Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಬೆಂಗಳೂರಿನಿಂದ IPL ಫೈನಲ್ ಪಂದ್ಯ ಸ್ಥಳಾಂತರ ವಿಚಾರ : ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದೇನು?

JOB ALERT : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಭಾರತೀಯ ರೈಲ್ವೆ ಇಲಾಖೆಯಲ್ಲಿ 11,127 ಹುದ್ದೆಗಳಿಗೆ ಅರ್ಜಿ ಆಹ್ವಾನ

BREAKING : ಯೋಗೇಶ್ ಗೌಡ ಕೊಲೆ ಕೇಸ್ : ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ ಮೇ.26ಕ್ಕೆ ಮುಂದೂಡಿದ ಹೈಕೋರ್ಟ್!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸ್ಕಾರ್ಪಿಯೋ ಅಡ್ಡಗಟ್ಟಿ ಶೂಟೌಟ್: ಸುವೇಂದು ಅಧಿಕಾರಿ ಆಪ್ತ ಸಹಾಯಕನ ಹತ್ಯೆಯಾಗಿದ್ದು ಹೇಗೆ? ಇಲ್ಲಿದೆ ಮಾಹಿತಿ
INDIA

ಸ್ಕಾರ್ಪಿಯೋ ಅಡ್ಡಗಟ್ಟಿ ಶೂಟೌಟ್: ಸುವೇಂದು ಅಧಿಕಾರಿ ಆಪ್ತ ಸಹಾಯಕನ ಹತ್ಯೆಯಾಗಿದ್ದು ಹೇಗೆ? ಇಲ್ಲಿದೆ ಮಾಹಿತಿ

By kannadanewsnow57

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಐತಿಹಾಸಿಕ ಗೆಲುವಿನ ಬೆನ್ನಲ್ಲೇ ರಕ್ತಪಾತ ಮುಂದುವರಿದಿದೆ. ಬಿಜೆಪಿ ನಾಯಕ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ (PA) ಚಂದ್ರನಾಥ್ ರಥ್ ಅವರನ್ನು ಬುಧವಾರ ರಾತ್ರಿ ಹಾಡಹಗಲೇ ಎಂಬಂತೆ ಗುಂಡಿಕ್ಕಿ ಕೊಲೆ ಮಾಡಲಾಗಿದೆ.

ಈ ಹತ್ಯೆಯು ಅತ್ಯಂತ ವ್ಯವಸ್ಥಿತವಾಗಿ ನಡೆದಿದ್ದು, ವೃತ್ತಿಪರ ಹಂತಕರ (Contract Killers) ಕೈವಾಡವಿರುವ ಶಂಕೆ ವ್ಯಕ್ತವಾಗಿದೆ.

ಹತ್ಯೆ ನಡೆದಿದ್ದು ಹೇಗೆ? (ಘಟನಾ ಸರಣಿ)

ಪೊಲೀಸ್ ಮೂಲಗಳ ಪ್ರಕಾರ, ಚಂದ್ರನಾಥ್ ರಥ್ ಅವರು ತಮ್ಮ ಸ್ವಗ್ರಾಮದಿಂದ ಕೆಲಸ ಮುಗಿಸಿ ಸ್ಕಾರ್ಪಿಯೋ ವಾಹನದಲ್ಲಿ ಮನೆಗೆ ಮರಳುತ್ತಿದ್ದರು. ಈ ವೇಳೆ ನಡೆದ ಘಟನೆಯ ವಿವರ ಹೀಗಿದೆ:

ಹಿಂಬಾಲಿಸಿದ ಬಿಳಿ ಕಾರು: ಹಂತಕರು ಒಂದು ಬಿಳಿ ಬಣ್ಣದ ಕಾರಿನಲ್ಲಿ ರಥ್ ಅವರ ಸ್ಕಾರ್ಪಿಯೋವನ್ನು ಹಿಂಬಾಲಿಸುತ್ತಿದ್ದರು.

ತಡೆಹಿಡಿದು ಗುಂಡಿನ ಮಳೆ: ಮಧ್ಯಮಗ್ರಾಮ್‌ನ ದೋಹಾರಿಯಾ ಎಂಬಲ್ಲಿ ಮನೆಯಿಂದ ಕೇವಲ 200 ಮೀಟರ್ ದೂರವಿರುವಾಗ, ಹಂತಕರ ಕಾರು ರಥ್ ಅವರ ವಾಹನವನ್ನು ಅಡ್ಡಗಟ್ಟಿ ನಿಲ್ಲಿಸಿತು.

