ಚಿಕ್ಕಬಳ್ಳಾಪುರ : ರಾಜ್ಯಾದ್ಯಂತ ಸಿಲಿಂಡರ್ ಅಭಾವ ಒಂದು ಕಡೆ ಆದರೆ, ಮತ್ತೊಂದು ಕಡೆ, ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಗೃಹ ಬಳಕೆ ಸಿಲಿಂಡರ್ ಗಳನ್ನು ಬೇಕರಿ, ಅಂಗಡಿ ಮಾಲೀಕರು ಬಳಸುತ್ತಿದ್ದಾರೆ. ಅಂಗಡಿ, ಬೇಕರಿ ಮೇಲೆ ಆಹಾರ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಸುಮಾರು 30ಕ್ಕೂ ಅಧಿಕ ಸಿಲೆಂಡರ್ ಗಳನ್ನು ಆಹಾರ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಗೃಹಬಳಕೆ ಸಿಲಿಂಡರ್ ಗಳನ್ನು ಜಪ್ತಿ ಮಾಡಿಕೊಂಡಿದ್ದು, ಚಿಕ್ಕಬಳ್ಳಾಪುರ, ಗೌರಿಬಿದನೂರು ಶಿಡ್ಲಘಟ್ಟದಲ್ಲಿ ಜಪ್ತಿ ಮಾಡಿಕೊಂಡಿದ್ದಾರೆ.
ಹೋಟೆಲ್ ಬೇಕರಿ ರಸ್ತೆ ಬದಿ ವ್ಯಾಪಾರಿಗಳಿಂದ ಸಿಲಿಂಡರ್ ಜಪ್ತಿ ಮಾಡಿಕೊಳ್ಳಲಾಗಿದೆ. ಕಮರ್ಷಿಯಲ್ ಸಿಲಿಂಡರ್ ಸಿಗದ ಹಿನ್ನೆಲೆಯಲ್ಲಿ ಇವರು ಗೃಹಬಳಕೆ ಸಿಲಿಂಡರ್ ಬಳಸುತ್ತಿದ್ದರು. ಗೃಹ ಬಳಕೆ ಸಿಲಿಂಡರ್ ಬಳಸುತ್ತಿದ್ದ ಹೋಟೆಲ್ ಮತ್ತು ಬೇಕರಿ ಮಾಲೀಕರು, ಹಾಗಾಗಿ ದಾಳಿ ಮಾಡಿ ಜಪ್ತಿ ಮಾಡಿದ್ದಾರೆ.








