ಬೆಂಗಳೂರು : ಶ್ರೀ ರಾಮನವಮಿ ಅನ್ನಪ್ರಸಾದ ಸೇವಿಸಿದ್ದ ಭಕ್ತರಿಗೆ ವಾಂತಿ ಭೇದಿ ಆಗಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಬೆಟ್ಟನಹಳ್ಳಿ ದೇವಸ್ಥಾನದಲ್ಲಿ ನಿನ್ನೆ ಜನರು ಶ್ರೀ ರಾಮನವಮಿ ಪ್ರಸಾದ ಸೇವಿಸಿದ್ದರು. ಪ್ರಸಾದ ಸೇವಿಸಿದ ಬಳಿಕ ಬಹುತೇಕ ಭಕ್ತರಲ್ಲಿ ವಾಂತಿಭೇದಿ ಕಾಣಿಸಿಕೊಂಡಿದ್ದು ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮುಂಜಾಗ್ರತ ಕ್ರಮವಾಗಿ ಆರೋಗ್ಯ ಸಿಬ್ಬಂದಿಯಿಂದ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದೆ. ಬೆಟ್ಟೇನಹಳ್ಳಿಯಲ್ಲಿಯೇ ವೈದ್ಯಕೀಯ ಸಿಬ್ಬಂದಿಗಳು ಚಿಕಿತ್ಸೆ ನೀಡುತ್ತಿದ್ದಾರೆ. ತೀವ್ರ ಅಸ್ವಸ್ಥರಾದವರನ್ನು ಆಂಬುಲೆನ್ಸ್ ಮುಖಾಂತರ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಪ್ರತಿ ವರ್ಷ ಶ್ರೀ ರಾಮನವಮಿಯಂದು ಅನ್ನಪ್ರಸಾದ ವಿನಿಯೋಗಿಸಲಾಗುತ್ತಿತ್ತು. ಈ ವರ್ಷ ಮಾತ್ರ ಪ್ರಸಾದ ಸೇವಿಸಿದ ಶ್ರೀ ರಾಮನ ಭಕ್ತರಿಗೆ ವಾಂತಿಭೇದಿ ಕಾಣಿಸಿಕೊಂಡಿದೆ.








