ಬೆಂಗಳೂರು: ಶಾಲೆಗಳಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಲು ಅವಕಾಶ ನೀಡುವುದಾದರೆ, ಹಿಂದೂ ವಿದ್ಯಾರ್ಥಿಗಳೂ ಕೂಡ ಕೇಸರಿ ಶಾಲು ಧರಿಸಲು ಸರ್ಕಾರ ಅನುಮತಿ ನೀಡಬೇಕು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹಿಸಿದ್ದಾರೆ.
ಹಿಜಾಬ್ ವಿಚಾರವಾಗಿ ರಾಜ್ಯ ಸರ್ಕಾರದ ಇತ್ತೀಚಿನ ನಿಲುವನ್ನು ಕಟುವಾಗಿ ಟೀಕಿಸಿರುವ ಅವರು, ಇದು ಕೇವಲ ಅಲ್ಪಸಂಖ್ಯಾತರ ಓಲೈಕೆ ಮತ್ತು ಮತ ಬ್ಯಾಂಕ್ ಭದ್ರಪಡಿಸಿಕೊಳ್ಳುವ ತಂತ್ರ ಎಂದು ಆರೋಪಿಸಿದ್ದಾರೆ.
ಯತ್ನಾಳ್ ಟ್ವೀಟ್ ನಲ್ಲಿ ಏನಿದೆ?
ಸರ್ವೋಚ್ಛ ನ್ಯಾಯಾಲಯದಲ್ಲಿ ಶಾಲಾ ಮಕ್ಕಳು ಹಿಜಾಬ್ ಧರಿಸಬಹುದೇ ಇಲ್ಲವೇ ಎಂಬುವ ವಿಷಯದ ಪ್ರಕರಣ ಬಾಕಿ ಇರುವ ಸಂದರ್ಭದಲ್ಲಿ ಶಾಲಾ ಮಕ್ಕಳು ತಮ್ಮ ಸಮವಸ್ತ್ರದೊಂದಿಗೆ ಹಿಜಾಬ್ ಕೂಡ ಧರಿಸಬಹುದು ಎಂದು ಸುತ್ತೋಲೆ ಹೊರಡಿಸಿರುವ ಕರ್ನಾಟಕ ಸರ್ಕಾರದ ನಿಲುವು ಅಲ್ಪಸಂಖ್ಯಾತರ ಮತ ಬ್ಯಾಂಕ್ ಅನ್ನು ಭದ್ರಪಡಿಸಿಕೊಳ್ಳುವ ಮತ್ತೊಂದು ಪ್ರಯತ್ನ.
ಸರ್ವೋಚ್ಚ ನ್ಯಾಯಾಲಯದಲ್ಲಿ ಸದರಿ ಪ್ರಕರಣ sub-judice ಇರುವ ಸಂದರ್ಭದಲ್ಲೇ ಸಿದ್ದರಾಮಯ್ಯ ಸಂಪುಟದ ಮುಕುಟಮಣಿಗಳು ಹಿಜಾಬ್ ಧರಿಸಿ ಶಾಲೆಗೆ ಹೋಗಬಹುದು ಎಂಬ ಸುತ್ತೋಲೆ ಹೊರಡಿಸಿದ್ದಾರೆ.
ಸರ್ಕಾರದ ತರ್ಕಾನುಸಾರವೇ ಮುಸಲ್ಮಾನ ಹೆಣ್ಣು ಮಕ್ಕಳಿಗೆ ಹಿಜಾಬ್ ಧರಿಸಬಹುದಾದರೆ ಹಿಂದೂಗಳಿಗೆ ಕೇಸರಿ ಶಾಲನ್ನು ಧರಿಸಲು ಅವಕಾಶ ನೀಡಬೇಕು ಹಾಗೂ ಹಿಂದೂ ವಿದ್ಯಾರ್ಥಿ ಸಮೂಹಕ್ಕೆ ನಾನೆ ಸ್ವತಃ ಕೇಸರಿ ಶಾಲನ್ನು ಕೊಡುವ ವ್ಯವಸ್ಥೆಯನ್ನು ಮಾಡುತ್ತೇನೆ. ಮುಸಲ್ಮಾನ ಹೆಣ್ಣುಮಕ್ಕಳು ಹಿಜಾಬ್ ಧರಿಸಿಬಹುದಾದರೆ, ಎಲ್ಲ ಶಾಲಾ ಕಾಲೇಜುಗಳಲ್ಲಿ ಗಣಪತಿಯ ಹಾಗೂ ಸರಸ್ವತಿಯ ಮೂರ್ತಿಯನ್ನಿಟ್ಟು ನಿತ್ಯ ಪೂಜೆ ಮಾಡುವ ವ್ಯವಸ್ಥೆಯನ್ನು ಕಲ್ಪಿಸುತ್ತೇವೆ.
ಪಶ್ಚಿಮ ಬಂಗಾಲ, ಅಸ್ಸಾಂ ನಲ್ಲಿ ಆದ ಹಿಂದೂ ಮತಗಳ ಕ್ರೋಡೀಕರಣದಿಂದ ಕಾಂಗ್ರೆಸ್ ಪಕ್ಷದ ಧುರೀಣರ ನಿದ್ದೆಗೆಡಿಸಿದೆ. ಶಾಲಾ ಮೂಲಸೌಕರ್ಯ, ಶಿಕ್ಷಣದ ಗುಣಮಟ್ಟ, ಶಿಕ್ಷಕರ ನೇಮಕಾತಿ, ಸಕಾಲದಲ್ಲಿ ಶೂ-ಸಾಕ್ಸ್, ಪಠ್ಯಪುಸ್ತಕ ವಿತರಿಸಬೇಕಾಗಿದ್ದ ಸರ್ಕಾರ ತನ್ನ ಆದ್ಯತೆಗಳನ್ನು ಬದಿಗಿಟ್ಟು ಹಿಜಾಬ್ ಧರಿಸುವುದಕ್ಕೆ ಅನುಮತಿ ನೀಡಿರುವುದು ಇವರ ಖುರ್ಚಿಯ ಕಾಲುಗಳು ನಡುಗುತ್ತಿವೆ ಎಂಬುದಕ್ಕೆ ಸಾಕ್ಷಿ. ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನೀತಿಗೆ ಯುವ ಮತದಾರರು ಬುದ್ದಿ ಕಲಿಸುವುದು ನಿಶ್ಚಿತ.
ಸರ್ವೋಚ್ಛ ನ್ಯಾಯಾಲಯದಲ್ಲಿ ಶಾಲಾ ಮಕ್ಕಳು ಹಿಜಾಬ್ ಧರಿಸಬಹುದೇ ಇಲ್ಲವೇ ಎಂಬುವ ವಿಷಯದ ಪ್ರಕರಣ ಬಾಕಿ ಇರುವ ಸಂದರ್ಭದಲ್ಲಿ ಶಾಲಾ ಮಕ್ಕಳು ತಮ್ಮ ಸಮವಸ್ತ್ರದೊಂದಿಗೆ ಹಿಜಾಬ್ ಕೂಡ ಧರಿಸಬಹುದು ಎಂದು ಸುತ್ತೋಲೆ ಹೊರಡಿಸಿರುವ ಕರ್ನಾಟಕ ಸರ್ಕಾರದ ನಿಲುವು ಅಲ್ಪಸಂಖ್ಯಾತರ ಮತ ಬ್ಯಾಂಕ್ ಅನ್ನು ಭದ್ರಪಡಿಸಿಕೊಳ್ಳುವ ಮತ್ತೊಂದು ಪ್ರಯತ್ನ.
ಸರ್ವೋಚ್ಚ… pic.twitter.com/1hn6vSQ2yV
— Basanagouda R Patil (Yatnal) (@BasanagoudaBJP) May 13, 2026








