Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ‘NEET’ ಹಗರಣ : ದೆಹಲಿಯಲ್ಲಿ ‘CBI’ ಅಧಿಕಾರಿಗಳಿಂದ ಉಪನ್ಯಾಸಕಿ ಅರೆಸ್ಟ್, ಬಂಧಿತರ ಸಂಖ್ಯೆ 9ಕ್ಕೆ ಏರಿಕೆ

ಹಿಜಾಬ್ ನಿರ್ಧಾರ ಹಿಂಪಡೆಯಿರಿ, ಬೇಸೂರು ಅಣುಸ್ಥಾವರ ಕೈಬಿಡಿ: ಸಾಗರದಲ್ಲಿ ಬಿಜೆಪಿ ಪ್ರತಿಭಟಿಸಿ ಆಗ್ರಹ

BREAKING: ನೀಟ್ ಹಗರಣದಲ್ಲಿ ಸಿಬಿಐ ಭರ್ಜರಿ ಬೇಟೆ: ಪ್ರಶ್ನೆ ಪತ್ರಿಕೆ ಸಿದ್ಧಪಡಿಸುವ ತಂಡದಲ್ಲಿದ್ದ ಉಪನ್ಯಾಸಕಿಯೇ ಸಿಬಿಐ ವಶಕ್ಕೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಹಿಜಾಬ್ ನಿರ್ಧಾರ ಹಿಂಪಡೆಯಿರಿ, ಬೇಸೂರು ಅಣುಸ್ಥಾವರ ಕೈಬಿಡಿ: ಸಾಗರದಲ್ಲಿ ಬಿಜೆಪಿ ಪ್ರತಿಭಟಿಸಿ ಆಗ್ರಹ
KARNATAKA

ಹಿಜಾಬ್ ನಿರ್ಧಾರ ಹಿಂಪಡೆಯಿರಿ, ಬೇಸೂರು ಅಣುಸ್ಥಾವರ ಕೈಬಿಡಿ: ಸಾಗರದಲ್ಲಿ ಬಿಜೆಪಿ ಪ್ರತಿಭಟಿಸಿ ಆಗ್ರಹ

By ವಸಂತ ಬಿ ಈಶ್ವರಗೆರೆ

ಶಿವಮೊಗ್ಗ: ರಾಜ್ಯ ಸರ್ಕಾರ ಶಾಲಾ-ಕಾಲೇಜುಗಳಲ್ಲಿ ಹಿಜಾಬ್‌ಗೆ ಅವಕಾಶ ಕೊಟ್ಟಿರುವುದನ್ನು ಖಂಡಿಸಿ, ತಾಲ್ಲೂಕಿನ ಬೇಸೂರು ಅಣು ವಿದ್ಯುತ್ ಸ್ಥಾವರ ಸ್ಥಾಪನೆಗೆ ಭೂಮಿ ಮಂಜೂರು ಮಾಡದಂತೆ ಒತ್ತಾಯಿಸಿ ಹಾಗೂ ಸಾಗರ ನಗರದ ಮಾರ್ಕೇಟ್ ರಸ್ತೆ ಅಗಲೀಕರಣ ಕಾಮಗಾರಿಯನ್ನು ತಕ್ಷಣವೇ ಆರಂಭಿಸುವಂತೆ ಆಗ್ರಹಿಸಿ ಇಂದು ಬಿಜೆಪಿ ವತಿಯಿಂದ ಸಾಗರದ ಉಪವಿಭಾಗಾಧಿಕಾರಿಗಳ ಕಚೇರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಬಿಜೆಪಿ ಪ್ರಮುಖರು ಮತ್ತು ಕಾರ್ಯಕರ್ತರ ನಿಯೋಗವು ಸರ್ಕಾರದ ವಿವಿಧ ನೀತಿಗಳು ಮತ್ತು ಸ್ಥಳೀಯ ಸಮಸ್ಯೆಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿ ಈ ಜಂಟಿ ಮನವಿಯನ್ನು ಹಸ್ತಾಂತರಿಸಿತು.

