ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡವು ಕ್ರಿಕೆಟ್ ಜಗತ್ತಿನಲ್ಲಿ ಮತ್ತೊಮ್ಮೆ ಹೊಸ ಇತಿಹಾಸ ಸೃಷ್ಟಿಸಿದೆ. ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ ಆರ್ಸಿಬಿ, ಫೈನಲ್ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸುವ ಮೂಲಕ ಸತತ ಎರಡನೇ ಬಾರಿಗೆ ಐಪಿಎಲ್ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಪಂದ್ಯಾವಳಿಯುದ್ದಕ್ಕೂ ಆರ್ಸಿಬಿ ಹುಡುಗರು ತೋರಿದ ಕೆಚ್ಚೆದೆಯ ಆಟಕ್ಕೆ ಎದುರಾಳಿ ತಂಡಗಳ ಬಳಿ ಯಾವುದೇ ಉತ್ತರವೇ ಇಲ್ಲದಂತಾಗಿತ್ತು.
ಫೈನಲ್ ಪಂದ್ಯದಲ್ಲಿ ಮಿಂಚಿದ ತಾರೆಯರು
ಇಂದಿನ ಹೈ-ವೋಲ್ಟೇಜ್ ಫೈನಲ್ ಪಂದ್ಯದಲ್ಲಿ ಆರ್ಸಿಬಿ ಆಟಗಾರರು ಸಂಘಟಿತ ಹೋರಾಟ ಪ್ರದರ್ಶಿಸಿದರು. ಪ್ರಮುಖವಾಗಿ ವಿರಾಟ್ ಕೋಹ್ಲಿ ಅವರ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶನ ಹಾಗೂ ಬೌಲಿಂಗ್ನಲ್ಲಿ ರಸಿಕ್ ಧಾರ್ ಮತ್ತು ಭುವನೇಶ್ವರ್ ಕುಮಾರ್ ಅವರ ಮಾರಕ ದಾಳಿ ಪಂದ್ಯದ ದಿಕ್ಕನ್ನೇ ಬದಲಿಸಿತು. ಈ ಮೂವರ ಅತ್ಯದ್ಭುತ ಆಟವು ಕ್ರಿಕೆಟ್ ಪ್ರೇಮಿಗಳ ಮನಸ್ಸಿನಲ್ಲಿ ಬಹುಕಾಲ ನೆನಪಿನಲ್ಲಿ ಉಳಿಯುವಂತದ್ದಾಗಿದ್ದು, ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿತು.
ಸಿದ್ದರಾಮಯ್ಯ ಅಭಿನಂದನೆ
ನಮ್ಮ ಆರ್ಸಿಬಿ ಮತ್ತೊಮ್ಮೆ ಐಪಿಎಲ್ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಪಂದ್ಯಾವಳಿಯುದ್ದಕ್ಕೂ ಆರ್ಸಿಬಿ ಹುಡುಗರು ತೋರಿದ ಕೆಚ್ಚೆದೆಯ ಆಟಕ್ಕೆ ಎದುರಾಳಿ ತಂಡಗಳ ಬಳಿ ಉತ್ತರವೇ ಇಲ್ಲವೇನೋ ಎಂಬಂತಿತ್ತು. ಸತತ ಎರಡನೇ ಬಾರಿಗೆ ಕಪ್ ಮುಡಿಗೇರಿಸಿಕೊಂಡಿರುವ ನಮ್ಮ ಆರ್ಸಿಬಿಗೆ ಅಭಿನಂದನೆಗಳು.
ಇಂದಿನ ಫೈನಲ್ ಪಂದ್ಯದಲ್ಲಿ ರಸಿಕ್ ಧಾರ್, ಭುವನೇಶ್ವರ್ ಕುಮಾರ್, ವಿರಾಟ್ ಕೋಹ್ಲಿಯ ಆಟ ಬಹುಕಾಲ ನೆನಪಲ್ಲಿ ಉಳಿಯುವಂತದ್ದು. ಸಂಘಟಿತ ಹೋರಾಟಕ್ಕೆ ದೊರೆತ ಈ ಗೆಲುವು ಆರ್ಸಿಬಿ ಅಭಿಮಾನಿಗಳೆಲ್ಲರ ಮನೆಯಲ್ಲಿ ಹಬ್ಬದ ವಾತಾವರಣ ಸೃಷ್ಟಿಸಿದೆ. ಆರ್ಸಿಬಿಯ ಗೆಲುವಿನ ಸಂಭ್ರಮಾಚರಣೆಗೆ ಸಂಬಂಧಿಸಿದಂತೆ ರಾಜ್ಯ ಪೊಲೀಸ್ ಇಲಾಖೆ ಕೆಲವು ಮಾರ್ಗಸೂಚಿಗಳನ್ನು ಹೊರಡಿಸಿದೆ. ಇದು ನಿಮ್ಮ ಸುರಕ್ಷತೆ ಮತ್ತು ಕಾಳಜಿಗಾಗಿ, ತಪ್ಪದೇ ಅವುಗಳನ್ನು ಪಾಲಿಸಿ. ಈ ಸಲವೂ ಕಪ್ ನಮ್ಮದೇ ಎಂದು ಶುಭ ಕೊರಿದ್ದಾರೆ.
