Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಯೋಗಾಸನ ಮಾಡಿದ 9 ತಿಂಗಳ ತುಂಬು ಗರ್ಭಿಣಿ ಮಹಿಳೆ : ವಿಡಿಯೋ ವೈರಲ್ | WATCH VIDEO

ಸಚಿವ ಎಂ ಬಿ ಪಾಟೀಲರ ಮನೆಗೆ ಸಿದ್ಧಗಂಗಾ ಶ್ರೀ ಭೇಟಿ, ಆಶೀರ್ವಾದ

ಜೂ.6ರಂದು ಸಾಗರದಲ್ಲಿ ಯುವ ಪ್ರತಿಭೆಗಳ ‘ಮೂವಿಂಗ್ ಫೋಟೋ’ ಕಿರುಚಿತ್ರ ರಿಲೀಸ್: ಲಯನ್ಸ್ ಕ್ಲಬ್ ಅಧ್ಯಕ್ಷ ಡಾ.ಪ್ರಸನ್ನ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಚಿವ ಎಂ ಬಿ ಪಾಟೀಲರ ಮನೆಗೆ ಸಿದ್ಧಗಂಗಾ ಶ್ರೀ ಭೇಟಿ, ಆಶೀರ್ವಾದ
KARNATAKA

ಸಚಿವ ಎಂ ಬಿ ಪಾಟೀಲರ ಮನೆಗೆ ಸಿದ್ಧಗಂಗಾ ಶ್ರೀ ಭೇಟಿ, ಆಶೀರ್ವಾದ

By ಸುರೇಶ್‌

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಂಪುಟದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿರುವ ಹಿರಿಯ ಕಾಂಗ್ರೆಸ್ ನಾಯಕ ಎಂ ಬಿ ಪಾಟೀಲ ಅವರ ಇಲ್ಲಿನ ಸದಾಶಿವ ನಗರದ ನಿವಾಸಕ್ಕೆ ತುಮಕೂರು ಸಿದ್ಧಗಂಗಾ ಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿ ಅವರು ಗುರುವಾರ ಆಗಮಿಸಿ, ಸಚಿವರ ಕುಟುಂಬ ಪರಿವಾರಕ್ಕೆ ಆಶೀರ್ವಚನ ಮಾಡಿ, ಹರಸಿದರು.

ಬೆಳಿಗ್ಗೆಯಿಂದಲೇ ಶಾಸಕರು, ಕಾರ್ಯಕರ್ತರು, ಅಧಿಕಾರಿಗಳ ಆಗಮನ ಮತ್ತು ಅಭಿಮಾನಿಗಳ ಕಲರವದಿಂದ ತುಂಬಿದ್ದ ಸಚಿವರ ಸ್ವಂತ ನಿವಾಸಕ್ಕೆ ಆಗಮಿಸಿದ ಶ್ರೀಗಳನ್ನು ಸಚಿವರ ಕುಟುಂಬ ಪರಿವಾರ ಗೌರವದಿಂದ ಬರಮಾಡಿಕೊಂಡಿತು.

ನಂತರ ಎಂ ಬಿ ಪಾಟೀಲ, ಅವರ ಪತ್ನಿ ಆಶಾ ಪಾಟೀಲ, ಮಕ್ಕಳಾದ ಬಸಂತ್ ಮತ್ತು ಧ್ರುವ ಪಾಟೀಲ ಎಲ್ಲರೂ ಸ್ವಾಮೀಜಿಗಳ ಪಾದಪೂಜೆ ನೆರವೇರಿಸಿದರು. ಅವರೆಲ್ಲರ ಭಕ್ತಿಯನ್ನು ಸ್ವೀಕರಿಸಿದ ಶ್ರೀ ಸಿದ್ಧಲಿಂಗ ಸ್ವಾಮೀಜಿ ಕೆಲ ಹೊತ್ತು ಲೋಕಾಭಿರಾಮವಾಗಿ ಮಾತನಾಡಿ, ಬಳಿಕ ಆಶೀರ್ವಚನಗೈದು, ಒಳಿತನ್ನು ಹಾರೈಸಿದರು.

ಈ ಸಂದರ್ಭದಲ್ಲಿ ಸಚಿವ ಪಾಟೀಲರು ಕೂಡ ತಮ್ಮ ಇದುವರೆಗಿನ ಸಾಧನೆಗಳ ನೆನಪಿನೊಂದಿಗೆ, ಇನ್ನು ಮುಂದೆಯೂ ಶ್ರೀಗಳ ಸಲಹೆ, ಮಾರ್ಗದರ್ಶನ ತಮಗೆ ಇರಬೇಕೆಂದು ಕೋರಿದರು.

