Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನಕ್ಕೆ ಭಾರತದ ತೀಕ್ಷ್ಣ ತಿರುಗೇಟು: ‘ಫಿತ್ನಾ ಅಲ್-ಹಿಂದೂಸ್ತಾನ್’ ಪದಬಳಕೆಗೆ ತೀವ್ರ ವಿರೋಧ!

ರಾಜ್ಯದ ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಇಲಾಖೆಯಲ್ಲಿ 4000 ಹುದ್ದೆಗಳ ಭರ್ತಿ : ಸಚಿವ ಈಶ್ವರ್ ಖಂಡ್ರೆ ಘೋಷಣೆ

ಭಾರತದ ಮೇಲೆ ನಿರಂತರ ನಿಗಾ: 16 ತಿಂಗಳಲ್ಲಿ 6 ಉಪಗ್ರಹಗಳನ್ನು ಉಡಾವಣೆ ಮಾಡಿದ ಪಾಕಿಸ್ತಾನ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಇಲಾಖೆಯಲ್ಲಿ 4000 ಹುದ್ದೆಗಳ ಭರ್ತಿ : ಸಚಿವ ಈಶ್ವರ್ ಖಂಡ್ರೆ ಘೋಷಣೆ
KARNATAKA

ರಾಜ್ಯದ ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಇಲಾಖೆಯಲ್ಲಿ 4000 ಹುದ್ದೆಗಳ ಭರ್ತಿ : ಸಚಿವ ಈಶ್ವರ್ ಖಂಡ್ರೆ ಘೋಷಣೆ

By kannadanewsnow57

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು ಹುದ್ದೆಗಳ ಪೈಕಿ ಮೊದಲ ಹಂತದಲ್ಲಿ 4,000 ಹುದ್ದೆಗಳ ಭರ್ತಿಗೆ ಕೂಡಲೇ ಪ್ರಕ್ರಿಯೆ ಆರಂಭಿಸುವಂತೆ ಸೂಚನೆ ನೀಡಲಾಗಿದೆ ಎಂದು ಇಲಾಖೆಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ಮಂಡಳಿಯ (KRIDL) ಸಭಾಂಗಣದಲ್ಲಿ ನಡೆದ ಇಲಾಖೆಯ ಉನ್ನತಾಧಿಕಾರಿಗಳ ಪರಿಚಯಾತ್ಮಕ ಸಭೆಯ ಬಳಿಕ ನಡೆಸಿದ ಸುದ್ದಿಗೋಷ್ಠಿಯಲ್ಲಿ ಅವರು ಈ ಮಹತ್ವದ ವಿಷಯಗಳನ್ನು ಹಂಚಿಕೊಂಡರು.ಇಲಾಖೆಯಲ್ಲಿ ಒಟ್ಟು 25,540 ಮಂಜೂರಾದ ಹುದ್ದೆಗಳಿದ್ದು, ಸದ್ಯ 8,770 ಹುದ್ದೆಗಳು ಖಾಲಿ ಇವೆ. ಇವುಗಳ ವರ್ಗೀಕರಣ ಹೀಗಿದೆ.

‘ಎ’ ವೃಂದ: 268 ಹುದ್ದೆಗಳು

‘ಬಿ’ ವೃಂದ: 1,079 ಹುದ್ದೆಗಳು

‘ಸಿ’ ವೃಂದ: 5,294 ಹುದ್ದೆಗಳು

‘ಡಿ’ ವೃಂದ: 2,129 ಹುದ್ದೆಗಳು
ನೇಮಕಾತಿ ಪ್ರಕ್ರಿಯೆ: ಮೊದಲ ಹಂತದ 4,000 ಹುದ್ದೆಗಳಲ್ಲಿ ‘ಸಿ’ ಮತ್ತು ‘ಡಿ’ ವೃಂದದ ಹುದ್ದೆಗಳ ನೇರ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಶೀಘ್ರದಲ್ಲೇ ಅಧಿಸೂಚನೆ ಹೊರಡಿಸಲಿದೆ. ಈಗಾಗಲೇ 1,400 ಹುದ್ದೆಗಳ ಭರ್ತಿಗೆ ಅನುಮತಿ ಸಿಕ್ಕಿದ್ದು, ಕಲ್ಯಾಣ ಕರ್ನಾಟಕ ಭಾಗದ ಹುದ್ದೆಗಳ ಭರ್ತಿಗೂ ಆದ್ಯತೆ ನೀಡಲು ಸೂಚಿಸಲಾಗಿದೆ.