ನಮ್ಮ ಆರ್ಸಿಬಿ ಮತ್ತೊಮ್ಮೆ ಐಪಿಎಲ್ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಪಂದ್ಯಾವಳಿಯುದ್ದಕ್ಕೂ ಆರ್ಸಿಬಿ ಹುಡುಗರು ತೋರಿದ ಕೆಚ್ಚೆದೆಯ ಆಟಕ್ಕೆ ಎದುರಾಳಿ ತಂಡಗಳ ಬಳಿ ಉತ್ತರವೇ ಇಲ್ಲವೇನೋ ಎಂಬಂತಿತ್ತು. ಸತತ ಎರಡನೇ ಬಾರಿಗೆ ಕಪ್ ಮುಡಿಗೇರಿಸಿಕೊಂಡಿರುವ ನಮ್ಮ ಆರ್ಸಿಬಿಗೆ ಅಭಿನಂದನೆಗಳು.
ಇಂದಿನ ಫೈನಲ್ ಪಂದ್ಯದಲ್ಲಿ ರಸಿಕ್ ಧಾರ್,… pic.twitter.com/zQ3PfHtBh5
— Siddaramaiah (@siddaramaiah) May 31, 2026
ಡಿ.ಕೆ. ಶಿವಕುಮಾರ್ ಅಭಿನಂದನೆ
ಆರ್ಸಿಬಿ ತಂಡದ ಈ ಐತಿಹಾಸಿಕ ಸಾಧನೆಗೆ ಡಿ.ಕೆ. ಶಿವಕುಮಾರ್ ಅವರು ತೀವ್ರ ಹರ್ಷ ವ್ಯಕ್ತಪಡಿಸಿದ್ದು, ತಂಡಕ್ಕೆ ಶುಭ ಕೋರಿದ್ದಾರೆ. “ಆರ್ಸಿಬಿ ತಂಡವು ಸತತ ಎರಡನೇ ಐಪಿಎಲ್ ಪ್ರಶಸ್ತಿಯನ್ನು ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿದೆ. ನಿಜವಾದ ಚಾಂಪಿಯನ್ಗಳ ಧೈರ್ಯ, ಸಂಯಮ ಮತ್ತು ಹೃದಯವಂತಿಕೆಯೊಂದಿಗೆ, ತಂಡವು ಮತ್ತೊಮ್ಮೆ ಬೆಂಗಳೂರಿಗೆ ಹೆಮ್ಮೆ ತಂದಿದೆ. ತಂಡದ ಪ್ರತಿ ಹೆಜ್ಜೆಯಲ್ಲೂ ಬೆಂಬಲವಾಗಿ ನಿಂತ ಆಟಗಾರರು, ತರಬೇತುದಾರರು, ಸಹಾಯಕ ಸಿಬ್ಬಂದಿ ಮತ್ತು ಲಕ್ಷಾಂತರ ಅಭಿಮಾನಿಗಳಿಗೆ ಅಭಿನಂದನೆಗಳು” ಎಂದು ಡಿ.ಕೆ. ಶಿವಕುಮಾರ್ ಅವರು ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.
Tonight, Bengaluru rises again as champions!
ಈ ಸಲವೂ ಕಪ್ ನಮ್ದೇ ⭐️⭐️
RCB has created history by clinching a second consecutive IPL title. With grit, composure, and the heart of true champions, the team has once again made Bengaluru proud.
Congratulations to the players,… pic.twitter.com/y2hgXT4m2l
— DK Shivakumar (@DKShivakumar) May 31, 2026








