ಹಾಸನ: ಹಾಸನಾಂಬೆ ದೇವಿಯ ದರ್ಶನ ಬಹಳ ಸರಾಗವಾಗಿ ನಡೆಯುತ್ತಿದೆ. ನಿನ್ನೆ ಸುಮಾರು 2 ಲಕ್ಷ ಜನರು ದರ್ಶನ ಪಡೆದಿದ್ದಾರೆ. ಪ್ರಸ್ತುತ ವರ್ಷ ಇಲ್ಲಿಯವರೆಗೆ 23,00,000 ಜನರು ದರ್ಶನ ಪಡೆದಿದ್ದಾರೆ. ಕಳೆದ ವರ್ಷದ ಒಟ್ಟಾರೆ 17,46,000 ಜನ ದರ್ಶನ ಪಡೆದಿದ್ದಾರೆ ಎಂಬುದಾಗಿ ಹಾಸನ ಜಿಲ್ಲಾ ಉಸ್ತುವಾರಿ ಹಾಗೂ ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಈ ವರ್ಷ ₹ 300/1000 ಟಿಕೆಟ್ ಸಾಲಿನಲ್ಲಿ 3,40,260 ಜನರು ದರ್ಶನ ಪಡೆದಿದ್ದಾರೆ. ಕಳೆದ ವರ್ಷ ಈ ಸಾಲಿನಲ್ಲಿ ಒಟ್ಟಾರೆ 1,29,956 ಜನ ದರ್ಶನ ಪಡೆದಿದ್ದರು. ಇಂದು ಮತ್ತು ನಾಳೆ ದರ್ಶನ ಲಭ್ಯವಿದೆ. ಇಂದು ಮಧ್ಯಾಹ್ನ 2 ರಿಂದ 3.30 ರವರೆಗೆ ನೈವೇದ್ಯ ಇರುವುದರಿಂದ ಭಕ್ತರಿಗೆ ದರ್ಶನಕ್ಕೆ ಅವಕಾಶ ಇರುವುದಿಲ್ಲ ಎಂದಿದ್ದಾರೆ.
ಇಂದು ಕ್ಯೂ ಲೈನ್ಗಳ ಪ್ರವೇಶ ದ್ವಾರಗಳು ರಾತ್ರಿ 9 ಗಂಟೆಗೆ ಮುಚ್ಚಲ್ಪಡುತ್ತವೆ ಮತ್ತು ದರ್ಶನ ಮಧ್ಯರಾತ್ರಿ 12 ಗಂಟೆಗೆ ನಿಲ್ಲುತ್ತದೆ ಎಂದು ತಿಳಿಸಿದ್ದಾರೆ.
ಬುಧವಾರ – ದರ್ಶನ ಬೆಳಿಗ್ಗೆ 5 ರಿಂದ ಪ್ರಾರಂಭವಾಗಿ ಸಂಜೆ 7 ಗಂಟೆಯವರೆಗೆ ನಿರಂತರವಾಗಿ ಮುಂದುವರಿಯುತ್ತದೆ. ಸಾರ್ವಜನಿಕ ದರ್ಶನ ಸಂಜೆ 7 ಗಂಟೆಗೆ ಮುಗಿಯುತ್ತದೆ. ಅದರ ನಂತರ ಸಾರ್ವಜನಿಕ ದರ್ಶನವಿಲ್ಲ. ಗುರುವಾರ – ಸಾರ್ವಜನಿಕರಿಗೆ ಅವಕಾಶವಿಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ.
BREAKING: ನವದೆಹಲಿಯ ರಾಷ್ಟ್ರಪತಿ ಭವನದ ಬಳಿಯ ಕಟ್ಟಡದಲ್ಲಿ ಬೆಂಕಿ ಅವಘಡ | Rashtrapati Bhawan