Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ ` FSSAI’ ಲೋಗೋ ಕಡ್ಡಾಯ : ಅಶ್ವಗಂಧ ಎಲೆಗಳ ಬಳಕೆಗೆ ನಿಷೇಧ | FSSAI Vegan logo

ರಾಜ್ಯದ ಜನರೇ ಗಮನಿಸಿ : ಜೂನ್.30ರಿಂದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಆರಂಭ.!

BIG NEWS : ನಾನು ಆಹಾರ ಇಲಾಖೆ ಸಚಿವನಾಗಿ ಚಾರ್ಜ್ ತೆಗೆದುಕೊಳ್ಳಲ್ಲ : ಸಚಿವ ಕೆ.ಎಚ್ ಮುನಿಯಪ್ಪ ಸ್ಪಷ್ಟನೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಜನರೇ ಗಮನಿಸಿ : ಜೂನ್.30ರಿಂದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಆರಂಭ.!
KARNATAKA

ರಾಜ್ಯದ ಜನರೇ ಗಮನಿಸಿ : ಜೂನ್.30ರಿಂದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಆರಂಭ.!

By kannadanewsnow57

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ 2026ರ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಹೇಳಿದರು.

ನಗರದ ನೂತನ ಜಿಲ್ಲಾಡಳಿತ ಭವನದ ವಿಸಿ ಹಾಲ್‌ನಲ್ಲಿ ಗುರುವಾರ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ಅರ್ಹ ನಾಗರಿಕನೂ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವುದು ಎಷ್ಟು ಮುಖ್ಯವೋ, ಅಷ್ಟೇ ಜವಾಬ್ದಾರಿಯುತವಾಗಿ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳುವುದು ಅಗತ್ಯವಾಗಿದೆ. ಅರ್ಹ ಮತದಾರರು ಯಾರೂ ಪಟ್ಟಿಯಿಂದ ಹೊರಗುಳಿಯದಂತೆ ಮತ್ತು ದೋಷರಹಿತ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವ ಉದ್ದೇಶದಿಂದ ಪ್ರಕ್ರಿಯೆ ನಡೆಯಲಿದೆ ಎಂದು ತಿಳಿಸಿದರು.

ಮನೆ ಮನೆಗೆ ಖುದ್ದಾಗಿ ಬಿಎಲ್‌ಒ ಭೇಟಿ: ವಿಶಿಷ್ಟ ಪ್ರಕ್ರಿಯೆ

ಜಿಲ್ಲೆಯಲ್ಲಿ 2026ರ ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆಯ ಅಂಗವಾಗಿ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಪ್ರತಿಯೊಬ್ಬ ಮತದಾರರ ಮನೆ ಮನೆಗೂ ಕಡ್ಡಾಯವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಪ್ರತಿ ವರ್ಷ ಜನವರಿ 1ರಂದು ಮತದಾರರ ಪಟ್ಟಿಯನ್ನು ಪ್ರಕಟಿಸುತ್ತೇವೆ. ತದನಂತರ ಹೆಸರು ಸೇರ್ಪಡೆ (ನಮೂನೆ 6), ಕೈಬಿಡುವುದು (ನಮೂನೆ 7), ಸ್ಥಳಾಂತರ (ನಮೂನೆ 8) ಮತ್ತು ತಿದ್ದುಪಡಿ ಪ್ರಕ್ರಿಯೆಗಳು ನಿರಂತರವಾಗಿ ನಡೆಯುತ್ತವೆ. ಇದು ಸಾಮಾನ್ಯವಾಗಿದ್ದು, ಪ್ರಸಕ್ತ ನಡೆಯುತ್ತಿರುವ ‘ವಿಶೇಷ ಸಮಗ್ರ ಪರಿಷ್ಕರಣೆ’ (ಫೇಸ್-3) ಇದಕ್ಕಿಂತ ಸಂಪೂರ್ಣ ಭಿನ್ನವಾಗಿದೆ ಎಂದು ತಿಳಿಸಿದರು.

