Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ವಿಂಬಲ್ಡನ್’ ಇತಿಹಾಸದಲ್ಲೇ ಮೊದಲು: ತೀರ್ಪುಗಳಲ್ಲಿನ ಗೊಂದಲ ನಿವಾರಣೆಗೆ ಬರಲಿದೆ ‘ವಿಡಿಯೋ ರಿವ್ಯೂ’ ತಂತ್ರಜ್ಞಾನ!

21/03/2026 8:05 PM

ಮಂಡ್ಯದಲ್ಲಿ ‘IPS ಅಧಿಕಾರಿ’ಯ ‘ಫ್ಲೆಕ್ಸ್’ ಹವಾ: ರಾಜಕಾರಣಿಗಳನ್ನೇ ಮೀರಿಸಿದ ‘ಎಸ್ಪಿ ಶೋಭರಾಣಿ’!

21/03/2026 7:49 PM

ಇರಾನ್ ವಿರುದ್ಧ ಗುಡುಗಿದ 22 ರಾಷ್ಟ್ರಗಳು: ಹಾರ್ಮುಜ್ ಜಲಸಂಧಿಯ ಸುರಕ್ಷತೆಗೆ ಜಾಗತಿಕ ಒಕ್ಕೂಟ ಸಜ್ಜು

21/03/2026 7:43 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಂಡ್ಯದಲ್ಲಿ ‘IPS ಅಧಿಕಾರಿ’ಯ ‘ಫ್ಲೆಕ್ಸ್’ ಹವಾ: ರಾಜಕಾರಣಿಗಳನ್ನೇ ಮೀರಿಸಿದ ‘ಎಸ್ಪಿ ಶೋಭರಾಣಿ’!
KARNATAKA

ಮಂಡ್ಯದಲ್ಲಿ ‘IPS ಅಧಿಕಾರಿ’ಯ ‘ಫ್ಲೆಕ್ಸ್’ ಹವಾ: ರಾಜಕಾರಣಿಗಳನ್ನೇ ಮೀರಿಸಿದ ‘ಎಸ್ಪಿ ಶೋಭರಾಣಿ’!

By kannadanewsnow0921/03/2026 7:49 PM

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ರಾಜಕಾರಣಿಗಳ ನಡುವಿನ ಫ್ಲೆಕ್ಸ್ ವಾರ್ ಹೊಸದೇನಲ್ಲ. ಆದರೆ, ಈಗ ಮಂಡ್ಯದ ಬೀದಿಗಳಲ್ಲಿ ಜನಪ್ರತಿನಿಧಿಗಳಿಗಿಂತಲೂ ಹೆಚ್ಚಾಗಿ ಐಪಿಎಸ್ ಅಧಿಕಾರಿಯೊಬ್ಬರ ಭಾವಚಿತ್ರವಿರುವ ಫ್ಲೆಕ್ಸ್ ಫೋಟೋಗಳು ರಾರಾಜಿಸುತ್ತಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಡಾ. ವಿ.ಜೆ. ಶೋಭರಾಣಿ ಅವರ ಈ ‘ಫ್ಲೆಕ್ಸ್ ಪ್ರೀತಿ’ ಈಗ ಜಿಲ್ಲೆಯಾದ್ಯಂತ ಸಂಚಲನ ಮೂಡಿಸಿದೆ.

ನಗರದ ತುಂಬೆಲ್ಲ ಎಸ್ಪಿಯವರದ್ದೇ ಪಟ!

ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಮಂಡ್ಯ ನಗರದ ಪ್ರಮುಖ ವೃತ್ತಗಳು, ಹೆದ್ದಾರಿ ಬದಿ ಮತ್ತು ಜನನಿಬಿಡ ಪ್ರದೇಶಗಳಲ್ಲಿ ಎಸ್ಪಿಯವರಿಗೆ ಹಬ್ಬದ ಶುಭಾಶಯ ಕೋರಿ ಬೃಹತ್ ಫ್ಲೆಕ್ಸ್‌ಗಳನ್ನು ಅಳವಡಿಸಲಾಗಿದೆ. ವಿಶೇಷವೆಂದರೆ, ಈ ಫ್ಲೆಕ್ಸ್‌ಗಳಲ್ಲಿ ಕೇವಲ ಎಸ್ಪಿಯವರ ಫೋಟೋ ಮಾತ್ರವಲ್ಲದೆ, ಮಂಜುನಾಥ್ ಗೌಡ, ಶಿವಾನಂದ್ ಮತ್ತು ಪಾಪಣ್ಣ ಎಂಬುವವರ ಭಾವಚಿತ್ರಗಳೂ ಕಾಣಿಸಿಕೊಂಡಿವೆ. ಈ ಹಿಂದೆ ಶೋಭರಾಣಿ ಅವರು ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಲು ಬಂದಾಗಲೂ ಸಹ ಇದೇ ರೀತಿ ನಗರದಾದ್ಯಂತ ಫ್ಲೆಕ್ಸ್ ಹಾಕಿ ಸ್ವಾಗತ ಕೋರಲಾಗಿತ್ತು.

ಅಧಿಕಾರಿಗಳಿಗೆ ಇದು ಶೋಭೆ ತರುತ್ತದೆಯೇ?

ಸಾಮಾನ್ಯವಾಗಿ ರಾಜಕಾರಣಿಗಳು ತಮ್ಮ ಪ್ರಚಾರಕ್ಕಾಗಿ ಇಂತಹ ಫ್ಲೆಕ್ಸ್‌ಗಳನ್ನು ಹಾಕಿಸಿಕೊಳ್ಳುವುದು ರೂಢಿ. ಆದರೆ, ಶಿಸ್ತುಬದ್ಧ ಇಲಾಖೆಯಾದ ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಯೊಬ್ಬರು ರಾಜಕಾರಣಿಗಳ ಮಾದರಿಯಲ್ಲಿ ಹೀಗೆ ಫ್ಲೆಕ್ಸ್ ಸಂಸ್ಕೃತಿಗೆ ಮೊರೆ ಹೋಗಿರುವುದು ಎಷ್ಟರ ಮಟ್ಟಿಗೆ ಸರಿ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ. ಐಪಿಎಸ್ ಅಧಿಕಾರಿಯೊಬ್ಬರು ಸಾರ್ವಜನಿಕವಾಗಿ ಇಷ್ಟೊಂದು ಹೈಪ್ ಪಡೆದುಕೊಳ್ಳುತ್ತಿರುವುದು ಇಲಾಖೆಯ ಘನತೆಗೆ ಕುಂದು ತರುತ್ತದೆಯೇ ಎಂಬ ಚರ್ಚೆ ಕೂಡ ಶುರುವಾಗಿದೆ.

ಸಾರ್ವಜನಿಕರ ಚರ್ಚೆ ಮತ್ತು ಕುತೂಹಲ

ಮಂಡ್ಯದ ಜನರು ಇಂತಹದ್ದನ್ನು ಈ ಹಿಂದೆ ನೋಡಿಲ್ಲ. ಅಧಿಕಾರಿಗಳು ಜನಸ್ನೇಹಿಯಾಗಿರುವುದು ಸ್ವಾಗತಾರ್ಹ, ಆದರೆ ಫ್ಲೆಕ್ಸ್ ಮೂಲಕ ಅತಿರಂಜಿತವಾಗಿ ಬಿಂಬಿಸಿಕೊಳ್ಳುವುದು ಬೇಕಿತ್ತೇ ಎಂಬುದು ಕೆಲವರ ವಾದ. ಸಾಮಾಜಿಕ ಜಾಲತಾಣಗಳಲ್ಲೂ ಈ ಫೋಟೋಗಳು ವೈರಲ್ ಆಗುತ್ತಿದ್ದು, ಅಧಿಕಾರಿಯೊಬ್ಬರು ಈ ಮಟ್ಟಿಗೆ ಫ್ಲೆಕ್ಸ್‌ಗಳಲ್ಲಿ ಕಾಣಿಸಿಕೊಳ್ಳುವುದು ರಾಜಕೀಯ ಪ್ರಭಾವದ ಮುನ್ಸೂಚನೆಯೇ ಅಥವಾ ಅಭಿಮಾನಿಗಳ ಅತಿರೇಕವೇ ಎಂಬ ಗೊಂದಲ ಸೃಷ್ಟಿಯಾಗಿದೆ.

