ಬೆಂಗಳೂರು : ಕೋಗಿಲು ನಿರಾಶ್ರಿತರಿಗೆ ಸರ್ಕಾರದಿಂದ ಯುಗಾದಿ ರಂಜಾನ್ ಗಿಫ್ಟ್ ನೀಡಿದ್ದು, 3-4 ತಿಂಗಳ ಬಳಿಕ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಕೋಗಿಲು ನಿರಾಶ್ರಿತರಿಗೆ ಹಕ್ಕು ಪತ್ರ ವಿತರಣೆ ಮಾಡಿದ್ದಾರೆ. ವಿಕಾಸ ಸಹೋದರರಲ್ಲಿ ಅರ್ಹ ಫಲಾನುಭವಿಗಳಿಗೆ ನಿವೇಶನ ಪತ್ರ ವಿತರಿಸಿದರು.
ಕೇವಲ 40 ಅರ್ಹ ಕುಟುಂಬಕ್ಕೆ ಮಾತ್ರ ಸಚಿವ ಜಮೀರ್ ಅಹ್ಮದ್ ಖಾನ್ ಅವರು ನಿವೇಶನದ ಪತ್ರ ವಿತರಣೆ ಮಾಡಿದರು. ರಾಜೀವ್ ಗಾಂಧಿ ವಸತಿ ನಿಗಮದ ಸಮುಚ್ಚಯದಲ್ಲಿ ನಿವೇಶನ ಹಂಚಿಕೆ ಮಾಡಲಾಯಿತು. ಬೆಂಗಳೂರಿನ ಬ್ಯಾಟರಾಯನಪುರದಲ್ಲಿರುವ ನಿಗಮದ ಸಂಮುಚ್ಚೆಯದಲ್ಲಿ ಈ ಒಂದು ನಿವೇಶನ ಪತ್ರ ವಿತರಣೆ ಮಾಡಲಾಯಿತು. ಈ ವೇಳೆ ಸಚಿವರಾದ ಕೃಷ್ಣಭೈರೇಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.