ಸಾಮಾನ್ಯ ಪರಿಷ್ಕರಣೆಯಲ್ಲಿ ಮನೆ ಮನೆಗೆ ಹೋಗುವುದಿಲ್ಲ. ಈ ವಿಶೇಷ ಅಭಿಯಾನದಲ್ಲಿ ನಮ್ಮ ಬೂತ್ ಮಟ್ಟದ ಅಧಿಕಾರಿಗಳು 1/1/2025ರ ಮತದಾರರ ಪಟ್ಟಿಯಲ್ಲಿರುವ ಪ್ರತಿಯೊಬ್ಬ ಮತದಾರರ ಮನೆಗೂ ಖುದ್ದಾಗಿ ಭೇಟಿ ನೀಡಿ, ವಿವರಗಳನ್ನು ಪರಿಶೀಲಿಸಿ ದೃಢೀಕರಿಸಲಿದ್ದಾರೆ ಎಂದು ವಿವರಿಸಿದರು.

ಜೂನ್ 30 ರಿಂದ ಜುಲೈ 21ರ ವರೆಗೆ ಬಿಎಲ್‌ಒಗಳು ಪ್ರತೀ ಮನೆ ಮನೆಗೆ ಭೇಟಿ ನೀಡಲಿದ್ದಾರೆ. ಭೇಟಿಯ ಸಂದರ್ಭದಲ್ಲಿ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯಿಂದ ನೀಡಿರುವ ಎರಡು ಪುಟಗಳ ‘ಎನ್ಯುಮರೇಷನ್ ಫಾರ್ಮ್’ (ನೋಂದಣಿ ನಮೂನೆ) ಅನ್ನು ಪ್ರತಿಯೊಬ್ಬ ಮತದಾರರಿಗೂ ತಲುಪಿಸಲಾಗುತ್ತದೆ. ಈ ಬಾರಿ ಇಂಗ್ಲೀಷ್ ಜೊತೆಗೆ ಕನ್ನಡದಲ್ಲೂ ಈ ಫಾರ್ಮ್ ಲಭ್ಯವಿರಲಿದೆ. ಮತದಾರರಿಂದ ಈ ಎರಡು ಫಾರ್ಮ್ಗಳನ್ನು ಭರ್ತಿ ಮಾಡಿಸಿಕೊಂಡು, ಅದರಲ್ಲಿ ಒಂದನ್ನು ಬಿಎಲ್‌ಒ ವಾಪಸ್ ಪಡೆದರೆ, ಮತ್ತೊಂದಕ್ಕೆ ಸ್ವೀಕೃತಿ ಸಹಿ ಹಾಕಿ ಮತದಾರರ ಕೈಗೆ ನೀಡಲಿದ್ದಾರೆ. ಹೆಸರು ಬಿಟ್ಟು ಹೋಗಿರುವ ಅಥವಾ ತಪ್ಪುಗಳಾಗಿರುವ ಕುರಿತು ಮತದಾರರು ಆಕ್ಷೇಪಣೆ ಅವಧಿಯಲ್ಲಿ ಈ ಸ್ವೀಕೃತಿ ಪತ್ರದೊಂದಿಗೆ ಕ್ಲೆöÊಮ್ ಮಾಡಬಹುದಾಗಿದೆ. ಬಿಎಲ್‌ಒ ಆಪ್ ಮೂಲಕ ಇಆರ್‌ಒ (ಮತದಾರರ ನೋಂದಣಾಧಿಕಾರಿ) ಅವರಿಗೆ ವಿವರಗಳನ್ನು ಸಲ್ಲಿಸುವ ಸಂಪೂರ್ಣ ಜವಾಬ್ದಾರಿಯನ್ನು ಬಿಎಲ್‌ಒಗಳಿಗೆ ವಹಿಸಲಾಗಿದೆ ಎಂದರು.

