ಚಿಕ್ಕಮಗಳೂರು: ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ. ನಾಳೆ ಕೂಡ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ನಾಳೆ ಚಿಕ್ಕಮಗಳೂರು ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರು ಆದೇಶ ಹೊರಡಿಸಿದ್ದು, ನಾಳೆ ಭಾರೀ ಮಳೆಯಾಗಲಿದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಚಿಕ್ಕಮಗಳೂರು, ಕಳಸ, ಮೂಡಿಗೆರೆ, ಶೃಂಗೇರಿ, ಎನ್ ಆರ್ ಪುರ, ಕೊಪ್ಪ ತಾಲ್ಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ನೀಡಿರುವುದಾಗಿ ತಿಳಿಸಿದ್ದಾರೆ.
ಮಹಿಳೆ ‘ನಾಯಿ ಹಾಲು’ ಕುಡಿಯುತ್ತಿರುವ ಪೆಟಾ ಇಂಡಿಯಾ ಜಾಹೀರಾತಿಗೆ ತೀವ್ರ ವಿರೋಧ