಕಡ್ಡಾಯವಾಗಿ ಬಳಸಬೇಕು ಎಂದು ಜಿ.ಪಂ.ಸಿಇಓ ಡಾ. ಎಸ್. ಆಕಾಶ್ ನಿರ್ದೇಶನ ನೀಡಿದರು.
ಬ್ಯಾಂಕಿನ ಎಲ್ಲಾ ಅರ್ಜಿಗಳು, ಚಲನ್ ಮತ್ತು ಸುತ್ತೋಲೆಗಳು ಇಂಗ್ಲಿμï ಮತ್ತು ಹಿಂದಿಯೊಂದಿಗೆ ಕಡ್ಡಾಯವಾಗಿ ಸ್ಥಳೀಯ ಭಾಷೆಯಲ್ಲಿ ಲಭ್ಯವಿರಬೇಕು. ಗ್ರಾಮೀಣ ಭಾಗದ ಜನರಿಗೆ ಭಾಷಾ ಸಮಸ್ಯೆಯಿಂದ ಬ್ಯಾಂಕಿಂಗ್ ವ್ಯವಹಾರಗಳಲ್ಲಿ ಯಾವುದೇ ರೀತಿಯ ಅಡೆತಡೆ ಅಥವಾ ನಿರಾಶೆಯಾಗಬಾರದು. ಪ್ರತಿ ಶಾಖೆಯಲ್ಲಿ ಕನ್ನಡದಲ್ಲಿ ವ್ಯವಹರಿಸುವ ಸಿಬ್ಬಂದಿಯನ್ನು ಕಡ್ಡಾಯವಾಗಿ ನೇಮಿಸಬೇಕು. ತಮ್ಮ ವ್ಯಾಪ್ತಿಯ ಎಲ್ಲಾ ಶಾಖೆಗಳಲ್ಲಿ ಈ ನಿಯಮಗಳು ಪಾಲನೆಯಾಗುತ್ತಿರುವ ಕುರಿತು ಜಿಲ್ಲಾ ಮಟ್ಟದ ಬ್ಯಾಂಕ್ ಸಮನ್ವಯಾಧಿಕಾರಿಗಳು ಮತ್ತು ಪ್ರತಿನಿಧಿಗಳು ಖಚಿತಪಡಿಸಿಕೊಳ್ಳಬೇಕು ಎಂದು ಜಿ.ಪಂ.ಸಿಇಓ ಡಾ. ಎಸ್. ಆಕಾಶ್ ನಿರ್ದೇಶನ ನೀಡಿದರು.
ನಿಷ್ಕ್ರಿಯ ಠೇವಣಿ ವಿಲೇವಾರಿಗೆ ಕಟ್ಟುನಿಟ್ಟಿನ ಸೂಚನೆ:
ಜಿಲ್ಲೆಯ ವಿವಿಧ ಬ್ಯಾಂಕ್ಗಳಲ್ಲಿ 10 ವರ್ಷಗಳಿಗೂ ಹೆಚ್ಚು ಕಾಲ ಯಾವುದೇ ವ್ಯವಹಾರವಿಲ್ಲದೆ ಉಳಿದಿರುವ ಹಕ್ಕು ಪಡೆಯದ ಠೇವಣಿಗಳನ್ನು (Unclaimed Deposits) ವಾರಸುದಾರರಿಗೆ ತಲುಪಿಸಲು ವಿಶೇಷ ಅಭಿಯಾನವನ್ನು ಚುರುಕುಗೊಳಿಸುವಂತೆ ಜಿ.ಪಂ. ಸಿಇಓ ಬ್ಯಾಂಕ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಜಿಲ್ಲೆಯಲ್ಲಿ 3,08,898 ನಿಷ್ಕ್ರಿಯ ಖಾತೆಗಳಲ್ಲಿ ಒಟ್ಟು 67 ಕೋಟಿ ಹಣವಿದೆ. ಈ ಪೈಕಿ ಕಳೆದ ಅಕ್ಟೋಬರ್ 01 ರಿಂದ ಡಿಸೆಂಬರ್ 31 ವರೆಗೆ ನಡೆದ ಅಭಿಯಾನದಲ್ಲಿ 122 ಪ್ರಕರಣಗಳನ್ನು ವಿಲೇವಾರಿ ಮಾಡಿ 5.52 ಕೋಟಿ ರೂ. ಗಳನ್ನು ಸಂಬಂಧಪಟ್ಟವರಿಗೆ ಹಿಂದಿರುಗಿಸಲಾಗಿದೆ. ಇದು ಒಟ್ಟು ಮೊತ್ತದ ಕೇವಲ ಶೇ.10 ರಷ್ಟಿದ್ದು ಅಭಿಯಾನದಲ್ಲಿ ಉತ್ತಮ ಪ್ರಗತಿಯಾಗಿರುವುದಿಲ್ಲ. ಬ್ಯಾಂಕ್ಗಳಲ್ಲಿ ಸಾರ್ವಜನಿಕರ ಹಣ ವಾರಸುದಾರರಿಲ್ಲದೆ ಉಳಿಯಬಾರದು. ಅದನ್ನು ಸಂಬಂಧಿಸಿದ ವಾರಸುದಾರರಿಗೆ ತಲುಪಿಸುವುದು ಬ್ಯಾಂಕ್ಗಳ ಜವಾಬ್ದಾರಿಯಾಗಿದೆ. ಒಂದು ತ್ರೈಮಾಸಿಕಕ್ಕೆ ಮಾತ್ರ ಈ ಅಭಿಯಾನ ಸೀಮಿತವಾದೇ, ವಾರಸುದಾರರನ್ನು ಗುರುತಿಸಿ ಹಣ ಹಿಂದಿರುಗಿಸುವ ಪ್ರಕ್ರಿಯೆಯು ನಿರಂತರವಾಗಿ ನಡೆಯಬೇಕು ಎಂದು ಡಾ. ಆಕಾಶ್ ತಿಳಿಸಿದರು.