ಚುನಾವಣಾ ಆಯೋಗವು ಪ್ರಜಾ ಪ್ರಾತಿನಿಧ್ಯ ಕಾಯ್ದೆ (ಆರ್.ಪಿ.ಆಕ್ಟ್) ಸೆಕ್ಷನ್ 21ರಡಿ ಈ ವಿಶೇಷ ಪರಿಷ್ಕರಣೆಗೆ ಚಾಲನೆ ನೀಡಿದ್ದು, ಕರ್ನಾಟಕದಲ್ಲಿ ಸದ್ಯ 3ನೇ ಹಂತದ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಈ ಬಾರಿಯ ಪರಿಷ್ಕರಣೆಗೆ 1/10/2026 ಅನ್ನು ಅರ್ಹತಾ ದಿನಾಂಕವಾಗಿ ನಿಗದಿಪಡಿಸಲಾಗಿದೆ. ಅಂದರೆ, ಈ ದಿನಾಂಕಕ್ಕೆ 18 ವರ್ಷ ತುಂಬುವ ಪ್ರತಿಯೊಬ್ಬ ನಾಗರಿಕನೂ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಅರ್ಹನಾಗಿರುತ್ತಾನೆ ಎಂದರು.

ಪರಿಷ್ಕರಣೆ ವೇಳಾಪಟ್ಟಿ

ಅಧಿಕಾರಿಗಳ ಅಂತಿಮ ಹಂತದ ತರಬೇತಿ ಮುಕ್ತಾಯ: ಜೂನ್ 20, 2026 ರಿಂದ ಜೂನ್ 29, 2026.

ಬಿಎಲ್‌ಒಗಳ ಮನೆ ಮನೆ ಭೇಟಿ ಮತ್ತು ಸಮೀಕ್ಷೆ: ಜೂನ್ 30, 2026 ರಿಂದ ಜುಲೈ 21, 2026.

ಹೆಚ್ಚುವರಿ ಮತಗಟ್ಟೆಗಳ ಮರುಹಂಚಿಕೆ): ಜುಲೈ 29, 2026.

ಪರಿಷ್ಕೃತ ಕರಡು ಮತದಾರರ ಪಟ್ಟಿ ಪ್ರಕಟಣೆ: ಆಗಸ್ಟ್ 5, 2026.

ಹಕ್ಕುಗಳು ಮತ್ತು ಆಕ್ಷೇಪಣೆಗಳ ಸಲ್ಲಿಕೆ ಅವಧಿ: ಆಗಸ್ಟ್ 5, 2026 ರಿಂದ ಸೆಪ್ಟೆಂಬರ್ 4, 2026.

ನೋಟಿಸ್ ಅವಧಿ ಮತ್ತು ಇತ್ಯರ್ಥ: ಆಗಸ್ಟ್ 5, 2026 ರಿಂದ ಅಕ್ಟೋಬರ್ 3, 2026.

ಅಂತಿಮ ಮತದಾರರ ಪಟ್ಟಿ ಅಧಿಕೃತ ಪ್ರಕಟಣೆ: ಅಕ್ಟೋಬರ್ 7, 2026 |

ದಾಖಲೆಯ ಶೇ 97.68 ರಷ್ಟು ಮ್ಯಾಪಿಂಗ್ ಯಶಸ್ವಿ:

ಈ ಬಾರಿ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಹಾಗೂ ವ್ಯವಸ್ಥಿತ ಮ್ಯಾಪಿಂಗ್ ಪ್ರಕ್ರಿಯೆಯನ್ನು ಅಳವಡಿಸಿಕೊಳ್ಳಲಾಗಿದ್ದು, ಜಿಲ್ಲೆಯಲ್ಲಿ ದಾಖಲೆಯ ಯಶಸ್ಸು ಸಿಕ್ಕಿದೆ. ಕಳೆದ 2002ರ ಮತದಾರರ ಪಟ್ಟಿಯನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ ಮ್ಯಾಪಿಂಗ್ ಮಾಡುವ ಮಹತ್ವದ ಕಾರ್ಯವನ್ನು ಚುನಾವಣಾ ವಿಭಾಗ ಹಮ್ಮಿಕೊಂಡಿತ್ತು. ಈ ಪ್ರಕ್ರಿಯೆಯಡಿ ಜಿಲ್ಲೆಯ 2025ರ ಪಟ್ಟಿಯ ಅನ್ವಯ ಇರುವ ಒಟ್ಟು 12,28,958 ಮತದಾರರ ಪೈಕಿ ಬರೋಬ್ಬರಿ 12,00,463 (ಶೇ 97.68 ರಷ್ಟು) ಜನರನ್ನು ಯಶಸ್ವಿಯಾಗಿ ಪತ್ತೆ ಹಚ್ಚಿ, ಅವರ ಕುಟುಂಬದವರೊAದಿಗೆ ಕೊಂಡಿ ಕಲ್ಪಿಸುವ ಕೆಲಸ ಯಶಸ್ವಿಯಾಗಿದೆ. ಇನ್ನೂ ಮ್ಯಾಪ್ ಆಗದೇ ಉಳಿದಿರುವ 28,495 ಮತದಾರರನ್ನು ಪತ್ತೆ ಹಚ್ಚಲು ಮುಂದಿನ ದಿನಗಳಲ್ಲಿ ವಿಶೇಷ ಕಾರ್ಯಾಚರಣೆ ಹಮ್ಮಿಕೊಳ್ಳಲಾಗುವುದು ಎಂದರು.

