ಕಲಬುರ್ಗಿ: ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವಿನ ಬೆನ್ನಲ್ಲೇ, ಮಹಿಳೆಯೊಬ್ಬರಿಗೆ ಸಿಜೇರಿಯನ್ ಮಾಡಿದಂತ ವೈದ್ಯರು ಮಹಾಎಡವಟ್ಟು ಮಾಡಿರುವಂತ ಘಟನೆ ನಡೆದಿದೆ. ಸಿಜೇರಿಯನ್ ಮಾಡಿದ ಬಳಿಕ ಮಹಿಳೆಯ ಹೊಟ್ಟೆಯಲ್ಲೇ ಉಂಡೆ ಬಟ್ಟೆ, ಹತ್ತಿಯನ್ನು ಬಿಟ್ಟು ಹೊಲಿಗೆ ಹಾಕಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಕಲಬುರ್ಗಿಯ ಜಿಮ್ಸ್ ಆಸ್ಪತ್ರೆಗೆ ಫೆಬ್ರವರಿ.5ರಂದು ಭಾಗ್ಯಶ್ರಿ ಎಂಬುವರು ಹೆರಿಗೆಗಾಗಿ ದಾಖಲಾಗಿದ್ದರು. ಸಿಜೇರಿಯನ್ ಮೂಲಕ ಹೆರಿಗೆ ಮಾಡಿಸಿದ್ದಂತ ವೈದ್ಯರು ಹೊಟ್ಟೆಯಲ್ಲೇ ಬಟ್ಟೆ ಹುಂಡೆ ಹಾಗೂ ಹತ್ತಿ ಬಿಟ್ಟು ಹೊಲಿಗೆ ಹಾಕಿದ್ದಾರೆ ಎನ್ನಲಾಗುತ್ತಿದೆ.
ಒಂದು ವಾರದ ಬಳಿಕ ಮಹಿಳೆಗೆ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಸ್ಕ್ಯಾನಿಂಗ್ ಮಾಡಿಸಲು ಜಿಮ್ಸ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಈ ವೇಳೆಯಲ್ಲಿ ವೈದ್ಯರ ಎಡವಟ್ಟು ಬಟಾಬಯಲಾಗಿದೆ. ಆ ಬಳಿಕ ಅಫಜಲಪುರದ ಕರಜಗಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತೆರಳಿ ವೈದ್ಯರಿಂದ ಮರು ಶಸ್ತ್ರಚಿಕಿತ್ಸೆ ಮಾಡಿಸಿದ್ದು, ಹೊಟ್ಟೆಯಲ್ಲಿದ್ದಂತ ಉಂಡೆ ಬಟ್ಟೆ, ಹತ್ತಿಯನ್ನು ತೆಗೆದಿದ್ದಾರೆ ಎಂಬುದಾಗಿ ಕುಟುಂಬಸ್ಥರು ಹೇಳಿದ್ದಾರೆ.
ಇನ್ನೂ ಭಾಗ್ಯಶ್ರೀ ಕುಟುಂಬಸ್ಥರ ಆರೋಪವನ್ನು ಜಿಮ್ಸ್ ವೈದ್ಯರು ತಳ್ಳಿ ಹಾಕಿದ್ದಾರೆ. ಜಿಲ್ಲಾ ಸರ್ಜನ್ ಡಾ.ಅಸ್ನಾ ಬೇಗ್ ಅವರು ಮಾತನಾಡಿ ಹೆರಿಗೆ ನಂತ್ರ ರಕ್ತ ಸ್ತ್ರಾವ ಸಲುವಾಗಿ ಪ್ಯಾಡ್ ಇಡಲಾಗಿದೆ. 2 ದಿನಗಳ ನಂತ್ರ ಮಹಿಳೆ ಬಂದು ಅದನ್ನು ತೆಗೆಸಿಕೊಳ್ಳಬೇಕಾಗಿತ್ತು. ಆದರೇ ಅವರು ಬಂದಿರಲಿಲ್ಲ. ಈಗ ಮಹಿಳೆಗೆ ಯಾವುದೇ ತೊಂದರೆ ಇಲ್ಲ ಅಂತ ಸಮಜಾಯಿಸಿ ನೀಡಿದ್ದಾರೆ.
ಕಲಬುರಗಿ ಡಿಹೆಚ್ಓ ಡಾ. ಶರಣಬಸಪ್ಪ ಕ್ಯಾತನಾಳ್ ಮಾತನಾಡಿ ಈ ಪ್ರಕರಣದಲ್ಲಿ ಯಾರದ್ದು ತಪ್ಪಿಲ್ಲ. ಬಾಣಂತಿ ಹಾಗೂ ವೈದ್ಯರ ಮಧ್ಯಯ ಕಮಿನ್ಯುಕೇಶನ್ ಗ್ಯಾಪ್ ನಿಂದ ಹೀಗಾಗಿದೆ. ಸಾಮಾನ್ಯವಾಗಿ ಹೆರಿಗೆ ಆದ ಮೇಲೆ ನಾವು ರಕ್ತ ಸ್ರಾವ ಆದ ಜಾಗಕ್ಕೆ ಹತ್ತಿ ಇಡುತ್ತೇವೆ ಎಂಬುದಾಗಿ ತಿಳಿಸಿದರು.
BREAKING: ಉದಯಗಿರಿ ಠಾಣೆ ಮೇಲೆ ಕಲ್ಲು ತೂರಾಟ ಕೇಸ್: ಮೈಸೂರಲ್ಲಿ 144 ಸೆಕ್ಷನ್ ಅಡಿ ನಿಷೇಧಾಜ್ಞೆ ಜಾರಿ
Watch Video: ಹಮಾಸ್ ಸೈನಿಕನ ಹಣೆಗೆ ಮುತ್ತಿಟ್ಟ ಬಿಡುಗಡೆಗೊಂಡ ಇಸ್ರೇಲಿ ಒತ್ತೆಯಾಳು | Israel-Hamas war