Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

GOOD NEWS: ಶೀಘ್ರವೇ ರಾಜ್ಯದಲ್ಲಿ 11 ಸರ್ಕಾರಿ ಬ್ಲಡ್ ಬ್ಯಾಂಕ್ ಅನುಷ್ಠಾನ: ಸಚಿವ ದಿನೇಶ್ ಗುಂಡೂರಾವ್

17/06/2025 8:39 PM

MGNVY ಕ್ರಿಯಾಯೋಜನೆ ಸಿದ್ಧಪಡಿಸದ ಅಧಿಕಾರಿಗಳ ವಿರುದ್ಧ ಕ್ರಮ: ಸಚಿವ ಬಿಎಸ್ ಸುರೇಶ್ ಎಚ್ಚರಿಕೆ

17/06/2025 8:34 PM

‘ಸುರಕ್ಷತೆಯತ್ತ ಗಮನಹರಿಸಿ, ಹಾರಾಟದ ಕಾರ್ಯಾಚರಣೆ ಬಿಗಿಗೊಳಿಸಿ’ : ಅಧಿಕಾರಿಗಳಿಗೆ ‘ಏರ್ ಇಂಡಿಯಾ’ ಸೂಚನೆ

17/06/2025 8:26 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » MGNVY ಕ್ರಿಯಾಯೋಜನೆ ಸಿದ್ಧಪಡಿಸದ ಅಧಿಕಾರಿಗಳ ವಿರುದ್ಧ ಕ್ರಮ: ಸಚಿವ ಬಿಎಸ್ ಸುರೇಶ್ ಎಚ್ಚರಿಕೆ
KARNATAKA

MGNVY ಕ್ರಿಯಾಯೋಜನೆ ಸಿದ್ಧಪಡಿಸದ ಅಧಿಕಾರಿಗಳ ವಿರುದ್ಧ ಕ್ರಮ: ಸಚಿವ ಬಿಎಸ್ ಸುರೇಶ್ ಎಚ್ಚರಿಕೆ

By kannadanewsnow0917/06/2025 8:34 PM

ಬೆಂಗಳೂರು : ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯ ಎರಡನೇ ಹಂತದಲ್ಲಿ ಸರ್ಕಾರದಿಂದ ಹಣ ಬಿಡುಗಡೆ ಆಗಿದ್ದರೂ ವೆಚ್ಚ ಮಾಡದ ಮಹಾನಗರ ಪಾಲಿಕೆಗಳ ಮುಖ್ಯಸ್ಥರನ್ನು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

ಯೋಜನೆ ಕುರಿತು ಮಂಗಳವಾರ ವಿಧಾನಸೌಧದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಬೆಂಗಳೂರು ಹೊರತುಪಡಿಸಿ ಎಲ್ಲಾ ಮಹಾನಗರ ಪಾಲಿಕೆಗಳ ಆಯುಕ್ತರ ಸಭೆಯಲ್ಲಿ ಯೋಜನೆಯ ಪ್ರಗತಿ ಪರಿಶೀಲಿಸಿದ ಸಚಿವರು, ಸರ್ಕಾರ ಸೂಕ್ತ ಅನುದಾನವನ್ನು ಬಿಡುಗಡೆ ಮಾಡಿದ್ದರೂ ಅದಕ್ಕೆ ಪೂರಕವಾಗಿ ಕಾರ್ಯಯೋಜನೆ ಸಿದ್ಧಪಡಿಸದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.

ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಬಸ್ ನಿಲ್ದಾಣ, ರಸ್ತೆ ಸೇರಿದಂತೆ ಇನ್ನಿತರೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆಯನ್ನು ಜಾರಿಗೆ ತರಲಾಗಿದೆ. ಎರಡನೇ ಹಂತದಲ್ಲಿ ಎಲ್ಲಾ 11 ಮಹಾನಗರ ಪಾಲಿಕೆಗಳಿಗೆ ಒಟ್ಟು 1730 ಕೋಟಿ ರೂಪಾಯಿಗಳ ಅನುದಾನವನ್ನು ಮೀಸಲಿಡಲಾಗಿದೆ ಎಂದು ತಿಳಿಸಿದರು.

