Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಸಚಿವ ಡಿ.ಸುಧಾಕರ್ ಆರೋಗ್ಯ ಸ್ಥಿತಿ ಗಂಭೀರ: ಕಿಮ್ಸ್ ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ಭೇಟಿ

25/04/2026 3:27 PM

ALERT : ಸಾರ್ವಜನಿಕರೇ ಗಮನಿಸಿ : ಈ ಸರಳ ಕ್ರಮಗಳನ್ನು ಅನುಸರಿಸಿ ಬಿಸಿಲಿನ ತಾಪದಿಂದ ಕಾಪಾಡಿಕೊಳ್ಳಿ.!

25/04/2026 3:14 PM

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಕೈಗೆಟಕುವ ದರದಲ್ಲಿ ಆರೋಗ್ಯ ಸೇವೆ ನೀಡಲು `ಕಾರ್ಡಿಯಾಕ್ ಹಬ್ ಘಟಕ’ ಸ್ಥಾಪನೆ.!

25/04/2026 3:02 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ALERT : ಸಾರ್ವಜನಿಕರೇ ಗಮನಿಸಿ : ಈ ಸರಳ ಕ್ರಮಗಳನ್ನು ಅನುಸರಿಸಿ ಬಿಸಿಲಿನ ತಾಪದಿಂದ ಕಾಪಾಡಿಕೊಳ್ಳಿ.!
KARNATAKA

ALERT : ಸಾರ್ವಜನಿಕರೇ ಗಮನಿಸಿ : ಈ ಸರಳ ಕ್ರಮಗಳನ್ನು ಅನುಸರಿಸಿ ಬಿಸಿಲಿನ ತಾಪದಿಂದ ಕಾಪಾಡಿಕೊಳ್ಳಿ.!

By kannadanewsnow5725/04/2026 3:14 PM

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ತಾಪಮಾನ ಏರಿಕೆಯಾಗುತ್ತಿದ್ದು, ಬಿಸಿಲಿನ ಬೇಗೆಯಿಂದ ಸಾರ್ವಜನಿಕರ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಪ್ರಮುಖ ಮುನ್ನೆಚ್ಚರಿಕೆ ಕ್ರಮಗಳನ್ನು ಹಾಗೂ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.

ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಈ ಬಾರಿ ಬಿಸಿಲು ತೀವ್ರಗೊಳ್ಳುವ ಸಾಧ್ಯತೆ ಇರುವುದರಿಂದ, ಸಾರ್ವಜನಿಕರು ಕೆಳಕಂಡ ಸರಳ ಕ್ರಮಗಳನ್ನು ಅನುಸರಿಸುವ ಮೂಲಕ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಇಲಾಖೆ ಮನವಿ ಮಾಡಿದೆ.

ಇಲಾಖೆ ಬಿಡುಗಡೆ ಮಾಡಿರುವ ಪ್ರಮುಖ ಮಾರ್ಗಸೂಚಿಗಳು:
ಬಿಸಿಲಿಗೆ ಹೋಗುವುದನ್ನು ತಪ್ಪಿಸಿ: ಮಧ್ಯಾಹ್ನ 12 ಗಂಟೆಯಿಂದ 3 ಗಂಟೆಯವರೆಗೆ ಬಿಸಿಲಿನ ತಾಪ ತೀವ್ರವಾಗಿರುತ್ತದೆ. ಈ ಸಮಯದಲ್ಲಿ ಅನಗತ್ಯವಾಗಿ ಮನೆಯಿಂದ ಹೊರಬರುವುದನ್ನು ತಪ್ಪಿಸಿ.

ಹೆಚ್ಚು ನೀರು ಕುಡಿಯಿರಿ: ಬಾಯಾರಿಕೆ ಇಲ್ಲದಿದ್ದರೂ ನಿಯಮಿತವಾಗಿ ನೀರು ಕುಡಿಯಿರಿ. ಪ್ರಯಾಣದ ವೇಳೆಯಲ್ಲಿ ನೀರಿನ ಬಾಟಲಿಯನ್ನು ಸದಾ ಜೊತೆಯಲ್ಲಿಟ್ಟುಕೊಳ್ಳಿ.

