Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ‘UPSC’ ಪ್ರಿಲಿಮ್ಸ್ ಫಲಿತಾಂಶ ಪ್ರಕಟ :13,343 ಮಂದಿ ಅರ್ಹರು | UPSC prelims 2026 result

​ರಾಮ ಮಂದಿರ ದೇಣಿಗೆ ವಿವಾದಕ್ಕೆ ಬಿಗ್ ಟ್ವಿಸ್ಟ್: ಕಣಕ್ಕಿಳಿದ ಎಸ್‌ಐಟಿ! ರಾಜಕೀಯ ಜಿದ್ದಾಜಿದ್ದಿ ತೀವ್ರ

BREAKING: ಅಮೆರಿಕ ವಾಯುಪಡೆಯ B-52 ಬಾಂಬರ್ ವಿಮಾನ ಪತನಗೊಂಡು 8 ಮಂದಿ ಸಜೀವ ದಹನ : ವಿಡಿಯೋ ವೈರಲ್ | WATCH VIDEO

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ದೊಡ್ಡ ಅಂತರದ ಗೆಲುವು: ಡಿಸಿಎಂ ಡಿ.ಕೆ ಶಿವಕುಮಾರ್
KARNATAKA

ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ದೊಡ್ಡ ಅಂತರದ ಗೆಲುವು: ಡಿಸಿಎಂ ಡಿ.ಕೆ ಶಿವಕುಮಾರ್

By ವಸಂತ ಬಿ ಈಶ್ವರಗೆರೆ

ಬೆಂಗಳೂರು : “ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳಲ್ಲಿ ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಂದ ಮತಕ್ಕಿಂತ ಈ ಬಾರಿಯ ಉಪಚುನಾವಣೆಯಲ್ಲಿ ಹೆಚ್ಚು ಮತ ಬೀಳಲಿದ್ದು, ನಮ್ಮ ಅಭ್ಯರ್ಥಿಗಳು ಹೆಚ್ಚು ಮತಗಳ ಅಂತರದಲ್ಲಿ ಗೆಲ್ಲಲಿದ್ದಾರೆ” ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಿಶ್ವಾಸ ವ್ಯಕ್ತಪಡಿಸಿದರು.

ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯೆ ನೀಡಿದರು.

ಉಪಚುನಾವಣೆ ಪ್ರಚಾರದ ಬಗ್ಗೆ ಕೇಳಿದಾಗ, “ದಾವಣಗೆರೆ ಹಾಗೂ ಬಾಗಲಕೋಟೆಯ ಉಪಚುನಾವಣೆ ಪ್ರಚಾರ ಮಾಡಿ ಬಂದಿದ್ದೇನೆ. ನಮ್ಮ ಕಾರ್ಯಕರ್ತರು ಬಹಳ ಚೆನ್ನಾಗಿ ಕೆಲಸ ಮಾಡುತ್ತಿದ್ದಾರೆ. ಪ್ರತಿ ಮನೆ ಮನೆಗೆ ಹೋಗಿ ಗ್ಯಾರಂಟಿ ಯೋಜನೆಗಳ ಬಗ್ಗೆ ಮನವರಿಕೆ ಮಾಡುತ್ತಿದ್ದಾರೆ. ಗ್ಯಾರಂಟಿ ಫಲಾನುಭವಿಗಳಲ್ಲಿ ಕಳೆದ ಬಾರಿ ಬಿಜೆಪಿಗೆ ಮತ ಹಾಕಿರುವವರೂ ಕೂಡ ಈ ಬಾರಿ ಕಾಂಗ್ರೆಸ್ ಗೆ ಮತ ಹಾಕುವುದಾಗಿ ತಿಳಿಸಿದ್ದಾರೆ. ಬೇಲೆ ಏರಿಕೆಯಾಗುತ್ತಿರುವ ಪರಿಸ್ಥಿತಿಯಲ್ಲಿ ಗ್ಯಾರಂಟಿ ಯೋಜನೆ ಎಷ್ಟು ನೆರವಾಗುತ್ತಿವೆ ಎಂದು ಸ್ಮರಿಸುತ್ತಿದ್ದಾರೆ. ಇವುಗಳನ್ನು ಉಳಿಸಿಕೊಳ್ಳಲು ಜನ ತೀರ್ಮಾನಿಸಿದ್ದಾರೆ” ಎಂದು ತಿಳಿಸಿದರು.

