Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಮುಖೇಶ್ ಅಂಬಾನಿ’ ಮನೆಯಲ್ಲಿ ಒಂದೇ ಒಂದು ‘AC’ ಕೂಡ ಇಲ್ಲ ; ಯಾಕೆ ಗೊತ್ತಾ?

28/03/2026 9:47 PM

ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಯಶಸ್ವಿಯಾಗಿ ಮುನ್ನಡೆಯಬೇಕು: MLC ಬಲ್ಕಿಶ್ ಬಾನು

28/03/2026 9:46 PM

ಬೀದರ್ ನಲ್ಲಿ 40ನೇ ರಾಜ್ಯ ಪತ್ರಕರ್ತರ ಸಮ್ಮೇಳ: ಪೂರ್ವಭಾವಿ ಸಿದ್ಧತಾ ಸಭೆ ನಡೆಸಿದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ

28/03/2026 9:40 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಯಶಸ್ವಿಯಾಗಿ ಮುನ್ನಡೆಯಬೇಕು: MLC ಬಲ್ಕಿಶ್ ಬಾನು
KARNATAKA

ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಯಶಸ್ವಿಯಾಗಿ ಮುನ್ನಡೆಯಬೇಕು: MLC ಬಲ್ಕಿಶ್ ಬಾನು

By kannadanewsnow0928/03/2026 9:46 PM

ಶಿವಮೊಗ್ಗ : ಮಹಿಳೆ ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ ಸಬಲೀಕರಣವಾಗಬೇಕು. ಮಹಿಳೆಗೆ ಸಿಗಬೆಕಾದ ಸ್ಥಾನಮಾನ ಸೂಕ್ತವಾಗಿ ಸಿಗಬೇಕು ಎಲ್ಲಾ ಕ್ಷೇತ್ರಗಳಲ್ಲೂ ಯಶಸ್ವಿಯಾಗಿ ಮುನ್ನಡೆಯಬೇಕು ಎಂದು ವಿಧಾನ ಪರಿಷತ್ ಸದಸ್ಯೆ ಬಲ್ಕಿಶ್ ಬಾನು ಹೇಳಿದರು.

ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಕಾಂಗ್ರೇಸ್ ಕಚೇರಿಯಲ್ಲಿ ಮಹಿಳಾ ಕಾಂಗ್ರೇಸ್ ವತಯಿಂದ ಹಮ್ಮಿಕೊಳ್ಳಲಾಗಿದ್ದ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದಂತ ಅವರು, ಮಹಿಳೆಯರು ಸ್ವಾಭಿಮಾನದ ಬದುಕು ನಡೆಸಲು ಬೇಕಾದ ವಾತಾವರಣ ಸಮಾಜ ನಿರ್ಮಾಣ ಮಾಡಿಕೊಟ್ಟಿದೆ. ಇನ್ನೂ ಹೆಚ್ಚು ಸಮಾಜದಿಂದ ನಿರೀಕ್ಷೆ ಮಾಡುವುದು ತಪ್ಪು. ಈಗಾಗಲೆ ಶೇ. 33 ಮೀಸಲಾತಿ ಮಹಿಳೆಯರಿಗೆ ನೀಡಿದ್ದರೂ ಅದರ ಪರಿಣಾಮಕಾರಿ ಅನುಷ್ಟಾನ ಶೀಘ್ರವಾಗಿ ಆಗಬೇಕು. ಮಹಿಳೆಯರಿಗೆ ಇನ್ನಷ್ಟು ಅವಕಾಶ ಗೌರವ ಸಿಗಬೇಕಾದರೆ ನಮ್ಮ ನಡೆನುಡಿ ಶುದ್ದವಾಗಿರಬೇಕು. ಸಮಾಜಮುಖಿ ಆಲೋಚನೆ ನಮ್ಮಿಂದ ಹೆಚ್ಚೆಚ್ಚು ಆಗಬೇಕು ಎಂದರು.

ದೇವರು ಪ್ರತ್ಯಕ್ಷನಾಗಿ ವರ ಕೊಡುವುದಿಲ್ಲ. ನಮಗೆ ಅನೇಕ ಅವಕಾಶಗಳನ್ನು ವರದ ರೂಪದಲ್ಲಿ ದೇವರು ನೀಡುತ್ತಾನೆ. ನಾವು ಅದನ್ನು ಸದ್ಭಳಕೆ ಮಾಡಿಕೊಳ್ಳಬೇಕು. ಪ್ರಗತಿ ಹಾದಿಯಲ್ಲಿ ನಾವು ಹೆಜ್ಜೆ ಹಾಕಬೇಕು. ಕಾಂಗ್ರೇಸ್ ಪಕ್ಷ ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಒತ್ತು ನೀಡಿದೆ. ರಾಜಕೀಯ ಕ್ಷೇತ್ರಕ್ಕೆ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಬರಬೇಕು. ತನ್ಮೂಲಕ ಕಾಂಗ್ರೇಸ್ ಪಕ್ಷವನ್ನು ಬಲಪಡಿಸಬೇಕು ಎಂದು ಹೇಳಿದರು.

