Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

KEAಯಿಂದ ಈ ಹುದ್ದೆಗಳ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆ ಅಂತಿಮ ಕೀ ಉತ್ತರ, ತಾತ್ಕಾಲಿಕ ಅಂಕ ಪಟ್ಟಿ ಬಿಡುಗಡೆ

04/03/2026 7:58 PM

ಒಳಮೀಸಲಾತಿ ಜಾರಿಯಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ಬದ್ಧತೆಯೇ ಇಲ್ಲ: ಛಲವಾದಿ ನಾರಾಯಣಸ್ವಾಮಿ ಕಿಡಿ

04/03/2026 7:52 PM

5,000 ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ PDO

04/03/2026 7:47 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಒಳಮೀಸಲಾತಿ ಜಾರಿಯಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ಬದ್ಧತೆಯೇ ಇಲ್ಲ: ಛಲವಾದಿ ನಾರಾಯಣಸ್ವಾಮಿ ಕಿಡಿ
KARNATAKA

ಒಳಮೀಸಲಾತಿ ಜಾರಿಯಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ಬದ್ಧತೆಯೇ ಇಲ್ಲ: ಛಲವಾದಿ ನಾರಾಯಣಸ್ವಾಮಿ ಕಿಡಿ

By kannadanewsnow0904/03/2026 7:52 PM

ಬೆಂಗಳೂರು: ಮೀಸಲಾತಿ ಮತ್ತು ಒಳಮೀಸಲಾತಿ ಜಾರಿಯಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ಬದ್ಧತೆಯೇ ಇಲ್ಲ. ಘೋಷಣೆ ಮಾಡುವಾಗ ಗೊಂದಲ ಸೃಷ್ಟಿಸಿ ಅನ್ಯಾಯ ಮಾಡಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆರೋಪಿಸಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಅವರು ಮಾಧ್ಯಮಗಳ ಜೊತೆ ಮಾತನಾಡಿದರು.

ಮೀಸಲಾತಿ ಮತ್ತು ಒಳಮೀಸಲಾತಿಯಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ಕಳ್ಳಾಟ ಆಡುತ್ತಿದೆ. ಯಾರಾದರೂ ಕೋರ್ಟಿಗೆ ಹೋಗಲಿ, ಪ್ರಶ್ನೆ ಮಾಡಲಿ, ಹೇಗಾದರೂ ನಿಂತು ಹೋಗಲಿ ಎಂಬ ಮನಸ್ಥಿತಿಯಲ್ಲಿ ಕಾಂಗ್ರೆಸ್ ಸರ್ಕಾರ ಇದ್ದಂತಿದೆ. ಇದರ ವಿರುದ್ಧ ಜನರ ಆಕ್ರೋಶ ಇದೆ. ಅದನ್ನು ಆಂದೋಲನವಾಗಿ ಪರಿವರ್ತಿಸುತ್ತೇವೆ. ಇಡೀ ರಾಜ್ಯದಲ್ಲಿ ದೊಡ್ಡ ಹೋರಾಟ ಆರಂಭವಾಗಲಿದೆ. ಇದರ ರೂಪರೇಷೆ ಚರ್ಚೆ ಮಾಡುತ್ತೇವೆ ಎಂದು ಹೇಳಿದರು.

ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಗಳಾಗಿದ್ದ ವೇಳೆ ಪರಿಶಿಷ್ಟ ಜಾತಿ ಮತ್ತು ವರ್ಗಗಳು ಹೋರಾಟ ಮಾಡುತ್ತಿರುವುದನ್ನು ಗಮನಿಸಿ, ಪರಿಶಿಷ್ಟ ಜಾತಿಗೆ ಶೇ15 ರಿಂದ 17ಕ್ಕೆ, ವರ್ಗಗಳಿಗೆ ಶೇ 3 ರಿಂದ 7 ಕ್ಕೆ ಅಂದರೆ ಎರಡೂ ಸೇರಿ ಶೇ 25 ಮೀಸಲಾತಿ ಕೊಟ್ಟಿದ್ದೆವು. ಇದನ್ನು ಅಂದು ವಿರೋಧ ಪಕ್ಷ ಸೇರಿ ಎಲ್ಲರ ಒಪ್ಪಿಗೆ ಪಡೆದ ನಂತರವೇ ಘೋಷಣೆ ಮಾಡಲಾಗಿತ್ತು. ಆದರೂ ಚುನಾವಣೆ ವೇಳೆ ಸಿದ್ದರಾಮಯ್ಯ ವಿರೋಧಿಸಿದ್ದರು ಎಂದು ದೂರಿದರು.