ಕೇರಳ ಚುನಾವಣಾ ಪ್ರಚಾರಕ್ಕೆ ತೆರಳುತ್ತಿರುವ ಬಗ್ಗೆ ಕೇಳಿದಾಗ, “ಕೇರಳ ಚುನಾವಣೆ ಪ್ರಚಾರಕ್ಕೆ ಎರಡು ದಿನ ಪ್ರವಾಸ ಮಾಡಬೇಕಾಗಿದ್ದು, ಅಲ್ಲಿ ಪ್ರವಾಸ ಮಾಡಿ ಬಂದ ಬಳಿಕ, ಇಲ್ಲಿ ದಾವಣಗೆರೆ ಅಥವಾ ಬಾಗಲಕೋಟೆಗೆ ತೆರಳುತ್ತೇನೆ” ಎಂದು ತಿಳಿಸಿದರು.

ಬಿಜೆಪಿಗರು ತಪ್ಪೊಪ್ಪಿಕೊಂಡು ಜನರ ಕ್ಷಮೆ ಕೇಳಲಿ

ರಾಜ್ಯದಲ್ಲಿ ಗ್ಯಾಸ್ ಅಭಾವದ ಸಮಸ್ಯೆ ಹೆಚ್ಚಾಗುತ್ತಿದೆ ಎಂದು ಕೇಳಿದಾಗ, “ಆಟೋ ಚಾಲಕರಿಗೆ ಇದರಿಂದ ಬಹಳ ತೊಂದರೆಯಾಗುತ್ತಿದೆ. ಇದರಿಂದ ಸಂಚಾರ ವ್ಯವಸ್ಥೆಗೆ ಪರಿಣಾಮ ಬೀರುತ್ತಿದೆ. ಜತೆಗೆ ಹೊಟೇಲ್ ಕ್ಷೇತ್ರವು ಸಮಸ್ಯೆ ಎದುರಿಸುತ್ತಿದೆ. ಕೇಂದ್ರ ಸರ್ಕಾರ ಈ ಬಗ್ಗೆ ಗಮನಹರಿಸಬೇಕು” ಎಂದು ಆಗ್ರಹಿಸಿದರು.

ಆಟೋ ಚಾಲಕರು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿರುವ ಬಗ್ಗೆ ಕೇಳಿದಾಗ, “ಅನಿಲ ಪೂರೈಕೆ ಅಧಿಕಾರ ರಾಜ್ಯ ಸರ್ಕಾರದ ಕೈಯಲ್ಲಿಲ್ಲ. ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುತ್ತದೆ. ಕೇಂದ್ರ ಸರ್ಕಾರ ಸರಿಯಾಗಿ ಮುಂಜಾಗ್ರತೆ, ನೀತಿ ರೂಪಿಸಬೇಕಿತ್ತು. ಈ ವಿಚಾರದಲ್ಲಿ ವಿಫಲವಾಗಿದೆ. ಈ ವಿಚಾರವಾಗಿ ಬಿಜೆಪಿಯವರು ಈವರೆಗೂ ಯಾಕೆ ಮಾತನಾಡುತ್ತಿಲ್ಲ. ನಮ್ಮಿಂದ ತೊಂದರೆಯಾಗಿದೆ ಎಂದು ಒಪ್ಪಿಕೊಂಡು ಜನರ ಬಳಿ ಕ್ಷಮೆ ಕೋರಬೇಕು” ಎಂದು ತಿಳಿಸಿದರು.

ಸಿಎಂ ದಾವಣಗೆರೆಯಲ್ಲಿ ಪ್ರಚಾರ ಮಾಡಲು ಹೇಳಿದ್ದು, ವೇಣುಗೋಪಾಲ್ ಅವರು ಕೇರಳದಲ್ಲಿ ಪ್ರಚಾರ ಮಾಡಲು ಹೇಳುತ್ತಿದ್ದಾರೆ ಎಂದು ಕೇಳಿದಾಗ, “ನನಗೆ ಈ ವಿಚಾರವಾಗಿ ಗೊತ್ತಿಲ್ಲ. ಯಾರು ಇರಲಿ, ಇಲ್ಲದಿರಲಿ ನಮ್ಮ ಕರ್ತವ್ಯ ನಾವು ಮಾಡುತ್ತೇವೆ” ಎಂದು ತಿಳಿಸಿದರು.

ಕಾಯಕದ ನಡುವೆಯೂ ಮಾನವೀಯತೆ ಮೆರೆದ ಸಾಗರದ ಓಮಿನಿ ಚಾಲಕರು: ಅನಾಥಾಶ್ರಮಕ್ಕೆ ಪಡಿತರ ದೇಣಿಗೆ

BIG Alert: ‘ಆನ್‌ಲೈನ್‌’ನಲ್ಲಿ ‘IPL ಟಿಕೆಟ್’ ಖರೀದಿಗಾಗಿ ಹುಡುಕುತ್ತಿದ್ದೀರಾ? ಅದಕ್ಕೂ ಮುನ್ನ ಈ ಸುದ್ದಿ ಓದಿ.!