ಮಹಿಳಾ ಕಾಂಗ್ರೇಸ್ ನಗರ ಘಟಕದ ಅಧ್ಯಕ್ಷೆ ಉಷಾ ಎನ್. ಮಾತನಾಡಿ, ಮಹಿಳಾ ದಿನಾಚರಣೆ ಮೂಲಕ ನಮ್ಮ ಆತ್ಮಾವಲೋಕನ ಮಾಡಿಕೊಳ್ಳುವ ಸದಾವಕಾಶ ಸಿಗುತ್ತದೆ. ಮಹಿಳೆಯರು ತಮ್ಮ ಸ್ವಸಾಮರ್ಥ್ಯದ ಮೂಲಕ ಸಮಾಜದ ಮುಖ್ಯವಾಹಿನಿಗೆ ಬರುತ್ತಿರುವಾಗ ಅವರಿಗೆ ಸೂಕ್ತ ಸಹಕಾರ ನೀಡುವಂತಾಗಬೇಕು. ಮಹಿಳೆಯರಿಗೆ ಮಹಿಳೆಯರೆ ಶತೃ ಎನ್ನುವ ಶಬ್ದವನ್ನು ಸುಳ್ಳು ಮಾಡುವ ನಿಟ್ಟಿನಲ್ಲಿ ಮಹಿಳೆಯರು ಸ್ವಾಭಿಮಾನದ ಬದುಕು ನಡೆಸಬೇಕು. ಗ್ಯಾರಂಟಿ ಯೋಜನೆ ಮೂಲಕ ಮಹಿಳೆಯರು ರಾಜ್ಯದಲ್ಲಿ ಹೆಚ್ಚು ನೆಮ್ಮದಿಯಿಂದ ಇದ್ದಾರೆ ಎಂದು ತಿಳಿಸಿದರು.

ಈ ವೇಳೆ ಸಹಾಯಕ ಪ್ರಾಧ್ಯಾಪಕಿ ಡಾ. ಶುಭ ಮರವಂತೆ ಉಪನ್ಯಾಸ ನೀಡಿದರು. ವೇದಿಕೆಯಲ್ಲಿ ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಪ್ರಭಾವತಿ ಚಂದ್ರಕಾಂತ್, ಶ್ವೇತಾ ಬಂಡಿ, ಸರಸ್ವತಿ ನಾಗರಾಜ್, ಮಧು ಮಾಲತಿ, ದೀಪಾ ಕಾಗೋಡು, ಉಷಾ ಸುರೇಶ್, ಎನ್.ಲಲಿತಮ್ಮ, ಸಿರಿಜಾನ್ ಆನಂದಪುರ, ಸದ್ದಾಂ ದೊಡ್ಮನೆ, ಕಲಸೆ ಚಂದ್ರಪ್ಪ, ಸುರೇಶ್ ಬಾಬು ಇನ್ನಿತರರು ಹಾಜರಿದ್ದರು.

‘ಸಾಗರ ಮಾರಿಕಾಂಬಾ ದೇವಿ ನ್ಯಾಸ’ಕ್ಕೆ ನೂತನ ಸಾರಥ್ಯ: ನಾಗರಾಜ್, ಆನಂದ್ ನೇತೃತ್ವದಲ್ಲಿ ಅಭಿವೃದ್ಧಿಯ ಹೊಸ ಸಂಕಲ್ಪ!

ಬೀದರ್ ನಲ್ಲಿ 40ನೇ ರಾಜ್ಯ ಪತ್ರಕರ್ತರ ಸಮ್ಮೇಳ: ಪೂರ್ವಭಾವಿ ಸಿದ್ಧತಾ ಸಭೆ ನಡೆಸಿದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ

ತರಗತಿಯಲ್ಲಿ ಮುಸ್ಲಿಂ ವಿದ್ಯಾರ್ಥಿಯನ್ನು ಟೆರರಿಸ್ಟ್ ಎಂದು ಕರೆದ ಪ್ರೊಫೆಸರ್ : ವಿಡಿಯೋ ವೈರಲ್ | WATCH VIDEO

Share. Facebook Twitter LinkedIn WhatsApp Email

Related Posts

ಬೀದರ್ ನಲ್ಲಿ 40ನೇ ರಾಜ್ಯ ಪತ್ರಕರ್ತರ ಸಮ್ಮೇಳ: ಪೂರ್ವಭಾವಿ ಸಿದ್ಧತಾ ಸಭೆ ನಡೆಸಿದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ

28/03/2026 9:40 PM1 Min Read

‘ಸಾಗರ ಮಾರಿಕಾಂಬಾ ದೇವಿ ನ್ಯಾಸ’ಕ್ಕೆ ನೂತನ ಸಾರಥ್ಯ: ನಾಗರಾಜ್, ಆನಂದ್ ನೇತೃತ್ವದಲ್ಲಿ ಅಭಿವೃದ್ಧಿಯ ಹೊಸ ಸಂಕಲ್ಪ!