ಒಟ್ಟಿನಲ್ಲಿ, ಮಂಡ್ಯ ಜಿಲ್ಲೆಯಲ್ಲಿ ಈಗ ರಾಜಕಾರಣಿಗಳ ಫ್ಲೆಕ್ಸ್‌ಗಳಿಗಿಂತ ಎಸ್ಪಿ ಶೋಭರಾಣಿ ಅವರ ಫ್ಲೆಕ್ಸ್‌ಗಳೇ ಸದ್ದು ಮಾಡುತ್ತಿರುವುದು ಮಾತ್ರ ಸುಳ್ಳಲ್ಲ. ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯ ಈ ನಡವಳಿಕೆಯನ್ನು ಜನರು ಯಾವ ರೀತಿ ಸ್ವೀಕರಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ವರದಿ; ಗಿರೀಶ್ ರಾಜ್, ಮಂಡ್ಯ..

ಚಾಮರಾಜನಗರ: ಪ್ಲೆಕ್ಸ್ ಗಳಲ್ಲಿ ಪ್ರಚಾರಕ್ಕಿಳಿದ್ರಾ ಜಿಲ್ಲಾ ಮಟ್ಟದ ಅಧಿಕಾರಿಗಳು.!?

ಸಾಗರದ ಮಣ್ಣಿನ ಸೌಹಾರ್ದದ ಕಂಪನ್ನು ಹೆಚ್ಚಿಸಿದ ರಂಜಾನ್: ಮಾಜಿ ಸದಸ್ಯ ಜಾಕಿರ್ ನಿವಾಸಕ್ಕೆ ಶಾಸಕ ಬೇಳೂರು ಭೇಟಿ

Share. Facebook Twitter LinkedIn WhatsApp Email

Related Posts

ಸಾಗರದ ಮಣ್ಣಿನ ಸೌಹಾರ್ದದ ಕಂಪನ್ನು ಹೆಚ್ಚಿಸಿದ ರಂಜಾನ್: ಮಾಜಿ ಸದಸ್ಯ ಜಾಕಿರ್ ನಿವಾಸಕ್ಕೆ ಶಾಸಕ ಬೇಳೂರು ಭೇಟಿ

21/03/2026 7:40 PM2 Mins Read

ಚಾಮರಾಜನಗರ: ಪ್ಲೆಕ್ಸ್ ಗಳಲ್ಲಿ ಪ್ರಚಾರಕ್ಕಿಳಿದ್ರಾ ಜಿಲ್ಲಾ ಮಟ್ಟದ ಅಧಿಕಾರಿಗಳು.!?

21/03/2026 7:32 PM1 Min Read

ಮುಸಲ್ಮಾನ್ ಬಂಧುಗಳಿಗೆ ಕಾಂಗ್ರೆಸ್ ಎಲ್ಲೆಡೆ ಕೋಕ್ ಕೊಡುತ್ತಾ ಬಂದಿದೆ: ಛಲವಾದಿ ನಾರಾಯಣಸ್ವಾಮಿ

21/03/2026 7:24 PM2 Mins Read
Recent News

‘ವಿಂಬಲ್ಡನ್’ ಇತಿಹಾಸದಲ್ಲೇ ಮೊದಲು: ತೀರ್ಪುಗಳಲ್ಲಿನ ಗೊಂದಲ ನಿವಾರಣೆಗೆ ಬರಲಿದೆ ‘ವಿಡಿಯೋ ರಿವ್ಯೂ’ ತಂತ್ರಜ್ಞಾನ!