Share. Facebook Twitter LinkedIn WhatsApp Email

Related Posts

LPG Gas Subsidy: `LPG’ ಗ್ರಾಹಕರೇ ಗಮನಿಸಿ : ಜೂನ್ 30ರೊಳಗೆ ಈ ಕೆಲಸ ಮಾಡದಿದ್ದರೆ ಸಬ್ಸಿಡಿ ಬಂದ್.!

2 Mins Read

ALERT : `ATM’ ಗ್ರಾಹಕರೇ ಎಚ್ಚರ: ಬ್ಯಾಂಕ್ ಖಾತೆ ಖಾಲಿ ಮಾಡಬಲ್ಲ 5 ವಂಚನೆಗಳ ಬಗ್ಗೆ ನೀವು ತಿಳಿಯಲೇಬೇಕು.!

3 Mins Read

ರಾಜ್ಯದ ರೈತರೇ ಗಮನಿಸಿ: ಸಬ್ಸಿಡಿ ರಸಗೊಬ್ಬರಕ್ಕೆ ಹೆಚ್ಚು ಹಣ ಕೇಳಿದರೆ ತಕ್ಷಣ ದೂರು ನೀಡಿ

2 Mins Read
Recent News

BREAKING : ‘UPSC’ ಪ್ರಿಲಿಮ್ಸ್ ಫಲಿತಾಂಶ ಪ್ರಕಟ :13,343 ಮಂದಿ ಅರ್ಹರು | UPSC prelims 2026 result

​ರಾಮ ಮಂದಿರ ದೇಣಿಗೆ ವಿವಾದಕ್ಕೆ ಬಿಗ್ ಟ್ವಿಸ್ಟ್: ಕಣಕ್ಕಿಳಿದ ಎಸ್‌ಐಟಿ! ರಾಜಕೀಯ ಜಿದ್ದಾಜಿದ್ದಿ ತೀವ್ರ

BREAKING: ಅಮೆರಿಕ ವಾಯುಪಡೆಯ B-52 ಬಾಂಬರ್ ವಿಮಾನ ಪತನಗೊಂಡು 8 ಮಂದಿ ಸಜೀವ ದಹನ : ವಿಡಿಯೋ ವೈರಲ್ | WATCH VIDEO

ALERT : `ITR’ ಫೈಲ್ ಮಾಡುವಾಗ ಈ 7 ತಪ್ಪು ಮಾಡಬೇಡಿ; ಇಲ್ಲದಿದ್ದರೆ `ಐಟಿ ಇಲಾಖೆ’ಯಿಂದ ನೋಟಿಸ್ ಬರಬಹುದು!

State News
KARNATAKA

LPG Gas Subsidy: `LPG’ ಗ್ರಾಹಕರೇ ಗಮನಿಸಿ : ಜೂನ್ 30ರೊಳಗೆ ಈ ಕೆಲಸ ಮಾಡದಿದ್ದರೆ ಸಬ್ಸಿಡಿ ಬಂದ್.!

By kannadanewsnow57 KARNATAKA 2 Mins Read

ಬೆಂಗಳೂರು : ನೀವು ಭಾರತ ಗ್ಯಾಸ್ (Bharat Gas) ಗ್ರಾಹಕರಾಗಿದ್ದೀರಾ? ಹಾಗಿದ್ದಲ್ಲಿ ನಿಮಗೊಂದು ಅತ್ಯಂತ ಪ್ರಮುಖ ಹಾಗೂ ಗಡುವಿನ ಮಾಹಿತಿಯಿದೆ.…

ALERT : `ATM’ ಗ್ರಾಹಕರೇ ಎಚ್ಚರ: ಬ್ಯಾಂಕ್ ಖಾತೆ ಖಾಲಿ ಮಾಡಬಲ್ಲ 5 ವಂಚನೆಗಳ ಬಗ್ಗೆ ನೀವು ತಿಳಿಯಲೇಬೇಕು.!

ರಾಜ್ಯದ ರೈತರೇ ಗಮನಿಸಿ: ಸಬ್ಸಿಡಿ ರಸಗೊಬ್ಬರಕ್ಕೆ ಹೆಚ್ಚು ಹಣ ಕೇಳಿದರೆ ತಕ್ಷಣ ದೂರು ನೀಡಿ

ರಾಜ್ಯದ ರೈತರಿಗೆ ಬಿಗ್ ಶಾಕ್ : ರಾಜ್ಯಾದ್ಯಂತ `ಮುಂಗಾರು ಮಳೆ’ ಶೇ.21 ರಷ್ಟು ಕೊರತೆ.!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.