ಹತ್ತಿ ಬಟ್ಟೆಗಳ ಬಳಕೆ: ದೇಹದ ಉಷ್ಣತೆಯನ್ನು ಸಮತೋಲನದಲ್ಲಿಡಲು ಸಡಿಲವಾದ ಮತ್ತು ಹಗುರವಾದ ಹತ್ತಿ ಬಟ್ಟೆಗಳನ್ನು ಧರಿಸಿ. ಹೊರಹೋಗುವಾಗ ಛತ್ರಿ, ಟೋಪಿ ಮತ್ತು ತಂಪು ಕನ್ನಡಕಗಳನ್ನು ಬಳಸಿ.

ಆಹಾರ ಕ್ರಮ: ಎಳನೀರು, ಹಣ್ಣಿನ ರಸ, ಮಜ್ಜಿಗೆ ಹಾಗೂ ಒ.ಆರ್.ಎಸ್ (ORS) ದ್ರಾವಣಗಳಂತಹ ಪಾನೀಯಗಳನ್ನು ಸೇವಿಸಿ ದೇಹವನ್ನು ತಂಪಾಗಿಸಿ. ತಾಜಾ ಹಣ್ಣು, ತರಕಾರಿ ಮತ್ತು ಸೊಪ್ಪುಗಳನ್ನು ಹೆಚ್ಚಾಗಿ ಬಳಸಿ.

ಇವುಗಳಿಂದ ದೂರವಿರಿ: ಕಾಫಿ, ಟೀ, ಮದ್ಯಪಾನ ಹಾಗೂ ಅತಿಯಾದ ಸಕ್ಕರೆ ಅಂಶವಿರುವ ತಂಪು ಪಾನೀಯಗಳ ಸೇವನೆ ದೇಹಕ್ಕೆ ಹಾನಿಕಾರಕ, ಆದ್ದರಿಂದ ಇವುಗಳನ್ನು ಆದಷ್ಟು ಕಡಿಮೆ ಮಾಡಿ.

ದೈಹಿಕ ಶ್ರಮ ತಗ್ಗಿಸಿ: ಬಿಸಿಲಿನಲ್ಲಿ ಅತಿಯಾದ ದೈಹಿಕ ಶ್ರಮದ ಕೆಲಸಗಳನ್ನು ಮಾಡಬೇಡಿ, ಇದು ದೇಹವನ್ನು ಬೇಗನೆ ಸುಸ್ತಾಗಿಸುತ್ತದೆ.

ಮನೆಯೊಳಗೆ ಗಾಳಿಯಾಡಲಿ: ಮನೆಯೊಳಗೆ ತಾಜಾ ಗಾಳಿ ಬರುವಂತೆ ಕಿಟಕಿಗಳನ್ನು ತೆರೆದಿಡಿ ಮತ್ತು ಬಿಸಿಲಿನ ನೇರ ಕಿರಣಗಳನ್ನು ತಡೆಯಲು ಪರದೆಗಳನ್ನು ಬಳಸಿ.

ವಿಶೇಷ ಕಾಳಜಿ ವಹಿಸಿ: ಮಕ್ಕಳು, ಗರ್ಭಿಣಿಯರು ಹಾಗೂ ಹಿರಿಯ ನಾಗರಿಕರ ಬಗ್ಗೆ ಹೆಚ್ಚಿನ ನಿಗಾ ಇರಲಿ. ವಾಹನಗಳನ್ನು ನಿಲ್ಲಿಸಿದಾಗ ಅದರೊಳಗೆ ಮಕ್ಕಳು ಅಥವಾ ಸಾಕುಪ್ರಾಣಿಗಳನ್ನು ಕೂರಿಸಬೇಡಿ.

ಆರೋಗ್ಯದ ಮೇಲೆ ನಿಗಾ ಇರಲಿ: ತಲೆಸುತ್ತು, ವಾಕರಿಕೆ, ಅತಿಯಾದ ಬೆವರುವಿಕೆ ಅಥವಾ ಸ್ನಾಯು ಸೆಳೆತದಂತಹ ಸಮಸ್ಯೆಗಳು ಕಂಡುಬಂದಲ್ಲಿ ತಕ್ಷಣ ವಿಶ್ರಾಂತಿ ಪಡೆಯಿರಿ ಮತ್ತು ಹತ್ತಿರದ ವೈದ್ಯರನ್ನು ಸಂಪರ್ಕಿಸಿ.

