ಮೈಸೂರು: ಜಿಲ್ಲೆಯ ಕೆ.ಆರ್‌ ನಗರ ತಾಲೂಕಿನ ಚಂದಗಾಲ ಗ್ರಾಮದಲ್ಲಿ ಅಪರೂಪದ ಘಟನೆ ನಡೆದಿದೆ. ಇಲ್ಲೊಂದು ವೃದ್ಧ ದಂಪತಿ
ಸಾವಿನಲ್ಲೂ ಒಂದಾಗಿದ್ದಾರೆ.

BIGG NEWS: ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ತುಂತುರು ಮಳೆ; ವಾಹನ ಸವಾರರಿಗೆ ಕಿರಿಕಿರಿ

 

ರಾಮೇಗೌಡ, ಗೌರಮ್ಮ ಮೃತ ದಂಪತಿ. ಜಮೀನಿನಲ್ಲಿ ಕೆಲಸ ಮಾಡುವಾಗ ಅಸ್ವಸ್ಥಗೊಂಡು ರಾಮೇಗೌಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪತಿ ಮನೆಗೆ ಬಾರದ ಹಿನ್ನೆಲೆ ಜಮೀನಿಗೆ ಹೋದ ಗೌರಮ್ಮ ಪತಿಯ ಸಾವು ಕಂಡು ಆಘಾತದಿಂದ ಕುಸಿದು ಬಿದ್ದಿದ್ದಾರೆ. ಈ ವೇಳೆ ಕೆಲವರ ಸಹಾಯದಿಂದ ಗೌರಮ್ಮಗೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿ ಮನೆಗೆ ಕರೆದುಕೊಂಡು ಬರಲಾಗಿತ್ತು. ಆದ್ರೆ ಪತಿ ರಾಮೇಗೌಡ ಅಂತ್ಯಸಂಸ್ಕಾರದ ವೇಳೆ ಪತ್ನಿ ಗೌರಮ್ಮ ಮೃತಪಟ್ಟಿದ್ದಾರೆ. ಗ್ರಾಮಸ್ಥರು ಅಕ್ಕಪಕ್ಕದಲ್ಲೇ ವೃದ್ಧ ದಂಪತಿ ಅಂತ್ಯಕ್ರಿಯೆ ನೆರವೇರಿಸಿದ್ದಾರೆ.

Share.
Exit mobile version