Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅಕ್ಷಯ ತೃತೀಯಾ : ಇಂದು ದೇಶಾದ್ಯಂತ ₹20,000 ಕೋಟಿ ಚಿನ್ನಾಭರಣ ಮಾರಾಟದ ನಿರೀಕ್ಷೆ!

20/04/2026 6:22 AM

ಚಿನ್ನದ ಸಾಲ ಪಡೆದವರಿಗೆ ಭಾರೀ ಆಘಾತಕಾರಿ ಸುದ್ದಿ! ಏನು ಅಂತ ಗೊತ್ತಾದ್ರೆನೇ ಟೆನ್ಷನ್‌ ಆಗ್ತೀರಾ!

20/04/2026 6:20 AM

​’100 ಹಡಗುಗಳು, ಒಂದೇ ಗುರಿ’: ಹೋರ್ಮುಜ್ ಬಿಕ್ಕಟ್ಟಿನ ನಡುವೆ ವಿಳಿಂಜಂ ಬಂದರಿಗೆ ಶಶಿ ತರೂರ್ ಜೈಕಾರ!

20/04/2026 6:18 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಸಮಸ್ಯೆಗಾದಂತೆ ಕ್ರಮ ಕೈಗೊಳ್ಳಿ: ಡಿಸಿಗಳಿಗೆ ಸಿಎಂ ಸೂಚನೆ
KARNATAKA

ರಾಜ್ಯದಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಸಮಸ್ಯೆಗಾದಂತೆ ಕ್ರಮ ಕೈಗೊಳ್ಳಿ: ಡಿಸಿಗಳಿಗೆ ಸಿಎಂ ಸೂಚನೆ

By kannadanewsnow0916/04/2026 6:06 PM

ಬೆಂಗಳೂರು: ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಜಿಲ್ಲಾಧಿಕಾರಿಗಳು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸೂಚಿಸಿದ್ದಾರೆ.

ಇಂದು ಅವರು ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳಲ್ಲಿನ ಕುಡಿಯುವ ನೀರು, ಮೇವು ಪೂರೈಕೆ ಹಾಗೂ ಕೃಷಿ ಚಟುವಟಿಕೆಗಳಿಗೆ ಅಗತ್ಯ ತಯಾರಿ ಕುರಿತು ನಡೆದ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಈ ಕೆಳಗಿನಂತೆ ಸಲಹೆ ಸೂಚನೆಗಳನ್ನು ನೀಡಿದರು.

*ಈ ವರ್ಷ ಮುಂಗಾರಿನಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗುವ ಸಾಧ್ಯತೆಯಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆಗಸ್ಟ್ ತಿಂಗಳಲ್ಲಿ ವಾಡಿಕೆ ಮಳೆಯಾಗುವ ಸಾಧ್ಯತೆಯಿದ್ದು, ಸೆಪ್ಟಂಬರ್ ತಿಂಗಳಲ್ಲಿ ಮಳೆ ಕಡಿಮೆ ನಿರೀಕ್ಷಿಸಲಾಗಿದೆ ಎಂದರು.

*ಕುಡಿಯುವ ನೀರಿಗೆ ತೊಂದರೆಯಾದರೆ ಆಯಾ ಜಿಲ್ಲಾಧಿಕಾರಿಗಳೇ ಇದಕ್ಕೆ ಹೊಣೆಯಾಗುತ್ತಾರೆ. ಕಂದಾಯ ಇಲಾಖೆ, ಪಂಚಾಯತ್ ರಾಜ್ ಇಲಾಖೆ ಹಾಗೂ ನಗರಾಭಿವೃದ್ಧಿ ಇಲಾಖೆಗಳು ಪರಸ್ಪರ ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸಬೇಕು.

* ಈ ಬಾರಿ ಎಪ್ರಿಲ್-ಜೂನ್ ಅವಧಿಯಲ್ಲಿ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಬಿಸಿಗಾಳಿ ದಿನಗಳು ಕಂಡು ಬರುವ ಸಾಧ್ಯತೆಯಿದೆ. ಇಂತಹ ಸಂದರ್ಭದಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಹವಾಮಾನ ಇಲಾಖೆಯ ಮುನ್ಸೂಚನೆಗಳನ್ನು ಗಂಭೀರವಾಗಿ ಪರಿಗಣಿಸಬೇಕು.

* ಸಾರ್ವಜನಿಕರಿಗೆ ನೆರಳಿನ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಕುಡಿಯುವ ನೀರು ಪೂರೈಕೆಯನ್ನು ಖಾತ್ರಿಪಡಿಸಲು ಯಾವುದೇ ಅನುದಾನದ ಕೊರತೆಯಿಲ್ಲ. ಜಿಲ್ಲಾಧಿಕಾರಿಗಳ ವರದಿ ಆಧಾರದಲ್ಲಿ ಅಗತ್ಯ ಅನುದಾನವನ್ನು ಒದಗಿಸಲು ಹಣಕಾಸು ಇಲಾಖೆಗೆ ಈಗಾಗಲೇ ಸೂಚನೆ ನೀಡಲಾಗಿದೆ.

* ರಾಜ್ಯದಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಎದುರಿಸಬಹುದಾದ 213 ತಾಲೂಕುಗಳನ್ನು ಹಾಗೂ 2,410 ಗ್ರಾಮ ಪಂಚಾಯತ್ ಗಳನ್ನು ಗುರುತಿಸಲಾಗಿದೆ. ಪ್ರಸ್ತುತ 114 ತಾಲೂಕುಗಳ 598 ಗ್ರಾಮ ಪಂಚಾಯತ್ ಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಿದೆ. 137 ಗ್ರಾಮಗಳಿಗೆ ಒಟ್ಟು 129 ಟ್ಯಾಂಕರ್‌ಗಳ ಮೂಲಕ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. 585 ಖಾಸಗಿ ಬೋರ್ ವೆಲ್ ಗಳನ್ನು ಬಾಡಿಗೆಗೆ ಪಡೆಯಲಾಗಿದ್ದು, ಇದರ ಮೂಲಕ 515 ಗ್ರಾಮಗಳಿಗೆ ನೀರು ಪೂರೈಕೆ ಮಾಡಲಾಗುತ್ತಿದೆ.

* ಕಲಬುರಗಿ ಜಿಲ್ಲೆಯ 147 ಗ್ರಾಮ ಪಂಚಾಯತ್, ಬಾಗಲಕೋಟೆ 114, ಬೆಳಗಾವಿಯ 127, ಚಿಕ್ಕಮಗಳೂರಿನ 115, ಹಾವೇರಿಯ 138, ಮಂಡ್ಯ 130, ತುಮಕೂರಿನ 141 ಹಾಗೂ ಉತ್ತರಕನ್ನಡ ಜಿಲ್ಲೆಯ 125 ಗ್ರಾಮ ಪಂಚಾಯತ್ ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಬಹುದೆಂದು ಗುರುತಿಸಲಾಗಿದೆ.

* ಪ್ರಸ್ತುತ 27 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಿದ್ದು, 95 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಬಹುದು ಎಂದು ಗುರುತಿಸಲಾಗಿದೆ. ಒಟ್ಟು 145 ವಾರ್ಡ್ ಗಳಿಗೆ 57 ಟ್ಯಾಂಕರ್‌ಗಳ ಮೂಲಕ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದ್ದು, ಬಾಡಿಗೆಗೆ 22 ಕೊಳವೆ ಬಾವಿಗಳನ್ನು ಪಡೆಯಲಾಗಿದೆ.

* ಅನಿವಾರ್ಯ ಸಂದರ್ಭಗಳಲ್ಲಿ ಮಾತ್ರ ಟ್ಯಾಂಕರ್ ನೀರು ಪೂರೈಕೆ ಮಾಡಬೇಕು. ಖಾಸಗಿ ಬೋರ್ ವೆಲ್ ಗಳನ್ನು ಬಾಡಿಗೆ ಪಡೆಯುವುದಕ್ಕೆ ಆದ್ಯತೆ ನೀಡಬೇಕು. ಅಗತ್ಯ ಸಂದರ್ಭದಲ್ಲಿ ಕೊಳವೆ ಬಾವಿ ಕೊರೆಯಬಹುದಾಗಿದೆ.

* ರಾಜ್ಯದ ಪ್ರಮುಖ 14 ಜಲಾಶಯಗಳಲ್ಲಿ ಪ್ರಸ್ತುತ 321.93 ಟಿ.ಎಂ.ಸಿ ನೀರು ಲಭ್ಯವಿದ್ದು, ಇದು ಒಟ್ಟು ಸಾಮರ್ಥ್ಯದ ಶೇ.36ರಷ್ಟಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 330.35 ಟಿ.ಎಂ.ಸಿ ನೀರು ಲಭ್ಯವಿತ್ತು. ಪ್ರಸುತ ಕುಡಿಯುವ ನೀರಿಗೆ ಸಾಕಾಗುವಷ್ಟು ನೀರು ಜಲಾಶಯಗಳಲ್ಲಿ ಲಭ್ಯವಿದೆ.

