ಕಲಬುರ್ಗಿ : ರಾಜ್ಯದಲ್ಲಿ ರಣ ಬಿಸಿಲಿಗೆ ಜನತೆ ಹೈರಾಣಾಗಿದ್ದಾರೆ. ಬಿಸಿಲಿನ ತಾಪಮಾನದಿಂದ ರಕ್ಷಿಸಿಕೊಳ್ಳಲು ಜನ ನಾನಾ ರೀತಿ ಪ್ರಯತ್ನ ಮಾಡುತ್ತಿದ್ದಾರೆ. ಸೂರ್ಯನ ಬಿಸಿಲಿನ ಹೋಡೆತಕ್ಕೆ ಜನ ತತ್ತರಿಸಿದ್ದಾರೆ. ಇದೀಗ ಕಲ್ಬುರ್ಗಿಯಲ್ಲಿ ಪೊಲೀಸ್ ಶ್ವಾನಗಳಿಗೆ ಪೊಲೀಸ್ ಸಿಬ್ಬಂದಿ ಏರ್ ಕೂಲರ್ ವ್ಯವಸ್ಥೆ ಮಾಡಿದ್ದಾರೆ.
ಹೌದು ಕಲ್ಬುರ್ಗಿ ಸೇರಿದಂತೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಿಸಿಲಿನ ತಾಪಮಾನ 41 ಡಿಗ್ರಿ ಸೆಲ್ಸಿಯಸ್ ಗು ಹೆಚ್ಚಾಗಿ ಇದ್ದು ಇದೀಗ ಕಲ್ಬುರ್ಗಿಯಲ್ಲಿ ಪೊಲೀಸರು ಶ್ವಾನಗಳಿಗೆ ಏರ್ ಕೂಲರ್ ವ್ಯವಸ್ಥೆ ಮಾಡಿದ್ದಾರೆ. ಇನ್ನು ಬೀದರ್ ಜಿಲ್ಲೆಯಲ್ಲಿ ಮನೆಯ ಮೇಲ್ಚಾವಣಿಯಲ್ಲಿ ತಾಡಪತ್ರಿ ಹಾಕಿ ನೀರು ಸುರಿದು ಜನ ಮೇಲ್ಚಾವಣಿ ತಂಪು ಮಾಡುತ್ತಿದ್ದಾರೆ. ಅಲ್ಲದೆ ಬಿಸಿಲಿನ ತಾಪಮಾನಕ್ಕೆ ಇಂದು ಬೀದರ್ ಜಿಲ್ಲೆಯ ಕಮಲಾಪುರದಲ್ಲಿ ಉತ್ತರ ಪ್ರದೇಶ ಮೂಲದ 20 ವರ್ಷದ ಯುವಕನೊಬ್ಬ ಸಾವನ್ನಪ್ಪಿದ್ದಾನೆ.