ಸಭೆಯಲ್ಲಿ ಸಚಿವರು ನೀಡಿದ ಪ್ರಮುಖ ಆದೇಶಗಳು:
1. ಶುದ್ಧ ಕುಡಿಯುವ ನೀರು ಪೂರೈಕೆಗೆ ಆದ್ಯತೆ
ಕರ್ನಾಟಕದ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸುವುದು ಪ್ರತಿ ಪಂಚಾಯಿತಿಯ ಮೊದಲ ಕರ್ತವ್ಯ. ಇತ್ತೀಚೆಗೆ ಕಲುಷಿತ ನೀರು ಸೇವಿಸಿ ಮುಗ್ಧರು ಮೃತಪಟ್ಟ ಘಟನೆಗಳು ಮರುಕಳಿಸಬಾರದು. ಇದಕ್ಕಾಗಿ ಎನ್.ಎ.ಬಿ.ಎ.ಎಲ್. (NABL) ಮಾನ್ಯತೆ ಪಡೆದ ಪ್ರಯೋಗಾಲಯಗಳಲ್ಲಿ ನಿಯಮಿತವಾಗಿ ನೀರಿನ ಗುಣಮಟ್ಟ ಪರೀಕ್ಷೆ ನಡೆಸಬೇಕು. ಮುಂದಿನ 30 ವರ್ಷಗಳ ಕಾಲ ಮೇಲ್ಮೈ ನೀರಿನ ಮೂಲಕ ಕುಡಿಯುವ ನೀರು ಪೂರೈಸಲು ಕ್ರಮ ಕೈಗೊಳ್ಳಲಾಗುತ್ತಿದ್ದು, ನದಿ, ಕೆರೆಗಳಿಗೆ ಮಲತ್ಯಾಜ್ಯ ಹಾಗೂ ಕೈಗಾರಿಕಾ ತ್ಯಾಜ್ಯ ಸೇರದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸಚಿವರು ಕಡಕ್ ಸೂಚನೆ ನೀಡಿದರು.

2. ಸರ್ಕಾರಿ ಆಸ್ತಿಗಳ ಜಿಯೋ ಟ್ಯಾಗಿಂಗ್ ಮತ್ತು ಕೆರೆ ಒತ್ತುವರಿ ತೆರವು
ಗ್ರಾಮೀಣಾಭಿವೃದ್ಧಿ ಇಲಾಖೆ ಹಾಗೂ KRIDL ವತಿಯಿಂದ ಸೃಜಿಸಲಾಗಿರುವ ಎಲ್ಲಾ ಸರ್ಕಾರಿ ಆಸ್ತಿಗಳನ್ನು ಕಡ್ಡಾಯವಾಗಿ ದಾಖಲೀಕರಣ ಹಾಗೂ ಜಿಯೋ ಟ್ಯಾಗ್ (Geo-Tag) ಮಾಡಿ ಅಪ್‌ಲೋಡ್ ಮಾಡಬೇಕು. ಕಾಮಗಾರಿಗಳ ಗುಣಮಟ್ಟದಲ್ಲಿ ಯಾವುದೇ ರಾಜೀ ಇಲ್ಲ ಎಂದು ಸ್ಪಷ್ಟಪಡಿಸಿದ ಸಚಿವರು, ಇಲಾಖೆ ವ್ಯಾಪ್ತಿಯ ಕೆರೆಗಳ ಒತ್ತುವರಿ ತೆರವುಗೊಳಿಸಲು ಆದೇಶಿಸಿದರು.

