ಚೆನ್ನಪಟ್ಟಣ: ತೀವ್ರವಾದ ಎಡ ಭುಜದ ನೋವಿನಿಂದ ಬಳಲುತ್ತಿದ್ದ 57 ವರ್ಷದ ಚೆನ್ನಪಟ್ಟಣ ಮೂಲದ ವ್ಯಕ್ತಿಗೆ ನಾಗರಭಾವಿ ಫೋರ್ಟಿಸ್ ಆಸ್ಪತ್ರೆಯಲ್ಲಿ ಭುಜದ ಕೀಲು ಮರುನಿರ್ಮಣ ಮಾಡಾಗಿದೆ.
ನಾಗರಭಾವಿ ಫೋರ್ಟಿಸ್ ಆಸ್ಪತ್ರೆಯ ಆರ್ಥೋಪೆಡಿಕ್ಸ್ ಸಲಹೆಗಾರ ಡಾ. ಡಾ. ಮಂಜುನಾಥ್ ಕೋಡಿಹಳ್ಳಿ ಅವರ ತಂಡ ಈ ಸಂಕೀರ್ಣ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಿದ್ದು, ಶಸ್ತ್ರಚಿಕಿತ್ಸೆಯಾದ ಒಂದೇ ದಿನದಲ್ಲಿ ರೋಗಿಯನ್ನು ಬಿಡುಗಡೆ ಮಾಡಲಾಗಿದೆ.
ಈ ಕುರಿತು ಮಾತನಾಡಿದ ಫೋರ್ಟಿಸ್ ಆಸ್ಪತ್ರೆಯ ಆರ್ಥೋಪೆಡಿಕ್ಸ್ ಸಲಹೆಗಾರ ಡಾ. ಮಂಜುನಾಥ್ ಕೋಡಿಹಳ್ಳಿ , ಚೆನ್ನಪಟ್ಟಣ ಮೂಲದ 57 ವರ್ಷದ ಪ್ರಕಾಶ್ ಎಂಬ ವ್ಯಕ್ತಿಯು ತನ್ನ ಎಡ ಭುಜದಲ್ಲಿ ಅತೀವಾ ನೋವು ಅನುಭವಿಸುತ್ತಿದ್ದರು. ನೋವು ನಿವಾರಿಸಿಕೊಳ್ಳಲು ಸಾಕಷ್ಟು ಪೇನ್ ಕಿಲ್ಲರ್ಗಳನ್ನು ಸತತ 10 ದಿನದವರೆಗೂ ದೂಡಿದ್ದಾರೆ. ಆದರೆ, ಅಸಾಧ್ಯವಾದ ನೋವು ಇದ್ದ ಕಾರಣ ಅವರು ಫೋರ್ಟಿಸ್ ಆಸ್ಪತ್ರೆಗೆ ದಾಖಲಾದರು. ಸಂಪೂರ್ಣ ತಪಾಸಣೆಯ ನಂತರ ಅವರ ಎಡ ಭುಜದ ಅಕ್ರೋಮಿಯೊಕ್ಲಾವಿಕ್ಯುಲರ್ (ಎಸಿ) ಕೀಲುಗಳಲ್ಲಿ ಮುರಿತವಾಗಿರುವುದು ಕಂಡು ಬಂತು. ಅಕ್ರೋಮಿಯೊಕ್ಲಾವಿಕ್ಯುಲರ್ ಎನ್ನುವುದು ಭುಜದಲ್ಲಿನ ಡಿಸ್ಲೊಕೇಷನ್ಗಳಲ್ಲಿ ಒಂದು. ಇಲ್ಲಿ ಮುರಿತವಾಗಿ ೧೦ ದಿನ ಕಳೆದಿದ್ದರೂ ಅವರು ಹಾಗೇ ನಿರ್ಲಕ್ಷಿಸಿದ್ದರಿಂದ ಪರಿಸ್ಥಿತಿ ಸವಾಲಿನದ್ದಾಗಿತ್ತು. ಅವರ ಫಿಟ್ನೆಸ್ ತಿಳಿದುಕೊಳ್ಳಲು ಹೃದ್ರೋಗತಜ್ಞರ ಅಭಿಪ್ರಾಯದ ಜೊತೆಗೆ, ರೋಗಿಗೆ ಎಡ ಭುಜದ ಆತ್ರೋಸ್ಕೋಪಿಕ್ ಎಸಿ ಕೀಲು ಪುನರ್ನಿರ್ಮಾಣ ಮಾಡಲು ನಿರ್ಣಯಿಸಲಾಯಿತು ಎಂದರು.
ಸಾಕಷ್ಟು ಜನರು ಭುಜದ ನೋವಿದ್ದರೂ ಅದನ್ನು ನಿರ್ಲಕ್ಷಿಸಿ ಬಿಡುತ್ತಾರೆ, ಕೆಲವೊಮ್ಮೆ ಭುಜದ ಮೂಳೆ ಮುರಿತ ಅಥವಾ ಡಿಸ್ಲೊಕೇಷನ್ಗಳಿಂದ ಮುಂದಿನ ದಿನಗಳಲ್ಲಿ ಗಂಭೀರ ಸಮಸ್ಯೆ ಆಗಬಹುದು. ಹೀಗಾಗಿ ಯಾವುದೇ ಕಾರಣಕ್ಕೂ ಭುಜದ ನೋವನ್ನು ನಿರ್ಲಕ್ಷಿಸುವುದು ಒಳ್ಳೆಯದಲ್ಲ ಎಂದು ಹೇಳಿದರು.
ಫೋರ್ಟಿಸ್ ಆಸ್ಪತ್ರೆ ಫೆಸಿಲಿಟಿಸ್ ನಿರ್ದೇಶಕ ತೇಜಸ್ವಿನಿ ಪಾರ್ಥಸಾರಥಿ ಮಾತನಾಡಿ, “ನಮ್ಮಲ್ಲಿರುವ ಅತ್ಯಾಧುನಿಕ ತಂತ್ರಜ್ಞಾನಗಳು ಹಾಗೂ ರೋಬೋಟಿಕ್ ಶಸ್ತ್ರಚಿಕಿತ್ಸೆಗಳು ಹೆಚ್ಚು ಪ್ರಚಲಿದಲ್ಲಿದ್ದು, ವಿಶ್ವ ದರ್ಜೆಯ ಮೂಳೆಚಿಕಿತ್ಸೆಯನ್ನು ನೀಡಲಾಗುತ್ತಿದೆ ಎಂದು ಹೇಳಿದರು.
BREAKING: ಏಪ್ರಿಲ್.12ರಿಂದ ಹುಬ್ಬಳ್ಳಿ – ರಾಮೇಶ್ವರಂ ಸಾಪ್ತಾಹಿಕ ಎಕ್ಸ್ ಪ್ರೆಸ್ ವಿಶೇಷ ರೈಲು ಸಂಚಾರ ಪುನರಾರಂಭ
BIG NEWS : ‘ಗೃಹಲಕ್ಷ್ಮಿ’ ಯೋಜನೆ ಕುರಿತು ಮಹತ್ವದ ಪ್ರಕಟಣೆ ಹೊರಡಿಸಿದ ರಾಜ್ಯ ಸರ್ಕಾರ