ಮೈಸೂರು, ವಿಜಯಪುರ, ಬಳ್ಳಾರಿ, ದಾವಣಗೆರೆ, ಶಿವಮೊಗ್ಗ, ಮಂಗಳೂರು ಮತ್ತು ರಾಯಚೂರು ಮಹಾ ನಗರಪಾಲಿಕೆಗಳು ತಮಗೆ ನಿಗದಿಪಡಿಸಲಾದ ಅನುದಾನಕ್ಕೆ ಪೂರಕವಾಗಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವ ನಿಟ್ಟಿನಲ್ಲಿ ಯೋಜನೆಗಳನ್ನು ಸಿದ್ಧಪಡಿಸಿವೆ. ಆದರೆ, ಕಲಬುರಗಿ, ತುಮಕೂರು, ಬೆಳಗಾವಿ ಮತ್ತು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗಳು ಇದುವರೆಗೂ ಕಾರ್ಯಯೋಜನೆ ವರದಿಯನ್ನು ಪೂರ್ಣಗೊಳಿಸಿಲ್ಲ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಒಂದು ದಿನದ ಗಡುವು

ಬುಧವಾರ ಸಂಜೆಯೊಳಗೆ ಕಾರ್ಯಯೋಜನೆಯನ್ನು ಸಿದ್ಧಪಡಿಸಬೇಕು. ಈ ಗಡುವಿನೊಳಗೆ ವರದಿಯನ್ನು ಸಿದ್ಧಪಡಿಸದಿದ್ದರೆ ಅಂತಹ ಅಧಿಕಾರಿಗಳು ಮತ್ತು ಎಂಜಿನಿಯರ್ ಗಳನ್ನು ಹೊಣೆಗಾರರನ್ನಾಗಿ ಮಾಡಿ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಯಾವ್ಯಾವ ಪಾಲಿಕೆಗಳಿಗೆ ಎಷ್ಟೆಷ್ಟು ಅನುದಾನ?

ಮೈಸೂರು ಮಹಾ ನಗರ ಪಾಲಿಕೆಗೆ 250 ಕೋಟಿ ರೂಪಾಯಿಗಳ ಅನುದಾನದ ಪೈಕಿ ಈ ಹಣದಲ್ಲಿ 6 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ವಿಜಯಪುರದಲ್ಲಿ 150 ಕೋಟಿ ರೂಪಾಯಿಗಳು, ಬಳ್ಳಾರಿಗೆ 127.5 ಕೋಟಿ ರೂಪಾಯಿ, ದಾವಣಗೆರೆಗೆ 127.5 ಕೋಟಿ ರೂಪಾಯಿ, ತುಮಕೂರಿಗೆ 175 ಕೋಟಿ ರೂಪಾಯಿ, ಶಿವಮೊಗ್ಗಕ್ಕೆ 127.5 ಕೋಟಿ, ಮಂಗಳೂರಿನಲ್ಲಿ 165 ಕೋಟಿ ರೂಪಾಯಿ, ಕಲಬುರಗಿಗೆ 127.5 ಕೋಟಿ ರೂಪಾಯಿ, ಬೆಳಗಾವಿಗೆ 127.5 ಕೋಟಿ ರೂಪಾಯಿ, ಹುಬ್ಬಳ್ಳಿ-ಧಾರವಾಡಕ್ಕೆ 152.50 ಕೋಟಿ ರೂಪಾಯಿಗಳು ಹಾಗೂ ರಾಯಚೂರು ಮಹಾನಗರ ಪಾಲಿಕೆಗೆ 200 ಕೋಟಿ ರೂಪಾಯಿಗಳ ಅನುದಾನವನ್ನು ಮೀಸಲಿಡಲಾಗಿದೆ ಎಂದರು.

ಸಾಗರದಲ್ಲಿ ‘ಸದಾನಂದ ಮರ್ಡರ್’ ಕೇಸ್: ಪೊಲೀಸರು ‘ಕೊಲೆ ಆರೋಪಿ’ಗಳನ್ನು ಬಿಟ್ಟು ಕಳುಹಿಸಿದ್ದು ಯಾಕೆ.?

ರಾಜ್ಯದ 100 ಆರೋಗ್ಯ ಕೇಂದ್ರಗಳಲ್ಲಿ 45 ನಿಮಿಷಗಳ ಯೋಗ ಪ್ರಾತ್ಯಕ್ಷಿಕೆ ಪ್ರದರ್ಶನ: ಸಚಿವ ದಿನೇಶ್ ಗುಂಡೂರಾವ್

Share. Facebook Twitter LinkedIn WhatsApp Email

Related Posts

GOOD NEWS: ಶೀಘ್ರವೇ ರಾಜ್ಯದಲ್ಲಿ 11 ಸರ್ಕಾರಿ ಬ್ಲಡ್ ಬ್ಯಾಂಕ್ ಅನುಷ್ಠಾನ: ಸಚಿವ ದಿನೇಶ್ ಗುಂಡೂರಾವ್

