ಬೆಂಗಳೂರು: ಇಂದು ದಿಢೀರ್ ಎಬಿವಿಪಿ ಕಾರ್ಯಕರ್ತರು ಎಸ್ ಡಿಪಿಐ ಸಂಘಟನೆ ಸೇರಿದಂತೆ ವಿವಿಧ ಸಂಘಟನೆಗಳನ್ನು ನಿಷೇಧಿಸುವಂತೆ ಗೃಹ ಸಚಿವ ಅರಗ ಜ್ಞಾನೇಂದ್ರ ಅವರ ನಿವಾಸದ ಮುಂದೆ ಪ್ರತಿಭಟನೆ ನಡೆಸಿದ್ದರು. ಈ ಮೂಲಕ ಪೊಲೀಸರ ಭದ್ರತಾ ವೈಫಲ್ಯದ ಕಂಡು ಬಂದಿತ್ತು. ಈ ಹಿನ್ನಲೆಯಲ್ಲಿ ಜೆ ಸಿ ನಗರ ಠಾಣೆಯ ಪಿಎಸ್ಐ ಸೇರಿದಂತೆ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.
BREAKING NEWS: ಬೆಂಗಳೂರಿನ ಅಪಾರ್ಮೆಂಟ್ ನ 2ನೇ ಮಹಡಿಯಿಂದ ಬಿದ್ದು ಬಾಲಕ ದುರ್ಮರಣ
ಈ ಸಂಬಂಧ ಉತ್ತರ ವಿಭಾಗದ ಡಿಸಿಪಿ ವಿನಾಯಕ ಪಾಟೀಲ್ ಆದೇಶ ಹೊರಡಿಸಿದ್ದು, ಕರ್ತವ್ಯ ಲೋಪದ ಕಾರಣದಿಂದಾಗಿ ಜೆ.ಸಿ ನಗರ ಪಿಎಸ್ಐ ರಾಜಸಾಬ್, ಎಸ್ಐ ಶ್ರೀನಿವಾಸ್ ಅವರನ್ನು ಅಮಾನತುಗೊಳಿಸಿದ್ದಾರೆ.
ಅಂದಹಾಗೇ ಇಂದು ಬೆಳಿಗ್ಗೆ ಗೃಹ ಸಚಿವ ಅರಗ ಜ್ಞಾನೇಂದ್ರ ನಿವಾಸದ ಮುಂದೆ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಅಲ್ಲದೇ ಅವರ ನಿವಾಸಕ್ಕೆ ಮುತ್ತಿಗೆ ಹಾಕೋದಕ್ಕೂ ಯತ್ನಿಸಿದ್ದರು. ಈ ಹಿನ್ನಲೆಯಲ್ಲಿ ಇದೀಗ ಅವರ ನಿವಾಸಕ್ಕೆ ಭದ್ರತೆಯನ್ನು ಹೆಚ್ಚಿಸಲಾಗಿದೆ. ಕೆಎಸ್ಆರ್ ಪಿ ತುಕಡಿ, 50ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ.