ಧಾರವಾಡ: ಇಂದಿನಿಂದ ನಾಲ್ಕು ದಿನಗಳ ಕಾಲ ನಡೆಯಲಿರುವ ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಕೃಷಿಮೇಳದ ಮೊದಲ ದಿನವೇ ದುರಂತವೊಂದು ಸಂಭವಿಸಿದೆ. ಲಾರಿಯಿಂದ ಟ್ರ್ಯಾಕ್ಟರ್ ಇಳಿಸುವಾಗ ಅವಘಡ ನಡೆದು ಓರ್ವ ಮೃತಪಟ್ಟಿದ್ದಾನೆ.
ತುಮಕೂರು ಮೂಲದ ಪರಶುರಾಮ (32) ಮೃತ ವ್ಯಕ್ತಿ. ಇಂದಿನಿಂದ ನಡೆಯುವ ಕೃಷಿ ಮೇಳದ ಪ್ರದರ್ಶನಕ್ಕೆ ಟ್ರ್ಯಾಕ್ಟರ್ ತಂದಿದ್ದರು. ಲಾರಿಯಿಂದ ಟ್ರ್ಯಾಕ್ಟರ್ ಇಳಿಸುವಾಗ ನಿಯಂತ್ರಣ ತಪ್ಪಿ ಪರಶುರಾಮನ ಮೈಮೇಲೆ ಬಿದ್ದು, ಸ್ಥಳದಲ್ಲೇ ಅಸುನೀಗಿದ್ದಾನೆ. ಉಪನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.