ನಂತರ ಒಳಮೀಸಲಾತಿ ಕೊಡುವ ವೇಳೆ ನ್ಯಾಯಮೂತಿಗಳಾದ ಡಾ. ಎಚ್ ಎನ್ ನಾಗಮೋಹನ್ ದಾಸ್ ಅವರ ಸಮಿತಿ ರಚಿಸಿದಾಗ ಶೇ 17 ಕ್ಕೆ ಒಪ್ಪಿಗೆ ಕೊಟ್ಟು ವಹಿಸಿದ್ದರು. ಅದರ ಪ್ರಕಾರ ಜಾರಿ ಮಾಡಬೇಕಾಗಿತ್ತು. ಅವರು ಶಿಫಾರಸು ಮಾಡಿದ್ದು ಐದು ಗುಂಪುಗಳು. ಆದರೆ ಇವರು ರಾಜಕೀಯ ಲಾಭಕ್ಕಾಗಿ ಬರೀ ಮೂರು ಗುಂಪು ಮಾಡಿ ಗೊಂದಲ ಸೃಷ್ಟಿಸಿ ಯಾರಿಗೂ ನ್ಯಾಯ ಸಿಗದಂತೆ ಮಾಡಿದರು. ಇದನ್ನು ನಾವು ಪದೇ ಪದೇ ಪ್ರಶ್ನೆ ಮಾಡಿದ್ದೆವು. ನ್ಯಾಯದ ಬದಲಿಗೆ ಅನ್ಯಾಯ ಮಾಡ್ತ ಇದ್ದೀರಿ ಎಂದು ತಿಳಿ ಹೇಳಿದೆವು. ಈಗ ಉತ್ತರ ಕೊಡಲಾರದ ಪರಿಸ್ಥಿತಿಗೆ ಕಾಂಗ್ರೆಸ್ ಸರ್ಕಾರ ಬಂದಿದೆ ಎಂದು ಆರೋಪಿಸಿದರು.

ಈಗ ತರಾತುರಿಯಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿ ಶೇ 17 ಕ್ಕೆ ಸಹಿ ಹಾಕಿಸಿಕೊಂಡು ಬಂದಿದ್ದೀರಿ. ಈಗ ಅಷ್ಟೂ ಕೊಡಲು ಆಗಲ್ಲ. ನ್ಯಾಯಾಲಯದ ತಡೆ ಇದೆ ಅಂತೀರಿ. ಕೋರ್ಟ್ ತಡೆಯಾಜ್ಞೆಯನ್ನೇ ಕೊಟ್ಟಿಲ್ಲ. ಇದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಕ್ಕೆ ಮಾಡಿದ ಅನ್ಯಾಯ. ಇವು ಕಾಂಗ್ರೆಸ್ ಸೃಷ್ಟಿಸಿದ ದೋಷ. ಮುಖ್ಯಮಂತ್ರಿಗಳು ಸುಳ್ಳು ಹೇಳುವುದರಲ್ಲಿ ನಿಪುಣರು. ಅವರು ಈಗ ಸಿಕ್ಕಿ ಬಿದ್ದಿದ್ದಾರೆ. ಒಳಮೀಸಲಾತಿ ಜಾರಿ ಮಾಡದಿದ್ದರೆ ಈ ಸರ್ಕಾರ ಉಳಿಯೋದಿಲ್ಲ ಎಂದರು.

ಶೇ 17 ಹೆಚ್ಚಸದೆ ಒಳಮೀಸಲಾತಿ ಜಾರಿ ಮಾಡಲು ಆಗಲ್ಲ. ಅದನ್ನು ಮುಟ್ಟಲು ಹೋದರೆ ಈಗ ಪರಿಶಿಷ್ಟ ಜಾತಿಗೆ ಕೊಟ್ಟಿರೋ ಶೇ7 ಮೀಸಲಾತಿಯನ್ನು ಅನೂರ್ಜಿತ ಮಾಡಿದ್ದೀರಿ. ಸರ್ಕಾರ ಒಂದರ ಮೇಲೆ ಒಂದು ತಪ್ಪು ಮಾಡುತ್ತಾ ಬರುತ್ತಿದೆ. ಜನ ಒಂದು ತಾಳ್ಮೆಯಿಂದ ಇರ್ತಾರೆ. ತಾಳ್ಮೆಯ ಕಟ್ಟೆ ಒಡೆದಾಗ ದೊಡ್ಡ ಆಂದೋಲನ ಸೃಷ್ಟಿ ಮಾಡಲಿದ್ದಾರೆ ಎಂದರು.

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಜನರನ್ನು ವಂಚನೆ ಮಾಡುತ್ತಾ ಬರುತ್ತಿದೆ ಎಂಬುದನ್ನು ಜನರಿಗೆ ತಿಳಿಸುತ್ತೇವೆ. ಬಿಜೆಪಿ ಕಾಲದಲ್ಲಿ ಯಾವ ರೀತಿ ನ್ಯಾಯ ಕೊಟ್ಟದ್ದೆವು ಎಂಬುದನ್ನೂ ತಿಳಿಸುತ್ತೇವೆ. ರಾಜ್ಯ ಮತ್ತು ಕೇಂದ್ರದ ಮುಖಂಡರು ಸೇರಿ ಚರ್ಚಿಸಿ ಆಂದೋಲನದ ರೂಪರೇಷೆ ಸಿದ್ಧಪಡಿಸುತ್ತೇವೆ. ಇಡೀ ರಾಜ್ಯದಲ್ಲಿ ಎಂದೂ ಕಂಡರಿಯದ ಆಂದೋಲನ ಮಾಡುತ್ತೇವೆ ಎಂದರು.