“ಬಿಸಿಲಿನಲ್ಲಿ ಮುನ್ನೆಚ್ಚರಿಕೆ ವಹಿಸಿ, ಆರೋಗ್ಯ ಕಾಪಾಡಿಕೊಳ್ಳಿ” ಎಂದು ಇಲಾಖೆಯು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ALERT: Attention public: Follow these simple steps to protect yourself from the heat of the sun!
Share. Facebook Twitter LinkedIn WhatsApp Email

Related Posts

BREAKING: ಸಚಿವ ಡಿ.ಸುಧಾಕರ್ ಆರೋಗ್ಯ ಸ್ಥಿತಿ ಗಂಭೀರ: ಕಿಮ್ಸ್ ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ಭೇಟಿ

25/04/2026 3:27 PM1 Min Read

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಕೈಗೆಟಕುವ ದರದಲ್ಲಿ ಆರೋಗ್ಯ ಸೇವೆ ನೀಡಲು `ಕಾರ್ಡಿಯಾಕ್ ಹಬ್ ಘಟಕ’ ಸ್ಥಾಪನೆ.!

25/04/2026 3:02 PM1 Min Read

BREAKING : ಡಾ.ರಾಜ್ ಕುಮಾರ್ ಸಮಾಧಿ ಜಾಗದ ಬಗ್ಗೆ ವಿವಾದಾತ್ಮಕ ಹೇಳಿಕೆ : ನಟ ಚೇತನ್ ಅಹಿಂಸ ವಿರುದ್ಧ ದೂರು ದಾಖಲು.!

25/04/2026 2:27 PM1 Min Read
Recent News

BREAKING: ಸಚಿವ ಡಿ.ಸುಧಾಕರ್ ಆರೋಗ್ಯ ಸ್ಥಿತಿ ಗಂಭೀರ: ಕಿಮ್ಸ್ ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ಭೇಟಿ

25/04/2026 3:27 PM

ALERT : ಸಾರ್ವಜನಿಕರೇ ಗಮನಿಸಿ : ಈ ಸರಳ ಕ್ರಮಗಳನ್ನು ಅನುಸರಿಸಿ ಬಿಸಿಲಿನ ತಾಪದಿಂದ ಕಾಪಾಡಿಕೊಳ್ಳಿ.!

25/04/2026 3:14 PM

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಕೈಗೆಟಕುವ ದರದಲ್ಲಿ ಆರೋಗ್ಯ ಸೇವೆ ನೀಡಲು `ಕಾರ್ಡಿಯಾಕ್ ಹಬ್ ಘಟಕ’ ಸ್ಥಾಪನೆ.!

25/04/2026 3:02 PM

ವಿಶ್ವ ಮಲೇರಿಯಾ ದಿನ 2026: ಮಲೇರಿಯಾ ಮತ್ತು ಡೆಂಗ್ಯೂ ಲಕ್ಷಣಗಳು ಒಂದೇ ಇರಬಹುದು.. ಆದರೆ ನಿರ್ಲಕ್ಷ್ಯ ಬೇಡ!

25/04/2026 2:57 PM
State News
KARNATAKA

BREAKING: ಸಚಿವ ಡಿ.ಸುಧಾಕರ್ ಆರೋಗ್ಯ ಸ್ಥಿತಿ ಗಂಭೀರ: ಕಿಮ್ಸ್ ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ಭೇಟಿ

By kannadanewsnow0925/04/2026 3:27 PM KARNATAKA 1 Min Read

ಬೆಂಗಳೂರು: ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ…

ALERT : ಸಾರ್ವಜನಿಕರೇ ಗಮನಿಸಿ : ಈ ಸರಳ ಕ್ರಮಗಳನ್ನು ಅನುಸರಿಸಿ ಬಿಸಿಲಿನ ತಾಪದಿಂದ ಕಾಪಾಡಿಕೊಳ್ಳಿ.!

25/04/2026 3:14 PM

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಕೈಗೆಟಕುವ ದರದಲ್ಲಿ ಆರೋಗ್ಯ ಸೇವೆ ನೀಡಲು `ಕಾರ್ಡಿಯಾಕ್ ಹಬ್ ಘಟಕ’ ಸ್ಥಾಪನೆ.!

25/04/2026 3:02 PM

BREAKING : ಡಾ.ರಾಜ್ ಕುಮಾರ್ ಸಮಾಧಿ ಜಾಗದ ಬಗ್ಗೆ ವಿವಾದಾತ್ಮಕ ಹೇಳಿಕೆ : ನಟ ಚೇತನ್ ಅಹಿಂಸ ವಿರುದ್ಧ ದೂರು ದಾಖಲು.!

25/04/2026 2:27 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.