* ಮಳೆಗಾಲ ವಿಳಂಬವಾಗಿ ಆರಂಭವಾಗುವ ಸಾಧ್ಯತೆಯಿರುವುದರಿಂದ ಜುಲೈ ಮಧ್ಯದವರೆಗೂ ಕುಡಿಯುವ ನೀರಿಗಾಗಿ ಜಲಾಶಯಗಳಲ್ಲಿ ನೀರಿನ ಲಭ್ಯತೆಯನ್ನು ಖಾತ್ರಿಪಡಿಸಬೇಕು.

* ನೀರಾವರಿಗಿಂತ ಕುಡಿಯುವ ನೀರಿನ ಪೂರೈಕೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಜಲಾಶಯಗಳಲ್ಲಿ ನೀರಿನ ಸೋರಿಕೆಯನ್ನು ಗುರುತಿಸಿ ದುರಸ್ತಿಗೆ ಕ್ರಮ ಕೈಗೊಳ್ಳಬೇಕು.

* ಕುಡಿಯುವ ನೀರಿನ ಕುರಿತಾಗಿ ಸಾರ್ವಜನಿಕರ ಅಹವಾಲುಗಳಿಗೆ ತುರ್ತಾಗಿ ಸ್ಪಂದಿಸಬೇಕು. ಇದಕ್ಕಾಗಿ ತಾಲೂಕು ಹಾಗೂ ವಾರ್ಡ್ ಮಟ್ಟದಲ್ಲಿ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಬೇಕು. ಜಿಲ್ಲಾ ಮಟ್ಟದ ಕಾರ್ಯಪಡೆ ಸಕ್ರಿಯವಾಗಿ ಕಾರ್ಯ ನಿರ್ವಹಿಸಬೇಕು.

* ಎಲ್ಲಾ ಆರ್. ಒ ಘಟಕಗಳು 24/7 ನಿರಂತರ ವಿದ್ಯುತ್ ಸರಬರಾಜಿನೊಂದಿಗೆ ಕಾರ್ಯ ನಿರ್ವಹಿಸುವುದನ್ನು ಖಾತ್ರಿಪಡಿಸಬೇಕು. ಆರ್ ಒ ಘಟಕಗಳ ತಕ್ಷಣದ ದುರಸ್ತಿ ಮತ್ತು ಕುಡಿಯುವ ನೀರಿನ ಪೂರೈಕೆಯಲ್ಲಿನ ಸಮಸ್ಯೆಗಳನ್ನು ಬಗೆಹರಿಸಲು ತಾಲೂಕು ಮಟ್ಟದಲ್ಲಿ ತಂಡಗಳನ್ನು ನಿಯೋಜಿಸಬೇಕು.

* ಮಧ್ಯಪ್ರಾಚ್ಯದಲ್ಲಿನ ಯುದ್ಧದ ಪರಿಸ್ಥಿತಿಯಿಂದಾಗಿ ಈ ಬಾರಿ ರಸಗೊಬ್ಬರ ಪೂರೈಕೆಯಲ್ಲಿ ಅಡಚಣೆ ಉಂಟಾಗುವ ಸಾಧ್ಯತೆಯಿದೆ. ವ್ಯಾಪಾರಿಗಳು ರಸಗೊಬ್ಬರವನ್ನು ಹೆಚ್ಚಿನ ಪ್ರಮಾಣದಲ್ಲಿ ಖರೀದಿಸಿ ದಾಸ್ತಾನು ಇರಿಸುವುದನ್ನು ತಪ್ಪಿಸಲು ಕ್ರಮ ಕೈಗೊಳ್ಳಬೇಕು. ರೈತರಿಗೆ ಸೂಕ್ತ ಸಮಯದಲ್ಲಿ ರಸಗೊಬ್ಬರ ಲಭ್ಯತೆಯನ್ನು ಖಾತ್ರಿಪಡಿಸಲು ಕ್ರಮ ಕೈಗೊಳ್ಳಬೇಕು. ಯೂರಿಯಾ, ಡಿಎಪಿ ಸರಿಯಾಗಿ ವಿತರಣೆಯಾಗುವಂತೆ ನೋಡಿಕೊಳ್ಳಬೇಕು. ಬೇರೆ ರಾಜ್ಯಗಳಿಗೆ ರಸಗೊಬ್ಬರ ಸಾಗಾಟ ಮಾಡುವುದನ್ನು ನಿಯಂತ್ರಿಸಬೇಕು. ಇದಕ್ಕಾಗಿ ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆಯನ್ನು ಬಿಗಿಗೊಳಿಸಬೇಕು.

