Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

X ಖಾತೆ ಬ್ಲಾಕ್: ಕೇಂದ್ರ ಸರ್ಕಾರದ ವಿರುದ್ಧ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ‘ಕಾಕ್ರೋಚ್ ಜನತಾ ಪಾರ್ಟಿ’ ಸಂಸ್ಥಾಪಕ!

ಮೇ.27ರಂದು ಬೆಂಗಳೂರಿನಲ್ಲಿ ದೇಶದ ಪ್ರಥಮ ‘ರಾಷ್ಟ್ರೀಯ ಎಐ ಮತ್ತು ಡಿಜಿಟಲ್ ವಾಟರ್ ಶೃಂಗಸಭೆ 2026’ ಆಯೋಜನೆ

BREAKING: ಬೆಂಗಳೂರಲ್ಲಿ ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವೃದ್ಧೆಗೆ ₹24 ಕೋಟಿ ವಂಚಿಸಿದ್ದ ಆರು ಖತರ್ನಾಕ್ ಸೈಬರ್ ಕಳ್ಳರು ಅರೆಸ್ಟ್!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING NEWS: ರಾಜ್ಯದಲ್ಲೊಂದು ಹೀನಕೃತ್ಯ: ಹಸುವಿನ ಕೆಚ್ಚಲನ್ನೇ ಕೊಯ್ದ ಪಾಪಿಗಳು
KARNATAKA

SHOCKING NEWS: ರಾಜ್ಯದಲ್ಲೊಂದು ಹೀನಕೃತ್ಯ: ಹಸುವಿನ ಕೆಚ್ಚಲನ್ನೇ ಕೊಯ್ದ ಪಾಪಿಗಳು

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ರಾಜ್ಯದಲ್ಲೊಂದು ಪಾಪಿಗಳು ಹೀನಕೃತ್ಯವೆಸಗಿದ್ದಾರೆ. ಹಸುವೊಂದರ ಕೆಚ್ಚಲನ್ನೇ ಜಿಹಾದಿಗಳು ಕೊಯ್ದಿದ್ದಾರೆ. ಅವರ ವಿರುದ್ಧ ಕ್ರಮ ವಹಿಸದಿದ್ದರೇ ಕರಾಳ ಸಂಕ್ರಾಂತಿ ಆಚರಣೆ ಮಾಡುವುದಾಗಿ ಪ್ರತಿಪಕ್ಷ ನಾಯಕ ಆರ್.ಅಶೋಕ್ ಎಚ್ಚರಿಕೆ ನೀಡಿದ್ದಾರೆ.

ಚಾಮರಾಜಪೇಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡೀ ದೇಶ ಗೋವನ್ನು ಪವಿತ್ರ ಎಂದು ಪರಿಗಣಿಸಿದೆ. ಸಂಕ್ರಾಂತಿ ಹಬ್ಬದಲ್ಲೂ ಗೋವನ್ನು ಪೂಜಿಸಲಾಗುತ್ತದೆ. ಕಾಂಗ್ರೆಸ್ ಸರ್ಕಾರ ಹೊಸ ವರ್ಷಕ್ಕೆ ಬೆಲೆ ಏರಿಕೆಯ ಕೊಡುಗೆ ನೀಡಿದೆ.‌ ಅದೇ ರೀತಿ ಸಂಕ್ರಾಂತಿ ಹಬ್ಬದ ಸಮಯದಲ್ಲಿ ಹಸುವಿನ ಕೆಚ್ಚಲು ಕೊಯ್ದುಹಾಕುವ ಕೊಡುಗೆಯನ್ನು ನೀಡಿದೆ. ಇಂತಹ ಜಿಹಾದಿ ಮನಸ್ಥಿತಿಯನ್ನು ನಾನು ಈವರೆಗೆ ನೋಡಿಲ್ಲ ಎಂದರು.