ದಾಖಲೆ ಪತ್ರಗಳ ಕಡ್ಡಾಯವಿಲ್ಲ: ಸರಳ ಪ್ರಕ್ರಿಯೆ

ಬಿಎಲ್‌ಒಗಳು ಸಾರ್ವಜನಿಕರಿಂದ ಭರ್ತಿ ಮಾಡಿದ ಫಾರ್ಮ್ಗಳನ್ನು ಸಂಗ್ರಹಿಸುವಾಗ ಯಾವುದೇ ರೀತಿಯ ಪೂರಕ ದಾಖಲಾತಿಗಳನ್ನು ಕೇಳುವುದಿಲ್ಲ. ಮತದಾರರು ನೀಡುವ ಅರ್ಜಿ ಅಪೂರ್ಣವಾಗಿದ್ದರೂ ಸಹ, ಬಿಎಲ್‌ಒಗಳೇ ಅದಕ್ಕೆ ಅಗತ್ಯವಿರುವ ಸಹಾಯವನ್ನು ಸ್ಥಳದಲ್ಲೇ ಮಾಡಲಿದ್ದಾರೆ. ಅರ್ಜಿದಾರರ ಹೆಸರು ಮತ್ತು ಸಹಿ ಇದ್ದರೆ ಸಾಕು, ಅದನ್ನು ಸ್ವೀಕರಿಸಲಾಗುತ್ತದೆ ಎಂದು ಸ್ಪಷ್ಟಪಡಿಸಿದರು.

ಒಂದು ವೇಳೆ ಸಲ್ಲಿಕೆಯಾಗುವ ಅರ್ಜಿಗಳು ಅಪೂರ್ಣವಾಗಿದ್ದಲ್ಲಿ, ಅಂತಹ ಸಾರ್ವಜನಿಕರಿಗೆ ಇಆರ್‌ಒ ವತಿಯಿಂದ ನೋಟಿಸ್ ಜಾರಿ ಮಾಡಲಾಗುತ್ತದೆ. ಅಪೂರ್ಣ ಮಾಹಿತಿ ಇರುವವರು ಸೂಕ್ತ ದಾಖಲೆಗಳೊಂದಿಗೆ ಪೂರ್ಣ ಮಾಹಿತಿ ನೀಡಿದ ಬಳಿಕವಷ್ಟೇ ಆಕ್ಷೇಪಣೆ ಹಾಗೂ ಹಕ್ಕುಗಳ ಪ್ರಕ್ರಿಯೆಯಡಿ ಅದನ್ನು ಇತ್ಯರ್ಥಪಡಿಸಲಾಗುವುದು. ಬಿಎಲ್‌ಒ ಭೇಟಿ ನೀಡಿದಾಗ ಸಾರ್ವಜನಿಕರ ಮನೆ ಬೀಗ ಹಾಕಿದ್ದರೆ, ಅಧಿಕಾರಿಗಳು ಸಮಾನ ಕಾಲಾವಧಿಯ ಅಂತರದಲ್ಲಿ ಕನಿಷ್ಠ 3 ಬಾರಿ ಆ ಮನೆಗೆ ಕಡ್ಡಾಯವಾಗಿ ಭೇಟಿ ನೀಡಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದರು.

