Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶೇ.83.5ರಷ್ಟು ಅಭ್ಯರ್ಥಿಗಳು ರಾಜ್ಯದ ಸಿವಿಲ್ ನ್ಯಾಯಾಧೀಶರ ನೇಮಕಾತಿ ಪರೀಕ್ಷೆಗೆ ಹಾಜರಿ

11/10/2025 9:51 PM

‘ಹಾಸನಾಂಬೆ ದೇವಿ ದರ್ಶನ’ಕ್ಕೆ ಹರಿದು ಬಂದ ಭಕ್ತ ಸಾಗರ: ಇಂದಿನವರೆಗೆ 1.2 ಲಕ್ಷ ಭಕ್ತರು ಭೇಟಿ

11/10/2025 9:42 PM

ಚಿತ್ರದುರ್ಗ: ಹಿರಿಯೂರು ಹೊರವಲಯದಲ್ಲಿ ಭೀಕರ ಅಪಘಾತ, ಓರ್ವ ಸಾವು, ಇಬ್ಬರಿಗೆ ಗಾಯ

11/10/2025 9:09 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » HMT ಭೂಮಿ ಕುರಿತು ಇಂಟರ್ ಲೊಕೇಟರಿ ಅರ್ಜಿ ಹಾಕಿದ ಅಧಿಕಾರಿಗಳ ವಿರುದ್ಧ ಕ್ರಮ: ಸಚಿವ ಈಶ್ವರ ಖಂಡ್ರೆ
KARNATAKA

HMT ಭೂಮಿ ಕುರಿತು ಇಂಟರ್ ಲೊಕೇಟರಿ ಅರ್ಜಿ ಹಾಕಿದ ಅಧಿಕಾರಿಗಳ ವಿರುದ್ಧ ಕ್ರಮ: ಸಚಿವ ಈಶ್ವರ ಖಂಡ್ರೆ

By kannadanewsnow0920/01/2025 5:32 PM

ಬೆಂಗಳೂರು : ಎಚ್ಎಂಟಿ ವಶದಲ್ಲಿರುವ ಭೂಮಿ ಅರಣ್ಯ ಸ್ವರೂಪ ಕಳೆದುಕೊಂಡಿದೆ ಎಂದು ಸಚಿವ ಸಂಪುಟದ ಅನುಮತಿ ಪಡೆಯದೆ ಸುಪ್ರೀಂಕೋರ್ಟ್ ಗೆ ಡಿನೋಟಿಫಿಕೇಷನ್ ಅನುಮತಿ ಕೋರಿ ಐ.ಎ.ಹಾಕಿರುವ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ನೀಡಲಾಗಿದ್ದು ಅವರ ಉತ್ತರ ಪರಿಶೀಲಿಸಿ ಕ್ರಮ ಕೈಗೊಳ್ಳುವ ಬಗ್ಗೆ ಕ್ರಮ ವಹಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ವಿಧಾನಸೌಧದಲ್ಲಿಂದು ಸುದ್ದಿಗಾರರ ಪ್ರಶ್ನೆಗೆ ಉತ್ತರ ನೀಡಿದ ಅವರು, ಎಚ್.ಎಂ.ಟಿ. ವಶದಲ್ಲಿರುವ 443 ಎಕರೆ ಅರಣ್ಯ ಭೂಮಿ ಅರಣ್ಯ ಸ್ವರೂಪ ಕಳೆದುಕೊಂಡಿದೆ ಎಂದು ತಿಳಿಸಿ ಕೆಲವು ಅಧಿಕಾರಿಗಳು, ಸಚಿವ ಸಂಪುಟದ ಗಮನಕ್ಕೂ ತಾರದೆ ತಾವೇ 2020ರಲ್ಲಿ ಸುಪ್ರೀಂಕೋರ್ಟ್ ನಲ್ಲಿ ಇಂಟರ್ ಲೊಕೇಟರಿ ಅರ್ಜಿ – ಐ.ಎ. ಹಾಕಿದ್ದರು. ಈ ಐ.ಎ. ಹಿಂಪಡೆಯಲು ಈಗಾಗಲೇ ಸೂಚಿಸಲಾಗಿದೆ. ಕಳೆದ ಸಚಿವ ಸಂಪುಟ ಸಭೆಯಲ್ಲಿ ಐಎ ಹಿಂಪಡೆಯಲು, ಘಟನೋತ್ತರ ಅನುಮೋದನೆ ನೀಡಲಾಗಿದೆ. ಇದಕ್ಕಾಗಿ ಮುಖ್ಯಮಂತ್ರಿಗಳು ಮತ್ತು ಸಚಿವ ಸಂಪುಟದ ಎಲ್ಲ ಸಹೋದ್ಯೋಗಿಗಳಿಗೂ ಧನ್ಯವಾದ ಅರ್ಪಿಸುತ್ತೇನೆ ಎಂದರು.

