Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಷ್ಟ್ರೀಯ ಪ್ರಧಾನಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿಗೆ ಅರ್ಜಿ ಆಹ್ವಾನ

16/06/2025 9:48 PM

‘ಮುಂದಿನ ಜನಗಣತಿಯಲ್ಲಿ ಜಾತಿಗಣತಿ ಇರಲಿದೆ’ : ಕಾಂಗ್ರೆಸ್ ‘ಯು-ಟರ್ನ್’ ಆರೋಪಕ್ಕೆ ಕೇಂದ್ರ ಸರ್ಕಾರ ಸ್ಪಷ್ಟನೆ

16/06/2025 9:45 PM

ಸ್ವೀಡನ್‌ನಲ್ಲಿ ಸಚಿವ ಎಂ.ಬಿ. ಪಾಟೀಲ ನೇತೃತ್ವದಲ್ಲಿನ ಕರ್ನಾಟಕದ ಉನ್ನತ ಮಟ್ಟದ ನಿಯೋಗವು ರೋಡ್‌ಷೋ

16/06/2025 9:27 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸ್ವೀಡನ್‌ನಲ್ಲಿ ಸಚಿವ ಎಂ.ಬಿ. ಪಾಟೀಲ ನೇತೃತ್ವದಲ್ಲಿನ ಕರ್ನಾಟಕದ ಉನ್ನತ ಮಟ್ಟದ ನಿಯೋಗವು ರೋಡ್‌ಷೋ
KARNATAKA

ಸ್ವೀಡನ್‌ನಲ್ಲಿ ಸಚಿವ ಎಂ.ಬಿ. ಪಾಟೀಲ ನೇತೃತ್ವದಲ್ಲಿನ ಕರ್ನಾಟಕದ ಉನ್ನತ ಮಟ್ಟದ ನಿಯೋಗವು ರೋಡ್‌ಷೋ

By kannadanewsnow0916/06/2025 9:27 PM

ಸ್ವೀಡನ್‌ : ಕರ್ನಾಟಕವನ್ನು ಶುದ್ಧ ಇಂಧನ ಸಂಚಾರ (ಕ್ಲೀನ್‌ ಮೊಬಿಲಿಟಿ) ಮತ್ತು ವಿದ್ಯುತ್‌ಚಾಲಿತ ವಾಹನ (ಇವಿ) ತಯಾರಿಕೆಯ ನಾವೀನ್ಯತೆಯ ಜಾಗತಿಕ ಕೇಂದ್ರವಾಗಿ ಅಭಿವೃದ್ಧಿಪಡಿಸಲು ಹೂಡಿಕೆದಾರರ ಗಮನ ಸೆಳೆಯಲು ಸ್ವೀಡನ್‌ನ ಗೋಥೆನ್‌ಬರ್ಗ್‌ನಲ್ಲಿ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ಅವರ ನೇತೃತ್ವದಲ್ಲಿನ ಕರ್ನಾಟಕದ ಉನ್ನತ ಮಟ್ಟದ ನಿಯೋಗವು ರೋಡ್‌ಷೋ ನಡೆಸಿತು.

ಇದೇ ವರ್ಷದ ಫೆಬ್ರುವರಿಯಲ್ಲಿ ಬೆಂಗಳೂರಿನಲ್ಲಿ ನಡೆದಿದ್ದ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ʼಇನ್ವೆಸ್ಟ್‌ ಕರ್ನಾಟಕ 2025ʼರಲ್ಲಿ ಆಗಿರುವ ಹೂಡಿಕೆ ಒಪ್ಪಂದಗಳನ್ನು ತ್ವರಿತವಾಗಿ ಜಾರಿಗೊಳಿಸಲು ಹಾಗೂ ಜಾಗತಿಕ ಹೂಡಿಕೆದಾರರನ್ನು ಆಕರ್ಷಿಸಲು ನಡೆಯಲಿರುವ 10 ದಿನಗಳ ಅಂತರರಾಷ್ಟ್ರೀಯ ರೋಡ್‌ಷೋಗಳಲ್ಲಿ ಸಚಿವ ಪಾಟೀಲ ಅವರು ಭಾಗವಹಿಸಲಿದ್ದಾರೆ.

