ಬೆಂಗಳೂರು : ಶೃಂಗೇರಿ ವಿಧಾನಸಭಾ ಚುನಾವಣೆಯಲ್ಲಿ ಅಂಚೆ ಮತ ಎಣಿಕೆಯಲ್ಲಿ ಟ್ವಿಸ್ಟ್ ಸಿಕ್ಕಿದ್ದು, ಬಿಜೆಪಿಯ ಡಿ.ಎನ್ ಜೀವರಾಜ್ ಶಾಸಕರ ಪ್ರಮಾಣ ಪತ್ರ ನೀಡಲಾಗಿದೆ. ಇನ್ನು ಈ ವಿಚಾರವಾಗಿ ಶೃಂಗೇರಿ ಕ್ಷೇತ್ರದ ಮರು ಎಣಿಕೆ ಫಲಿತಾಂಶ ಇಡೀ ದೇಶಕ್ಕೆ ಮಾರಕವಾಗಿದೆ. ಶೃಂಗೇರಿ ಚುನಾವಣೆಯಲ್ಲಿ ನಡೆದಿರೋದು ಷಡ್ಯಂತ್ರ, ಸರ್ಕಾರದ ಮಟ್ಟದಲ್ಲಿ ತನಿಖೆ ನಡೆಸುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.
ಬೆಂಗಳೂರಲ್ಲಿ KPCC ಕಚೇರಿಯಲ್ಲಿ ಮಾತನಾಡಿದ ಅವರು, ಬಿಜೆಪಿಯಲ್ಲಿ ಇಷ್ಟರಮಟ್ಟಿಗೆ ಕ್ರಿಮಿನಲ್ ಗಳಿದ್ದರೆಂದು ಅನ್ನಿಸಿರಲಿಲ್ಲ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸೋಲು ಗೆಲುವು ಸಾಮಾನ್ಯ. ಆದರೆ ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿರುವುದು ಷಡ್ಯಂತ್ರ. ಈ ಬಗ್ಗೆ ನಾವು ಸರ್ಕಾರದ ಮಟ್ಟದಲ್ಲಿ ತನಿಖೆ ಮಾಡಿಸುತ್ತೇವೆ. ನಮಗೆ ಅನುಮಾನ ಇದ್ದರೆ ಸುಪ್ರೀಂ ಕೋರ್ಟ್ ಗೆ ಹೋಗುತ್ತಿದ್ದೆವು.
ಶೃಂಗೇರಿಯಲ್ಲಿ ಮತ ಎಣಿಕೆ ಬಾಕ್ಸ್ ಗಳನ್ನು ತೆರೆಯಲಾಗಿದೆ. ನಮಗೆ ಹಾಕಿದ್ದ ಬ್ಯಾಲೆಟ್ ಪೇಪರ್ ಗಳ ಮೇಲೆ ಮತ್ತೊಂದು ಗುರುತು.
ಎಲ್ಲ ಬಂಡಲ್ ಮಾನ್ಯ ಎಂದ ಮೇಲೆ ಈ ತಿದ್ದುಪಡಿ ಹೇಗಾಯಿತು. ಹಿಂದೆ ಫಲಿತಾಂಶ ಸರಿಯಿದೆ ಎಂದು ಎಲ್ಲರು ಸಹಿ ಮಾಡಿದ್ದಾರೆ. ಚುನಾವಣ ಆಯೋಗದ ಬಳಿಯೂ ದಾಖಲೆ ಇದೆ. ಒಬ್ಬರಿಗೆ ಮತ ಬಿದ್ದ ಕಡೆ ಇನ್ನೊಬ್ಬರಿಗೂ ಗುರುತು ಹಾಕಲಾಗಿದೆ. ಇದರ ಬಗ್ಗೆ ದೂರನ್ನು ಸಹ ನೀಡಲಾಗಿದೆ. ಜಯನಗರ ಸೌಮ್ಯರೆಡ್ಡಿ 12 ಮತಗಳ ಅಂತರದಲ್ಲಿ ಸೋತಿದ್ದಾರೆ. ಆ ಕ್ಷೇತ್ರದಲ್ಲಿ ಇನ್ನೂ ಎಣಿಕೆಯಾಗಿಲ್ಲ. ಇದು ಹೇಗೆ ಎಣಿಕೆಯಾಗುತ್ತೆ? ಎಂದು ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದರು.