ಎಚ್.ಎಂ.ಟಿ. ಖಾಸಗಿ ಸಂಸ್ಥೆಗಳೂ ಸೇರಿದಂತೆ ಹಲವು ಸಂಸ್ಥೆಗಳಿಗೆ ಈಗಾಗಲೇ 160 ಎಕರೆ ಜಮೀನನ್ನು 313ಕೋಟಿ ರೂಪಾಯಿಗಳಿಗೆ ಮಾರಾಟ ಮಾಡಿದೆ. ಆದರೆ ಆಗ ಘನ ಸುಪ್ರೀಂಕೋರ್ಟ್ ಗೆ ಸಲ್ಲಿಸುವ ಪ್ರಮಾಣ ಪತ್ರದಲ್ಲಿ ಈ ಭೂಮಿಯ ಮೌಲ್ಯ 14300 ಕೋಟಿ ಎಂದು ಹೇಳಿಕೊಂಡಿದೆ ಎಂದೂ ತಿಳಿಸಿದರು.

ಆದರೆ ಈ ಭೂಮಿಯ ಮೌಲ್ಯ ಅತ್ಯಮೂಲ್ಯವಾದ್ದು. ಬೆಂಗಳೂರು ನಗರಕ್ಕೆ ಅತ್ಯಗತ್ಯವಾಗಿ ಬೇಕಾದ ಶ್ವಾಸತಾಣ. ಇದಕ್ಕೆ ಬೆಲೆ ಕಟ್ಟಲು ಸಾಧ್ಯವೇ ಇಲ್ಲ. ಇಂತಹ ಭೂಮಿಯನ್ನು ನಷ್ಟದಿಂದ ಮುಚ್ಚಿ ಹೋಗಿರುವ ಎಚ್.ಎಂ.ಟಿ. ಅಕ್ರಮವಾಗಿ ಖಾಸಗಿಯವರಿಗೆ ಮಾರಾಟ ಮಾಡಿ ರಿಯಲ್ ಎಸ್ಟೇಟ್ ಮಾಡಲು ಬಿಡುವುದಿಲ್ಲ. ಈ ಭೂಮಿಯನ್ನು ಮರಳಿ ವಶಕ್ಕೆ ಪಡೆದು ಅಲ್ಲಿ ಕಬ್ಬನ್ ಪಾರ್ಕ್ ಅಥವಾ ಲಾಲ್ ಬಾಗ್ ರೀತಿಯಲ್ಲಿ ಒಂದು ಉದ್ಯಾನ ನಿರ್ಮಿಸಲಾಗುವುದು. ಇದು ಏಳು ಕೋಟಿ ಕನ್ನಡಿಗರ ಆಸ್ತಿ. ಇದರ ರಕ್ಷಣೆಗೆ ಎಲ್ಲ ಕನ್ನಡಿಗರೂ ಸರ್ಕಾರದ ಜೊತೆ ನಿಲ್ಲಬೇಕು ಎಂದರು.

BIG NEWS: ಫೆಬ್ರವರಿ ಮೊದಲ ವಾರದಲ್ಲಿ ಅರ್ಜನನ ಸ್ಮಾರಕ ಉದ್ಘಾಟನೆ: ಸಚಿವ ಈಶ್ವರ್ ಖಂಡ್ರೆ ಘೋಷಣೆ

ನೀವು ‘ತೊದಲುವಿಕೆ ಸಮಸ್ಯೆ’ಯಿಂದ ಬಳಲುತ್ತಿದ್ದೀರಾ.? ಈ ಉಚಿತ ಕಾರ್ಯಾಗಾಲದಲ್ಲಿ ಭಾಗವಹಿಸಿ, ತೊಂದ್ರೆ ಕ್ಲಿಯರ್

