ಬೆಂಗಳೂರು : ಸಿಲಿಂಡರ್ ಸ್ಫೋಟಗೊಂಡು ಅಕ್ರಮ ಬಾಂಗ್ಲಾದೇಶದ ವಲಸಿಗರು ನೆಲೆಸಿದ್ದ ಶೆಡ್ಗಳು ಬೆಂಕಿಗಾಹುತಿಯಾದ ಘಟನೆ ಬೆಂಗಳೂರು ಹೊರವಲಯದ ಬೇಗೂರಿನ ಎಳೇನಹಳ್ಳಿಯಳ್ಳಿಯಲ್ಲಿರುವ ಡಂಪಿಂಗ್ ಯಾರ್ಡ್ನಲ್ಲಿ ನಡೆದಿದೆ.
ಸುಮಾರು 5 ಎಕರೆ ಜಾಗದಲ್ಲಿ ಅಕ್ರಮವಾಗಿ ನೆಲೆಸಿದ್ದ ಇವರನ್ನು ಕೆಲ ದಿನಗಳ ಹಿಂದೆ ಸ್ಥಳದಿಂದ ಖಾಲಿ ಮಾಡಲಾಗಿತ್ತು. ಆದರೆ ರಾತ್ರೋರಾತ್ರಿ ಮತ್ತೆ ವಲಸಿಗರು ಇಲ್ಲಿಗೆ ಆಗಮಿಸಿ ಶೆಡ್ ಹಾಕಿದ್ದರು.ತಡರಾತ್ರಿ ಸಿಲಿಂಡರ್ ಸ್ಫೋಟದಿಂದ ಶೆಡ್ಗಳು ಹೊತ್ತಿ ಉರಿದಿವೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಎರಡು ಗಂಟೆ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದಾರೆ.
ಹೊತ್ತಿ ಉರಿದ ಗೋದಾಮು
ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಪ್ಲಾಸ್ಟಿಕ್ ಗೋದಾಮು ಒಂದು ಬೆಂಕಿಯ ಕೆನ್ನಾಲಿಗೆಗೆ ಹೊತ್ತಿ ಉರಿದಿರುವ ಘಟನೆ ಬೆಂಗಳೂರಿನ ಬೇಗೂರಿನಲ್ಲಿ ನಡೆದಿದೆ.
ಬೇಗುರಿನ ಅಕ್ಷಯನಗರದಲ್ಲಿರುವ ಹಳೆಯ ಪ್ಲಾಸ್ಟಿಕ್ ಗೋದಾಮಿನಲ್ಲಿ ಈ ಬೆಂಕಿ ಅವಘಡ ಸಂಭವಿಸಿದೆ. ಘಟನಾ ಸ್ಥಳಕ್ಕೆ ನಾಲ್ಕು ಅಗ್ನಿಶಾಮಕದಳ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದ್ದು, ಗೋದಾಮಿನಲ್ಲಿ ಇರುವ ಪ್ಲಾಸ್ಟಿಕ್ ವಸ್ತುಗಳು ದಗದಗನೆ ಹೊತ್ತಿ ಉರಿದಿವೆ. ಶಾರ್ಟ್ ಸರ್ಕ್ಯೂಟ್ ನಿಂದ ಈ ಒಂದು ಅಗ್ನಿ ದುರಂತ ಸಂಭವಿಸಿರಬಹುದು ಎಂದು ಶಂಕೆ ವ್ಯಕ್ತವಾಗಿದೆ.








