ಬೆಂಗಳೂರು : ವಿಧಾನಸೌಧದ ಆವರಣದಲ್ಲಿ ʻತಾಯಿ ಭುವನೇಶ್ವರಿʼ ಪ್ರತಿಮೆ ಸ್ಥಾಪನೆ ಮಾಡಿದ್ದು, ನವೆಂಬರ್ 1 ರಂದು ಪ್ರತಿಮೆ ಅನಾವರಣ ಮಾಡಲಾಗುವುದು.
ವಿಧಾನಸೌಧದ ಆವರಣದಲ್ಲಿ 25 ಅಡಿ ಎತ್ತರದ ಭುವನೇಶ್ವರಿದೇವಿ ಕಂಚಿನ ಪ್ರತಿಮೆ ಕಾಮಗಾರಿ ಪ್ರಗತಿಯಲ್ಲಿದ್ದು, ನವೆಂಬರ್ 1 ರಂದು ಪ್ರತಿಮೆ ಅನಾವರಣ ಮಾಡಲು ನಿರ್ಧರಿಸಲಾಗಿದೆ. ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮತ್ತು ಸುವರ್ಣ ಸಂಭ್ರಮ ವಿಧಾನಸೌಧದ ಮುಂಭಾಗದಲ್ಲಿ ನಡೆಯಲಿದೆ.
ಕನ್ನಡ ನಾಡು ಏಕೀಕರಣಗೊಂಡು, ಕರ್ನಾಟಕ ಎಂಬ ಹೆಸರು ನಾಮಕರಣವಾಗಿ 50 ವರ್ಷ ಪೂರೈಸಿರುವ ಸಂದರ್ಭದಲ್ಲಿ ಕನ್ನಡತನದ ಹೆಗ್ಗುರುತು ವಿಧಾನಸೌಧದ ಆವರಣದಲ್ಲಿರಬೇಕೆಂಬ ಉದ್ದೇಶದಿಂದ ಕನ್ನಡ ನಾಡು, ನುಡಿ, ಸಂಸ್ಕೃತಿಯ ಸಂಕೇತವಾದ ತಾಯಿ ಭುವನೇಶ್ವರಿ ಪ್ರತಿಮೆಯನ್ನು ವಿಧಾನಸೌಧದ ಆವರಣದಲ್ಲಿ ಸುಮಾರು 23 ಕೋಟಿ ರೂ. ವೆಚ್ಚದಲ್ಲಿ ಸ್ಥಾಪನೆ ಮಾಡಲಾಗುತ್ತಿದೆ.