ಹೆಚ್ಚುವರಿ ಮತಗಟ್ಟೆಗಳ ಸ್ಥಾಪನೆ:

ಯಾವುದಾದರೂ ಒಂದು ಮತದಾನದ ಭಾಗದಲ್ಲಿ ಮತದಾರರ ಸಂಖ್ಯೆ 1,200 ಕ್ಕಿಂತ ಹೆಚ್ಚಾದರೆ, ಅಲ್ಲಿ ಮತದಾನ ಸುಲಭಗೊಳಿಸಲು ಹೆಚ್ಚುವರಿಯಾಗಿ ಒಂದು ‘ಆಕ್ಸಿಲರಿ ಪೋಲಿಂಗ್ ಸ್ಟೇಷನ್’ ಸ್ಥಾಪಿಸಲಾಗುವುದು. ಈ ಮತಗಟ್ಟೆಗಳ ಮರುಹಂಚಿಕೆ ಅಥವಾ ರ‍್ಯಾಷನಲೈಜೇಶನ್ ಪ್ರಕ್ರಿಯೆಯನ್ನು ಜುಲೈ 29 ರ ಒಳಗಾಗಿ ಪೂರ್ಣಗೊಳಿಸಲಾಗುವುದು ಎಂದರು.

ಚುನಾವಣಾ ಪ್ರಕ್ರಿಯೆಯಲ್ಲಿ ಸಂಪೂರ್ಣ ಪಾರದರ್ಶಕತೆ ಕಾಯ್ದುಕೊಳ್ಳುವುದು ಮುಖ್ಯ ಉದ್ದೇಶ. ಈ ನಿಟ್ಟಿನಲ್ಲಿ ಪ್ರಮುಖ ರಾಜಕೀಯ ಪಕ್ಷಗಳು, ಅವರು ನೇಮಿಸುವ ಬೂತ್ ಮಟ್ಟದ ಏಜೆಂಟರು ಹಾಗೂ ಮಾಧ್ಯಮಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಪ್ರಕ್ರಿಯೆಯ ಪ್ರತಿಯೊಂದು ಹಂತದ ಬಗ್ಗೆಯೂ ವಿಸ್ತೃತ ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು.

ಮತದಾರರಲ್ಲಿ ಜಾಗೃತಿ ಮೂಡಿಸಲು ಜಿಲ್ಲಾ ಪಂಚಾಯತ್ ಸಿಇಒ ನೇತೃತ್ವದಲ್ಲಿ ವ್ಯಾಪಕ ಸ್ವೀಪ್ ಕಾರ್ಯಕ್ರಮ ಪ್ರಚಾರ ಹಮ್ಮಿಕೊಳ್ಳಲಾಗುವುದು. ಕರಡು ಪಟ್ಟಿ ಪ್ರಕಟವಾದ ನಂತರ ಪಟ್ಟಿಯನ್ನು ಗ್ರಾಮ ಪಂಚಾಯತಿ ಕಚೇರಿಗಳು, ತಾಲೂಕು ಪಂಚೇತಿ ಇಒ ಕಚೇರಿ ಹಾಗೂ ಸ್ಥಳೀಯ ನಗರಾಡಳಿತ ಸಂಸ್ಥೆಗಳ ಮುಖ್ಯಸ್ಥರ ಕಚೇರಿಗಳಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಪ್ರಚುರಪಡಿಸಲಾಗುವುದು ಎಂದರು.

ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ, ವಿವಿಧ ನಮೂನೆಗಳು ಮತ್ತು ವೇಳಾಪಟ್ಟಿಯ ಹೆಚ್ಚಿನ ವಿವರಗಳಿಗಾಗಿ ಸಾರ್ವಜನಿಕರು ಬಳ್ಳಾರಿ ಜಿಲ್ಲೆಯ ಅಧಿಕೃತ ವೆಬ್‌ಸೈಟ್ https://ballari.nic.in/ ಅಥವಾ ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ವೆಬ್‌ಸೈಟ್ https://ceo.karnataka.gov.in/en ಗೆ ಭೇಟಿ ನೀಡಬಹುದಾಗಿದೆ.

