ನವದೆಹಲಿ: ನವದೆಹಲಿ ಪ್ರವಾಸದಲ್ಲಿರುವ ತಿಪಟೂರು ವಿಧಾನಸಭಾ ಕ್ಷೇತ್ರದ ಶಾಸಕ ಕೆ. ಷಡಕ್ಷರಿ ಅವರು ಇಂದು ಬೆಳಗ್ಗೆ ಇಲ್ಲಿನ ಕರ್ನಾಟಕ ಭವನದಲ್ಲಿ ದಿಢೀರ್ ಅಸ್ವಸ್ಥಗೊಂಡಿದ್ದಾರೆ. ತಕ್ಷಣವೇ ಕಾರ್ಯಪ್ರವೃತ್ತರಾದ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಶಾಸಕರನ್ನು ಆಸ್ಪತ್ರೆಗೆ ದಾಖಲಿಸಿ, ಅಗತ್ಯ ತುರ್ತು ಚಿಕಿತ್ಸೆಗೆ ಸೂಕ್ತ ವ್ಯವಸ್ಥೆ ಕಲ್ಪಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಶಾಸಕರನ್ನು ಆಸ್ಪತ್ರೆಗೆ ಸೇರಿಸಿದ ಬಳಿಕ ಡಿಸಿಎಂ ಡಾ. ಜಿ. ಪರಮೇಶ್ವರ್ ಅವರು ಎರಡನೇ ಬಾರಿಗೆ ಖುದ್ದಾಗಿ ಆಸ್ಪತ್ರೆಗೆ ಭೇಟಿ ನೀಡಿ ಷಡಕ್ಷರಿ ಅವರ ಆರೋಗ್ಯ ಸ್ಥಿತಿಯನ್ನು ಮತ್ತೊಮ್ಮೆ ವಿಚಾರಿಸಿದರು.
ಆರೋಗ್ಯ ಸ್ಥಿರ – ಆತಂಕ ಬೇಡ ಎಂದ ವೈದ್ಯರು: ಆಸ್ಪತ್ರೆಯ ಭೇಟಿಯ ಸಂದರ್ಭದಲ್ಲಿ ಡಿಸಿಎಂ ಅವರು ಶಾಸಕರಿಗೆ ಚಿಕಿತ್ಸೆ ನೀಡುತ್ತಿರುವ ತಜ್ಞ ವೈದ್ಯರ ತಂಡದೊಂದಿಗೆ ಸುದೀರ್ಘ ಸಮಾಲೋಚನೆ ನಡೆಸಿದರು. ಷಡಕ್ಷರಿ ಅವರ ಆರೋಗ್ಯದ ಸ್ಥಿತಿಗತಿಯ ಕುರಿತು ಸಂಪೂರ್ಣ ಮಾಹಿತಿ ಪಡೆದುಕೊಂಡ ಅವರು, ಶಾಸಕರಿಗೆ ಅಗತ್ಯವಿರುವ ಎಲ್ಲ ರೀತಿಯ ಉನ್ನತ ಹಾಗೂ ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚನೆ ನೀಡಿದರು.
ಸದ್ಯ ಶಾಸಕ ಕೆ. ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಸಂಪೂರ್ಣವಾಗಿ ಸ್ಥಿರವಾಗಿದ್ದು (Stable), ಸಾರ್ವಜನಿಕರು ಹಾಗೂ ಅವರ ಅಭಿಮಾನಿಗಳು ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ ಎಂದು ಚಿಕಿತ್ಸೆ ನೀಡುತ್ತಿರುವ ವೈದ್ಯರು ಸ್ಪಷ್ಟಪಡಿಸಿದ್ದಾರೆ.
Liver cancer: ‘ಸಕ್ಕರೆಯುಕ್ತ ಪಾನೀಯ’ಗಳ ಅತಿಯಾದ ಬಳಕೆಯಿಂದ ‘ಲಿವರ್ ಕ್ಯಾನ್ಸರ್’ಗೆ ಕಾರಣವಾಗಬಹುದು: ಅಧ್ಯಯನ
BREAKING: ಇರಾನ್ ಮೇಲೆ ಇಂದು ರಾತ್ರಿ ಭೀಕರ ದಾಳಿ: ಅಮೇರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಣೆ








