Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್: ಮೇ 9ಕ್ಕೆ ನೂತನ ಸಿಎಂ ಪದಗ್ರಹಣ

06/05/2026 3:55 PM

BREAKING : ಪಶ್ಚಿಮಬಂಗಾಳ ಬಿಜೆಪಿ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್ : ಮೇ 9ಕ್ಕೆ ನೂತನ ಸಿಎಂ ಪದಗ್ರಹಣ

06/05/2026 3:55 PM

BIG BREAKING: ನಟ ಚೇತನ್ ಅಹಿಂಸಾ ವಿರುದ್ಧ FIR ದಾಖಲು

06/05/2026 3:50 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG BREAKING: ನಟ ಚೇತನ್ ಅಹಿಂಸಾ ವಿರುದ್ಧ FIR ದಾಖಲು
KARNATAKA

BIG BREAKING: ನಟ ಚೇತನ್ ಅಹಿಂಸಾ ವಿರುದ್ಧ FIR ದಾಖಲು

By kannadanewsnow0906/05/2026 3:50 PM

ಬೆಂಗಳೂರು:  ಡಾ.ರಾಜ್‌ಕುಮಾರ್ ಅವರ ಸಮಾಧಿ ಜಾಗದ ಕುರಿತಾಗಿ ಶುರುವಾಗಿದ್ದ ವಿವಾದ ಇದೀಗ ಹೊಸ ತಿರುವು ಪಡೆದುಕೊಂಡಿದ್ದು, ನಟ ಚೇತನ್ ಅಹಿಂಸಾ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಚಿತ್ರರಂಗದ ಗಣ್ಯರು ಹಾಗೂ ಅಭಿಮಾನಿಗಳ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದ ಈ ಪ್ರಕರಣವು ಇದೀಗ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ.

ವಿವಾದದ ಮೂಲ ಮತ್ತು ಚೇತನ್ ಪೋಸ್ಟ್

ಏಪ್ರಿಲ್ 24ರಂದು ಡಾ.ರಾಜ್‌ಕುಮಾರ್ ಅವರ ಹುಟ್ಟುಹಬ್ಬದ ದಿನದಂದು ನಟ ಚೇತನ್ ಅಹಿಂಸಾ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದರು. ಅದರಲ್ಲಿ ಅವರು, ಡಾ.ರಾಜ್‌ಕುಮಾರ್ ಸಮಾಧಿಗೆ 2.5 ಎಕರೆ ಜಾಗವನ್ನು ನೀಡಿರುವುದು ಸರಿಯೇ ಎಂದು ಪ್ರಶ್ನಿಸಿದ್ದರು. 21ನೇ ಶತಮಾನದಲ್ಲಿ ಭೂಮಿಯೇ ಪ್ರಮುಖ ಹೋರಾಟದ ವಿಷಯವಾಗಿದ್ದು, ಸರ್ಕಾರ ಸಾರ್ವಜನಿಕರ ಉಪಯೋಗಕ್ಕಾಗಿ ಅದನ್ನು ಬಳಸಬೇಕು. ಮತಗಳ ಲಾಭದ ಉದ್ದೇಶದಿಂದ ಈ ರೀತಿ ಭೂಮಿ ಹಂಚಿಕೆ ಮಾಡಬಾರದು ಎಂದು ಅವರು ಅಭಿಪ್ರಾಯಪಟ್ಟಿದ್ದರು. ಚೇತನ್ ಅವರ ಈ ಹೇಳಿಕೆಯು ಡಾ.ರಾಜ್‌ಕುಮಾರ್ ಅಭಿಮಾನಿಗಳಲ್ಲಿ ತೀವ್ರ ಅಸಮಾಧಾನವನ್ನು ಉಂಟುಮಾಡಿತ್ತು.