‘ಹಿಜಾಬ್ ಅನುಮತಿ ಸಂವಿಧಾನ ವಿರೋಧಿ ಮತ್ತು ತುಷ್ಟೀಕರಣದ ರಾಜಕಾರಣ’

ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಬಾರದು ಎಂದು ರಾಜ್ಯ ಉಚ್ಚ ನ್ಯಾಯಾಲಯ ಈ ಹಿಂದೆ ಸ್ಪಷ್ಟ ತೀರ್ಪು ನೀಡಿದೆ. ಈ ಆದೇಶವನ್ನು ಪ್ರಶ್ನಿಸಿ ಸದ್ಯ ಸರ್ವೋಚ್ಚ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ಇಂತಹ ಸೂಕ್ಷ್ಮ ಹಂತದಲ್ಲಿ ಕರ್ನಾಟಕ ಸರ್ಕಾರವು ಒಂದು ವರ್ಗದ ತುಷ್ಟೀಕರಣಕ್ಕಾಗಿ ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅನುಮತಿ ನೀಡಿರುವುದು ಖಂಡನೀಯ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಶಾಲೆಗಳಲ್ಲಿ ಧರ್ಮದ ಆಧಾರದ ಮೇಲೆ ಮಕ್ಕಳನ್ನು ವಿಭಜಿಸುವುದು ಸಂವಿಧಾನ ವಿರೋಧಿ ನಡೆಯಾಗಿದೆ. ಇದು ವಿದ್ಯಾರ್ಥಿಗಳ ಕೋಮಲ ಮನಸ್ಸಿನ ಮೇಲೆ ಅತ್ಯಂತ ನಕಾರಾತ್ಮಕ ಪರಿಣಾಮ ಬೀರುತ್ತದೆ. ಆದ್ದರಿಂದ ರಾಜ್ಯ ಸರ್ಕಾರವು ಹಿಜಾಬ್ ಧರಿಸಲು ನೀಡಿರುವ ತನ್ನ ನಿರ್ಣಯವನ್ನು ತಕ್ಷಣವೇ ಹಿಂಪಡೆಯಬೇಕು ಎಂದು ಬಿಜೆಪಿ ಮುಖಂಡರು ಒತ್ತಾಯಿಸಿದರು.

ಬೇಸೂರು ಅಣು ವಿದ್ಯುತ್ ಸ್ಥಾವರಕ್ಕೆ ತೀವ್ರ ವಿರೋಧ

ಸಾಗರ ತಾಲ್ಲೂಕಿನ ಬೇಸೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಅಣು ವಿದ್ಯುತ್ ಸ್ಥಾವರ ಸ್ಥಾಪನೆ ಮಾಡಲು ಈಗಾಗಲೇ ಭೂಮಿಯ ಲಭ್ಯತೆ ಕುರಿತು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮಾಹಿತಿ ಸಲ್ಲಿಸಲಾಗಿದೆ. ಈ ಯೋಜನೆಗೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದೆ.

ಕೈಗಾ ಅಣು ವಿದ್ಯುತ್ ಸ್ಥಾವರದ ಸುತ್ತಮುತ್ತಲಿನ ಜನರಲ್ಲಿ ಕ್ಯಾನ್ಸರ್, ಹೃದಯ ಸಂಬಂಧಿ ಕಾಯಿಲೆಗಳು ಸೇರಿದಂತೆ ವಿಪರೀತ ದೈಹಿಕ ಸಮಸ್ಯೆಗಳು ಕಾಣಿಸಿಕೊಂಡಿರುವುದು ಅನೇಕ ವರದಿಗಳಿಂದ ಸಾಬೀತಾಗಿದೆ. ಈಗ ಬೇಸೂರು ಭಾಗದಲ್ಲಿ ಯೂರೇನಿಯಂ ಆಧಾರಿತ ಅಣುಸ್ಥಾವರ ಸ್ಥಾಪಿಸಿದರೆ ಮಲೆನಾಡಿನ ಪರಿಸರ ಹಾಗೂ ಜನಜೀವನಕ್ಕೆ ದೊಡ್ಡ ಕಂಟಕ ಎದುರಾಗಲಿದೆ. ಈಗಾಗಲೇ ಶರಾವತಿ ಕೊಳ್ಳದ ಜನರು ಎರಡು ಬಾರಿ ಮುಳುಗಡೆ ಸಂತ್ರಸ್ತರಾಗಿ ತೊಂದರೆ ಅನುಭವಿಸಿದ್ದಾರೆ ಮತ್ತು ಇಂದಿಗೂ ಅವರಿಗೆ ನ್ಯಾಯಸಮ್ಮತ ಪರಿಹಾರ ಸಿಕ್ಕಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಮತ್ತೊಂದು ವಿನಾಶಕಾರಿ ಯೋಜನೆ ತಂದು ಜನರ ಬದುಕನ್ನು ಸಂಕಷ್ಟಕ್ಕೆ ತಳ್ಳಬಾರದು. ರಾಜ್ಯ ಸರ್ಕಾರ ಈ ಸ್ಥಾವರಕ್ಕೆ ಯಾವುದೇ ಕಾರಣಕ್ಕೂ ಭೂಮಿ ಮಂಜೂರು ಮಾಡಬಾರದು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ನೆನಗುದಿಗೆ ಬಿದ್ದ ಮಾರ್ಕೇಟ್ ರಸ್ತೆ ಅಗಲೀಕರಣಕ್ಕೆ ಮುಕ್ತಿ ನೀಡಿ