ನೂರಾರು ವರ್ಷಗಳಿಂದ ಚಾಮರಾಜಪೇಟೆಯಲ್ಲಿ ಪಶು ಆಸ್ಪತ್ರೆ ಇದೆ. ಈ ಭೂಮಿಯನ್ನು ವಕ್ಫ್ ಮಂಡಳಿಗೆ ಸೇರಿಸಲು ಪ್ರಯತ್ನ ನಡೆದಿತ್ತು. ಆಗ ಸರ್ಕಾರದ ವಿರುದ್ಧ ಪ್ರತಿಭಟಿಸುವುದರ ಜೊತೆಗೆ, ಕೋರ್ಟ್ ಮೊರೆ ಹೋಗಲಾಯಿತು. ಪ್ರತಿಭಟನೆಯ ಸಮಯದಲ್ಲಿ ಇವೇ ಹಸುಗಳನ್ನು ತೋರಿಸಲಾಗಿತ್ತು. ಅದಕ್ಕಾಗಿಯೇ ಮಚ್ಚು, ಡ್ರ್ಯಾಗರ್ ಬಳಸಿ ಹಸುಗಳ ಕೆಚ್ಚಲು ಕೊಯ್ದು, ಕಾಲು ಕತ್ತರಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ ನಾಯಕರು ಮತಕ್ಕಾಗಿ ದೇವಸ್ಥಾನಕ್ಕೆ ಹೋಗುತ್ತಾರೆ‌. ಆದರೆ ಯಾರಿಗೂ ಹಿಂದೂ ಧರ್ಮದ ಬಗ್ಗೆ ಶ್ರದ್ಧೆ ಇಲ್ಲ. ಹಿಂದೂಗಳಲ್ಲಿ ಭೀತಿ ಹುಟ್ಟಿಸಲು ಜಿಹಾದಿಗಳು ಹೀಗೆ ಮಾಡಿದ್ದರೂ ಕಾಂಗ್ರೆಸ್ ನಾಯಕರು ಇದನ್ನು ಖಂಡಿಸುವುದಿಲ್ಲ. ಈಗ ಯಾವ ಮುಖ ಇಟ್ಟುಕೊಂಡು ಸಂಕ್ರಾಂತಿ ಆಚರಣೆ ಮಾಡುತ್ತಾರೆ? ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ಕರಾಳ ಸಂಕ್ರಾಂತಿ ಆಚರಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಈ ಭಾಗದಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಸಿದರೆ ಅದನ್ನು ಕಿತ್ತುಕೊಂಡು ಹೋಗುತ್ತಾರೆ. ಈಗ ಆ ಪ್ರತಿಭಟನೆಯಲ್ಲಿ ಪಾಲ್ಗೊಂಡವರಿಗೆ ಬೆದರಿಕೆ ಹಾಕುವ ಕೆಲಸ ಮಾಡಿದ್ದಾರೆ. ಎಸಿಪಿ ಜೊತೆ ಮಾತಾಡಿದ್ದು, ತಕ್ಷಣ ಕ್ರಮ ವಹಿಸುವಂತೆ ಸೂಚಿಸಿದ್ದೇನೆ. ಇಲ್ಲವಾದರೆ ತೀವ್ರವಾದ ಪ್ರತಿಭಟನೆ ಮಾಡುತ್ತೇವೆ. ಕಾಂಗ್ರೆಸ್ ಸಚಿವರು, ಮುಖ್ಯಮಂತ್ರಿ ಈ ಕಡೆ ತಿರುಗಿಯೂ ನೋಡಲ್ಲ ಎಂದರು.

ಒಂದು ಹಸು 20 ಲೀಟರ್ ಹಾಲು ನೀಡುತ್ತಿತ್ತು. ಈಗ ಯಾವುದೇ ಹಸುಗಳು ಬದುಕುವ ಸ್ಥಿತಿಯಲ್ಲೇ ಇಲ್ಲ. ಪಶು ಸಂಗೋಪನೆ ಮಾಡುವವರಿಗೆ ನಾವು ಕೂಡ ಸಹಾಯ ಮಾಡುತ್ತೇವೆ. ಸರ್ಕಾರ ಕೂಡ ನೆರವು ನೀಡಬೇಕೆಂದು ಆಗ್ರಹಿಸಿದರು.

