ಬೆಂಗಳೂರು : ಕರ್ನಾಟಕದ ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ಕ್ಷಣಗಣನೆ ಶುರುವಾಗಿದ್ದು, ಈಗಾಗಲೇ ಮುಖ್ಯಮಂತ್ರಿ ಪಟ್ಟಾಭಿಷೇಕಕ್ಕೆ ಭರದ ಸಿದ್ಧತೆ ನಡೆದಿದ್ದು ಡಿಕೆ ಶಿವಕುಮಾರ್ ಅವರು ಪದಗ್ರಹಣಕ್ಕು ಮುನ್ನ ಬೆಂಗಳೂರಿನ ನಾಗರಬಾವಿಯಲ್ಲಿರುವ ಅಜ್ಜಯ್ಯನ ಶಾಖ ಮಠಕ್ಕೆ ಇದೀಗ ಭೇಟಿ ನೀಡಿ ಆಶೀರ್ವಾದ ಪಡೆದರು.
ಅದಕ್ಕೂ ಮುನ್ನ ರಾಜಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿ ಮಾಡಿದ ಡಿಕೆ ಶಿವಕುಮಾರ್, ಎರಡು ದಿನಾಂಕಗಳಲ್ಲಿ ಪದಗ್ರಹಣ ನಡೆಸುವಂತೆ ಮನವಿ ಮಾಡಿದರು. ಜೂನ್ 1 ಅಥವಾ ಜೂನ್ 5 ರಂದು ಪ್ರಮಾಣವಚನ ಸ್ವೀಕಾರ ದಿನಾಂಕ ನಿಗದಿ ಮಾಡುವಂತೆ ಡಿಕೆ ಶಿವಕುಮಾರ್ ರಾಜಪಾಲರಲ್ಲಿ ಮನವಿ ಮಾಡಿದರು. ಅದಾದ ಬಳಿಕ ಬೆಂಗಳೂರಿನ ನಾಗರಬಾವಿಯಲ್ಲಿರುವ ಅಜ್ಜಯ್ಯನ ಶಾಖಾ ಮಠಕ್ಕೆ ಭೇಟಿ ನೀಡಿದ ಡಿಕೆ ಶಿವಕುಮಾರ್ ಡಾ. ಕರಿವೃಶಭ ದೇಶಿಕೇಂದ್ರ ಶಿವಯೋಗೀಶ್ವರ ಸ್ವಾಮೀಜಿ ಭೇಟಿ ಮಾಡಿ ಆಶೀರ್ವಾದ ಪಡೆದರು.








