ನವದೆಹಲಿ: ಅನಾರೋಗ್ಯದ ಕಾರಣದಿಂದಾಗಿ ಉಪ ರಾಷ್ಟ್ರಪತಿ ಹುದ್ದೆಗೆ ಜಗದೀಪ್ ಧನ್ಕರ್ ಅವರು ರಾಜೀನಾಮೆಯನ್ನು ನಿನ್ನೆ ಸಲ್ಲಿಸಿದ್ದರು. ಅವರ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಗೀಕರಿಸಿದ್ದಾರೆ.
ನಿನ್ನೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ನೀಡಿದ ರಾಜೀನಾಮೆಯಲ್ಲಿ ಆರೋಗ್ಯ ರಕ್ಷಣೆಗೆ ಆದ್ಯತೆ ನೀಡಲು ಮತ್ತು ವೈದ್ಯಕೀಯ ಸಲಹೆಯನ್ನು ಪಾಲಿಸಲು, ಸಂವಿಧಾನದ 67(ಎ) ವಿಧಿಗೆ ಅನುಗುಣವಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಭಾರತದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ನೀಡುತ್ತಿದ್ದೇನೆ ಎಂದು ತಿಳಿಸಿದ್ದರು.
ಈ ಮಹತ್ವದ ಅವಧಿಯಲ್ಲಿ ಭಾರತದ ಗಮನಾರ್ಹ ಆರ್ಥಿಕ ಪ್ರಗತಿ ಮತ್ತು ಅಭೂತಪೂರ್ವ ಘಾತೀಯ ಅಭಿವೃದ್ಧಿಯನ್ನು ವೀಕ್ಷಿಸುವುದು ಮತ್ತು ಅದರಲ್ಲಿ ಭಾಗವಹಿಸುವುದು ಒಂದು ಸವಲತ್ತು ಮತ್ತು ತೃಪ್ತಿಯಾಗಿದೆ ಎಂದು ಧನ್ಕರ್ ಹೇಳಿದ್ದರು. ಅಲ್ಲದೇ ನಮ್ಮ ರಾಷ್ಟ್ರದ ಇತಿಹಾಸದ ಈ ಪರಿವರ್ತನಾ ಯುಗದಲ್ಲಿ ಸೇವೆ ಸಲ್ಲಿಸುವುದು ನಿಜವಾದ ಗೌರವವಾಗಿದೆ ಎಂದು ಅವರು ಹೇಳಿದ್ದರು.
ಹೀಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಉಪ ರಾಷ್ಟ್ರಪತಿ ಹುದ್ದೆಗೆ ಜಗದೀಪ್ ಧನ್ಕರ್ ಅವರು ನೀಡಿದ್ದಂತ ರಾಜೀನಾಮೆಯನ್ನು ಅಂಗೀಕರಿಸಲಾಗಿದೆ ಎಂಬುದಾಗಿ ತಿಳಿದು ಬಂದಿದೆ.
ಮಂಡ್ಯದಲ್ಲಿ 15,000 ಲಂಚ ಪಡೆಯುತ್ತಿದ್ದಾಗಲೇ ಮೂವರು ನೌಕರರು ಲೋಕಾಯುಕ್ತ ಬಲೆಗೆ