ಬೆಂಗಳೂರು: ರಾಜ್ಯದ ರಾಜಕೀಯ ಇತಿಹಾಸದಲ್ಲಿ ಇಂದು ಮತ್ತೊಂದು ಪ್ರಮುಖ ಅಧ್ಯಾಯ ಬರೆಯಲಾಗುತ್ತಿದ್ದು, ನೂತನ ಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ (DK Shivakumar) ಅವರು ಇಂದು ಸಂಜೆ ಅಧಿಕೃತವಾಗಿ ಗದ್ದುಗೆಗೇರಲಿದ್ದಾರೆ.
ಇಂದು ಸಂಜೆ 4:05ಕ್ಕೆ ಮುಹೂರ್ತ
ರಾಜ್ಯದ ಜನತೆ ತೀವ್ರ ಕುತೂಹಲದಿಂದ ಕಾಯುತ್ತಿದ್ದ ಆ ಕ್ಷಣಕ್ಕೆ ಕಾಲ ಕೂಡಿಬಂದಿದ್ದು, ಇಂದು ಸಂಜೆ ಸರಿಯಾಗಿ 4:05 ಗಂಟೆಗೆ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರತಿಜ್ಞಾವಿಧಿ ಸ್ವೀಕರಿಸಲಿದ್ದಾರೆ. ಅವರೊಂದಿಗೆ ಸಚಿವರ ದಂಡೂ ಕೂಡ ಪ್ರಮಾಣವಚನ ಸ್ವೀಕರಿಸಲಿದ್ದು, ರಾಜಧಾನಿಯಲ್ಲಿ ಇದಕ್ಕಾಗಿ ಭರ್ಜರಿ ಸಿದ್ಧತೆಗಳು ನಡೆದಿವೆ.
ಸಾಂಪ್ರದಾಯಿಕ ರೇಷ್ಮೆ ಉಡುಗೆಯಲ್ಲಿ ‘ಕನಕಪುರ ಬಂಡೆ’
ತಮ್ಮ ಜೀವನದ ಅತ್ಯಂತ ಪ್ರಮುಖ ಹಾಗೂ ಐತಿಹಾಸಿಕ ದಿನದಂದು ಡಿ.ಕೆ. ಶಿವಕುಮಾರ್ ಅವರು ಸಂಪೂರ್ಣ ಸಾಂಪ್ರದಾಯಿಕ ಶೈಲಿಯಲ್ಲಿ ಮಿಂಚಲಿದ್ದಾರೆ. ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸುವ ಸುಸಂದರ್ಭದಲ್ಲಿ ಅವರು ಸಾಂಪ್ರದಾಯಿಕ ರೇಷ್ಮೆ ಪಂಚೆ, ಜುಬ್ಬ ಹಾಗೂ ಶಲ್ಯ ಧರಿಸಿ ಸಾರ್ವಜನಿಕವಾಗಿ ಕಾಣಿಸಿಕೊಳ್ಳಲಿದ್ದಾರೆ.
ಪ್ರಮಾಣವಚನಕ್ಕೂ ಮುನ್ನ ತಾಯಿಯ ಆಶೀರ್ವಾದ ಪಡೆದ ಡಿಕೆಶಿ
ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವ ಮುನ್ನ ಡಿ.ಕೆ. ಶಿವಕುಮಾರ್ ಅವರು ತಾಯಿಯ ಆಶೀರ್ವಾದ ಪಡೆದಿದ್ದಾರೆ. ಬೆಂಗಳೂರಿನ ಸದಾಶಿವನಗರದಲ್ಲಿರುವ ತಮ್ಮ ನಿವಾಸದಲ್ಲಿ ತಾಯಿ ಗೌರಮ್ಮ ಅವರ ಪಾದಕ್ಕೆ ನಮಸ್ಕರಿಸಿ, ಆಶೀರ್ವಾದ ಪಡೆದರು. ಮಗ ರಾಜ್ಯದ ಅತ್ಯುನ್ನತ ಹುದ್ದೆಗೇರುತ್ತಿರುವ ಹಿನ್ನೆಲೆಯಲ್ಲಿ ತಾಯಿ ಗೌರಮ್ಮ ಅವರು ಡಿಕೆಶಿ ಅವರಿಗೆ ಆರತಿ ಎತ್ತಿ, ಸಿಹಿ ತಿನ್ನಿಸಿ, ಹರಸಿದರು. ಈ ಭಾವುಕ ಕ್ಷಣಕ್ಕೆ ಇಡೀ ಕುಟುಂಬ ಸಾಕ್ಷಿಯಾಯಿತು.
ಕ್ಷಣಗಣನೆ ಆರಂಭ: ತಾಯಿಯ ಆಶೀರ್ವಾದ ಹಾಗೂ ಸಾಂಪ್ರದಾಯಿಕ ಉಡುಗೆಯೊಂದಿಗೆ ಸಜ್ಜಾಗಿರುವ ಡಿ.ಕೆ. ಶಿವಕುಮಾರ್ ಅವರ ರಾಜ್ಯಾಭಿಷೇಕವನ್ನು ಕಣ್ಣುಂಬಿಕೊಳ್ಳಲು ಇಡೀ ರಾಜ್ಯದ ಜನತೆ ಹಾಗೂ ಅಭಿಮಾನಿಗಳು ಕಾತರರಾಗಿದ್ದಾರೆ.
ಸಾಗರದ ‘ನೂತನ ತಹಶೀಲ್ದಾರ್ ಡಾ.ಪ್ರತಿಭಾ’ ಅವರಿಗೆ ‘ತಾಲ್ಲೂಕು ಸರ್ಕಾರಿ ನೌಕರರ ಸಂಘ’ದಿಂದ ಅಭಿನಂದನೆ
ಜೂನ್ 5 ರಿಂದ 7ರವರೆಗೆ ‘ಸಾಗರ ಲಯನ್ಸ್ ಕ್ಲಬ್’ನಿಂದ ಹಲಸು, ಮಾವಿನ ಮೇಳ ಆಯೋಜನೆ: ಅಧ್ಯಕ್ಷ ಡಾ.ಪ್ರಸನ್ನ








