ಬೆಂಗಳೂರು: ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಕಾಯುತ್ತಿರುವ ಅಭ್ಯರ್ಥಿಗಳಿಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಸಿಹಿ ಸುದ್ದಿ ನೀಡಿದ್ದಾರೆ. ಶೀಘ್ರದಲ್ಲೇ 1,000 ಸಬ್ ಇನ್ಸ್ಪೆಕ್ಟರ್ (PSI) ಹಾಗೂ 8,000 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭವಾಗಲಿದೆ ಎಂದು ಅವರು ಪ್ರಕಟಿಸಿದ್ದಾರೆ.
ಒಟ್ಟು ಹುದ್ದೆಗಳು 9,000 (1,000 ಪಿಎಸ್ಐ + 8,000 ಕಾನ್ಸ್ಟೇಬಲ್). ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಹಣಕಾಸು ಇಲಾಖೆಯಿಂದ ಈಗಾಗಲೇ ಹಸಿರು ನಿಶಾನೆ ದೊರೆತಿದೆ. ದೇವನಹಳ್ಳಿಯಲ್ಲಿ ನೂತನ ಎಸಿಪಿ ಕಚೇರಿ ಹಾಗೂ ಪೊಲೀಸ್ ಠಾಣೆಯ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಸಚಿವರು ಈ ವಿಷಯ ತಿಳಿಸಿದರು.
ನೇಮಕಾತಿ ವಿಳಂಬಕ್ಕೆ ತೆರೆ:
ಹಿಂದಿನ ಪಿಎಸ್ಐ ನೇಮಕಾತಿ ಹಗರಣದ ಗೊಂದಲಗಳು ಈಗ ಬಗೆಹರಿದಿವೆ. ಈ ಕುರಿತು ಮಾತನಾಡಿದ ಸಚಿವರು, “545 ಪಿಎಸ್ಐ ಅಭ್ಯರ್ಥಿಗಳು ಈಗಾಗಲೇ ತರಬೇತಿ ಮುಗಿಸಿ ಸೇವೆಗೆ ನಿಯೋಜನೆಗೊಂಡಿದ್ದಾರೆ. ಈಗ ಹೊಸದಾಗಿ ನೇಮಕಾತಿ ನಡೆಸಲು ಎಲ್ಲ ಸಿದ್ಧತೆಗಳು ಪೂರ್ಣಗೊಂಡಿವೆ,” ಎಂದು ಸ್ಪಷ್ಟಪಡಿಸಿದರು.
ಅಭ್ಯರ್ಥಿಗಳ ಗಮನಕ್ಕೆ:
ಹಣಕಾಸು ಇಲಾಖೆಯ ಒಪ್ಪಿಗೆ ಸಿಕ್ಕಿರುವುದರಿಂದ, ಇಲಾಖೆಯು ಶೀಘ್ರದಲ್ಲೇ ಅಧಿಕೃತ ಅಧಿಸೂಚನೆಯನ್ನು (Notification) ಹೊರಡಿಸಲಿದೆ. ದೈಹಿಕ ಪರೀಕ್ಷೆ ಹಾಗೂ ಲಿಖಿತ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವ ಯುವಕ-ಯುವತಿಯರಿಗೆ ಇದು ಸುವರ್ಣಾವಕಾಶವಾಗಿದೆ.
ಬೆಂಗಳೂರು ನಗರದ ಈಶಾನ್ಯ ವಿಭಾಗ ಉಪ ಪೊಲೀಸ್ ಆಯುಕ್ತರ ಕಚೇರಿ, ದೇವನಹಳ್ಳಿ ಸಹಾಯಕ ಪೊಲೀಸ್ ಆಯುಕ್ತರ ಕಚೇರಿ ಮತ್ತು ದೇವನಹಳ್ಳಿ ಪೊಲೀಸ್ ಠಾಣೆಯ ನೂತನವಾಗಿ ನಿರ್ಮಿಸಲಾದ ಕಚೇರಿ ಕಟ್ಟಡಗಳ ಉದ್ಘಾಟನೆ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆವತಿಯಲ್ಲಿ ಭಾರತೀಯ ಮೀಸಲು ಪಡೆಗೆ ಶಂಕುಸ್ಥಾಪನೆ ನೆರವೇರಿಸಿದೆ.
ಈ ಸಂದರ್ಭದಲ್ಲಿ ಆಹಾರ ಮತ್ತು… pic.twitter.com/W13a9tgmQZ
— Dr. G Parameshwara (@DrParameshwara) April 9, 2026
ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಸೌಲಭ್ಯ ಅಭಿವೃದ್ಧಿ ನಿಗಮ ಹಾಗೂ ಬೆಂಗಳೂರು ನಗರ ಪೊಲೀಸ್ ವತಿಯಿಂದ ಚಿಕ್ಕ ಬಾಣಾವರ ಸಹಾಯಕ ಪೊಲೀಸ್ ಆಯುಕ್ತರ ಕಚೇರಿ, ಚಿಕ್ಕ ಬಾಣಾವರ ಸಂಚಾರ ಪೊಲೀಸ್ ಠಾಣೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ಮತ್ತು ವಾಯವ್ಯ ವಿಭಾಗ ಉಪ ಪೊಲೀಸ್ ಆಯುಕ್ತರ ಕಚೇರಿ, ಚಿಕ್ಕ ಬಾಣಾವರ ಪೊಲೀಸ್ ಠಾಣೆಯ ನೂತನವಾಗಿ… pic.twitter.com/qqhCtCLACe
— Dr. G Parameshwara (@DrParameshwara) April 9, 2026








