Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : ನೀವು `ಮೊಬೈಲ್’ ನಲ್ಲಿ ಈ ತಪ್ಪುಗಳನ್ನು ಮಾಡಿದ್ರೆ ಜೈಲು ಶಿಕ್ಷೆ ಫಿಕ್ಸ್.!

07/04/2026 10:45 AM

ಮೋದಿ ಸರ್ಕಾರದಿಂದ 5 ಲಕ್ಷಕ್ಕೂ ಹೆಚ್ಚು ಆಟೋ ಚಾಲಕರ ಜೀವನ ಧ್ವಂಸ : ಡಿಸಿಎಂ ಡಿಕೆಶಿ, ಸುರ್ಜೆವಾಲಾ ವಾಗ್ದಾಳಿ!

07/04/2026 10:38 AM

ಬೆಂಗಳೂರಲ್ಲಿ ಮತ್ತೊಂದು ಮರ್ಡರ್ : ಅನೈತಿಕ ಸಂಬಂಧಕ್ಕೆ ಅಡ್ಡಿ ಎಂದು, ಪ್ರೇಯಸಿಯ ಪತಿಯನ್ನೆ ಕೊಂದ ಪ್ರಿಯಕರ!

07/04/2026 10:32 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮೋದಿ ಸರ್ಕಾರದಿಂದ 5 ಲಕ್ಷಕ್ಕೂ ಹೆಚ್ಚು ಆಟೋ ಚಾಲಕರ ಜೀವನ ಧ್ವಂಸ : ಡಿಸಿಎಂ ಡಿಕೆಶಿ, ಸುರ್ಜೆವಾಲಾ ವಾಗ್ದಾಳಿ!
KARNATAKA

ಮೋದಿ ಸರ್ಕಾರದಿಂದ 5 ಲಕ್ಷಕ್ಕೂ ಹೆಚ್ಚು ಆಟೋ ಚಾಲಕರ ಜೀವನ ಧ್ವಂಸ : ಡಿಸಿಎಂ ಡಿಕೆಶಿ, ಸುರ್ಜೆವಾಲಾ ವಾಗ್ದಾಳಿ!

By kannadanewsnow0507/04/2026 10:38 AM

ಬೆಂಗಳೂರು :  ಮೋದಿ ಸರ್ಕಾರದ ಎಲ್‌ಪಿಜಿ ಮತ್ತು ಇಂಧನ ವ್ಯವಸ್ಥೆಯ ಅಸಮರ್ಥ ನಿರ್ವಹಣೆಯಿಂದಾಗಿ ಕರ್ನಾಟಕದಾದ್ಯಂತ ಜನರ ಜೀವನೋಪಾಯವನ್ನು ನಾಶಪಡಿಸಿದೆ. ಇದು ಕೇವಲ ನೀತಿಯ ವೈಫಲ್ಯವಲ್ಲ. ಬದಲಿಗೆ ಕೇಂದ್ರ ಬಿಜೆಪಿ ಸರ್ಕಾರದ ಉದಾಸೀನತೆ, ಅಹಂಕಾರ ಮತ್ತು ಸಂಪೂರ್ಣ ಆಡಳಿತಾತ್ಮಕ ದುರಂತಕ್ಕೆ ಸಾಕ್ಷಿಯಾಗಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಕರ್ನಾಟಕ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು

ಕರ್ನಾಟಕದ ಬಿಜೆಪಿ/ಜೆಡಿಎಸ್ ಕೇಂದ್ರ ಸಚಿವರು ಅಧಿಕಾರವನ್ನು ಆನಂದದಿಂದ ಅನುಭವಿಸುತ್ತಿದ್ದಾರೆ. ಜನಸಾಮಾನ್ಯರ ಈ ಪರಿಸ್ಥಿತಿಗೆ ಅವರು ಉತ್ತರದಾಯಿಯಾಗಿರಬೇಕು ಅಥವಾ ತಮ್ಮ ಸಚಿವ ಸ್ಥಾನಗಳಿಗೆ ರಾಜೀನಾಮೆ ನೀಡಬೇಕು.