3. ‘ಇ-ಸ್ವತ್ತು’ ಸರ್ವರ್ ಸಮಸ್ಯೆ ಪರಿಹಾರ
ಇ-ಸ್ವತ್ತು ತಂತ್ರಾಂಶದ ಮೂಲಕ ಅರ್ಜಿ ಸಲ್ಲಿಸಿದ ಸಾರ್ವಜನಿಕರಿಗೆ ಖಾತಾ ವಿಳಂಬವಾಗುತ್ತಿರುವ ದೂರುಗಳು ಬಂದಿದ್ದು, ತಕ್ಷಣವೇ ಸರ್ವರ್ ಸಮಸ್ಯೆಯನ್ನು ಬಗೆಹರಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು ಎಂದು ತಿಳಿಸಿದರು.

4. ಸಾಮಾಜಿಕ ಅರಣ್ಯೀಕರಣ ಆಡಿಟ್
ಮನ್ರೇಗಾ (MNREGA) ಯೋಜನೆಯಡಿ ರಸ್ತೆ ಬದಿ ಹಾಗೂ ನೆಡುತೋಪುಗಳಲ್ಲಿ ಬೆಳೆಸಲಾಗಿರುವ ಸಸಿಗಳನ್ನು ಜಿಯೋ ಟ್ಯಾಗ್ ಮಾಡುವ ಮೂಲಕ, ಸಾಮಾಜಿಕ ಅರಣ್ಯೀಕರಣದ ಸಮಗ್ರ ಆಡಿಟ್ ನಡೆಸಲು ಸಚಿವರು ಸೂಚನೆ ನೀಡಿದರು.

5. ಗ್ರಾಮೀಣ ರಸ್ತೆಗಳ ಸಂಪರ್ಕ
ರಾಜ್ಯದಲ್ಲಿ ಒಟ್ಟು 2 ಲಕ್ಷ ಕಿ.ಮೀ. ಗ್ರಾಮೀಣ ರಸ್ತೆಗಳಿದ್ದು, ಅವುಗಳಲ್ಲಿ ಎಷ್ಟು ಮಣ್ಣಿನ, ಕಾಂಕ್ರೀಟ್ ಹಾಗೂ ಡಾಂಬರು ರಸ್ತೆಗಳಿವೆ ಎಂಬ ಸಂಪೂರ್ಣ ವಿವರವನ್ನು ಸಚಿವರು ಕೇಳಿದ್ದಾರೆ. ಇಂದಿಗೂ ಬಸ್ ಸೌಕರ್ಯವಿಲ್ಲದ ಹಳ್ಳಿಗಳಿಗೆ ಕನಿಷ್ಠ ಒಂದು ಸಂಪರ್ಕ ರಸ್ತೆಯನ್ನಾದರೂ ನಿರ್ಮಿಸಲು ಕ್ರಮ ಕೈಗೊಳ್ಳುವಂತೆ ಕಟ್ಟುನಿಟ್ಟಿನ ಆದೇಶ ನೀಡಿದರು.

ಈ ಉನ್ನತ ಮಟ್ಟದ ಸಭೆ ಹಾಗೂ ಸುದ್ದಿಗೋಷ್ಠಿಯಲ್ಲಿ ಇಲಾಖೆಯ ಕಾರ್ಯದರ್ಶಿಗಳಾದ ಸಮೀರ್ ಶುಕ್ಲ, ರಂದೀಪ್ ಡಿ., ಪಂಚಾಯತ್ ರಾಜ್ ಆಯುಕ್ತರಾದ ಡಾ. ಅರುಂಧತಿ, KRIDL ವ್ಯವಸ್ಥಾಪಕ ನಿರ್ದೇಶಕರಾದ ರಾಜೇಶ್ ಗೌಡ, ಮತ್ತು ಕುಡಿಯುವ ನೀರು ಪೂರೈಕೆ ವಿಭಾಗದ ಆಯುಕ್ತರಾದ ಫೌಜಿಯಾ ತರುನ್ನುಂ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

4000 posts filled in state rural development panchayat raj department: Minister Ishwar Khandre announces
Share. Facebook Twitter LinkedIn WhatsApp Email

Related Posts

BIG NEWS: ರಾಜ್ಯದ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ಸರ್ವರ್ ಸಮಸ್ಯೆ ಹಿನ್ನೆಲೆ ಬೆರಳಚ್ಚು ವಿನಾಯಿತಿ