* ಕಳೆದ ಎರಡು ವರ್ಷಗಳಲ್ಲಿ ಉತ್ತಮ ಮಳೆಯಾಗಿರುವುದರಿಂದ ಮೇವಿನ ಕೊರತೆ ಸಧ್ಯಕ್ಕೆ ಇರುವುದಿಲ್ಲ. ಆದರೆ ಈ ಕುರಿತು ನಿರ್ಲಕ್ಷ್ಯ ವಹಿಸದೆ ಮೇವಿನ ಲಭ್ಯತೆಯನ್ನು ಖಾತ್ರಿಪಡಿಸಬೇಕು
* ಎಲ್ಲಾ ತಾಲೂಕುಗಳಲ್ಲಿ ಕುಡಿಯುವ ನೀರಿನ ಕುರಿತಾದ ಟಾಸ್ಕ್‌ ಪೋರ್ಸ್‌ ಸಭೆ ನಡೆಸಿ ವರದಿ ಸಲ್ಲಿಸಬೇಕು.

* ಕಲುಷಿತ ನೀರು ಪೂರೈಕೆಯಾಗಿ ಆರೋಗ್ಯ ಸಮಸ್ಯೆಯಾಗದಂತೆ ಎಲ್ಲಾ ಜಿಲ್ಲೆಗಳಲ್ಲಿ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಬೇಕು. ಈ ಕುರಿತು ಈಗಾಗಲೇ ಮಾರ್ಗಸೂಚಿಗಳನ್ನು ಜಾರಿಗೊಳಿಸಲಾಗಿದ್ದು, ಕಲುಷಿತ ನೀರಿನಿಂದ ಸಮಸ್ಯೆಯಾಗದಂತೆ ನೋಡಿಕೊಳ್ಳುವುದು ಜಿಲ್ಲಾಧಿಕಾರಿಗಳ ಜವಾಬ್ದಾರಿಯಾಗಿದೆ.

* ಹಾವೇರಿ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಈಗಾಗಲೇ ಕಳೆದ ವರ್ಷಕ್ಕಿಂತ ಹೆಚ್ಚಿನ ಪ್ರಮಾಣದ ರಸಗೊಬ್ಬರ ಮಾರಾಟವಾಗಿದ್ದು, ಇದಕ್ಕೆ ಕಾರಣವೇನು? ಎಂಬ ಮಾಹಿತಿ ಪಡೆಯಬೇಕು. ರಸಗೊಬ್ಬರ ಮಾರಾಟದ ಮೇಲೆ ನಿರಂತರ ನಿಗಾ ವಹಿಸಿ, ಅರ್ಹ ರೈತರಿಗೆ ರಸಗೊಬ್ಬರ ಕೊರತೆಯಾಗದಂತೆ ಎಚ್ಚರಿಕೆ ವಹಿಸಬೇಕು.

* ಕುಡಿಯುವ ನೀರಿನ ಯೋಜನೆಗಳಿಗೆ ವಿದ್ಯುತ್ ಸಂಪರ್ಕ ಒದಗಿಸಲು ಆದ್ಯತೆ ನೀಡಬೇಕು. ಪಂಚಾಯತ್ ರಾಜ್ ಮತ್ತು ಇಂಧನ ಇಲಾಖೆ ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು. ವಿದ್ಯುತ್ ಸಂಪರ್ಕ ಕಲ್ಪಿಸಲು ಠೇವಣಿಗಾಗಿ ಕಾಯಬಾರದು.

ರೈಲು ಪ್ರಯಾಣಿಕರ ಗಮನಕ್ಕೆ: ಏ.24ರಿಂದ ಚಿಕ್ಕಮಗಳೂರು-ಯಶವಂತಪುರ ರೈಲುಗಳ ವೇಳಾಪಟ್ಟಿ ಪರಿಷ್ಕರಣೆ

ಭಾರತಕ್ಕೆ ಕಾದಿದೆ ಬೆಂಕಿಯ ಮಳೆ: ಮುಂದಿನ ಎರಡು ವಾರ ವಿಶ್ವದ ‘ಅತ್ಯಂತ ಬಿಸಿಲು’ ಪೀಡಿತ ಪ್ರದೇಶವಾಗಲಿದೆ ಇಂಡಿಯಾ!