ಉಪಚುನಾವಣೆಯಲ್ಲಿ ಬಿಜೆಪಿ ಮತ ಕೇಳುವ ಮುನ್ನ ಈ ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಲಿ:

1. ಕೆಲವೇ ವಾರಗಳಲ್ಲಿ 106% ಬೆಲೆ ಏರಿಕೆಯ ಆಘಾತ!

* ಮಾರ್ಚ್ 2026 ರಲ್ಲಿ ಆಟೋ ಗ್ಯಾಸ್/ಎಲ್‌ಪಿಜಿ ಬೆಲೆ ಲೀಟರ್‌ಗೆ ₹58 ರಿಂದ ₹61 ಇತ್ತು. ಇಂದು ಅದು ₹105 ರಿಂದ ₹120 ಕ್ಕೆ ಏರಿಕೆಯಾಗಿದ್ದು, ಕೆಲವೇ ವಾರಗಳಲ್ಲಿ 106% ಬೆಲೆ ಏರಿಕೆಯಾಗಿದೆ.

* ಖಾಸಗಿ ಅನಿಲ ಪೂರೈಕೆ ಕೇಂದ್ರಗಳಲ್ಲಿ ಲೀಟರ್‌ಗೆ ₹125 ರಿಂದ ₹135 ಹಣ ವಸೂಲಿ ಮಾಡಲಾಗುತ್ತಿದೆ.

* ಸಿಎನ್‌ಜಿ ಆಟೋಗಳೂ ಸಹ ಕರ್ನಾಟಕದಾದ್ಯಂತ ತೀವ್ರ ಕೊರತೆ ಎದುರಿಸುತ್ತಿವೆ. ಬೆಲೆ ಏರಿಕೆ ಮತ್ತು ಕೊರತೆಯಿಂದ ಆಟೋ ಚಾಲಕರು ಕಂಗಾಲಾಗಿದ್ದಾರೆ. ಇಷ್ಟಾದರೂ ಬಿಜೆಪಿ ನಾಯಕರು ಬಾಯಿಗೆ ಬೀಗ ಹಾಕಿಕೊಂಡಿದ್ದಾರೆ.

* ಕಡಿಮೆ ಬೆಲೆಗೆ ಅನಿಲ ಪೂರೈಕೆ ಮಾಡುವ ಸರ್ಕಾರಿ ಕೇಂದ್ರಗಳು ಮುಚ್ಚಲ್ಪಟ್ಟಿವೆ.

ಇದು ಹಣದುಬ್ಬರವಲ್ಲ, ಶ್ರಮಿಕ ವರ್ಗದ ಮೇಲೆ ನಡೆಸುತ್ತಿರುವ ಆರ್ಥಿಕ ದೌರ್ಜನ್ಯ.

2. ಕೃತಕ ಅಭಾವ, ನೈಜ ಸಂಕಷ್ಟ!

* ಬೆಂಗಳೂರಿನಲ್ಲಿ 60 ರಿಂದ 70 ಎಲ್‌ಪಿಜಿ/ಸಿಎನ್‌ಜಿ ನಿಲ್ದಾಣಗಳಿದ್ದವು, ಈಗ ಕೇವಲ 10 ರಿಂದ 15 ಮಾತ್ರ ಕಾರ್ಯನಿರ್ವಹಿಸುತ್ತಿವೆ. ಅಂದರೆ ಸುಮಾರು 80% ನಿಲ್ದಾಣಗಳು ಬಂದ್ ಆಗಿವೆ!

* ನಗರದಲ್ಲಿ ‘ಟೋಟಲ್ ಗ್ಯಾಸ್’ ತನ್ನ ಎಲ್ಲಾ ಕೇಂದ್ರಗಳನ್ನು ಮುಚ್ಚಿದೆ.

* ದೈನಂದಿನ ಪೂರೈಕೆಯು 12,000 ಲೀಟರ್‌ನಿಂದ 6,000 ಲೀಟರ್‌ಗೆ ಕುಸಿದಿದೆ.