ಬೈಕ್ ಸವಾರರ ಎಂಟ್ರಿ: ಸ್ಕಾರ್ಪಿಯೋ ನಿಧಾನವಾಗುತ್ತಿದ್ದಂತೆ ಕಾರಿನಿಂದ ಇಳಿದ ಹಂತಕರು, ಅಲ್ಲೇ ಸಿದ್ಧವಾಗಿದ್ದ ಬೈಕ್‌ಗಳನ್ನು ಏರಿ ಸುಮಾರು 16 ಸುತ್ತು ಗುಂಡು ಹಾರಿಸಿದ್ದಾರೆ.

ಆಸ್ಟ್ರಿಯನ್ ಗನ್ ಬಳಕೆ: ಹತ್ಯೆಗಾಗಿ ಅತ್ಯಾಧುನಿಕ ಆಸ್ಟ್ರಿಯನ್ ನಿರ್ಮಿತ ‘ಗ್ಲಾಕ್ 43ಎಕ್ಸ್’ (Glock 43x) ಪಿಸ್ತೂಲನ್ನು ಬಳಸಲಾಗಿದೆ. ರಥ್ ಅವರ ದೇಹಕ್ಕೆ ಮೂರು ಗುಂಡುಗಳು ತಗುಲಿದ್ದು, ಸ್ಥಳದಲ್ಲೇ ಅವರು ಕೊನೆಯುಸಿರೆಳೆದಿದ್ದಾರೆ.

ನಕಲಿ ನಂಬರ್ ಪ್ಲೇಟ್ ಮತ್ತು ತನಿಖೆ
ಹಂತಕರು ಕೃತ್ಯಕ್ಕೆ ಬಳಸಿದ ಬಿಳಿ ಬಣ್ಣದ ಕಾರನ್ನು (WB74AK2270) ಸ್ಥಳದಲ್ಲೇ ಬಿಟ್ಟು ಬೈಕ್ ಮೂಲಕ ಗಲ್ಲಿಗಳಲ್ಲಿ ಪರಾರಿಯಾಗಿದ್ದಾರೆ. ಈ ಕಾರಿನ ತನಿಖೆ ನಡೆಸಿದ ಪೊಲೀಸರಿಗೆ ಶಾಕಿಂಗ್ ಮಾಹಿತಿ ಲಭ್ಯವಾಗಿದೆ:

ನಕಲಿ ನಂಬರ್: ಕಾರಿನ ನಂಬರ್ ಪ್ಲೇಟ್ ನಕಲಿಯಾಗಿದ್ದು, ತಾಂತ್ರಿಕವಾಗಿ ವಾಹನವನ್ನು ಮಾರ್ಪಡಿಸಲಾಗಿತ್ತು.

ಸಿಲಿಗುರಿ ಲಿಂಕ್: ದಾಖಲೆಗಳ ಪ್ರಕಾರ ವಾಹನವು ಸಿಲಿಗುರಿಯ ವಿಲಿಯಂ ಜೋಸೆಫ್ ಎಂಬುವವರಿಗೆ ಸೇರಿದ್ದಾಗಿದೆ. ಆದರೆ ಅವರು, “ನನ್ನ ಕಾರು ನನ್ನ ಬಳಿಯೇ ಇದೆ” ಎಂದು ತಿಳಿಸಿದ್ದಾರೆ. ಇದರಿಂದಾಗಿ ಹಂತಕರು ವ್ಯವಸ್ಥಿತವಾಗಿ ನಕಲಿ ದಾಖಲೆ ಬಳಸಿರುವುದು ಖಚಿತವಾಗಿದೆ.

ಪೂರ್ವಯೋಜಿತ ಸಂಚು: ಹತ್ಯೆಗೂ ಮುನ್ನ ಹಂತಕರು ಆ ಪ್ರದೇಶದಲ್ಲಿ ರೆಕ್ಕಿ (ಪರಿಶೀಲನೆ) ನಡೆಸಿದ್ದರು ಎಂಬುದು ಸಿಸಿಟಿವಿ ದೃಶ್ಯಾವಳಿಗಳಿಂದ ತಿಳಿದುಬಂದಿದೆ.

ರಾಜಕೀಯ ಸಂಘರ್ಷ
ಈ ಹತ್ಯೆಯು ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಕಿಚ್ಚು ಹಚ್ಚಿದೆ. ಇದೊಂದು “ಸಂಚಿತ ಹತ್ಯೆ” ಎಂದು ಬಿಜೆಪಿ ಆರೋಪಿಸಿದೆ. ತೃಣಮೂಲ ಕಾಂಗ್ರೆಸ್ (TMC) ಚುನಾವಣಾ ಸೋಲಿನ ನಂತರ ಭಯದ ವಾತಾವರಣ ನಿರ್ಮಿಸಲು ಈ ಕೃತ್ಯ ಎಸಗಿದೆ ಎಂದು ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯ ಪೊಲೀಸರು ಸುಪಾರಿ ಕಿಲ್ಲರ್‌ಗಳ ಪತ್ತೆಗಾಗಿ ವಿಶೇಷ ತಂಡಗಳನ್ನು ರಚಿಸಿ ಸಿಲಿಗುರಿ ಸೇರಿದಂತೆ ವಿವಿಧೆಡೆ ತನಿಖೆ ಚುರುಕುಗೊಳಿಸಿದ್ದಾರೆ.