Share. Facebook Twitter LinkedIn WhatsApp Email

Related Posts

BIG NEWS : ಏ.24ಕ್ಕೆ `ಕರ್ನಾಟಕ SSLC ಪರೀಕ್ಷೆ ಫಲಿತಾಂಶ’ ಪ್ರಕಟ ಡೌಟ್.!

20/04/2026 6:14 AM1 Min Read

JOB ALERT : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ರಾಜ್ಯ ಕೃಷಿ ಇಲಾಖೆಯಲ್ಲಿ 258 ಹುದ್ದೆಗಳಿಗೆ ಅರ್ಜಿ ಆಹ್ವಾನ

20/04/2026 6:11 AM2 Mins Read

BIG NEWS : ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಮುಖ್ಯ ಶಿಕ್ಷಕರ ಹುದ್ದೆ `ಬಡ್ತಿ’ : ಸರ್ಕಾರದಿಂದ ಮಹತ್ವದ ಆದೇಶ.!

20/04/2026 6:09 AM2 Mins Read
Recent News

ಅಕ್ಷಯ ತೃತೀಯಾ : ಇಂದು ದೇಶಾದ್ಯಂತ ₹20,000 ಕೋಟಿ ಚಿನ್ನಾಭರಣ ಮಾರಾಟದ ನಿರೀಕ್ಷೆ!

20/04/2026 6:22 AM

ಚಿನ್ನದ ಸಾಲ ಪಡೆದವರಿಗೆ ಭಾರೀ ಆಘಾತಕಾರಿ ಸುದ್ದಿ! ಏನು ಅಂತ ಗೊತ್ತಾದ್ರೆನೇ ಟೆನ್ಷನ್‌ ಆಗ್ತೀರಾ!

20/04/2026 6:20 AM

​’100 ಹಡಗುಗಳು, ಒಂದೇ ಗುರಿ’: ಹೋರ್ಮುಜ್ ಬಿಕ್ಕಟ್ಟಿನ ನಡುವೆ ವಿಳಿಂಜಂ ಬಂದರಿಗೆ ಶಶಿ ತರೂರ್ ಜೈಕಾರ!

20/04/2026 6:18 AM

ಅಮೆರಿಕದಲ್ಲಿ ನಡುಕ ಹುಟ್ಟಿಸಿದ ಹತ್ಯಾಕಾಂಡ: ಎಂಟು ಮಕ್ಕಳ ಬಲಿ ಪಡೆದ ತಂದೆ; ಆರೋಪಿ ಪೊಲೀಸ್ ಗುಂಡಿಗೆ ಬಲಿ

20/04/2026 6:15 AM
State News
KARNATAKA

BIG NEWS : ಏ.24ಕ್ಕೆ `ಕರ್ನಾಟಕ SSLC ಪರೀಕ್ಷೆ ಫಲಿತಾಂಶ’ ಪ್ರಕಟ ಡೌಟ್.!

By kannadanewsnow5720/04/2026 6:14 AM KARNATAKA 1 Min Read

ಬೆಂಗಳೂರು: ರಾಜ್ಯದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ ಫಲಿತಾಂಶ ಪ್ರಕಟಣೆಯು ಈಗ ಕಾನೂನು ಸಂಘರ್ಷದ ಸುಳಿಗೆ ಸಿಲುಕಿದೆ. ಈ ಮೊದಲು…

JOB ALERT : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ರಾಜ್ಯ ಕೃಷಿ ಇಲಾಖೆಯಲ್ಲಿ 258 ಹುದ್ದೆಗಳಿಗೆ ಅರ್ಜಿ ಆಹ್ವಾನ

20/04/2026 6:11 AM

BIG NEWS : ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಮುಖ್ಯ ಶಿಕ್ಷಕರ ಹುದ್ದೆ `ಬಡ್ತಿ’ : ಸರ್ಕಾರದಿಂದ ಮಹತ್ವದ ಆದೇಶ.!

20/04/2026 6:09 AM

ರಾಜ್ಯ ಆರೋಗ್ಯ ಇಲಾಖೆ ನೌಕರರಿಗೆ ಗುಡ್ ನ್ಯೂಸ್ : 2026ನೇ ಸಾಲಿನ ವರ್ಗಾವಣೆಗೆ ವೇಳಾಪಟ್ಟಿ ಪ್ರಕಟ

20/04/2026 6:08 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.