People of the state take note: Special revision of voter list begins from June 30th!
Share. Facebook Twitter LinkedIn WhatsApp Email

Related Posts

BIG NEWS : ನಾನು ಆಹಾರ ಇಲಾಖೆ ಸಚಿವನಾಗಿ ಚಾರ್ಜ್ ತೆಗೆದುಕೊಳ್ಳಲ್ಲ : ಸಚಿವ ಕೆ.ಎಚ್ ಮುನಿಯಪ್ಪ ಸ್ಪಷ್ಟನೆ

2 Mins Read

BIG NEWS : ರಾಜ್ಯದಲ್ಲಿ `ವಿವಾಹ ನೋಂದಣಿಗೆ’ ಆಧಾರ್ ಕಾರ್ಡ್ ವಯಸ್ಸಿನ ದಾಖಲೆಯಲ್ಲ : ಸರ್ಕಾರದಿಂದ ಮಹತ್ವದ ಆದೇಶ

1 Min Read

ಗ್ರಾಮೀಣ ಕುಡಿಯುವ ನೀರಿಗೆ ಪ್ರಥಮ ಆದ್ಯತೆ : ಸಚಿವ ಈಶ್ವರ ಖಂಡ್ರೆ

1 Min Read
Recent News

BIG NEWS : ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ ` FSSAI’ ಲೋಗೋ ಕಡ್ಡಾಯ : ಅಶ್ವಗಂಧ ಎಲೆಗಳ ಬಳಕೆಗೆ ನಿಷೇಧ | FSSAI Vegan logo

ರಾಜ್ಯದ ಜನರೇ ಗಮನಿಸಿ : ಜೂನ್.30ರಿಂದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಆರಂಭ.!

BIG NEWS : ನಾನು ಆಹಾರ ಇಲಾಖೆ ಸಚಿವನಾಗಿ ಚಾರ್ಜ್ ತೆಗೆದುಕೊಳ್ಳಲ್ಲ : ಸಚಿವ ಕೆ.ಎಚ್ ಮುನಿಯಪ್ಪ ಸ್ಪಷ್ಟನೆ

BIG NEWS : ರಾಜ್ಯದಲ್ಲಿ `ವಿವಾಹ ನೋಂದಣಿಗೆ’ ಆಧಾರ್ ಕಾರ್ಡ್ ವಯಸ್ಸಿನ ದಾಖಲೆಯಲ್ಲ : ಸರ್ಕಾರದಿಂದ ಮಹತ್ವದ ಆದೇಶ

State News
KARNATAKA

ರಾಜ್ಯದ ಜನರೇ ಗಮನಿಸಿ : ಜೂನ್.30ರಿಂದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಆರಂಭ.!

By kannadanewsnow57 KARNATAKA 4 Mins Read

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ 2026ರ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯಾಗಿರುವ…

BIG NEWS : ನಾನು ಆಹಾರ ಇಲಾಖೆ ಸಚಿವನಾಗಿ ಚಾರ್ಜ್ ತೆಗೆದುಕೊಳ್ಳಲ್ಲ : ಸಚಿವ ಕೆ.ಎಚ್ ಮುನಿಯಪ್ಪ ಸ್ಪಷ್ಟನೆ

BIG NEWS : ರಾಜ್ಯದಲ್ಲಿ `ವಿವಾಹ ನೋಂದಣಿಗೆ’ ಆಧಾರ್ ಕಾರ್ಡ್ ವಯಸ್ಸಿನ ದಾಖಲೆಯಲ್ಲ : ಸರ್ಕಾರದಿಂದ ಮಹತ್ವದ ಆದೇಶ

ಗ್ರಾಮೀಣ ಕುಡಿಯುವ ನೀರಿಗೆ ಪ್ರಥಮ ಆದ್ಯತೆ : ಸಚಿವ ಈಶ್ವರ ಖಂಡ್ರೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.