28/03/2026 9:10 PM2 Mins Read

ದಾವಣಗೆರೆಯಲ್ಲಿ ತೊಡೆ ತಟ್ಟಿದ್ದ ಪ್ರದೀಪ್‌ ಈಶ್ವರ್‌ಗೆ ಚಪ್ಪಲಿ, ಪೊರಕೆ ಪ್ರದರ್ಶಿಸಿದ ಬಿಜೆಪಿಗರು

28/03/2026 8:45 PM2 Mins Read
Recent News

‘ಮುಖೇಶ್ ಅಂಬಾನಿ’ ಮನೆಯಲ್ಲಿ ಒಂದೇ ಒಂದು ‘AC’ ಕೂಡ ಇಲ್ಲ ; ಯಾಕೆ ಗೊತ್ತಾ?

28/03/2026 9:47 PM

ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಯಶಸ್ವಿಯಾಗಿ ಮುನ್ನಡೆಯಬೇಕು: MLC ಬಲ್ಕಿಶ್ ಬಾನು

28/03/2026 9:46 PM

ಬೀದರ್ ನಲ್ಲಿ 40ನೇ ರಾಜ್ಯ ಪತ್ರಕರ್ತರ ಸಮ್ಮೇಳ: ಪೂರ್ವಭಾವಿ ಸಿದ್ಧತಾ ಸಭೆ ನಡೆಸಿದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ

28/03/2026 9:40 PM

ಮತ್ತೊಮ್ಮೆ ಬಯಲಾಯ್ತು ಪಾಕ್ ದುಷ್ಟ ಬುದ್ಧಿ ; ಉಗ್ರರಿಗೆ ಆಶ್ರಯ ಕೊಟ್ಟು ಭಾರತದ ವಿರುದ್ಧ ದಾಳಿಗೆ ಸಂಚು ; ಅಮೆರಿಕ ವರದಿ

28/03/2026 9:13 PM
State News
KARNATAKA

ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಯಶಸ್ವಿಯಾಗಿ ಮುನ್ನಡೆಯಬೇಕು: MLC ಬಲ್ಕಿಶ್ ಬಾನು

By kannadanewsnow0928/03/2026 9:46 PM KARNATAKA 2 Mins Read

ಶಿವಮೊಗ್ಗ : ಮಹಿಳೆ ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ ಸಬಲೀಕರಣವಾಗಬೇಕು. ಮಹಿಳೆಗೆ ಸಿಗಬೆಕಾದ ಸ್ಥಾನಮಾನ ಸೂಕ್ತವಾಗಿ ಸಿಗಬೇಕು ಎಲ್ಲಾ ಕ್ಷೇತ್ರಗಳಲ್ಲೂ ಯಶಸ್ವಿಯಾಗಿ…

ಬೀದರ್ ನಲ್ಲಿ 40ನೇ ರಾಜ್ಯ ಪತ್ರಕರ್ತರ ಸಮ್ಮೇಳ: ಪೂರ್ವಭಾವಿ ಸಿದ್ಧತಾ ಸಭೆ ನಡೆಸಿದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ

28/03/2026 9:40 PM

‘ಸಾಗರ ಮಾರಿಕಾಂಬಾ ದೇವಿ ನ್ಯಾಸ’ಕ್ಕೆ ನೂತನ ಸಾರಥ್ಯ: ನಾಗರಾಜ್, ಆನಂದ್ ನೇತೃತ್ವದಲ್ಲಿ ಅಭಿವೃದ್ಧಿಯ ಹೊಸ ಸಂಕಲ್ಪ!

28/03/2026 9:10 PM

ದಾವಣಗೆರೆಯಲ್ಲಿ ತೊಡೆ ತಟ್ಟಿದ್ದ ಪ್ರದೀಪ್‌ ಈಶ್ವರ್‌ಗೆ ಚಪ್ಪಲಿ, ಪೊರಕೆ ಪ್ರದರ್ಶಿಸಿದ ಬಿಜೆಪಿಗರು

28/03/2026 8:45 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.