ಸ್ವೀಡನ್‌ ನಂತರ ಕರ್ನಾಟಕದ ನಿಯೋಗವು ಸಚಿವ ಪಾಟೀಲ ಅವರ ನೇತೃತ್ವದಲ್ಲಿ ಡೆನ್ಮಾರ್ಕ್‌ನಲ್ಲಿಯೂ ರೋಡ್‌ಷೋ ನಡೆಸಲಿದೆ. ಇಲ್ಲಿ ನಡೆಯುತ್ತಿರುವ ಇವಿಎಸ್38 ಶೃಂಗಸಭೆಯು ವಿದ್ಯುತ್ ಚಾಲಿತ ವಾಹನಗಳ ತಯಾರಿಕೆ, ಬಳಕೆ ಹೆಚ್ಚಳ ಮತ್ತು ಅತ್ಯಾಧುನಿಕ ವಾಹನ ತಯಾರಿಕೆಯ ತಂತ್ರಜ್ಞಾನಗಳ ಮೇಲೆ ಗಮನ ಕೇಂದ್ರೀಕರಿಸಿದ ಪ್ರಮುಖ ಜಾಗತಿಕ ಸಮ್ಮೇಳನವಾಗಿದೆ.

ಶೃಂಗಸಭೆಯ ಸಂದರ್ಭದಲ್ಲಿ ನಡೆದ ರೋಡ್‌ಷೋ ಉದ್ದೇಶಿಸಿ ಮಾತನಾಡಿದ ಸಚಿವ ಪಾಟೀಲ ಅವರು, ʼಕರ್ನಾಟಕ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಸದೃಢ ಪ್ರಗತಿಪರ ಇವಿ ನೀತಿ, ರಾಜ್ಯದಲ್ಲಿನ ತಯಾರಿಕಾ ಸಾಮರ್ಥ್ಯ ಮತ್ತು ಅಭಿವೃದ್ಧಿ ಪಥದಲ್ಲಿ ಮುನ್ನಡೆದಿರುವ ನವೋದ್ಯಮಗಳ ಸಾಧನೆಯನ್ನು ಜಾಗತಿಕ ಹೂಡಿಕೆದಾರರಿಗೆ, ಉದ್ಯಮ ದಿಗ್ಗಜರಿಗೆ ಮನವರಿಕೆ ಮಾಡಿಕೊಟ್ಟು, ಬಂಡವಾಳ ಹೂಡಿಕೆಗೆ ಆಹ್ವಾನ ನೀಡಿದರು.

ಕರ್ನಾಟಕವು ವಿದ್ಯುತ್ ಚಾಲಿತ ವಾಹನಗಳ ಸಂಶೋಧನೆ ಮತ್ತು ಅಭಿವೃದ್ಧಿ, ನಾವೀನ್ಯತೆ ಮತ್ತು ತಯಾರಿಕೆಗೆ ಪ್ರಮುಖ ಜಾಗತಿಕ ತಾಣವಾಗಿರುವುದರ ಮಾಹಿತಿಯನ್ನು ರೋಡ್‌ಷೋದಲ್ಲಿ ಪ್ರಸ್ತುತಪಡಿಸಲಾಯಿತು.

ಸಚಿವ ಪಾಟೀಲ ಅವರು ವೋಲ್ವೊ ಗ್ರೂಪ್‌ನ ಅಧ್ಯಕ್ಷ ಮತ್ತು ಸಿಇಒ ಮಾರ್ಟಿನ್ ಲುಂಡ್‌ಸ್ಟೆಡ್ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದರು.

ಕರ್ನಾಟಕದಲ್ಲಿ ತನ್ನ ವಾಹನಗಳ ತಯಾರಿಕಾ ಸಾಮರ್ಥ್ಯ ವಿಸ್ತರಿಸಲು ವೋಲ್ವೊ ಸಮೂಹದ ಬದ್ಧತೆಯನ್ನು ಮಾರ್ಟಿನ್‌ ಅವರು ಈ ಸಂದರ್ಭದಲ್ಲಿ ಪುನರುಚ್ಚರಿಸಿದರು.
ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಕಮಿಷನರ್ ಗುಂಜನ್ ಕೃಷ್ಣ, ಕೆಐಎಡಿಬಿ ಮುಖ್ಯ ಎಂಜಿನಿಯರ್ ವೀರಭದ್ರಯ್ಯ ಇದ್ದರು.