ರಾಜ್ಯದ ಸ್ಥಿತಿಗತಿ, ಮಳೆ-ಬೆಳೆ ಇತ್ಯಾದಿಗಳ ಬಗ್ಗೆ ಅಭಿಪ್ರಾಯ ವಿನಿಮಯ ಮಾಡಿಕೊಂಡ ಶ್ರೀಗಳು, ತಾವು ಸಕುಟುಂಬ ಪರಿವಾರ ಸಮೇತರಾಗಿ ಸಿದ್ಧಗಂಗೆಯ ಶ್ರೀಮಠಕ್ಕೆ ಆಗಮಿಸಬೇಕೆಂದು ಆಹ್ವಾನ ನೀಡಿದರು. ಇದಕ್ಕೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದರು.

ಇದೇ ಸಂದರ್ಭದಲ್ಲಿ ಶ್ರೀಗಳು ಸಚಿವರ ಪುತ್ರರಾದ ವನ್ಯಜೀವಿ ಮಂಡಳಿ ಸದಸ್ಯ ಧ್ರುವ ಪಾಟೀಲ ಅವರು ತೆಗೆದಿರುವ ವನ್ಯ ಜೀವಿ ಪ್ರಾಣಿಗಳ ಛಾಯಾಚಿತ್ರಗಳನ್ಜು ನೋಡಿ ಮೆಚ್ವುಗೆ ವ್ಯಕ್ತಪಡಿಸಿದರು. ಅವರ ಪರಿಸರ ಕಾಳಜಿ ಕೇಳಿಯೂ ಹರ್ಷ ವ್ಯಕ್ತಪಡಿಸಿದರು.

ವೀರಶೈವ ಲಿಂಗಾಯತ ಸಮುದಾಯದ ಹಿರಿಯ ನಾಯಕರಲ್ಲಿ ಒಬ್ಬರಾಗಿರುವ ಎಂ ಬಿ ಪಾಟೀಲ ಅವರು ಮೊದಲಿನಿಂದಲೂ ಶ್ರೀಮಠದೊಂದಿಗೆ ನಿಕಟ ಬಾಂಧವ್ಯ ಇಟ್ಟುಕೊಂಡು ಬಂದಿದ್ದಾರೆ. ವಿಶೇಷವಾಗಿ ಮಠದ ಕಾಯಕ ಪರಂಪರೆ, ಶಿಕ್ಷಣ ಪ್ರಸಾರ ಮತ್ತು ಅನ್ನ ದಾಸೋಹಗಳನ್ನು ಸಚಿವರು ಮೆಚ್ಚಿಕೊಂಡಿರುವುದನ್ನು ಇಲ್ಲಿ ನೆನೆಯಬಹುದು.

ಏತನ್ಮಧ್ಯೆ ಸಚಿವರ ನಿವಾಸಕ್ಕೆ ಸಾವಿರಾರು ಅಭಿಮಾನಿಗಳು ಲಗ್ಗೆ ಇಟ್ಟಿದ್ದರು. ಅದರಲ್ಲೂ ಸಚಿವರು ತವರು ಜಿಲ್ಲೆ ವಿಜಯಪುರದಿಂದ ಹೆಚ್ಚಿನ ಸಂಖ್ಯೆಯ ಅಭಿಮಾನಿಗಳು ಬೆಂಗಳೂರಿಗೆ ಬಂದಿಳಿದ್ದಿದ್ದು ಎದ್ದು ಕಾಣುತ್ತಿತ್ತು. ಸಚಿವರು ತಮ್ಮ ತವರಿನ ಜನರ ಜತೆ ಲವಲವಿಕೆಯಿಂದ ಓಡಾಡುತ್ತ, ಕೈ ಕುಲುಕುತ್ತ, ಅವರಿಗೆ ಆತಿಥ್ಯ ನೀಡುತ್ತ ಚಟವಟಿಕೆಯಿಂದಿದ್ದರು. ಇನ್ನೊಂದು ಕಡೆಯಲ್ಲಿ ಅಧಿಕಾರಿಗಳ ದಂಡು ಕೂಡ ಸಚಿವರ ಭೇಟಿ ಬಯಸಿ ಬಂದಿಳಿಯುತ್ತಿತ್ತು.

ಹರಿಪ್ರಸಾದ್ ಅವರಿಗೆ ಅಭಿನಂದನೆ ಸಲ್ಲಿಸಿದ ಸಚಿವರು

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಬಿ.ಕೆ.ಹರಿಪ್ರಸಾದ್ ಅವರನ್ನು ಅವರ ಮನೆಯಲ್ಲಿ ಭೇಟಿ ಮಾಡಿ ಸಚಿವ ಎಂ.ಬಿ.ಪಾಟೀಲ ಅವರು ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಚಿವರ ಸಹೋದರರೂ ಆದ ವಿಧಾನ ಪರಿಷತ್ ಸದಸ್ಯ ಸುನಿಲಗೌಡ ಪಾಟೀಲ ಅವರೂ ಇದ್ದರು.