ಜನರನ್ನು ವಂಚಿಸುತ್ತಿರುವ ಕಾಂಗ್ರೆಸ್‌ಗೆ ನೀತಿಪಾಠ ಹೇಳುವ ಕೆಲಸವನ್ನು ಮಾಡುತ್ತೇವೆ. ಯಾರನ್ನು ಓಟ್ ಬ್ಯಾಂಕ್ ಮಾಡಿಕೊಂಡು ವಂಚಿಸುತ್ತಾ ಬಂದಿದ್ದೀರೋ ಅವರ ಕೈನಲ್ಲೇ ಪಾಠ ಕಲಿಸುತ್ತೇವೆ ಎಂದು ಗುಡುಗಿದರು.

ಈ ವೇಳೆ ಕೇಂದ್ರದ ಮಾಜಿ ಸಚಿವರಾದ ಎ. ನಾರಾಯಣಸ್ವಾಮಿ, ಮಾಜಿ ಸಂಸದರಾದ ಮುನಿಸ್ವಾಮಿ ಉಪಸ್ಥಿತರಿದ್ದರು.

5,000 ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ PDO

SHOCKING : ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿ : ಪಾಠ ಮಾಡುವಾಗಲೇ ಕುಸಿದು ಬಿದ್ದು ಶಿಕ್ಷಕ ಸಾವು!

Share. Facebook Twitter LinkedIn WhatsApp Email

Related Posts

KEAಯಿಂದ ಈ ಹುದ್ದೆಗಳ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆ ಅಂತಿಮ ಕೀ ಉತ್ತರ, ತಾತ್ಕಾಲಿಕ ಅಂಕ ಪಟ್ಟಿ ಬಿಡುಗಡೆ

04/03/2026 7:58 PM1 Min Read

5,000 ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ PDO

04/03/2026 7:47 PM3 Mins Read

ಈ ಒಂದು ಮಂತ್ರ ಪಠಿಸಿ, ನಿಮ್ಮ ಸಾಲ ಎಷ್ಟೇ ಇರಲಿ ತೀರೋದು ಗ್ಯಾರಂಟಿ

04/03/2026 6:44 PM5 Mins Read
Recent News

KEAಯಿಂದ ಈ ಹುದ್ದೆಗಳ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆ ಅಂತಿಮ ಕೀ ಉತ್ತರ, ತಾತ್ಕಾಲಿಕ ಅಂಕ ಪಟ್ಟಿ ಬಿಡುಗಡೆ

04/03/2026 7:58 PM

ಒಳಮೀಸಲಾತಿ ಜಾರಿಯಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ಬದ್ಧತೆಯೇ ಇಲ್ಲ: ಛಲವಾದಿ ನಾರಾಯಣಸ್ವಾಮಿ ಕಿಡಿ

04/03/2026 7:52 PM

5,000 ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ PDO

04/03/2026 7:47 PM

BREAKING : ಶ್ರೀಲಂಕಾ ಬಳಿ ಇರಾನ್ ಹಡಗಿನ ಮೇಲೆ ಅಮೆರಿಕದ ಜಲಾಂತರ್ಗಾಮಿ ದಾಳಿ ; 80 ಮಂದಿ ಸಾವು

04/03/2026 7:47 PM
State News
KARNATAKA

KEAಯಿಂದ ಈ ಹುದ್ದೆಗಳ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆ ಅಂತಿಮ ಕೀ ಉತ್ತರ, ತಾತ್ಕಾಲಿಕ ಅಂಕ ಪಟ್ಟಿ ಬಿಡುಗಡೆ

By kannadanewsnow0904/03/2026 7:58 PM KARNATAKA 1 Min Read

ಬೆಂಗಳೂರು: ಎಂಜಿನಿಯರಿಂಗ್ ಸೇರಿದಂತೆ ಇತರ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಸಿರುವ ಹಾಗೂ ನೋಂದಣಿ ಮಾಡಿಕೊಂಡಿರುವ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಸಲು…

ಒಳಮೀಸಲಾತಿ ಜಾರಿಯಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ಬದ್ಧತೆಯೇ ಇಲ್ಲ: ಛಲವಾದಿ ನಾರಾಯಣಸ್ವಾಮಿ ಕಿಡಿ

04/03/2026 7:52 PM

5,000 ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ PDO

04/03/2026 7:47 PM

ಈ ಒಂದು ಮಂತ್ರ ಪಠಿಸಿ, ನಿಮ್ಮ ಸಾಲ ಎಷ್ಟೇ ಇರಲಿ ತೀರೋದು ಗ್ಯಾರಂಟಿ

04/03/2026 6:44 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.