Share. Facebook Twitter LinkedIn WhatsApp Email

Related Posts

ರಾಷ್ಟ್ರೀಯ ಪ್ರಧಾನಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿಗೆ ಅರ್ಜಿ ಆಹ್ವಾನ

16/06/2025 9:48 PM1 Min Read

ಪಿ.ಆರ್.ತಿಪ್ಪೇಸ್ವಾಮಿ ಪ್ರತಿಷ್ಠಾನದ ಸಂಚಾಲಕರಾಗಿ ರುದ್ರಣ್ಣ ಹರ್ತಿಕೋಟೆ ಮರು ಆಯ್ಕೆ

16/06/2025 9:19 PM1 Min Read

BREAKING: ರಾಜ್ಯದಲ್ಲಿಂದು ಬರೋಬ್ಬರಿ 208 ಜನರಿಗೆ ಕೊರೋನಾ ಪಾಸಿಟಿವ್ | Covid19 Update

16/06/2025 9:13 PM1 Min Read
Recent News

ರಾಷ್ಟ್ರೀಯ ಪ್ರಧಾನಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿಗೆ ಅರ್ಜಿ ಆಹ್ವಾನ

16/06/2025 9:48 PM

‘ಮುಂದಿನ ಜನಗಣತಿಯಲ್ಲಿ ಜಾತಿಗಣತಿ ಇರಲಿದೆ’ : ಕಾಂಗ್ರೆಸ್ ‘ಯು-ಟರ್ನ್’ ಆರೋಪಕ್ಕೆ ಕೇಂದ್ರ ಸರ್ಕಾರ ಸ್ಪಷ್ಟನೆ

16/06/2025 9:45 PM

ಸ್ವೀಡನ್‌ನಲ್ಲಿ ಸಚಿವ ಎಂ.ಬಿ. ಪಾಟೀಲ ನೇತೃತ್ವದಲ್ಲಿನ ಕರ್ನಾಟಕದ ಉನ್ನತ ಮಟ್ಟದ ನಿಯೋಗವು ರೋಡ್‌ಷೋ

16/06/2025 9:27 PM

BREAKING : ನೇರ ಪ್ರಸಾರದ ವೇಳೆ ಇರಾನ್’ನ ‘ಸರ್ಕಾರಿ ಟಿವಿ ಸ್ಟುಡಿಯೋ’ ಮೇಲೆ ಇಸ್ರೇಲ್ ದಾಳಿ, ಭಯಾನಕ ದೃಶ್ಯ ಕ್ಯಾಮೆರಾದಲ್ಲಿ ಸೆರೆ |VIDEO

16/06/2025 9:25 PM
State News
KARNATAKA

ರಾಷ್ಟ್ರೀಯ ಪ್ರಧಾನಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿಗೆ ಅರ್ಜಿ ಆಹ್ವಾನ

By kannadanewsnow0916/06/2025 9:48 PM KARNATAKA 1 Min Read

ಬಳ್ಳಾರಿ : ಜಿಲ್ಲೆಯಲ್ಲಿ ಧೈರ್ಯ ಮತ್ತು ಸಾಹಸದಿಂದ ಇತರರನ್ನು ರಕ್ಷಿಸಿದ ಹಾಗೂ ಕ್ರೀಡೆ, ಸಮಾಜ ಸೇವೆ, ವಿಜ್ಞಾನ ಮತ್ತು ತಂತ್ರಜ್ಞಾನ…

ಸ್ವೀಡನ್‌ನಲ್ಲಿ ಸಚಿವ ಎಂ.ಬಿ. ಪಾಟೀಲ ನೇತೃತ್ವದಲ್ಲಿನ ಕರ್ನಾಟಕದ ಉನ್ನತ ಮಟ್ಟದ ನಿಯೋಗವು ರೋಡ್‌ಷೋ

16/06/2025 9:27 PM

ಪಿ.ಆರ್.ತಿಪ್ಪೇಸ್ವಾಮಿ ಪ್ರತಿಷ್ಠಾನದ ಸಂಚಾಲಕರಾಗಿ ರುದ್ರಣ್ಣ ಹರ್ತಿಕೋಟೆ ಮರು ಆಯ್ಕೆ

16/06/2025 9:19 PM

BREAKING: ರಾಜ್ಯದಲ್ಲಿಂದು ಬರೋಬ್ಬರಿ 208 ಜನರಿಗೆ ಕೊರೋನಾ ಪಾಸಿಟಿವ್ | Covid19 Update

16/06/2025 9:13 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.