ಚಾಮರಾಜಪೇಟೆಯಲ್ಲಿ ಮಾದಕ ವಸ್ತು ದಂಧೆ ನಡೆಯುತ್ತಿದೆ. ಆಸ್ಪತ್ರೆ, ಮೆಡಿಕಲ್ ಸ್ಟೋರ್ ಗಳಲ್ಲಿ ಮಾತ್ರೆ, ಔಷಧಿಗಳನ್ನು ಮಾದಕ ವಸ್ತುಗಳಾಗಿ ಬಳಸಲಾಗುತ್ತಿದೆ. ಈ ಬಗ್ಗೆ ಸದನದಲ್ಲಿ ಪ್ರಸ್ತಾಪ ಮಾಡಿದ್ದೆ. ಆದರೂ ಸರ್ಕಾರ ಕ್ರಮ ಕೈಗೊಂಡಿಲ್ಲ ಎಂದು ದೂರಿದರು.

ವಕ್ಫ್ ಆಸ್ತಿ ಕಬಳಿಕೆ ವಿರುದ್ಧ ಹೋರಾಟ ಮುಂದುವರಿಯಲಿದೆ. ಶ್ರೀರಂಗಪಟ್ಟಣ ಸೇರಿದಂತೆ ಎಲ್ಲ ಕಡೆ ಪಹಣಿ ತಿದ್ದುಪಡಿ ಮಾಡಲು ಆಗ್ರಹಿಸುತ್ತೇನೆ ಎಂದರು.

ಕಾಂಗ್ರೆಸ್ ಒಡೆದ ಮನೆ

ಕಾಂಗ್ರೆಸ್ ಈಗ ಒಡೆದ ಮನೆಯಾಗಿದೆ. ಎಲ್ಲರೂ ಔತಣಕೂಟ ನಡೆಸುತ್ತಿದ್ದಾರೆ. ಸಿಎಂ ಕುರ್ಚಿಯ ಅವಧಿ ಎರಡೂವರೆ ವರ್ಷ ಎಂದು ಹೊಂದಾಣಿಕೆಯಾಗಿದೆ. ಅಧಿಕಾರವನ್ನು ಒದ್ದು ಕಿತ್ತುಕೊಳ್ಳುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರೆ, ಅಧಿಕಾರ ಕೊಡದಿರಲು ಸಿದ್ದರಾಮಯ್ಯ ಬಣ ತಂತ್ರ ಮಾಡುತ್ತಿದೆ. ಆದ್ದರಿಂದ ಆಡಳಿತ ಯಂತ್ರ ಕುಸಿದಿದೆ ಎಂದರು.

Share. Facebook Twitter LinkedIn WhatsApp Email

Related Posts

ಮೇ.27ರಂದು ಬೆಂಗಳೂರಿನಲ್ಲಿ ದೇಶದ ಪ್ರಥಮ ‘ರಾಷ್ಟ್ರೀಯ ಎಐ ಮತ್ತು ಡಿಜಿಟಲ್ ವಾಟರ್ ಶೃಂಗಸಭೆ 2026’ ಆಯೋಜನೆ

2 Mins Read

BREAKING: ಬೆಂಗಳೂರಲ್ಲಿ ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವೃದ್ಧೆಗೆ ₹24 ಕೋಟಿ ವಂಚಿಸಿದ್ದ ಆರು ಖತರ್ನಾಕ್ ಸೈಬರ್ ಕಳ್ಳರು ಅರೆಸ್ಟ್!