21/03/2026 8:05 PM

ಮಂಡ್ಯದಲ್ಲಿ ‘IPS ಅಧಿಕಾರಿ’ಯ ‘ಫ್ಲೆಕ್ಸ್’ ಹವಾ: ರಾಜಕಾರಣಿಗಳನ್ನೇ ಮೀರಿಸಿದ ‘ಎಸ್ಪಿ ಶೋಭರಾಣಿ’!

21/03/2026 7:49 PM

ಇರಾನ್ ವಿರುದ್ಧ ಗುಡುಗಿದ 22 ರಾಷ್ಟ್ರಗಳು: ಹಾರ್ಮುಜ್ ಜಲಸಂಧಿಯ ಸುರಕ್ಷತೆಗೆ ಜಾಗತಿಕ ಒಕ್ಕೂಟ ಸಜ್ಜು

21/03/2026 7:43 PM

ಸಾಗರದ ಮಣ್ಣಿನ ಸೌಹಾರ್ದದ ಕಂಪನ್ನು ಹೆಚ್ಚಿಸಿದ ರಂಜಾನ್: ಮಾಜಿ ಸದಸ್ಯ ಜಾಕಿರ್ ನಿವಾಸಕ್ಕೆ ಶಾಸಕ ಬೇಳೂರು ಭೇಟಿ

21/03/2026 7:40 PM
State News
KARNATAKA

ಮಂಡ್ಯದಲ್ಲಿ ‘IPS ಅಧಿಕಾರಿ’ಯ ‘ಫ್ಲೆಕ್ಸ್’ ಹವಾ: ರಾಜಕಾರಣಿಗಳನ್ನೇ ಮೀರಿಸಿದ ‘ಎಸ್ಪಿ ಶೋಭರಾಣಿ’!

By kannadanewsnow0921/03/2026 7:49 PM KARNATAKA 2 Mins Read

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ರಾಜಕಾರಣಿಗಳ ನಡುವಿನ ಫ್ಲೆಕ್ಸ್ ವಾರ್ ಹೊಸದೇನಲ್ಲ. ಆದರೆ, ಈಗ ಮಂಡ್ಯದ ಬೀದಿಗಳಲ್ಲಿ ಜನಪ್ರತಿನಿಧಿಗಳಿಗಿಂತಲೂ ಹೆಚ್ಚಾಗಿ…

ಸಾಗರದ ಮಣ್ಣಿನ ಸೌಹಾರ್ದದ ಕಂಪನ್ನು ಹೆಚ್ಚಿಸಿದ ರಂಜಾನ್: ಮಾಜಿ ಸದಸ್ಯ ಜಾಕಿರ್ ನಿವಾಸಕ್ಕೆ ಶಾಸಕ ಬೇಳೂರು ಭೇಟಿ

21/03/2026 7:40 PM

ಚಾಮರಾಜನಗರ: ಪ್ಲೆಕ್ಸ್ ಗಳಲ್ಲಿ ಪ್ರಚಾರಕ್ಕಿಳಿದ್ರಾ ಜಿಲ್ಲಾ ಮಟ್ಟದ ಅಧಿಕಾರಿಗಳು.!?

21/03/2026 7:32 PM

ಮುಸಲ್ಮಾನ್ ಬಂಧುಗಳಿಗೆ ಕಾಂಗ್ರೆಸ್ ಎಲ್ಲೆಡೆ ಕೋಕ್ ಕೊಡುತ್ತಾ ಬಂದಿದೆ: ಛಲವಾದಿ ನಾರಾಯಣಸ್ವಾಮಿ

21/03/2026 7:24 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.