ಬೆಂಗಳೂರು : ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನಲ್ಲಿರು ಅಜೀಂ ಪ್ರೇಮ್ ಜಿ ವಿಶ್ವವಿದ್ಯಾಲಯದಲ್ಲಿ ಎಬಿವಿಪಿ ಪ್ರತಿಭಟನೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ 21 ಕಾರ್ಯಕರ್ತರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮಧ್ಯರಾತ್ರಿಯ ಬಂಧನ ಮಾಡಿ ಜಾಮೀನು ಮಂಜೂರು ಮಾಡಲಾಗಿದೆ.
ಆನೇಕಲ್ ನ ಸರ್ಜಾಪುರದಲ್ಲಿರುವ ಅಜೀಮ್ ಪ್ರೇಮ್ ಜಿ ವಿಶ್ವವಿದ್ಯಾಲಯದಲ್ಲಿ ನಿನ್ನೆ ಏಕಾಏಕಿ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಾರೆ. ಸ್ಪಾರ್ಕ್ ಎನ್ನುವ ಸಂಘಟನೆ ಈ ಒಂದು ಕಾರ್ಯಕ್ರಮ ಆಯೋಜನೆ ಮಾಡಿತ್ತು. ದೇಶ ವಿರೋಧಿ ಕಾರ್ಯಕ್ರಮ ಆಯೋಜನೆ ಮಾಡಿರುವ ಆರೋಪ ಕೇಳಿ ಬಂದಿದೆ. ಎಬಿವಿಪಿ ಪ್ರತಿಭಟನೆ ವಿರುದ್ಧವಾಗಿ ಕಾಲೇಜಿನ ವಿದ್ಯಾರ್ಥಿಗಳು ಕಳೆದ ರಾತ್ರಿ ಆಕ್ರೋಶ ಹೊರಹಾಕಿದ್ದು ಘೋಷಣೆ ಕೂಗಿ ಕಿಡಿ ಕಾರಿದ್ದಾರೆ.
ಇದೇ ವೇಳೆ ಓರ್ವ ವಿದ್ಯಾರ್ಥಿ ಮೇಲೆ ಹಲ್ಲೆ ಕೂಡ ಮಾಡಿರುವ ಆರೋಪ ಕೇಳಿ ಬಂದಿದೆ. ಕಾಶ್ಮೀರ ಮಹಿಳೆಯರ ಧ್ವನಿ ಕುರಿತು ಕಾರ್ಯಕ್ರಮ ಯೋಜನೆ ಮಾಡಲಾಗಿತ್ತು. ಆದರೆ ಎಬಿವಿಪಿ ಪ್ರತಿಭಟನೆ ಮೂಲಕ ಪ್ರತಿಭಟನೆ ಮಾಡಿ ಆಸ್ತಿಪಾಸ್ತಿ ಹಾನಿ ಮಾಡಿದ್ದಾರೆ. ಬಲವಂತವಾಗಿ ವಿಶ್ವವಿದ್ಯಾಲಯಕ್ಕೆ ನುಗ್ಗಿ ಆಸ್ತಿಪಾಸ್ತಿ ದ್ವಂಸ ಮಾಡಿದ್ದಾರೆ. ಎಬಿವಿಪಿ ಕಾರ್ಯಕರ್ತರ ವಿರುದ್ಧ ಕ್ರಮಕ್ಕೆ ಅಗ್ರಹ ಕೇಳಿಬರುತ್ತಿದೆ.