17/06/2025 8:39 PM2 Mins Read

BREAKING : ಶಿವಮೊಗ್ಗದಲ್ಲಿ 30 ಸಾವಿರ ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ‘RDWSD’ ಸೆಕ್ಷನ್ ಅಧಿಕಾರಿ

17/06/2025 8:17 PM1 Min Read

ರಾಜ್ಯದ 100 ಆರೋಗ್ಯ ಕೇಂದ್ರಗಳಲ್ಲಿ 45 ನಿಮಿಷಗಳ ಯೋಗ ಪ್ರಾತ್ಯಕ್ಷಿಕೆ ಪ್ರದರ್ಶನ: ಸಚಿವ ದಿನೇಶ್ ಗುಂಡೂರಾವ್

17/06/2025 8:09 PM2 Mins Read
Recent News

GOOD NEWS: ಶೀಘ್ರವೇ ರಾಜ್ಯದಲ್ಲಿ 11 ಸರ್ಕಾರಿ ಬ್ಲಡ್ ಬ್ಯಾಂಕ್ ಅನುಷ್ಠಾನ: ಸಚಿವ ದಿನೇಶ್ ಗುಂಡೂರಾವ್

17/06/2025 8:39 PM

MGNVY ಕ್ರಿಯಾಯೋಜನೆ ಸಿದ್ಧಪಡಿಸದ ಅಧಿಕಾರಿಗಳ ವಿರುದ್ಧ ಕ್ರಮ: ಸಚಿವ ಬಿಎಸ್ ಸುರೇಶ್ ಎಚ್ಚರಿಕೆ

17/06/2025 8:34 PM

‘ಸುರಕ್ಷತೆಯತ್ತ ಗಮನಹರಿಸಿ, ಹಾರಾಟದ ಕಾರ್ಯಾಚರಣೆ ಬಿಗಿಗೊಳಿಸಿ’ : ಅಧಿಕಾರಿಗಳಿಗೆ ‘ಏರ್ ಇಂಡಿಯಾ’ ಸೂಚನೆ

17/06/2025 8:26 PM

BREAKING : ಶಿವಮೊಗ್ಗದಲ್ಲಿ 30 ಸಾವಿರ ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ‘RDWSD’ ಸೆಕ್ಷನ್ ಅಧಿಕಾರಿ

17/06/2025 8:17 PM
State News
KARNATAKA

GOOD NEWS: ಶೀಘ್ರವೇ ರಾಜ್ಯದಲ್ಲಿ 11 ಸರ್ಕಾರಿ ಬ್ಲಡ್ ಬ್ಯಾಂಕ್ ಅನುಷ್ಠಾನ: ಸಚಿವ ದಿನೇಶ್ ಗುಂಡೂರಾವ್

By kannadanewsnow0917/06/2025 8:39 PM KARNATAKA 2 Mins Read

ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ 11 ಸರ್ಕಾರಿ ಬ್ಲಡ್‌ ಬ್ಯಾಂಕ್‌ಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಅಲ್ಲದೇ, ದೇಶದಲ್ಲಿಯೇ ಪ್ರಥಮ ಬಾರಿಗೆ ರಾಜ್ಯದಲ್ಲಿ ಅತಿ ಹೆಚ್ಚು…

MGNVY ಕ್ರಿಯಾಯೋಜನೆ ಸಿದ್ಧಪಡಿಸದ ಅಧಿಕಾರಿಗಳ ವಿರುದ್ಧ ಕ್ರಮ: ಸಚಿವ ಬಿಎಸ್ ಸುರೇಶ್ ಎಚ್ಚರಿಕೆ

17/06/2025 8:34 PM

BREAKING : ಶಿವಮೊಗ್ಗದಲ್ಲಿ 30 ಸಾವಿರ ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ‘RDWSD’ ಸೆಕ್ಷನ್ ಅಧಿಕಾರಿ

17/06/2025 8:17 PM

ರಾಜ್ಯದ 100 ಆರೋಗ್ಯ ಕೇಂದ್ರಗಳಲ್ಲಿ 45 ನಿಮಿಷಗಳ ಯೋಗ ಪ್ರಾತ್ಯಕ್ಷಿಕೆ ಪ್ರದರ್ಶನ: ಸಚಿವ ದಿನೇಶ್ ಗುಂಡೂರಾವ್

17/06/2025 8:09 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.