Scorpio ambush shootout: How was Suvendu Adhikari's personal assistant killed? Here's the information
Share. Facebook Twitter LinkedIn WhatsApp Email

Related Posts

JOB ALERT : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಭಾರತೀಯ ರೈಲ್ವೆ ಇಲಾಖೆಯಲ್ಲಿ 11,127 ಹುದ್ದೆಗಳಿಗೆ ಅರ್ಜಿ ಆಹ್ವಾನ

2 Mins Read

SHOCKING : ನಿನ್ನ ರೇಟ್ ಎಷ್ಟು? ಬರ್ತೀಯ? : ಕಾಮುಕ ಮಾತು ಕೇಳಿ ಬೆಚ್ಚಿದ ಮಹಿಳಾ IPS ಅಧಿಕಾರಿ | Video Viral

1 Min Read

BREAKING : ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಶಾಸಕಿ ರತ್ನ ದೇಬನಾಥ್ ನಿವಾಸದ ಬಳಿ ಬಾಂಬ್ ಸ್ಫೋಟ : ಐವರು ಬಿಜೆಪಿ ಕಾರ್ಯಕರ್ತರಿಗೆ ಗಾಯ

1 Min Read
Recent News

BIG NEWS : ಬೆಂಗಳೂರಿನಿಂದ IPL ಫೈನಲ್ ಪಂದ್ಯ ಸ್ಥಳಾಂತರ ವಿಚಾರ : ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದೇನು?

JOB ALERT : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಭಾರತೀಯ ರೈಲ್ವೆ ಇಲಾಖೆಯಲ್ಲಿ 11,127 ಹುದ್ದೆಗಳಿಗೆ ಅರ್ಜಿ ಆಹ್ವಾನ

BREAKING : ಯೋಗೇಶ್ ಗೌಡ ಕೊಲೆ ಕೇಸ್ : ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ ಮೇ.26ಕ್ಕೆ ಮುಂದೂಡಿದ ಹೈಕೋರ್ಟ್!

GOOD NEWS : ರಾಜ್ಯದಲ್ಲಿ ಭೋವಿ’ ಸೇರಿದಂತೆ ವಿವಿಧ ಸಮುದಾಯಗಳ ಅಭಿವೃದ್ಧಿ ನಿಗಮಗಳ ಸಾಲ ಮನ್ನಾ : CM ಸಿದ್ದರಾಮಯ್ಯ ಮಾಹಿತಿ

State News
KARNATAKA

BIG NEWS : ಬೆಂಗಳೂರಿನಿಂದ IPL ಫೈನಲ್ ಪಂದ್ಯ ಸ್ಥಳಾಂತರ ವಿಚಾರ : ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದೇನು?

By kannadanewsnow05 KARNATAKA 1 Min Read

ಬೆಂಗಳೂರು : ಬೆಂಗಳೂರಿನ IPL ಫೈನಲ್ ಪಂದ್ಯವನ್ನು ಅಹ್ಮದಾಬಾದ್ ಗೆ ಶಿಫ್ಟ್ ಮಾಡಿದ್ದ ವಿಚಾರಕ್ಕೆ ಸಂಬಂಧಪಟ್ಟಂತೆ ಗೃಹ ಸಚಿವ ಜಿ.ಪರಮೇಶ್ವರ್…

BREAKING : ಯೋಗೇಶ್ ಗೌಡ ಕೊಲೆ ಕೇಸ್ : ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ ಮೇ.26ಕ್ಕೆ ಮುಂದೂಡಿದ ಹೈಕೋರ್ಟ್!

GOOD NEWS : ರಾಜ್ಯದಲ್ಲಿ ಭೋವಿ’ ಸೇರಿದಂತೆ ವಿವಿಧ ಸಮುದಾಯಗಳ ಅಭಿವೃದ್ಧಿ ನಿಗಮಗಳ ಸಾಲ ಮನ್ನಾ : CM ಸಿದ್ದರಾಮಯ್ಯ ಮಾಹಿತಿ

ALERT : ಹೊಸ ಬಟ್ಟೆಗಳನ್ನು ತೊಳೆಯದೆ ಧರಿಸುತ್ತಿದ್ದೀರಾ? ಹಾಗಿದ್ದರೆ ಈ ಅಪಾಯಗಳನ್ನು ತಪ್ಪದೇ ತಿಳಿಯಿರಿ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.