ಸ್ಥಳೀಯ ಪ್ರಮುಖ ಸಮಸ್ಯೆಯಾದ ಸಾಗರ ಪಟ್ಟಣದ ಮಾರ್ಕೇಟ್ ರಸ್ತೆ ಅಗಲೀಕರಣ ಕಾಮಗಾರಿಯು ದೀರ್ಘಕಾಲದಿಂದ ನೆನಗುದಿಗೆ ಬಿದ್ದಿದೆ. ಇದರಿಂದಾಗಿ ಸಾರ್ವಜನಿಕರಿಗೆ, ವ್ಯಾಪಾರಿಗಳಿಗೆ ಹಾಗೂ ವಾಹನ ಸವಾರರಿಗೆ ಪ್ರತಿದಿನ ತೀವ್ರ ತೊಂದರೆಯಾಗುತ್ತಿದೆ. ಸಾಗರ ಪಟ್ಟಣದ ಜನರ ಬಹುಕಾಲದ ಬೇಡಿಕೆಯಾಗಿರುವ ಮಾರ್ಕೇಟ್ ರಸ್ತೆಯನ್ನು ಕೂಡಲೇ ಅಗಲೀಕರಣಗೊಳಿಸುವ ಮೂಲಕ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ನಿಯೋಗ ಒತ್ತಾಯಿಸಿತು.

ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಮಲ್ಲಿಕಾರ್ಜುನ ಹಕ್ರೆ, ಅರುಣ ಕುಗ್ವೆ, ರವೀಂದ್ರ ಬಿ.ಟಿ., ರಾಜೇಶ್, ಜಿ.ಕೆ.ಭೈರಪ್ಪ, ರಮೇಶ್ ಹಾರೆಗೊಪ್ಪ, ಹರೀಶ್ ಮೂಡಳ್ಳಿ, ಪರಶುರಾಮ, ದೇಂದ್ರಪ್ಪ, ಶಾಂತಪ್ಪ ಗೌಡ, ಕೆ.ವಿ.ಪ್ರವೀಣ್ ಸೇರಿದಂತೆ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.

BREAKING: ನೀಟ್ ಹಗರಣದಲ್ಲಿ ಸಿಬಿಐ ಭರ್ಜರಿ ಬೇಟೆ: ಪ್ರಶ್ನೆ ಪತ್ರಿಕೆ ಸಿದ್ಧಪಡಿಸುವ ತಂಡದಲ್ಲಿದ್ದ ಉಪನ್ಯಾಸಕಿಯೇ ಸಿಬಿಐ ವಶಕ್ಕೆ!

ನೀಟ್ ಪ್ರಶ್ನೆ ಪತ್ರಿಕೆ ಲೀಕ್ ಹಗರಣಕ್ಕೆ ಬಿಗ್ ಟ್ವಿಸ್ಟ್: ರಾಜಸ್ಥಾನದ ಒಂದೇ ಕುಟುಂಬ, 5 ಜನ, ಸತತ 2 ವರ್ಷ ನೀಟ್ ಪಾಸ್

Share. Facebook Twitter LinkedIn WhatsApp Email

Related Posts

ಬೆಂಗಳೂರಿಗರ ಗಮನಕ್ಕೆ : ತಾಂತ್ರಿಕ ನಿರ್ವಹಣಾ ಕಾಮಗಾರಿ ಹಿನ್ನೆಲೆ, ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ನಾಳೆ ಸಂಚಾರ ವ್ಯತ್ಯಯ

1 Min Read

BREAKING: ಮೇ.20ರಿಂದ ರಾಜ್ಯಾಧ್ಯಂತ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಫಿಕ್ಸ್, ಸಾಧನಾ ಸಮಾವೇಶಕ್ಕೂ ಕಪ್ಪು ಪಟ್ಟಿ ಬಿಸಿ!