* ಪ್ರತಿ ವಾಹನಕ್ಕೆ ₹400 ನಷ್ಟು ಮಾತ್ರ ಇಂಧನ ಅನಿಲ ವಿತರಿಸಲಾಗುತ್ತಿದೆ.

* ಆಟೋ ಚಾಲಕರು ಬೆಳಿಗ್ಗೆ 5 ಗಂಟೆಯಿಂದ 3 ಕಿಲೋಮೀಟರ್ ಉದ್ದದ ಸಾಲಿನಲ್ಲಿ ನಿಂತರೂ ಖಾಲಿ ಕೈಯಲ್ಲಿ ಮರಳುತ್ತಿದ್ದಾರೆ. ಆಟೋ ಚಾಲಕರು ಸರದಿ ಸಾಲಿನಲ್ಲಿ ಕಳೆಯುವ ಪ್ರತಿಯೊಂದು ಗಂಟೆಯೂ ಅವರ ಕುಟುಂಬದ ಅನ್ನವನ್ನು ಕಸಿಯುತ್ತಿದೆ.

3. 5 ಲಕ್ಷಕ್ಕೂ ಹೆಚ್ಚು ಕುಟುಂಬಗಳು ಬೀದಿಗೆ!

* ಕರ್ನಾಟಕದಲ್ಲಿ 5 ಲಕ್ಷಕ್ಕೂ ಹೆಚ್ಚು ಆಟೋಗಳಿದ್ದು, ಇವು ಸಾಮಾನ್ಯ ಜನರ ಸಂಚಾರದ ಬೆನ್ನೆಲುಬಾಗಿದೆ.

* ಈ ಆಟೋ ಚಾಲಕರು ಕಾರ್ಪೊರೇಟ್ ಸಂಸ್ಥೆಗಳಲ್ಲ, ದಿನಗೂಲಿ ನೌಕರರು. ಪ್ರತಿ ನಿತ್ಯ, ಪ್ರತಿ ಬಾಡಿಗೆಯ ಸಂಪಾದನೆ ಮೇಲೆ ಅವರ ಜೀವನ ಅವಲಂಬಿತವಾಗಿದೆ. ರಾಜ್ಯದಲ್ಲಿ ಅರ್ಧದಷ್ಟು ಆಟೋಗಳು ರಸ್ತೆಗೆ ಇಳಿಯುತ್ತಿಲ್ಲ. ಉಳಿದ ಆಟೋಗಳು ಅರ್ಧ ದಿನವನ್ನು ಸರತಿ ಸಾಲಿನಲ್ಲಿ ಕಾಲ ಕಳೆಯುತ್ತಿವೆ.

ಮೋದಿ ಸರ್ಕಾರದ “ಪೆಟ್ರೋಲ್‌ಗೆ ಬದಲಾಗಿ” ಎಂಬ ಪುಕ್ಕಟೆ ಸಲಹೆಯು ಅಜ್ಞಾನ ಮತ್ತು ಕ್ರೌರ್ಯದಿಂದ ಕೂಡಿದೆ. ಈಗಾಗಲೇ ಅನೇಕ ಆಟೋಗಳು ಪೆಟ್ರೋಲ್‌ನಿಂದ ಗ್ಯಾಸ್‌ಗೆ ಬದಲಾಗಿವೆ, ಮತ್ತು ಪೆಟ್ರೋಲ್ ಬೆಲೆ ಏರಿಕೆಯಿಂದಾಗಿ ಅದು ದುಬಾರಿಯಾಗಿದೆ.

4. ವಾಣಿಜ್ಯ ಎಲ್‌ಪಿಜಿ ಬೆಲೆ ಗಗನಕ್ಕೆ – ಹೋಟೆಲ್, ಸಣ್ಣ ವ್ಯಾಪಾರಿಗಳು ಕಂಗಾಲು. ಇದು ‘ಮೋದಿ-ನಿರ್ಮಿತ’ ವಿಪತ್ತು!

