ರಾಜ್ಯದಲ್ಲೊಂದು ದಾರುಣ ಘಟನೆ: ಕಾಲುಜಾರಿ ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಬಾಲಕಿಯರು ದುರ್ಮರಣ

ಕುಕನೂರು: ಬಟ್ಟೆ ತೊಳೆಯಲು ಹೋಗಿದ್ದ ಇಬ್ಬರು ಬಾಲಕಿಯರು ಕಾಲುಜಾರಿ ಕೃಷಿ ಹೊಂಡಕ್ಕೆ ಬಿದ್ದು ಮೃತಪಟ್ಟಿರುವ ಅತ್ಯಂತ ದಾರುಣ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲ್ಲೂಕಿನ ಯರೇಹಂಚಿನಾಳ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಗದಗ ಜಿಲ್ಲೆಯ ತಿಮ್ಮಾಪುರ ಗ್ರಾಮದ ನಿವಾಸಿಗಳಾದ ಲಕ್ಷ್ಮವ್ವ ಹರಣಿಶಿಕಾರಿ ಮತ್ತು ಮುತ್ತವ್ವ ಹರಣಿಶಿಕಾರಿ ಎಂದು ಗುರುತಿಸಲಾಗಿದೆ. ಬಟ್ಟೆ ತೊಳೆಯಲು ಹೋದಾಗ ಸಂಭವಿಸಿದ ದುರಂತ: ಬಾಲಕಿಯರಿಬ್ಬರು ಯರೇಹಂಚಿನಾಳ ಗ್ರಾಮದ ಬಳಿ ಇರುವ ಕೃಷಿ ಹೊಂಡಕ್ಕೆ ಬಟ್ಟೆ ತೊಳೆಯಲೆಂದು ಹೋಗಿದ್ದರು. ಈ ಸಂದರ್ಭದಲ್ಲಿ ಬಟ್ಟೆ ತೊಳೆಯುವಾಗ ಆಕಸ್ಮಿಕವಾಗಿ ಕಾಲುಜಾರಿ … Continue reading ರಾಜ್ಯದಲ್ಲೊಂದು ದಾರುಣ ಘಟನೆ: ಕಾಲುಜಾರಿ ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಬಾಲಕಿಯರು ದುರ್ಮರಣ