ಪೊಲೀಸ್ ಠಾಣೆ ಮೆಟ್ಟಿಲೇರಿದ ವಿವಾದ

ಚೇತನ್ ಅವರ ಪೋಸ್ಟ್‌ನಿಂದ ರೊಚ್ಚಿಗೆದ್ದ ಅಭಿಮಾನಿಗಳು ಮತ್ತು ಚಿತ್ರರಂಗದ ಪ್ರಮುಖರು ಅವರ ವಿರುದ್ಧ ತೀವ್ರವಾಗಿ ಕಿಡಿಕಾರಿದ್ದರು. ಹಿರಿಯ ನಿರ್ಮಾಪಕ ಸಾರಾ ಗೋವಿಂದು, ಫಿಲ್ಮ್ ಚೇಂಬರ್ ಅಧ್ಯಕ್ಷೆ ಹಾಗೂ ನಟಿ ಜಯಮಾಲ ಮತ್ತು ಹಿರಿಯ ನಟ ಸುಂದರ್ ರಾಜ್ ಅವರು ಚೇತನ್ ಹೇಳಿಕೆಯನ್ನು ಖಂಡಿಸಿದ್ದರು. ಅಲ್ಲದೆ, ಡಾ.ರಾಜ್‌ಕುಮಾರ್ ಸೇನೆಯು ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿತ್ತು. ಸಾರಾ ಗೋವಿಂದು ಸೇರಿದಂತೆ ಅನೇಕ ಅಭಿಮಾನಿಗಳು ಚೇತನ್ ಅವರ ನಿವಾಸಕ್ಕೂ ಮುತ್ತಿಗೆ ಹಾಕಿದ್ದರು.

ಇದೇ ವೇಳೆ, ಚೇತನ್ ಅಹಿಂಸಾ ಅವರು ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ನಿರ್ಮಾಪಕ ಸಾರಾ ಗೋವಿಂದು ವಿರುದ್ಧ ದೂರು ನೀಡಿದ್ದರು. ಈ ದೂರಿನನ್ವಯ ಪೊಲೀಸರು ಎಫ್‌ಐಆರ್ ಕೂಡ ದಾಖಲಿಸಿದ್ದರು. ಆದರೆ, ಇದೀಗ ಸಾರಾ ಗೋವಿಂದು ಕೂಡ ನಟ ಚೇತನ್ ವಿರುದ್ಧ ಪ್ರತಿ ದೂರು ದಾಖಲಿಸಿದ್ದು, ಪೊಲೀಸರು ಚೇತನ್ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

ಪೊಲೀಸರ ತನಿಖೆ ಮತ್ತು ಚೇತನ್ ಕ್ಷಮೆಯಾಚನೆ

ಪ್ರಸ್ತುತ ಪೊಲೀಸರು ಎರಡೂ ಕಡೆಯ ದೂರುಗಳ ಆಧಾರದ ಮೇಲೆ ವಿಡಿಯೋಗಳನ್ನು ಸಂಗ್ರಹಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಅಗತ್ಯ ಸಾಕ್ಷ್ಯಗಳನ್ನು ಕಲೆಹಾಕಿದ ನಂತರ ನಟ ಚೇತನ್ ಅವರಿಗೆ ನೋಟಿಸ್ ನೀಡಲು ಪೊಲೀಸರು ಚಿಂತನೆ ನಡೆಸಿದ್ದು, ತದನಂತರ ಅವರ ಹೇಳಿಕೆಯನ್ನು ದಾಖಲಿಸಿಕೊಳ್ಳಲಿದ್ದಾರೆ.

ಮತ್ತೊಂದೆಡೆ, ವಿವಾದ ತಾರಕಕ್ಕೇರುತ್ತಿದ್ದಂತೆ ನಟ ಚೇತನ್ ಅಹಿಂಸಾ ಸಾರ್ವಜನಿಕವಾಗಿ ಕ್ಷಮೆ ಕೋರಿದ್ದರು. ತಮ್ಮ ಹೇಳಿಕೆಯಿಂದ ಯಾರದಾದರೂ ಮನಸ್ಸಿಗೆ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುವುದಾಗಿ ಮತ್ತು ಯಾರಿಗೂ ನೋವು ಮಾಡುವ ಉದ್ದೇಶ ತಮಗಿರಲಿಲ್ಲ ಎಂದು ಸ್ಪಷ್ಟನೆ ನೀಡಿದ್ದರು. ಅಲ್ಲದೆ, ತಾವೂ ಕೂಡ ಡಾ.ರಾಜ್‌ಕುಮಾರ್ ಅವರ ಅಭಿಮಾನಿ ಎಂದು ಅವರು ಹೇಳಿಕೊಂಡಿದ್ದರು.