* ಏಪ್ರಿಲ್ 1, 2026 ರಂದು ವಾಣಿಜ್ಯ ಸಿಲಿಂಡರ್ ಬೆಲೆ ₹200 ಏರಿಕೆಯಾಗಿದ್ದು, ಒಂದು ಸಿಲಿಂಡರ್ ಬೆಲೆ ₹2,000 ದಾಟಿದೆ. ಪ್ರಸ್ತುತ ಒಂದು ಸಿಲಿಂಡರ್ ಬೆಲೆ ₹2,161 ಆಗಿದ್ದು, ಬೆಲೆ ಇನ್ನೂ ಏರುತ್ತಲೇ ಇದೆ. ಇತ್ತೀಚಿನ ವರದಿಗಳ ಪ್ರಕಾರ, ಕಾಳಸಂತೆಯಲ್ಲಿ ಒಂದು ಸಿಲಿಂಡರ್ *₹6,000*ಕ್ಕೆ ಮಾರಾಟವಾಗುತ್ತಿದೆ!

* ಇದರಿಂದ ಲಕ್ಷಾಂತರ ಸಣ್ಣ ಹೋಟೆಲ್‌ಗಳು, ರಸ್ತೆಬದಿಯ ಡಾಬಾ, ತಳ್ಳುಗಾಡಿ ವ್ಯಾಪಾರಿಗಳು ಮತ್ತು ಫುಡ್ ಡೆಲಿವರಿ ಮಾಡುವ ಗಿಗ್ ಕಾರ್ಮಿಕರ ಜೀವನ ಅಸ್ತವ್ಯಸ್ತಗೊಂಡಿದೆ.

* ಭಾರತದಲ್ಲಿ ಎಲ್‌ಪಿಜಿ ಪೂರೈಕೆಯನ್ನು ಕೇಂದ್ರ ಸರ್ಕಾರವು ಒಎಂಸಿಗಳ (OMCs) ಮೂಲಕ ನಿಯಂತ್ರಿಸುತ್ತದೆ. ಇದರ ಸಂಪೂರ್ಣ ಜವಾಬ್ದಾರಿ ಮೋದಿ ಸರ್ಕಾರದ್ದೇ ಆಗಿದೆ. ಇಂಧನ ಅನಿಲ ಸಂಗ್ರಹಣೆ ಹಾಗೂ ಪೂರೈಕೆ ಕುರಿತ ಸಂಪೂರ್ಣ ನಿಯಂತ್ರಣ ಮೋದಿ ಸರ್ಕಾರದಾಗಿದ್ದು, ಇದರಲ್ಲಿ ರಾಜ್ಯ ಸರ್ಕಾರದ ಯಾವುದೇ ಪಾತ್ರವಿಲ್ಲ.

ಇಂಧನ ಅನಿಲ ಪೂರೈಕೆ ಎದುರಾಗಿರುವ ಕೊರತೆ ಬಗ್ಗೆ ಹಾಕಲಾಗಿರುವ ಫಲಕಗಳನ್ನು ಒಎಂಸಿಗಳು ನಿರ್ಲಕ್ಷಿಸಿರುವುದು ಕೇಂದ್ರ ಬಿಜೆಪಿ ಸರ್ಕಾರದ ಆಡಳಿತ ಕುಸಿತಕ್ಕೆ ಸಾಕ್ಷಿಯಾಗಿದೆ.

5. ಕಪ್ಪು ಮಾರುಕಟ್ಟೆ ಹಾವಳಿ, ನಾಪತ್ತೆಯಾದ ಕೇಂದ್ರ ಸರ್ಕಾರ!

* ಎಲ್‌ಪಿಜಿ ಕಾಳಸಂತೆ ರಾಜಾರೋಷವಾಗಿ ನಡೆಯುತ್ತಿದ್ದು, ಖಾಸಗಿ ತೈಲ ಕಂಪನಿಗಳು ಇಂಧನ ತೈಲ ಬೆಲೆ ಏರಿಕೆ ಮಾಡಿವೆ. ಏಪ್ರಿಲ್ 9 ಮತ್ತು 23 ರ ಚುನಾವಣೆಯ ನಂತರ ಇಂಧನ ತೈಲ ಬೆಲೆಗಳು ಇನ್ನಷ್ಟು ಹೆಚ್ಚಾಗುವ ಸಾಧ್ಯತೆಗಳು ದಟ್ಟವಾಗಿದೆ. ಜನರು ಸಂಕಷ್ಟದಲ್ಲಿರುವಾಗ ಕೇಂದ್ರ ಸರ್ಕಾರವು ಕೇವಲ ಘೋಷಣೆಗಳ ಹಿಂದೆ ಅಡಗಿಕೊಳ್ಳುತ್ತಿದೆ.