Share. Facebook Twitter LinkedIn WhatsApp Email

Related Posts

ಯೋಗಾಸನ ಮಾಡಿದ 9 ತಿಂಗಳ ತುಂಬು ಗರ್ಭಿಣಿ ಮಹಿಳೆ : ವಿಡಿಯೋ ವೈರಲ್ | WATCH VIDEO

2 Mins Read

ಜೂ.6ರಂದು ಸಾಗರದಲ್ಲಿ ಯುವ ಪ್ರತಿಭೆಗಳ ‘ಮೂವಿಂಗ್ ಫೋಟೋ’ ಕಿರುಚಿತ್ರ ರಿಲೀಸ್: ಲಯನ್ಸ್ ಕ್ಲಬ್ ಅಧ್ಯಕ್ಷ ಡಾ.ಪ್ರಸನ್ನ

2 Mins Read

GOOD NEWS : ಅಸಂಘಟಿತ ವಲಯದ ಕಾರ್ಮಿಕರಿಗೆ ಬಂಪರ್ ಗಿಫ್ಟ್ : ತಿಂಗಳಿಗೆ ಕೇವಲ ₹55 ಹೂಡಿಕೆ ಮಾಡಿ ₹3000 ಪಿಂಚಣಿ ಪಡೆಯಿರಿ!

2 Mins Read
Recent News

ಯೋಗಾಸನ ಮಾಡಿದ 9 ತಿಂಗಳ ತುಂಬು ಗರ್ಭಿಣಿ ಮಹಿಳೆ : ವಿಡಿಯೋ ವೈರಲ್ | WATCH VIDEO

ಸಚಿವ ಎಂ ಬಿ ಪಾಟೀಲರ ಮನೆಗೆ ಸಿದ್ಧಗಂಗಾ ಶ್ರೀ ಭೇಟಿ, ಆಶೀರ್ವಾದ

ಜೂ.6ರಂದು ಸಾಗರದಲ್ಲಿ ಯುವ ಪ್ರತಿಭೆಗಳ ‘ಮೂವಿಂಗ್ ಫೋಟೋ’ ಕಿರುಚಿತ್ರ ರಿಲೀಸ್: ಲಯನ್ಸ್ ಕ್ಲಬ್ ಅಧ್ಯಕ್ಷ ಡಾ.ಪ್ರಸನ್ನ

GOOD NEWS : ಅಸಂಘಟಿತ ವಲಯದ ಕಾರ್ಮಿಕರಿಗೆ ಬಂಪರ್ ಗಿಫ್ಟ್ : ತಿಂಗಳಿಗೆ ಕೇವಲ ₹55 ಹೂಡಿಕೆ ಮಾಡಿ ₹3000 ಪಿಂಚಣಿ ಪಡೆಯಿರಿ!

State News
KARNATAKA

ಯೋಗಾಸನ ಮಾಡಿದ 9 ತಿಂಗಳ ತುಂಬು ಗರ್ಭಿಣಿ ಮಹಿಳೆ : ವಿಡಿಯೋ ವೈರಲ್ | WATCH VIDEO

By kannadanewsnow57 KARNATAKA 2 Mins Read

ಬೆಂಗಳೂರು:9 ತಿಂಗಳ (39 ವಾರಗಳ) ಪೂರ್ಣ ಗರ್ಭಿಣಿಯಾಗಿರುವ ಬೆಂಗಳೂರಿನ ಮಹಿಳೆಯೊಬ್ಬರು ಅತ್ಯಂತ ಕಠಿಣವಾದ ಯೋಗಾಸನಗಳನ್ನು ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ…

ಸಚಿವ ಎಂ ಬಿ ಪಾಟೀಲರ ಮನೆಗೆ ಸಿದ್ಧಗಂಗಾ ಶ್ರೀ ಭೇಟಿ, ಆಶೀರ್ವಾದ

ಜೂ.6ರಂದು ಸಾಗರದಲ್ಲಿ ಯುವ ಪ್ರತಿಭೆಗಳ ‘ಮೂವಿಂಗ್ ಫೋಟೋ’ ಕಿರುಚಿತ್ರ ರಿಲೀಸ್: ಲಯನ್ಸ್ ಕ್ಲಬ್ ಅಧ್ಯಕ್ಷ ಡಾ.ಪ್ರಸನ್ನ

GOOD NEWS : ಅಸಂಘಟಿತ ವಲಯದ ಕಾರ್ಮಿಕರಿಗೆ ಬಂಪರ್ ಗಿಫ್ಟ್ : ತಿಂಗಳಿಗೆ ಕೇವಲ ₹55 ಹೂಡಿಕೆ ಮಾಡಿ ₹3000 ಪಿಂಚಣಿ ಪಡೆಯಿರಿ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.