ಕಲಬುರಗಿ: ಕಲಬುರಗಿಯ ಖ್ವಾಜಾ ಬಂದೆ ನವಾಜ್ ದರ್ಗಾ ದರ್ಶನ ಪಡೆದು ವಾಪಸ್‌ ಬರುತ್ತಿದ್ದ ವೇಳೆ ಕಾರು ಮತ್ತು ಕ್ರೂಸರ್ ನಡುವೆ ಡಿಕ್ಕಿಯಾದ ಪರಿಣಾಮ ತೆಲಂಗಾಣ ಮೂಲದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಕೆಲವರು ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ಜಿಲ್ಲೆಯ ಭೀಮನಾಳದಲ್ಲಿ ನಡೆದಿದೆ.

ಮೃತರನ್ನು ತೆಲಂಗಾಣದ ಹನುಮಕೊಂಡಾ ನಗರದ ಉಜಲಿಬೇಸ ನಿವಾಸಿ ಮಹಮ್ಮದ್ ಅಬ್ದುಲ್ ಮಜೀದ ಸಿದ್ಧಿಖಿ (71) ಹಾಗೂ ಹೈದರಾಬಾದ್​ನ ಬಾಲಾಜಿ ನಗರದ ಸಾದಯಾ ಖುನ್ನಿಸಾ ಬೇಗಂ (55) ಎಂದು ಗುರುತಿಸಲಾಗಿದೆ.

ಇನ್ನೂ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು. ಓರ್ವನ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಮಾನ ನಿಲ್ದಾಣದಲ್ಲಿ ತಪಾಸಣೆ ವೇಳೆ ಬ್ಯಾಗ್‌ನಲ್ಲಿ ʻಬಾಂಬ್‌ʼ ಇದೆ ಎಂದ ದಂಪತಿ!… ಮುಂದೇನಾಯ್ತು?

Watch Video: ಜೋರು ಮಳೆ ನಡುವೆಯೂ ಆಹಾರ ತಲುಪಿಸಲು ಕುದುರೆಯನ್ನೇರಿ ಹೊರಟ ಸ್ವಿಗ್ಗಿ ಡೆಲಿವರಿ ಬಾಯ್!

 

 

Share.
Exit mobile version