6. ಜೀವನೋಪಾಯದ ಬಿಕ್ಕಟ್ಟು, ನಾಯಕತ್ವದ ವೈಫಲ್ಯ

ಇದು ಕೇವಲ ಇಂಧನದ ಬಿಕ್ಕಟ್ಟಲ್ಲ, ಇದು ಕೋಟ್ಯಂತರ ಜನರ ಬದುಕಿನ ತುರ್ತು ಪರಿಸ್ಥಿತಿ. ಕರ್ನಾಟಕದ ಶ್ರಮಿಕ ವರ್ಗವು ಹತಾಶೆಗೆ ನೂಕಿ ಮೋದಿ ಸರ್ಕಾರ ಮೂಕ ಪ್ರೇಕ್ಷಕನಂತೆ ನೋಡುತ್ತಿದೆ.

* ಪ್ರತಿ ಖಾಲಿ ಎಲ್‌ಪಿಜಿ ಸಿಲಿಂಡರ್ ಒಂದು ಕುಟುಂಬವನ್ನು ಹಸಿವಿನ ಕೂಪಕ್ಕೆ ನೂಕುತ್ತಿದೆ.

* ಇಂಧನಕ್ಕಾಗಿ ನಿಂತಿರುವ ಪ್ರತಿ ಸರತಿ ಸಾಲು ಕೇಂದ್ರ ಸರ್ಕಾರದ ವೈಫಲ್ಯದ ಸಂಕೇತವಾಗಿದೆ.

* ಪ್ರತಿ ದಿನದ ನಷ್ಟವು ಮೋದಿ ಸರ್ಕಾರದ ನಿರ್ಲಕ್ಷದ ದುಷ್ಪರಿಣಾಮ.

ಕರ್ನಾಟಕದ ಜನರು ಈ ದ್ರೋಹವನ್ನು ಕ್ಷಮಿಸುವುದಿಲ್ಲ. ಮೋದಿ ಸರ್ಕಾರದ ಈ ಮೌನವು ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪಚುನಾವಣೆಗಳಲ್ಲಿ ಹಾಗೂ ಇತರ ರಾಜ್ಯಗಳ ಚುನಾವಣೆಗಳಲ್ಲಿ ಅವರ ಸೋಲಿನಲ್ಲಿ ಪ್ರತಿಧ್ವನಿಸಲಿದೆ.

Share. Facebook Twitter LinkedIn WhatsApp Email

Related Posts

ALERT : ನೀವು `ಮೊಬೈಲ್’ ನಲ್ಲಿ ಈ ತಪ್ಪುಗಳನ್ನು ಮಾಡಿದ್ರೆ ಜೈಲು ಶಿಕ್ಷೆ ಫಿಕ್ಸ್.!

07/04/2026 10:45 AM1 Min Read

ಬೆಂಗಳೂರಲ್ಲಿ ಮತ್ತೊಂದು ಮರ್ಡರ್ : ಅನೈತಿಕ ಸಂಬಂಧಕ್ಕೆ ಅಡ್ಡಿ ಎಂದು, ಪ್ರೇಯಸಿಯ ಪತಿಯನ್ನೆ ಕೊಂದ ಪ್ರಿಯಕರ!

07/04/2026 10:32 AM1 Min Read

ನಿಮ್ಮ `ಮೊಬೈಲ್’ ಪದೇ ಪದೇ ಹ್ಯಾಂಗ್ ಆಗುತ್ತಿದೆಯೇ? ಈ 5 ಕೆಲಸಗಳನ್ನು ಮಾಡಿದರೆ ಹೆಚ್ಚಲಿದೆ ವೇಗ.!

07/04/2026 10:30 AM2 Mins Read
Recent News

ALERT : ನೀವು `ಮೊಬೈಲ್’ ನಲ್ಲಿ ಈ ತಪ್ಪುಗಳನ್ನು ಮಾಡಿದ್ರೆ ಜೈಲು ಶಿಕ್ಷೆ ಫಿಕ್ಸ್.!

07/04/2026 10:45 AM

ಮೋದಿ ಸರ್ಕಾರದಿಂದ 5 ಲಕ್ಷಕ್ಕೂ ಹೆಚ್ಚು ಆಟೋ ಚಾಲಕರ ಜೀವನ ಧ್ವಂಸ : ಡಿಸಿಎಂ ಡಿಕೆಶಿ, ಸುರ್ಜೆವಾಲಾ ವಾಗ್ದಾಳಿ!

07/04/2026 10:38 AM

ಬೆಂಗಳೂರಲ್ಲಿ ಮತ್ತೊಂದು ಮರ್ಡರ್ : ಅನೈತಿಕ ಸಂಬಂಧಕ್ಕೆ ಅಡ್ಡಿ ಎಂದು, ಪ್ರೇಯಸಿಯ ಪತಿಯನ್ನೆ ಕೊಂದ ಪ್ರಿಯಕರ!

07/04/2026 10:32 AM

ವಲಸೆ ಕಾರ್ಮಿಕರಿಗೆ ಬಿಗ್ ರಿಲೀಫ್ : ರಾಜ್ಯಗಳಿಗೆ 5 ಕೆಜಿ ಸಿಲಿಂಡರ್ ಹಂಚಿಕೆಯನ್ನು ದ್ವಿಗುಣಗೊಳಿಸಿದ ಕೇಂದ್ರ ಸರ್ಕಾರ

07/04/2026 10:30 AM
State News
KARNATAKA

ALERT : ನೀವು `ಮೊಬೈಲ್’ ನಲ್ಲಿ ಈ ತಪ್ಪುಗಳನ್ನು ಮಾಡಿದ್ರೆ ಜೈಲು ಶಿಕ್ಷೆ ಫಿಕ್ಸ್.!

By kannadanewsnow5707/04/2026 10:45 AM KARNATAKA 1 Min Read

ಇಂದಿನ ಕಾಲದಲ್ಲಿ ಸ್ಮಾರ್ಟ್‌ಫೋನ್ ನಮ್ಮ ಜೀವನದ ಅವಿಭಾಜ್ಯ ಅಂಗವಾಗಿದೆ. ಆದರೆ, ಅದರ ಅತಿರೇಕದ ಅಥವಾ ತಪ್ಪು ಬಳಕೆಯು ನಿಮ್ಮನ್ನು ಸಂಕಷ್ಟಕ್ಕೆ…

ಮೋದಿ ಸರ್ಕಾರದಿಂದ 5 ಲಕ್ಷಕ್ಕೂ ಹೆಚ್ಚು ಆಟೋ ಚಾಲಕರ ಜೀವನ ಧ್ವಂಸ : ಡಿಸಿಎಂ ಡಿಕೆಶಿ, ಸುರ್ಜೆವಾಲಾ ವಾಗ್ದಾಳಿ!

07/04/2026 10:38 AM

ಬೆಂಗಳೂರಲ್ಲಿ ಮತ್ತೊಂದು ಮರ್ಡರ್ : ಅನೈತಿಕ ಸಂಬಂಧಕ್ಕೆ ಅಡ್ಡಿ ಎಂದು, ಪ್ರೇಯಸಿಯ ಪತಿಯನ್ನೆ ಕೊಂದ ಪ್ರಿಯಕರ!

07/04/2026 10:32 AM

ನಿಮ್ಮ `ಮೊಬೈಲ್’ ಪದೇ ಪದೇ ಹ್ಯಾಂಗ್ ಆಗುತ್ತಿದೆಯೇ? ಈ 5 ಕೆಲಸಗಳನ್ನು ಮಾಡಿದರೆ ಹೆಚ್ಚಲಿದೆ ವೇಗ.!

07/04/2026 10:30 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.