2 Mins Read

ಜೂನ್.1ರಂದು ಶಿವಮೊಗ್ಗದಲ್ಲಿ ಸಿಎಂ ಸಿದ್ಧರಾಮಯ್ಯ ‘ಕರ್ನಾಟಕ ಪಬ್ಲಿಕ್ ಶಾಲೆ’ಗಳ ಶಂಕುಸ್ಥಾಪನೆ; ಸಚಿವ ಮಧು ಬಂಗಾರಪ್ಪ

2 Mins Read
Recent News

X ಖಾತೆ ಬ್ಲಾಕ್: ಕೇಂದ್ರ ಸರ್ಕಾರದ ವಿರುದ್ಧ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ‘ಕಾಕ್ರೋಚ್ ಜನತಾ ಪಾರ್ಟಿ’ ಸಂಸ್ಥಾಪಕ!

ಮೇ.27ರಂದು ಬೆಂಗಳೂರಿನಲ್ಲಿ ದೇಶದ ಪ್ರಥಮ ‘ರಾಷ್ಟ್ರೀಯ ಎಐ ಮತ್ತು ಡಿಜಿಟಲ್ ವಾಟರ್ ಶೃಂಗಸಭೆ 2026’ ಆಯೋಜನೆ

BREAKING: ಬೆಂಗಳೂರಲ್ಲಿ ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವೃದ್ಧೆಗೆ ₹24 ಕೋಟಿ ವಂಚಿಸಿದ್ದ ಆರು ಖತರ್ನಾಕ್ ಸೈಬರ್ ಕಳ್ಳರು ಅರೆಸ್ಟ್!

​’ಟ್ರಂಪ್ ಭಾರತ ಮತ್ತು ಮೋದಿಯ ದೊಡ್ಡ ಫ್ಯಾನ್!’: ಅಮೆರಿಕದಲ್ಲಿನ ಭಾರತ ವಿರೋಧಿ ಹೇಳಿಕೆಗೆ ಮಾರ್ಕೊ ರೂಬಿಯೋ ಸ್ಪಷ್ಟನೆ

State News
KARNATAKA

ಮೇ.27ರಂದು ಬೆಂಗಳೂರಿನಲ್ಲಿ ದೇಶದ ಪ್ರಥಮ ‘ರಾಷ್ಟ್ರೀಯ ಎಐ ಮತ್ತು ಡಿಜಿಟಲ್ ವಾಟರ್ ಶೃಂಗಸಭೆ 2026’ ಆಯೋಜನೆ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು : ಹವಾಮಾನ ಬದಲಾವಣೆ, ತ್ವರಿತ ನಗರೀಕರಣ ಹಾಗೂ ಅಂತರ್ಜಲ ಕುಸಿತದಂತಹ ಜಾಗತಿಕ ಸವಾಲುಗಳನ್ನು ತಂತ್ರಜ್ಞಾನದ ಮೂಲಕ ಸಮರ್ಥವಾಗಿ ಎದುರಿಸಲು…

BREAKING: ಬೆಂಗಳೂರಲ್ಲಿ ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವೃದ್ಧೆಗೆ ₹24 ಕೋಟಿ ವಂಚಿಸಿದ್ದ ಆರು ಖತರ್ನಾಕ್ ಸೈಬರ್ ಕಳ್ಳರು ಅರೆಸ್ಟ್!

ಜೂನ್.1ರಂದು ಶಿವಮೊಗ್ಗದಲ್ಲಿ ಸಿಎಂ ಸಿದ್ಧರಾಮಯ್ಯ ‘ಕರ್ನಾಟಕ ಪಬ್ಲಿಕ್ ಶಾಲೆ’ಗಳ ಶಂಕುಸ್ಥಾಪನೆ; ಸಚಿವ ಮಧು ಬಂಗಾರಪ್ಪ

ಉಜಿರೆಯ ರುಡ್‌ಸೆಟ್ ಸಂಸ್ಥೆಯಿಂದ ಉಚಿತ ‘ಕೋಳಿ ಸಾಕಾಣಿಕೆ’ ತರಬೇತಿಗೆ ಅರ್ಜಿ ಆಹ್ವಾನ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.