Share. Facebook Twitter LinkedIn WhatsApp Email

Related Posts

ಶೇ.83.5ರಷ್ಟು ಅಭ್ಯರ್ಥಿಗಳು ರಾಜ್ಯದ ಸಿವಿಲ್ ನ್ಯಾಯಾಧೀಶರ ನೇಮಕಾತಿ ಪರೀಕ್ಷೆಗೆ ಹಾಜರಿ

11/10/2025 9:51 PM1 Min Read

‘ಹಾಸನಾಂಬೆ ದೇವಿ ದರ್ಶನ’ಕ್ಕೆ ಹರಿದು ಬಂದ ಭಕ್ತ ಸಾಗರ: ಇಂದಿನವರೆಗೆ 1.2 ಲಕ್ಷ ಭಕ್ತರು ಭೇಟಿ

11/10/2025 9:42 PM1 Min Read

ಚಿತ್ರದುರ್ಗ: ಹಿರಿಯೂರು ಹೊರವಲಯದಲ್ಲಿ ಭೀಕರ ಅಪಘಾತ, ಓರ್ವ ಸಾವು, ಇಬ್ಬರಿಗೆ ಗಾಯ

11/10/2025 9:09 PM1 Min Read
Recent News

ಶೇ.83.5ರಷ್ಟು ಅಭ್ಯರ್ಥಿಗಳು ರಾಜ್ಯದ ಸಿವಿಲ್ ನ್ಯಾಯಾಧೀಶರ ನೇಮಕಾತಿ ಪರೀಕ್ಷೆಗೆ ಹಾಜರಿ

11/10/2025 9:51 PM

‘ಹಾಸನಾಂಬೆ ದೇವಿ ದರ್ಶನ’ಕ್ಕೆ ಹರಿದು ಬಂದ ಭಕ್ತ ಸಾಗರ: ಇಂದಿನವರೆಗೆ 1.2 ಲಕ್ಷ ಭಕ್ತರು ಭೇಟಿ

11/10/2025 9:42 PM

ಚಿತ್ರದುರ್ಗ: ಹಿರಿಯೂರು ಹೊರವಲಯದಲ್ಲಿ ಭೀಕರ ಅಪಘಾತ, ಓರ್ವ ಸಾವು, ಇಬ್ಬರಿಗೆ ಗಾಯ

11/10/2025 9:09 PM

ರೈತರು ಕೃಷಿಯಲ್ಲಿ ಮಿಶ್ರತಳಿ ಬೇಸಾಯ ಪದ್ದತಿ ಅಳವಡಿಸಿಕೊಳ್ಳಿ: ಗ್ಲೋಬಲ್‌ ಗ್ರೀನ್‌ ಗ್ರೋಥ್‌ ಸಂಸ್ಥೆಯ ಮುಖ್ಯಸ್ಥ ಡಾ.ಚಂದ್ರಶೇಖರ್‌

11/10/2025 9:02 PM
State News
KARNATAKA

ಶೇ.83.5ರಷ್ಟು ಅಭ್ಯರ್ಥಿಗಳು ರಾಜ್ಯದ ಸಿವಿಲ್ ನ್ಯಾಯಾಧೀಶರ ನೇಮಕಾತಿ ಪರೀಕ್ಷೆಗೆ ಹಾಜರಿ

By kannadanewsnow0911/10/2025 9:51 PM KARNATAKA 1 Min Read

ಬೆಂಗಳೂರು: ರಾಜ್ಯದ ಸಿವಿಲ್ ನ್ಯಾಯಾಧೀಶರ ನೇಮಕಾತಿ ಕುರಿತ ಲಿಖಿತ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನು ಬಳಸಿಕೊಂಡು ಅತ್ಯಂತ…

‘ಹಾಸನಾಂಬೆ ದೇವಿ ದರ್ಶನ’ಕ್ಕೆ ಹರಿದು ಬಂದ ಭಕ್ತ ಸಾಗರ: ಇಂದಿನವರೆಗೆ 1.2 ಲಕ್ಷ ಭಕ್ತರು ಭೇಟಿ

11/10/2025 9:42 PM

ಚಿತ್ರದುರ್ಗ: ಹಿರಿಯೂರು ಹೊರವಲಯದಲ್ಲಿ ಭೀಕರ ಅಪಘಾತ, ಓರ್ವ ಸಾವು, ಇಬ್ಬರಿಗೆ ಗಾಯ

11/10/2025 9:09 PM

ರೈತರು ಕೃಷಿಯಲ್ಲಿ ಮಿಶ್ರತಳಿ ಬೇಸಾಯ ಪದ್ದತಿ ಅಳವಡಿಸಿಕೊಳ್ಳಿ: ಗ್ಲೋಬಲ್‌ ಗ್ರೀನ್‌ ಗ್ರೋಥ್‌ ಸಂಸ್ಥೆಯ ಮುಖ್ಯಸ್ಥ ಡಾ.ಚಂದ್ರಶೇಖರ್‌

11/10/2025 9:02 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.