1 Min Read

SHOCKING : ಬಾಗಲಕೋಟೆಯಲ್ಲಿ ಮನಕಲಕುವ ಘಟನೆ: ಮೃತಪಟ್ಟ ಹೆಣ್ಣು ಮಗುವಿಗೆ ಮರುಜೀವ ಸಿಗಲೆಂದು ಉಪ್ಪಿನ ರಾಶಿಯಲ್ಲಿ ದೇಹವಿಟ್ಟು ಪೋಷಕರ ಪ್ರಾರ್ಥನೆ.!

1 Min Read

ಗ್ರಾಹಕರ ಗಮನಕ್ಕೆ: ನಾಳೆಯಿಂದ 20 ಪಟ್ಟಣಗಳಲ್ಲಿ `ಬೆಸ್ಕಾಂ ಆನ್‌ ಲೈನ್ ಸೇವೆಗಳು’ ತಾತ್ಕಾಲಿಕ ಸ್ಥಗಿತ.!

1 Min Read
Recent News

​ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನಕ್ಕೆ ಭಾರತದ ತೀಕ್ಷ್ಣ ತಿರುಗೇಟು: ‘ಫಿತ್ನಾ ಅಲ್-ಹಿಂದೂಸ್ತಾನ್’ ಪದಬಳಕೆಗೆ ತೀವ್ರ ವಿರೋಧ!

ರಾಜ್ಯದ ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಇಲಾಖೆಯಲ್ಲಿ 4000 ಹುದ್ದೆಗಳ ಭರ್ತಿ : ಸಚಿವ ಈಶ್ವರ್ ಖಂಡ್ರೆ ಘೋಷಣೆ

ಭಾರತದ ಮೇಲೆ ನಿರಂತರ ನಿಗಾ: 16 ತಿಂಗಳಲ್ಲಿ 6 ಉಪಗ್ರಹಗಳನ್ನು ಉಡಾವಣೆ ಮಾಡಿದ ಪಾಕಿಸ್ತಾನ

BIG NEWS: ರಾಜ್ಯದ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ಸರ್ವರ್ ಸಮಸ್ಯೆ ಹಿನ್ನೆಲೆ ಬೆರಳಚ್ಚು ವಿನಾಯಿತಿ

State News
KARNATAKA

ರಾಜ್ಯದ ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಇಲಾಖೆಯಲ್ಲಿ 4000 ಹುದ್ದೆಗಳ ಭರ್ತಿ : ಸಚಿವ ಈಶ್ವರ್ ಖಂಡ್ರೆ ಘೋಷಣೆ

By kannadanewsnow57 KARNATAKA 2 Mins Read

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು ಹುದ್ದೆಗಳ ಪೈಕಿ ಮೊದಲ ಹಂತದಲ್ಲಿ 4,000 ಹುದ್ದೆಗಳ…

BIG NEWS: ರಾಜ್ಯದ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ಸರ್ವರ್ ಸಮಸ್ಯೆ ಹಿನ್ನೆಲೆ ಬೆರಳಚ್ಚು ವಿನಾಯಿತಿ

SHOCKING : ಬಾಗಲಕೋಟೆಯಲ್ಲಿ ಮನಕಲಕುವ ಘಟನೆ: ಮೃತಪಟ್ಟ ಹೆಣ್ಣು ಮಗುವಿಗೆ ಮರುಜೀವ ಸಿಗಲೆಂದು ಉಪ್ಪಿನ ರಾಶಿಯಲ್ಲಿ ದೇಹವಿಟ್ಟು ಪೋಷಕರ ಪ್ರಾರ್ಥನೆ.!

ಗ್ರಾಹಕರ ಗಮನಕ್ಕೆ: ನಾಳೆಯಿಂದ 20 ಪಟ್ಟಣಗಳಲ್ಲಿ `ಬೆಸ್ಕಾಂ ಆನ್‌ ಲೈನ್ ಸೇವೆಗಳು’ ತಾತ್ಕಾಲಿಕ ಸ್ಥಗಿತ.!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.