Share. Facebook Twitter LinkedIn WhatsApp Email

Related Posts

BIG NEWS : ವಚನಾನಂದ ಶ್ರೀಗಳಿಗೆ ಕೋರ್ಟ್ ನಿಂದ ನಿರೀಕ್ಷಣಾ ಜಾಮೀನು ಮಂಜೂರು

06/05/2026 3:49 PM1 Min Read

SHOCKING : ಬೆಂಗಳೂರಲ್ಲಿ ಮನೆ ಬಾಡಿಗೆಗೆ ಇದ್ದ ಯುವತಿ ಸ್ನಾನ ಮಾಡುವಾಗ ವಿಡಿಯೋ ಮಾಡಿದ ಕಾಮುಕ!

06/05/2026 3:16 PM2 Mins Read

BREAKING : ದಕ್ಷಿಣಕನ್ನಡದಲ್ಲಿ ಟ್ಯಾಂಕ‌ರ್, ಬೈಕ್ ನಡುವೆ ಭೀಕರ ಅಪಘಾತ : ಇಬ್ಬರು ಯುವಕರು ಸಾವು!

06/05/2026 3:08 PM1 Min Read
Recent News

BREAKING: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್: ಮೇ 9ಕ್ಕೆ ನೂತನ ಸಿಎಂ ಪದಗ್ರಹಣ

06/05/2026 3:55 PM

BREAKING : ಪಶ್ಚಿಮಬಂಗಾಳ ಬಿಜೆಪಿ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್ : ಮೇ 9ಕ್ಕೆ ನೂತನ ಸಿಎಂ ಪದಗ್ರಹಣ

06/05/2026 3:55 PM

BIG BREAKING: ನಟ ಚೇತನ್ ಅಹಿಂಸಾ ವಿರುದ್ಧ FIR ದಾಖಲು

06/05/2026 3:50 PM

BIG NEWS : ವಚನಾನಂದ ಶ್ರೀಗಳಿಗೆ ಕೋರ್ಟ್ ನಿಂದ ನಿರೀಕ್ಷಣಾ ಜಾಮೀನು ಮಂಜೂರು

06/05/2026 3:49 PM
State News
KARNATAKA

BIG BREAKING: ನಟ ಚೇತನ್ ಅಹಿಂಸಾ ವಿರುದ್ಧ FIR ದಾಖಲು

By kannadanewsnow0906/05/2026 3:50 PM KARNATAKA 2 Mins Read

ಬೆಂಗಳೂರು:  ಡಾ.ರಾಜ್‌ಕುಮಾರ್ ಅವರ ಸಮಾಧಿ ಜಾಗದ ಕುರಿತಾಗಿ ಶುರುವಾಗಿದ್ದ ವಿವಾದ ಇದೀಗ ಹೊಸ ತಿರುವು ಪಡೆದುಕೊಂಡಿದ್ದು, ನಟ ಚೇತನ್ ಅಹಿಂಸಾ…

BIG NEWS : ವಚನಾನಂದ ಶ್ರೀಗಳಿಗೆ ಕೋರ್ಟ್ ನಿಂದ ನಿರೀಕ್ಷಣಾ ಜಾಮೀನು ಮಂಜೂರು

06/05/2026 3:49 PM

SHOCKING : ಬೆಂಗಳೂರಲ್ಲಿ ಮನೆ ಬಾಡಿಗೆಗೆ ಇದ್ದ ಯುವತಿ ಸ್ನಾನ ಮಾಡುವಾಗ ವಿಡಿಯೋ ಮಾಡಿದ ಕಾಮುಕ!

06/05/2026 3:16 PM

BREAKING : ದಕ್ಷಿಣಕನ್ನಡದಲ್ಲಿ ಟ್ಯಾಂಕ‌ರ್, ಬೈಕ್ ನಡುವೆ ಭೀಕರ ಅಪಘಾತ : ಇಬ್ಬರು ಯುವಕರು ಸಾವು!

06/05/2026 3:08 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.