ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದು ಸಾರಿಗೆ ನೌಕರರು ರಾಜ್ಯಾದ್ಯಂತ ಮುಷ್ಕರ ನಡೆಸಲು ತೀರ್ಮಾನಿಸಿದರು. ಆದರೆ ನಿನ್ನೆ ಹೈಕೋರ್ಟ್ ಬಸ್ ಮುಷ್ಕರ ಮಾಡಬೇಡಿ ಎಂದು ಖಡಕ್ ಸೂಚನೆ ನೀಡಿತು. ಇದರ ಬೆನ್ನಲ್ಲೇ ಸಾರಿಗೆ ನೌಕರರು ಸಹ ಸೈಲೆಂಟಾಗಿದ್ದು ಎಂದಿನಂತೆ ರಾಜ್ಯಾದ್ಯಂತ ಇಂದು ಬಸ್ ಸಂಚಾರ ನಡೆಯಲಿದೆ.
ಹೈಕೋರ್ಟ್ ಹೇಳಿದ್ದೇನು?
ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಪಿಐಎಲ್ ಸಲ್ಲಿಕೆಯಾಗಿತ್ತು. ನಿನ್ನೆ ಹೈ ಕೋರ್ಟ್ ನಲ್ಲಿ ಈ ಒಂದು ಪಿಐಎಲ್ ವಿಚಾರಣೆ ನಡೆಯಿತು. ವೇದಾವತಿ ಮತ್ತು ಲೆಕ್ಕಸಂದ್ರದ ಶ್ರೀಧರ್ ಎಂಬುವವರು PIL ಸಲ್ಲಿಸಿದರು. ನಾಳೆಯ ಸಾರಿಗೆ ನೌಕರರ ಮುಷ್ಕರ ನಿರ್ಭಂಧಿಸಲು ಮನವಿ ಮಾಡಿದ್ದರು.ಮನೆ ಕೆಲಸದ ಮಹಿಳೆ ಹಾಗೂ ಕಟ್ಟಡ ಕಾರ್ಮಿಕ ಅರ್ಜಿ ಸಲ್ಲಿಸಿದ್ದಾರೆ. ಇವರ ಪರ ವಕೀಲ ವಿಕ್ರಂ ಹುಯಿಳಗೊಳ ವಾದಿಸಿದರು. ಪಿಐಎಲ್ ಅರ್ಜಿದಾರರ ಬಗ್ಗೆ ಹೈಕೋರ್ಟ್ ಇದೆ ವೇಳೆ ಅಚ್ಚರಿ ವ್ಯಕ್ತಪಡಿಸಿತು.
ವಿಚಾರಣೆ ನಡೆಸಿದ ಬಳಿಕ ಬಸ್ ಮುಷ್ಕರ ಮಾಡಬೇಡಿ ಎಂದು ಸಾರಿಗೆ ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದ್ದು, ಸಾರಿಗೆ ಸಂಘಟನೆಗಳೊಂದಿಗೆ ಸರ್ಕಾರ ಚರ್ಚೆ ನಡೆಸಲಿ. ಮುಷ್ಕರ ನಡೆಸದಂತೆ ಸಾರಿಗೆ ಸಂಘಟನೆಗಳಿಗೆ ಹೈ ಕೋರ್ಟ್ ಇದೀಗ ನಿರ್ಬಂಧ ವಿಧಿಸಿದೆ. ಬಳಿಕ ಸರ್ಕಾರ ಮತ್ತು ಸಾರಿಗೆ ಸಂಘಟನೆಗಳಿಗೆ ಹೈ ಕೋರ್ಟ್ ನೋಟಿಸ್ ಜಾರಿ ಮಾಡಿದ್ದು, ಸಾರಿಗೆ ಸಚಿವರೊಂದಿಗೆ ಸಭೆ ನಡೆಸಲು ಹೈಕೋರ್ಟ್ ಸೂಚನೆ ನೀಡಿತು.








