ಚಿಕ್ಕಬಳ್ಳಾಪುರ: ಹಾವು ತಪ್ಪಿಸಲು ಹೋಗಿ ಲಾರಿ ಚಾಲಕ ಸಡನ್ ಬ್ರೇಕ್ ಹಾಕಿದ್ದು, ಪರಿಣಾಮ ಸರಣಿ ಅಪಘಾತಗಳು ಸಂಭವಿಸಿದೆ. ತಾಲೂಕಿನ ಅಗಲಗುರ್ಕಿ ಗ್ರಾಮದ ಹೆದ್ದಾರಿ 44 ರಲ್ಲಿ ಘಟನೆ ನಡೆದಿದೆ.

ಹೈದರಾಬಾದ್ ಕಡೆಯಿಂದ ಬೆಂಗಳೂರು ಕಡೆಗೆ ಕಂಟೈನರ್ ಟ್ರಕ್ ಬರುತ್ತಿತ್ತು. ಅಗಲಗುರ್ಕಿ ಗ್ರಾಮದ ಬಳಿ ಹೆದ್ದಾರಿಯ ನಡುರಸ್ತೆಯಲ್ಲಿ ಹಾವೊಂದು ರಸ್ತೆ ದಾಟುತ್ತಿತ್ತು. ಇದನ್ನು ಗಮನಿಸಿದ ಚಾಲಕ ಸಡನ್ ಆಗಿ ಬ್ರೇಕ್ ಹಾಕಿದ್ದಾನೆ. ಪರಿಣಾಮ ಎರಡು ಕಂಟೈನರ್ ಲಾರಿ, ಒಂದು ಟಾಟಾ ಏಸ್, ಕಾರು, ಟಿಪ್ಪರ್ ಮದ್ಯೆ ಸರಣಿ ಅಪಘಾತ ಸಂಭವಿಸಿದೆ. ಇದರಿಂದ ಟಾಟಾ ಏಸ್ ಚಾಲಕನ ಸ್ಥಿತಿ ಗಂಭೀರವಾಗಿದೆ.

ಹೆದ್ದಾರಿಯಲ್ಲಿ ಅಡ್ಡ ಬಂದ ಹಾವನ್ನು ತಪ್ಪಿಸಲು ಹೋಗಿ ಟ್ರಕ್ ಚಾಲಕನೊರ್ವ ಸಡನ್ ಬ್ರೇಕ್ ಹಾಕಿದ ಪರಿಣಾಮ ಸರಣಿ ಅಪಘಾತ ನಡೆದಿದೆ. ಪಕ್ಕದಲ್ಲಿ ವಾಹನಗಳ ತಪಾಸಣೆ ನಡೆಸುತ್ತಿದ್ದ ಚಿಕ್ಕಬಳ್ಳಾಪುರ ಸಂಚಾರಿ ಠಾಣೆ ಪೊಲೀಸರು, ರಕ್ಷಣೆಗೆ ಧಾವಿಸಿದ್ದಾರೆ.

ಮತ್ತೆ ಬಂತಾ ‘ಝಾಂಬಿ ವೈರಸ್’.? ರಸ್ತೆಯಲ್ಲಿ ವಿಚಿತ್ರವಾಗಿ ವರ್ತಿಸೋ ವ್ಯಕ್ತಿಗಳ ಆಘಾತಕಾರಿ ವಿಡಿಯೋ ವೈರಲ್

ಕುಣಿಗಲ್ ತಾಲೂಕಿನ ಎಲ್ಲಾ ಗ್ರಾಮಗಳಿಗೂ ‘ಹೇಮಾವತಿ’ ನೀರು : ಸಿಎಂ ಬೊಮ್ಮಾಯಿ ಘೋಷಣೆ

Share.
Exit mobile version