2 Mins Read

‘ಸಚಿವ ಜಮೀರ್ ಅಹ್ಮದ್’ಗೆ ಬಿಗ್ ಶಾಕ್: ನಕಲಿ ಐಟಿಸಿ ಹಗರಣದಲ್ಲಿ ‘ನ್ಯಾಷನಲ್ ಟ್ರಾವೆಲ್ಸ್’ಗೆ IT ನೋಟಿಸ್!

2 Mins Read
Recent News

BREAKING : ‘NEET’ ಹಗರಣ : ದೆಹಲಿಯಲ್ಲಿ ‘CBI’ ಅಧಿಕಾರಿಗಳಿಂದ ಉಪನ್ಯಾಸಕಿ ಅರೆಸ್ಟ್, ಬಂಧಿತರ ಸಂಖ್ಯೆ 9ಕ್ಕೆ ಏರಿಕೆ

ಹಿಜಾಬ್ ನಿರ್ಧಾರ ಹಿಂಪಡೆಯಿರಿ, ಬೇಸೂರು ಅಣುಸ್ಥಾವರ ಕೈಬಿಡಿ: ಸಾಗರದಲ್ಲಿ ಬಿಜೆಪಿ ಪ್ರತಿಭಟಿಸಿ ಆಗ್ರಹ

BREAKING: ನೀಟ್ ಹಗರಣದಲ್ಲಿ ಸಿಬಿಐ ಭರ್ಜರಿ ಬೇಟೆ: ಪ್ರಶ್ನೆ ಪತ್ರಿಕೆ ಸಿದ್ಧಪಡಿಸುವ ತಂಡದಲ್ಲಿದ್ದ ಉಪನ್ಯಾಸಕಿಯೇ ಸಿಬಿಐ ವಶಕ್ಕೆ!

ನೀಟ್ ಪ್ರಶ್ನೆ ಪತ್ರಿಕೆ ಲೀಕ್ ಹಗರಣಕ್ಕೆ ಬಿಗ್ ಟ್ವಿಸ್ಟ್: ರಾಜಸ್ಥಾನದ ಒಂದೇ ಕುಟುಂಬ, 5 ಜನ, ಸತತ 2 ವರ್ಷ ನೀಟ್ ಪಾಸ್

State News
KARNATAKA

ಹಿಜಾಬ್ ನಿರ್ಧಾರ ಹಿಂಪಡೆಯಿರಿ, ಬೇಸೂರು ಅಣುಸ್ಥಾವರ ಕೈಬಿಡಿ: ಸಾಗರದಲ್ಲಿ ಬಿಜೆಪಿ ಪ್ರತಿಭಟಿಸಿ ಆಗ್ರಹ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಶಿವಮೊಗ್ಗ: ರಾಜ್ಯ ಸರ್ಕಾರ ಶಾಲಾ-ಕಾಲೇಜುಗಳಲ್ಲಿ ಹಿಜಾಬ್‌ಗೆ ಅವಕಾಶ ಕೊಟ್ಟಿರುವುದನ್ನು ಖಂಡಿಸಿ, ತಾಲ್ಲೂಕಿನ ಬೇಸೂರು ಅಣು ವಿದ್ಯುತ್ ಸ್ಥಾವರ ಸ್ಥಾಪನೆಗೆ ಭೂಮಿ…

ಬೆಂಗಳೂರಿಗರ ಗಮನಕ್ಕೆ : ತಾಂತ್ರಿಕ ನಿರ್ವಹಣಾ ಕಾಮಗಾರಿ ಹಿನ್ನೆಲೆ, ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ನಾಳೆ ಸಂಚಾರ ವ್ಯತ್ಯಯ

BREAKING: ಮೇ.20ರಿಂದ ರಾಜ್ಯಾಧ್ಯಂತ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಫಿಕ್ಸ್, ಸಾಧನಾ ಸಮಾವೇಶಕ್ಕೂ ಕಪ್ಪು ಪಟ್ಟಿ ಬಿಸಿ!

‘ಸಚಿವ ಜಮೀರ್ ಅಹ್ಮದ್’ಗೆ ಬಿಗ್ ಶಾಕ್: ನಕಲಿ ಐಟಿಸಿ ಹಗರಣದಲ್ಲಿ ‘ನ್ಯಾಷನಲ್ ಟ್ರಾವೆಲ್ಸ್’ಗೆ IT ನೋಟಿಸ್!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.